ಲೈಫ್ ಸ್ಟೈಲ್
[ ಬೇವಿನ ಉಪಯೋಗ] ಕಹಿ ಬೇವು ಗುಣದಲ್ಲಿ ಅಮೃತ !
ಬಹು ಉಪಯೋಗಿ ಬೇವಿನ ಗುಣ ಹಾಗೂ ಉಪಯೋಗದ ಕುರಿತು ನೀವು ಅರಿತರೆ ಅಚ್ಚರಿಪಡುತ್ತೀರಿ ! ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಪಾರಮಾರ್ಥಿಕ ವಿಷಯಗಳ ಸಧಾರಣೆಯಲ್ಲಿ ಬೇವು ಆದ್ಯ ಪಾತ್ರ ವಹಿಸುತ್ತದೆ ಎಂದರೆ ನಂಬಲೇಬೇಕು.

ಆರೋಗ್ಯ ರಕ್ಷಣೆಯಂತೆ ಪರಿಸರ ಸಂರಕ್ಷಣೆ ಇಂದು ದೊಡ್ಡ ಸವಾಲಾಗಿ ಪರಿಣಿಮಿಸಿದೆ. ಮನುಷ್ಯನ ಪರಿಸರ ವಿರೋಧಿ ಚಂತನೆ ಇದಕ್ಕೆ ಮುಖ್ಯ ಕಾರಣ. ಈಗ ಸವಾಲು ಎದುರಿಸಲು ನಮಗಿರುವ ಏಕೈಕ ಮಾರ್ಗವೆಂದರೆ ಪರಸರಿ ಸಂಪತ್ತಿನ ರಕ್ಷಣೆ ಮಾಡುವುದು. ಪರಿಸರ ಮಾಲಿನ್ಯದ ತಡೆ ಜೊತೆಗೆ ಆರೋಗ್ಯಯುವ ಬದುಕು ಕಲ್ಪಿಸುವ ವೃಕ್ಷಗಳಲ್ಲಿ ಬೇವಿಗೆ (ಬೇವು-neem) ಮೊದಲ ಹೆಸರು. [ ಬೇವಿನ ಉಪಯೋಗ] (health benefits of neem in kannada)
# ಬೇವಿನ ಉಪಯೋಗ 1). ಗುಣದಿಂದ ಬೇವು ಕಲ್ಪವೃಕ್ಷ !
ಬಹು ಉಪಯೋಗಿ ಬೇವಿನ ಗುಣ ಹಾಗೂ ಉಪಯೋಗದ ಕುರಿತು ನೀವು ಅರಿತರೆ ಅಚ್ಚರಿಪಡುತ್ತೀರಿ ! ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಪಾರಮಾರ್ಥಿಕ ವಿಷಯಗಳ ಸಧಾರಣೆಯಲ್ಲಿ ಬೇವು ಆದ್ಯ ಪಾತ್ರ ವಹಿಸುತ್ತದೆ ಎಂದರೆ ನಂಬಲೇಬೇಕು. ದೈವಿಕ ಕಾರ್ಯಗಳೇ ಆಗಲಿ, ವೈದ್ಯಕೀಯ ಕಾರ್ಯಗಳೇ ಬೇವು ಮುಂದಿರುತ್ತದೆ.
ವೇದ ಸಾಹಿತ್ಯದಲ್ಲಿ ಬಹುವಾಗಿ ಉಲ್ಲೇಕಿತವಾಗಿರುವ ಬೇವಿನ ಮರದ ಪ್ರತಿ ಭಾಗಕೂಡ ಉಪಯೋಗಕಾರಿ. ಬೇವು ಪರಿಸರವನ್ನು ನಿರ್ಮಲವಾಗಿಟ್ಟು ಶುದ್ಧ ಗಾಳಿಯನ್ನು ಕಲ್ಪಿಸುತ್ತದೆ. ಬೇವು ಕಹಿಯಾದದರೂ ಉಪಯೋಗದ ಕಾರಣದಿಂದ ಕಲ್ಪವೃಕ್ಷವೇ ಸರಿ.
