Connect with us

ದಿನದ ಸುದ್ದಿ

ನೀಲು ಕಾವ್ಯ

Published

on

  • ಪಿ. ಲಂಕೇಶ್

1

ಹೃದಯದ ಗುಟ್ಟುಗಳನ್ನು
ಇನಿಯನಿಗೆ ಕೂಡ
ಬಿಟ್ಟುಕೊಡಲಾರದ ನನ್ನ
ಕಣ್ಣುಗಳನ್ನು ವಂಚಿಸಿ
ನನ್ನ ಲೇಖನಿ
ಹಾಡಿ ಕುಣಿಯುವುದು

2

ಪ್ರೀತಿಸುವ ಇಬ್ಬರು
ಮೌನವಾಗಿ ಕೂತು
ನೆಮ್ಮದಿಯಾಗಿರುವುದು
ಸುಖದೃಶ್ಯ

3

ಮೊಘಲ್ ದೊರೆಗಳಂತೆ
ಪ್ರೇಮಿ ಕೂಡ
ಕೇವಲ ಅಹಂಕಾರತೆ
ನಿನ್ನ ದೊರೆಯಾಗುವ ಅಪಾಯವಿದೆ
-ಎಚ್ಚರಿಕೆ!

4

ಪ್ರೀತಿಯಿಂದ ನನ್ನ
ಕಾಲ್ಬೆರಳಿಗೆ ಮುತ್ತಿಟ್ಟ ಚೆಲುವ
ನನ್ನ ಹೃದಯ ಸಿಂಹಾಸನವ
ಗೆದ್ದುಕೊಂಡ

5

ಜನಸಾಮಾನ್ಯನ
ಮೂಕ ಅಳಲಿನಲ್ಲಿ
ಸಾಮ್ರಾಜ್ಯಗಳ ಬೀಲಿಸುವ
ತಪಃಶಕ್ತಿ ಇದೆ

6

ಚೆಲುವಾ,
ಚಲಿಸುವ ಗೋಳದ ಮೇಲೆ
ನಡೆಯುತ್ತಿರುವ ನಾವು
ಅಚಲ ಪ್ರೇಮದ ಬಗ್ಗೆ
ಪಣತೊಡುವ
ಹಾಸ್ಯಾಸ್ಪದರು ಆಗದಿರೋಣ

7

ಬಿಸಿಲು, ಸೆಖೆಯ ದಿವಸ
ಹಠಾತ್ತನೆ ಬಿದ್ದ
ಮೂಡಿದ ಕಾಮನಬಿಲ್ಲು
ನನ್ನ ಮನಸ್ಸು ಕೂಡ

8

ನನಗೆ ಅಜ್ಜಿಯ ಹಿತವಚನ:
“ನಿನ್ನ ವಿದ್ಯೆಗೆ ಬದಲು
ನಿನ್ನ ಲಜ್ಜೆ ನಡೆಸಿದಂತೆ
ಬದುಕು”

9

ಸೊಟ್ಟ ಮೋರೆಯ ಹುಡುಗಿ
ಕನ್ನಡಿಗೆ
ತಾನು ಜೀನತಳೆಂದು
ಮನವೊಲಿಸುವುದು
ಬದುಕಿನ ಮೋಜು

10

ನನ್ನ ಇನಿಯನ ಹೃದಯದ
ಸ್ಪಂದನಕ್ಕೆ ಕಿವಿ ಸಲ್ಲಿಸಿದ ನನಗೆ
ಬೇರೆ ಸಂಗೀತ
ಕೇವಲ ಗದ್ದಲ

11

ಯಾವ ವಸಂತದ ಯಾವ ಗಳಿಗೆ
ಕನ್ಯೆಗೆ ಕಾಮನೆ ಮೂಡಿತು,
ಎಂದು ಕೇಳಿದರೆ
ಗ್ರೀಷ್ಮ ಋತು ಕಲಾವಿದನಂತೆ
ವಿನಮ್ರ ಮೌನ ತಾಳಿತು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?

Published

on

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್

Published

on

ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ

Published

on

ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್‌ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.

ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending