ದಿನದ ಸುದ್ದಿ
ಪ್ರಗತಿಪರ ರೈತ ಖಾಜಾಹುಸ್ಸೇನ್ ಮತ್ತು ಆಶಾಬಿ ರೈತ ದಂಪತಿಗಳಿಗೆ ಸನ್ಮಾನ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2023/06/suddidina_navilehalu_farmer.jpg&description=ಪ್ರಗತಿಪರ ರೈತ ಖಾಜಾಹುಸ್ಸೇನ್ ಮತ್ತು ಆಶಾಬಿ ರೈತ ದಂಪತಿಗಳಿಗೆ ಸನ್ಮಾನ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2023/06/suddidina_navilehalu_farmer.jpg&description=ಪ್ರಗತಿಪರ ರೈತ ಖಾಜಾಹುಸ್ಸೇನ್ ಮತ್ತು ಆಶಾಬಿ ರೈತ ದಂಪತಿಗಳಿಗೆ ಸನ್ಮಾನ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ಚನ್ನಗಿರಿ : ತಾಲೂಕಿನ ನವಿಲೆಹಾಳ್ ಗ್ರಾಮದಲ್ಲಿ ಶನಿವಾರ 3ಎಕರೆ 10ಗುಂಟೆ ಜಮೀನಿನಲ್ಲಿ ಕೆರನ್ ಮಾರ್ಗದರ್ಶನದಲ್ಲಿ ಈ ವರ್ಷ ಬರೋಬ್ಬರಿ 117.5 ಕ್ವಿಂಟಲ್ ಭತ್ತವನ್ನು ಬೆಳೆದಿರುವುದರಿಂದ ರೈತ ದಂಪತಿಗಳಿಗೆ ಕಂಪನಿಯವರು ಸನ್ಮಾನ ಸಮಾರಂಭ ಕಾರ್ಯಕ್ರಮ ನಡೆಸಿದರು.
ಕಣದಮನೆ ಖಾಜಾಹುಸ್ಸೇನ್ ಮತ್ತು ಅವರ ಪತ್ನಿ ಆಶಾಬೀ, ಮೂರು ವರ್ಷದ ಹಿಂದೆ ಕೆರನ್ ಕಂಪನಿಯ ಒಂದು ರೈತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲಿಂದ ಕೆರನ್ ಮಾರ್ಗದರ್ಶನದಲ್ಲಿ ತಮ್ಮ ಬೆಳೆಯನ್ನು ಬೆಳೆಯುತ್ತಿದ್ದಾರೆ.
ಬರೀ ಬೆಳೆ ಬೆಳೆಯುವ ಬಗ್ಗೆ ಮಾತ್ರ ಮಾಹಿತಿ ಅನ್ನಬೇಡಿ ಇಲ್ಲಿ ಭೂಮಿಯನ್ನು ಕಾಪಾಡಿಕೊಳ್ಳುವ ಬಗ್ಗೆ,ನೀರಿನ ಬಗ್ಗೆ,ಇಳುವರಿ ಬಗ್ಗೆ ಮುಂದಿನ ಪೀಳಿಗೆಗೆ ಒಳ್ಳೆಯ ಆಹಾರದ ಬಗ್ಗೆ ಮಾಹಿತಿ ಸಿಗುತ್ತದೆ. ಇದರಿಂದ ಆಸಕ್ತಿಗೊಂಡ ದಂಪತಿಗಳು ವರ್ಷದಿಂದ ವರ್ಷಕ್ಕೆ ತಮ್ಮ ಭತ್ತದಲ್ಲಿ ಒಳ್ಳೆಯ ಇಳುವರಿ ತೆಗೆದುಕೊಂಡಿದ್ದಾರೆ.
ಮೊದಲು 75-80 ಕ್ವಿಂಟಲ್ ಭತ್ತವನ್ನು ತಮ್ಮ 3-10 ಗುಂಟೆಯಲ್ಲಿ ಬೆಳೆಯುತ್ತಿದ್ದು, ಕೆರನ್ ಮಾರ್ಗದರ್ಶನದ ನಂತರ ಮೊದಲ ವರ್ಷವೇ 90 ಕ್ವಿಂಟಲ್ ಮತ್ತು 2 ನೇ ವರ್ಷಕ್ಕೆ 98 ಕ್ವಿಂಟಲ್ ಮತ್ತು ಈ ವರ್ಷ ಬರೋಬ್ಬರಿ 117.5 ಕ್ವಿಂಟಲ್ ಭತ್ತವನ್ನು ಬೆಳೆದಿರುತ್ತಾರೆ. ಅಲ್ಲದೇ ಪ್ರತೀ ವರ್ಷವೂ ಇವರ ಭತ್ತದ ಗುಣಮಟ್ಟ ರಫ್ತು ಸಾಗಿಸುವಷ್ಟು ಉತ್ತಮವಾಗಿದೆ.