# ಬೇವಿನ ಉಪಯೋಗ 2). ಹಲವು ರೋಗಗಳಿಗೆ ಮದ್ದು ಬೇವು
ಯುಗಾದಿಯಿಂದ ಆರಂಭವಾಗಿ ಚೈತ್ರ ಮಾಸವಿಡೀ ಮುಂಜಾನೆ ಬೇವಿನ ಎಲೆಗಳನ್ನು ಪ್ರತದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಇಡೀ ವರ್ಷ ರೋಗ ರುಜಿನಗಳು ಬರವುದಿಲ್ಲ ಎಂಬುದು ಹಿರಿಯರ ಮಾತು.
ಹಾನಿಕಾರಕ ಅಣುಜೀವಿಗಳಿಂದ ಹರಡುವ ಸೋಂಕುಗಳ ತಡೆಗೆ ಬೇವು ಉತ್ತಮ ಮದ್ದು. ಬೇವಿನ ಸೊಪ್ಪನಲ್ಲಿ ಮತ್ತು ಎಣ್ಣೆಯಲ್ಲಿ ಕಿಮಿನಾಶಕ ಗುಣವಿದೆ. ಎಳೆಯ ಬೇವಿನಕಡ್ಡಿಯನ್ನು ಕುಂಚದಂತೆ ಮಾಡಿ ಹಲ್ಲು ಉಜ್ಜುವುದರಿಂದ ಹಲ್ಲಿನ ಸಮಸ್ಯೆ ಬರುವುದಿಲ್ಲ.
ಕಡಿಮೆ ಮಳೆ ಬೀಲುವ ಮತ್ತು ಬಿಸಿಲಿನ ತಾಪ ಅಧಿವಾಗಿರುವ ಪ್ರದೇಶದಲ್ಲಿ ಬೇವಿನ ಮರ ಹುಸುಸಾಗಿ ಬೆಳೆಯುತ್ತವೆ. ಇಂದು ಪ್ರಕೃತಿ ವಿಶೇಷ. ಬೇವಿನ ಮರಗಳ ಮೇಲಿಂದ ಬೀಸುವಗಾಳಿಯು ಬಿಸಿಲಿನ ತಾಪಂದಿಂದ ಬಳಲಿದ ದೇಹಕ್ಕೆ ತಂಪು ನೀಡುತ್ತದೆ. ಇದು ಆರೋಗ್ಯಕರ ಕೂಡ ಹೌದು.
ಇದನ್ನು ಓದಿ: ನಿಯಮಿತ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ !
# ಬೇವಿನ ಉಪಯೋಗ 3). ಬೇವಿನಿಂದ ಮಲೇರಿಯಾ ದೂರ !
ಬೇವಿನ ಸೊಪ್ಪು, ಬೇವಿನ ಹೋವು, ಬೇವಿನ ಎಣ್ಣೆ, ಬೇವಿನ ತೊಗಟೆಯಲ್ಲಿ ಹಲವು ರೋಗ ನಿವಾರಕ ಅಂಶಗಳಿದ್ದು, ಇವುಗಳಿಂದ ಔಷಧ ತಯಾರಿಸಲಾಗುತ್ತದೆ. ಚರ್ಮ ರೋಗನಿವಾರಣೆಗೆ ಬೇವು ಸಿದ್ಧ ಔಷಧ. ಬೇವಿನ ತಾಜಾ ಸೊಪ್ಪನ್ನು ಹಿಂಡಿ ಸೇವಿಸಿದರೆ ಶಾರೀರಿಕ ದೋಷ ಕೂಡ ನಿವಾರಣೆ ಆಗುತ್ತವೆ ಎಂಬುದು ತಜ್ಞರ ಅಂಬೋಣ.
