ದಿನದ ಸುದ್ದಿ

ನವೀನ್ ಮೃತದೇಹ ಹುಟ್ಟೂರಿಗೆ ; ಸಿಎಂ ಬೊಮ್ಮಾಯಿ ಅಂತಿಮ ನಮನ

Published

on

ಸುದ್ದಿದಿನ,ಬೆಂಗಳೂರು: ಮಾರ್ಚ್ ಒಂದನೇ ತಾರೀಖು ರಷ್ಯಾ ಹಾಗೂ ಉಕ್ರೇನ್ ನಡುವಿನ ಸಂಘರ್ಷದಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ಚಳ್ಳಗೇರಿಯ ನವೀನ್ ಶೇಖರಪ್ಪ ಗ್ಯಾನಗೌಡರ್ ಮೃತದೇಹ ಎಮಿರೆಟ್ಸ್ ವಿಮಾನದ ಮೂಲಕ ಕೆಐಎಎಲ್ ಏರ್‌ಪೋರ್ಟ್‌ಗೆ ಮುಂಜಾನೆ ಮೂರಕ್ಕೆ ಆಗಮಿಸಿತು.

ನವೀನ್ ಕುಟುಂಬ ಸದಸ್ಯರು ಹಾಗೂ ಗ್ರಾಮದ ಮುಖಂಡರು
ನವೀನ್ ಮೃತದೇಹ ತೆಗೆದುಕೊಂಡು ಹೋಗಲು
ಆಗಮಿಸಿದ್ದರು. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ನವೀನ್ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.

ನವೀನ್ ಮೃತದೇಹ ಸಾಗಿಸುತ್ತಿರುವ ಆಂಬುಲೆನ್ಸ್ ಬೆಂಗಳೂರಿನಿಂದ ಹೊರಟಿರುವ ಬೆಳಗ್ಗೆ ಸುಮಾರು ಒಂಭತ್ತು ಗಂಟೆಯ ಸುಮಾರಿಗೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸಕ್ಕೆ ತಲುಪಲಿದೆ.

ನವೀನ್ ಪಾರ್ಥಿವ ಶರೀರ ಆಗಮಿಸಿದ ಬಳಿಕ ಮೊದಲು ಕುಟುಂಬಸ್ಥರು ವೀರಶೈವ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಂತರ ನಿವಾಸದ ಮುಂದೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಿದ್ದಾರೆ. ಎರಡ್ಮೂರು ಗಂಟೆಗಳ ನಂತರ ಗ್ರಾಮದಲ್ಲಿ ನವೀನ್ ಪಾರ್ಥೀವ ಶರೀರವನ್ನು ಮೆರವಣಿಗೆ ನಡೆಸಲಾಗುತ್ತದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version