ಅದಕ್ಕಾಗಿಯೇ ಈ ವರ್ಷದಿಂದ ಅವರು ರಫ್ತು ಮಾಡುವ ಸಲುವಾಗಿ SONA ತಳಿಯನ್ನು ಮಾಡುತ್ತಿದ್ದಾರೆ.
ಕೆರನ್ ಕಂಪನಿಗೆ ಬಂದ ಈ ದಂಪತಿಗಳು ಹಲವಾರು ಕಾರ್ಯಾಗಾರಗಳಲ್ಲಿ ಭಾಗವಹಿಸಿ ತಮ್ಮ ಇಳುವರಿ ಹೆಚ್ಚಿಸಿಕೊಂಡಿರುವುದಲ್ಲದೇ ತಮ್ಮ ಜೀವನ ಶೈಲಿಯನ್ನು ಬದಲಾಯಿಸಿಕೊಂಡಿದ್ದಾರೆ. ಅಲ್ಲದೇ ದಿಯಾ ಎಂಟರ್ಪ್ರೈಸಸ್ ಮೂಲಕ ಬಿಜಾಪುರ, ಶಿರಶಿ, ಭರಮಸಾಗರ, ಜಗಳೂರು, ಬಿದರಕೆರೆ, ಶಾಮನೂರು, ಮಲೇಬೆನ್ನೂರು, ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ರೈತರಿಗೆ ಮಾಹಿತಿ ಮಾಡುತ್ತಾ ಇದರೊಂದಿಗೆ ಪ್ರತೀ ತಿಂಗಳು 15,000 ವರೆಗೆ ಆದಾಯವನ್ನು ಪಡೆಯುತ್ತಿದ್ದಾರೆ.
ಇದೇ ವರ್ಷ 9 ಲಕ್ಷದ WAGON-R ಕಾರನ್ನು ಪಡೆದ ಈ ದಂಪತಿಗಳ ಹರ್ಷ ಕಂಪನಿಯಲ್ಲಿ ಇರುವವರೆಲ್ಲರಿಗೂ ಮಾದರಿ ಎನಿಸಿದೆ. ಇದರೊಂದಿಗೆ ಒಂದೆರಡು ಹಸುವನ್ನು ಸಾಕಿದ್ದರೂ ಕೂಡ ಪ್ರತಿ ವರ್ಷ 3 TRACTOR ಲೋಡ್ ಉತ್ಕ್ರಷ್ಠ ಗೊಬ್ಬರವನ್ನು ತಾವೇ ತಯಾರಿಸಿಕೊಳ್ಳುತ್ತಾರೆ. ಅಲ್ಲದೇ WDC,ಗೋಕೃಪಾಮೃತಜಲ,ಜೀವಾಮೃತ,ಪಂಚಗವ್ಯ-ದಶಗವ್ಯ, ಪೋಶಕಾಂಶದ್ರವ್ಯ, ಕುಣಪಜಲಗಳನ್ನು ಮಾಡಿ ಭೂಮಿಗೆ ಉಣಬಡಿಸುತ್ತಿದ್ದಾರೆ. 2 ವರ್ಷದ ಇವರ ಅಡಿಕೆ ಸಸಿಗಳನ್ನು ನೋಡಲು ತುಂಬಾ ಚೆನ್ನಾಗಿದೆ. 4 ನೇ ವರ್ಷಕ್ಕೆ ಫಸಲು ಪಡೆಯುವ ಬಗ್ಗೆ ಕಾರ್ಯಯೋಜನೆ ಮಾಡಿದ್ದಾರೆ. ಖಾಜಾಹುಸ್ಸೇನ್ ಅವರ ಪತ್ನಿ ತಮ್ಮ ಗಂಡನ ಈ ಅಭಿವೃದ್ಧಿ ಬಗ್ಗೆ ತುಂಬಾ ಹೆಮ್ಮೆ ಪಡುತ್ತಾರೆ.
