ದಿನದ ಸುದ್ದಿ
ನೀಲು ಕಾವ್ಯ
- ಪಿ. ಲಂಕೇಶ್
1
ಹೃದಯದ ಗುಟ್ಟುಗಳನ್ನು
ಇನಿಯನಿಗೆ ಕೂಡ
ಬಿಟ್ಟುಕೊಡಲಾರದ ನನ್ನ
ಕಣ್ಣುಗಳನ್ನು ವಂಚಿಸಿ
ನನ್ನ ಲೇಖನಿ
ಹಾಡಿ ಕುಣಿಯುವುದು
2
ಪ್ರೀತಿಸುವ ಇಬ್ಬರು
ಮೌನವಾಗಿ ಕೂತು
ನೆಮ್ಮದಿಯಾಗಿರುವುದು
ಸುಖದೃಶ್ಯ
3
ಮೊಘಲ್ ದೊರೆಗಳಂತೆ
ಪ್ರೇಮಿ ಕೂಡ
ಕೇವಲ ಅಹಂಕಾರತೆ
ನಿನ್ನ ದೊರೆಯಾಗುವ ಅಪಾಯವಿದೆ
-ಎಚ್ಚರಿಕೆ!
4
ಪ್ರೀತಿಯಿಂದ ನನ್ನ
ಕಾಲ್ಬೆರಳಿಗೆ ಮುತ್ತಿಟ್ಟ ಚೆಲುವ
ನನ್ನ ಹೃದಯ ಸಿಂಹಾಸನವ
ಗೆದ್ದುಕೊಂಡ
5
ಜನಸಾಮಾನ್ಯನ
ಮೂಕ ಅಳಲಿನಲ್ಲಿ
ಸಾಮ್ರಾಜ್ಯಗಳ ಬೀಲಿಸುವ
ತಪಃಶಕ್ತಿ ಇದೆ
6
ಚೆಲುವಾ,
ಚಲಿಸುವ ಗೋಳದ ಮೇಲೆ
ನಡೆಯುತ್ತಿರುವ ನಾವು
ಅಚಲ ಪ್ರೇಮದ ಬಗ್ಗೆ
ಪಣತೊಡುವ
ಹಾಸ್ಯಾಸ್ಪದರು ಆಗದಿರೋಣ
7
ಬಿಸಿಲು, ಸೆಖೆಯ ದಿವಸ
ಹಠಾತ್ತನೆ ಬಿದ್ದ
ಮೂಡಿದ ಕಾಮನಬಿಲ್ಲು
ನನ್ನ ಮನಸ್ಸು ಕೂಡ
8
ನನಗೆ ಅಜ್ಜಿಯ ಹಿತವಚನ:
“ನಿನ್ನ ವಿದ್ಯೆಗೆ ಬದಲು
ನಿನ್ನ ಲಜ್ಜೆ ನಡೆಸಿದಂತೆ
ಬದುಕು”
9
ಸೊಟ್ಟ ಮೋರೆಯ ಹುಡುಗಿ
ಕನ್ನಡಿಗೆ
ತಾನು ಜೀನತಳೆಂದು
ಮನವೊಲಿಸುವುದು
ಬದುಕಿನ ಮೋಜು
10
ನನ್ನ ಇನಿಯನ ಹೃದಯದ
ಸ್ಪಂದನಕ್ಕೆ ಕಿವಿ ಸಲ್ಲಿಸಿದ ನನಗೆ
ಬೇರೆ ಸಂಗೀತ
ಕೇವಲ ಗದ್ದಲ
11
ಯಾವ ವಸಂತದ ಯಾವ ಗಳಿಗೆ
ಕನ್ಯೆಗೆ ಕಾಮನೆ ಮೂಡಿತು,
ಎಂದು ಕೇಳಿದರೆ
ಗ್ರೀಷ್ಮ ಋತು ಕಲಾವಿದನಂತೆ
ವಿನಮ್ರ ಮೌನ ತಾಳಿತು
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.
ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ
ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದೆ. www.eci.gov.in/candidate-politicalparty ವೆಬ್ಸೈಟ್ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.
ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್ಗೆ ಸಲ್ಲಿಸಲಾಗಿತ್ತು.
ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ
ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.
ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.
ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243