ಬೇವಿನ ಮರದ ಬುಡದಲ್ಲಿನ ತೊಗಟೆಯನ್ನು ಕೆತ್ತಿ ತೆಗೆದು ಅದರಲ್ಲಿ ಕಷಾಯ ತಯಾರಿಸಿ ಸೇವಿಸುವುದರಿಂದ ಕುಷ್ಟ ರೋಗಾದಿ ಚರ್ಮ ರೋಗಗಳು ನಿವಾರಣೆಯಾಗುವುವು. ಮಧುಮೇಹ, ನಿಶ್ಯಕ್ತಿ, ವಾಕರಿಕೆ, ಬಾಯಾರಿಕೆ, ಗಡುವಿನ ಜ್ವರ ಸೇರಿದಂತೆ ಅನೇಕ ದೋಷಗಳಿಗೆ ಬೇವು ರಾಮಬಾಣ.
ಮಲೇರಿಯಾ ಜ್ವರದಲ್ಲಿ 2 ಅಥವಾ 3 ಗ್ರಾಂ ಬೇವಿನ ಎಲೆಗಳ ಚೂರ್ಣವನ್ನಾಗಲೀ, ತೊಗಟೆಯ ಚೂರ್ಣವನ್ನಾಗಲಿ ಬಿಸಿ ನೀರಿನೊಂದಿಗೆ ಸೇವಿಸುವುದರಿಂದ ಆರೋಗ್ಯ ವೃಧ್ಧಿಸುತ್ತದೆ.
ಸೀಮೆಎಣ್ಣೆಯೊಂದಿಗೆ ಬೇವಿನ ಎಣ್ಣೆ ಬೆರೆಸಿ ದೀಪ ಉರಿಸುವುದರಿಂದ ಸೊಳ್ಳೆಗಳ ಕಾಟ ತಪ್ಪಿಸ ಬಹುವುದು. ದ್ವಿಶತಾಂಶ ಬೇವಿನ ಎಣ್ಣೆಯೊಂದಿಗೆ ಕೊಬ್ಬರಿ ಎಣ್ಣೆಯನ್ನು ಮಿಶ್ರಣ ಮಾಡಿ ದೇಹಕ್ಕೆ ಲೇಪಿಸಿದರೆ ಸೊಳ್ಳೆಗಳು ಹತ್ತಿರಕ್ಕೆ ಬರುವುದಿಲ್ಲ.
ಬೇವಿನ ಎಲೆಗಳ ರಸವನ್ನು ಸಕ್ಕರೆಯೊಂದಿಗೆ ಸೇವಿಸುವುದರಿಂದ ಆಮಾತಿಸಾರ (dysentery) ಮತ್ತು ಅತಿಸಾರ (diarrhoea) ದಿಂದ ಗುಣಮುಖವಾಗಬಹುದು. ಪ್ರತಿದಿನ ಬೆಳಗ್ಗೆ 10-12 ಬೇವಿನ ಎಲೆಗಳನ್ನು ಬಾಯಿಗೆ ಹಾಕಿಕೊಂಡು ಚನ್ನಾಗಿ ಅಗೆದು ಒಂದು ಬಟ್ಟಲು ನೀರು ಕುಡಿದರೆ ಕ್ಯಾನ್ಸರ್ ಸಂಬಂಧಿ ರೋಗಗಳು ದೂರವಾಗುತ್ತವೆ ಎಂಬುದು ಹಿರಿಯರ ಅಭಿಪ್ರಾಯ.
ಇದನ್ನು ಓದಿ: ಒಂದು ಚಿಕ್ಕ ಬೆಳ್ಳುಳ್ಳಿ ಶಕ್ತಿ ಎಂತದ್ದು ಗೊತ್ತಾ ?
# ಬೇವಿನ ಉಪಯೋಗ 4). ಕಹಿ ಬೇವು ಗುಣದಲ್ಲಿ ಅಮೃತ !
ಒಟ್ಟಾರೆ ಬೇವು ಗುಣದಲ್ಲಿ ಕಹಿ ಎನಿಸಿದರೂ ಅದರ ಉಪಯೋಗದಲ್ಲಿ ಮಾತ್ರ ಅಮೃತ. ಬೇವು ಅಂದಕೂಡಲೇ ನಾವು ಮುಖ ಸಿಂಡರಸಿಕೊಳ್ಳುತ್ತೆವೆ. ಆದರೆ ಬೇವಿನ ಉಪಯೋಗ ಅರಿತು ಅದನ್ನು ನಿಯಮಿತವಾಗಿ ಬಳಕೆ ಮಾಡಿದರೆ ಆರೋಗ್ಯಯುತ ಜೀವನ ನಡೆಸಬಹುದು ಎಂಬುದು ನಮ್ಮ ಪೂರ್ವಜರ ಸಲಹೆ.
-ಸಂಗ್ರಹ
ಆರೋಗ್ಯ, ಆಹಾರ, ಜೀವನಶೈಲಿ ಕುರಿತು suddidina.com ಗೆ ನೀವು ಕೂಡ ಲೇಖನ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ suddidina@gmail.com ಗೆ ಸಂಪರ್ಕಿಸಿ.
#ಆರೋಗ್ಯ #ಆಹಾರ #ಜೀವನಶೈಲಿ #kannadatips #kannadahealthtips #healthtips

ದಿನದ ಸುದ್ದಿ
Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025
ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days ago
ಕವಿತೆ | ನಟಿಸುತ್ತೇನೆ ಈ ಚಿತ್ರಶಾಲೆಯಲ್ಲಿ
-
ದಿನದ ಸುದ್ದಿ5 days ago
ದಾವಣಗೆರೆ | ಏಪ್ರಿಲ್ 5 ಮತ್ತು 6 ರಂದು ಜಲಸಾಹಸ ಕ್ರೀಡೆ
-
ದಿನದ ಸುದ್ದಿ3 days ago
ಜನಪದ ಕಲೆ ಗ್ರಾಮೀಣ ಜನರ ಜೀವನಾಡಿ : ಪ್ರಾಚಾರ್ಯೆ ಡಾ.ಶಶಿಕಲಾ.ಎಸ್
-
ದಿನದ ಸುದ್ದಿ3 days ago
ಮುಖ್ಯಮಂತ್ರಿ ಪದಕ ; ಮುಖ್ಯ ಪೊಲೀಸ್ ಪೇದೆ ಕೊಟ್ರೇಶ್ ಅಯ್ಕೆ
-
ದಿನದ ಸುದ್ದಿ4 days ago
ಹೊಸ ಹಣಕಾಸು ವರ್ಷ ಆರಂಭ | ಬ್ಯಾಂಕ್ ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಕಡ್ಡಾಯ ; ಇಲ್ಲದಿದ್ದರೆ ಭಾರೀ ದಂಡ
-
ದಿನದ ಸುದ್ದಿ3 days ago
ದಾವಣಗೆರೆ | ವೃತ್ತಿಪರ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ದಾವಣಗೆರೆ ವಿ.ವಿ 12ನೇ ಘಟಿಕೋತ್ಸವ | ವಿಶ್ವವಿದ್ಯಾಲಯಗಳಲ್ಲಿ 2500 ಹುದ್ದೆಗಳು ಖಾಲಿ ಇವೆ : ಸಚಿವ ಡಾ.ಎಂ.ಸಿ. ಸುಧಾಕರ್
-
ದಿನದ ಸುದ್ದಿ2 days ago
ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂರ ಕಡೆಗಣನೆ, ಆಸ್ತಿ ಹಕ್ಕು ಕಸಿದುಕೊಳ್ಳುವ ಅಸ್ತ್ರ: ಸೈಯದ್ ಖಾಲಿದ್ ಅಹ್ಮದ್