ಖಾಜಾಹುಸ್ಸೇನ್ ಅವರು ತಮ್ಮ ಪತ್ನಿಯ ಸಹಕಾರದ ಬಗ್ಗೆ ಕಂಪನಿಯ ಹಲವಾರು ಕಾರ್ಯಕ್ರಮಗಳಲ್ಲಿ ಹೇಳಿದ್ದು ಉಳಿದ ಹೆಣ್ಣುಮಕ್ಕಳಿಗೆ ಸ್ಫೂರ್ಥಿದಾಯಕವಾಗಿದೆ. ಖಾಜಾಹುಸ್ಸೇನ್ ಅವರ ಗೆಳೆಯರು ಅವರ ಈ ಅಭಿವೃದ್ಧಿಯ ಬಗ್ಗೆ ಹೆಮ್ಮೆಪಟ್ಟುಕೊಳ್ಳುತ್ತಿದ್ದಾರೆ. ಕಾರನ್ನು ತಂದ ನಂತರ ಅವರ ವ್ಯವಹಾರವು ಇನ್ನೂ ಚೆನ್ನಾಗಿ ನಡೆಯುತ್ತಿದೆ. ಜೊತೆಗೆ ಭತ್ತದಲ್ಲಿ ಈ ವರ್ಷ ಇನ್ನೂ ಸ್ವಲ್ಪ ಇಳುವರಿ ಜಾಸ್ತಿ ಮಾಡುವುದರ ಬಗ್ಗೆ ಹೊಸ ಯೋಜನೆಯೊಂದನ್ನು ದಂಪತಿಗಳು ಹಾಕಿಕೊಂಡಿದ್ದಾರೆ. ಇವರ ಈ ಕಾರ್ಯ ಭೂಮಿಯ ಬಗ್ಗೆ ಅವರಿಗಿರುವ ಕಾಳಜಿ ಎಲ್ಲಾ ರೈತರಿಗೂ ಮಾದರಿಯಾಗಿದೆ.
ಕೇರನ್ ರಾಜ್ಯ ಕೃಷಿ ಸಂಯೋಜಕರು ಪ್ರಸನ್ನ ಡಿ ಎ ಕಾರ್ಯಕ್ರಮ ನಿರೂಪಣೆ ಮಾಡಿದರು. ಕರ್ನಾಟಕ ಕೇರನ್ ತಂಡದ ಪ್ರಮುಖ ಕೃಷಿ ಮಾರ್ಗದರ್ಶಕರಾದ ಸಚಿನ್ ಕಬ್ಬೂರವರು ದಂಪತಿಗಳಿಗೆ ಪ್ರಶಸ್ತಿ ವಿತರಿಸಿ ಸಾವಯವ, ಪ್ರಾಚೀನ ಕೃಷಿ ಪದ್ಧತಿ, ಅಧಿಕ ಇಳುವರಿಗಾಗಿ ಮಾಡಬೇಕಾದ ಕೃಷಿಯ ಹೊಸ ಆಯಾಮಗಳ ಬಗ್ಗೆ ತಿಳಿಸಿಕೊಟ್ಟರು.
ಬ್ಯಾಡಗಿ, ಹಾನಗಲ್, ಚೀಲೂರ್, ಹೊನ್ನಾಳಿ, ಶಿವಮೊಗ್ಗ, ದಾವಣಗೆರೆ, ರಾಣೇಬೆನ್ನೂರ್, ಹಾವೇರಿ, ಹಿರೇಕೆರೂರ, ನ್ಯಾಮತಿ ಭಾಗದ ಕೇರನ್ ಕೃಷಿ ಮಾರ್ಗದರ್ಶಕರು ಮತ್ತು ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು
ನವಲೇಹಾಳ್ ಗ್ರಾಮಸ್ಥರು ಮತ್ತು ರೈತರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.
ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.
ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ4 days agoಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ
-
ದಿನದ ಸುದ್ದಿ2 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ4 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ5 days agoಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
-
ದಿನದ ಸುದ್ದಿ5 days agoನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
-
ದಿನದ ಸುದ್ದಿ5 days agoಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ1 hour agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ

