ಲೈಫ್ ಸ್ಟೈಲ್
[ ಬೇವಿನ ಉಪಯೋಗ] ಕಹಿ ಬೇವು ಗುಣದಲ್ಲಿ ಅಮೃತ !
ಬಹು ಉಪಯೋಗಿ ಬೇವಿನ ಗುಣ ಹಾಗೂ ಉಪಯೋಗದ ಕುರಿತು ನೀವು ಅರಿತರೆ ಅಚ್ಚರಿಪಡುತ್ತೀರಿ ! ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಪಾರಮಾರ್ಥಿಕ ವಿಷಯಗಳ ಸಧಾರಣೆಯಲ್ಲಿ ಬೇವು ಆದ್ಯ ಪಾತ್ರ ವಹಿಸುತ್ತದೆ ಎಂದರೆ ನಂಬಲೇಬೇಕು.

ಆರೋಗ್ಯ ರಕ್ಷಣೆಯಂತೆ ಪರಿಸರ ಸಂರಕ್ಷಣೆ ಇಂದು ದೊಡ್ಡ ಸವಾಲಾಗಿ ಪರಿಣಿಮಿಸಿದೆ. ಮನುಷ್ಯನ ಪರಿಸರ ವಿರೋಧಿ ಚಂತನೆ ಇದಕ್ಕೆ ಮುಖ್ಯ ಕಾರಣ. ಈಗ ಸವಾಲು ಎದುರಿಸಲು ನಮಗಿರುವ ಏಕೈಕ ಮಾರ್ಗವೆಂದರೆ ಪರಸರಿ ಸಂಪತ್ತಿನ ರಕ್ಷಣೆ ಮಾಡುವುದು. ಪರಿಸರ ಮಾಲಿನ್ಯದ ತಡೆ ಜೊತೆಗೆ ಆರೋಗ್ಯಯುವ ಬದುಕು ಕಲ್ಪಿಸುವ ವೃಕ್ಷಗಳಲ್ಲಿ ಬೇವಿಗೆ (ಬೇವು-neem) ಮೊದಲ ಹೆಸರು. [ ಬೇವಿನ ಉಪಯೋಗ] (health benefits of neem in kannada)
# ಬೇವಿನ ಉಪಯೋಗ 1). ಗುಣದಿಂದ ಬೇವು ಕಲ್ಪವೃಕ್ಷ !
ಬಹು ಉಪಯೋಗಿ ಬೇವಿನ ಗುಣ ಹಾಗೂ ಉಪಯೋಗದ ಕುರಿತು ನೀವು ಅರಿತರೆ ಅಚ್ಚರಿಪಡುತ್ತೀರಿ ! ವ್ಯಕ್ತಿಯ ದೈಹಿಕ, ಮಾನಸಿಕ ಹಾಗೂ ಪಾರಮಾರ್ಥಿಕ ವಿಷಯಗಳ ಸಧಾರಣೆಯಲ್ಲಿ ಬೇವು ಆದ್ಯ ಪಾತ್ರ ವಹಿಸುತ್ತದೆ ಎಂದರೆ ನಂಬಲೇಬೇಕು. ದೈವಿಕ ಕಾರ್ಯಗಳೇ ಆಗಲಿ, ವೈದ್ಯಕೀಯ ಕಾರ್ಯಗಳೇ ಬೇವು ಮುಂದಿರುತ್ತದೆ.
ವೇದ ಸಾಹಿತ್ಯದಲ್ಲಿ ಬಹುವಾಗಿ ಉಲ್ಲೇಕಿತವಾಗಿರುವ ಬೇವಿನ ಮರದ ಪ್ರತಿ ಭಾಗಕೂಡ ಉಪಯೋಗಕಾರಿ. ಬೇವು ಪರಿಸರವನ್ನು ನಿರ್ಮಲವಾಗಿಟ್ಟು ಶುದ್ಧ ಗಾಳಿಯನ್ನು ಕಲ್ಪಿಸುತ್ತದೆ. ಬೇವು ಕಹಿಯಾದದರೂ ಉಪಯೋಗದ ಕಾರಣದಿಂದ ಕಲ್ಪವೃಕ್ಷವೇ ಸರಿ.
# ಬೇವಿನ ಉಪಯೋಗ 2). ಹಲವು ರೋಗಗಳಿಗೆ ಮದ್ದು ಬೇವು
ಯುಗಾದಿಯಿಂದ ಆರಂಭವಾಗಿ ಚೈತ್ರ ಮಾಸವಿಡೀ ಮುಂಜಾನೆ ಬೇವಿನ ಎಲೆಗಳನ್ನು ಪ್ರತದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಇಡೀ ವರ್ಷ ರೋಗ ರುಜಿನಗಳು ಬರವುದಿಲ್ಲ ಎಂಬುದು ಹಿರಿಯರ ಮಾತು.
ಹಾನಿಕಾರಕ ಅಣುಜೀವಿಗಳಿಂದ ಹರಡುವ ಸೋಂಕುಗಳ ತಡೆಗೆ ಬೇವು ಉತ್ತಮ ಮದ್ದು. ಬೇವಿನ ಸೊಪ್ಪನಲ್ಲಿ ಮತ್ತು ಎಣ್ಣೆಯಲ್ಲಿ ಕಿಮಿನಾಶಕ ಗುಣವಿದೆ. ಎಳೆಯ ಬೇವಿನಕಡ್ಡಿಯನ್ನು ಕುಂಚದಂತೆ ಮಾಡಿ ಹಲ್ಲು ಉಜ್ಜುವುದರಿಂದ ಹಲ್ಲಿನ ಸಮಸ್ಯೆ ಬರುವುದಿಲ್ಲ.
ಕಡಿಮೆ ಮಳೆ ಬೀಲುವ ಮತ್ತು ಬಿಸಿಲಿನ ತಾಪ ಅಧಿವಾಗಿರುವ ಪ್ರದೇಶದಲ್ಲಿ ಬೇವಿನ ಮರ ಹುಸುಸಾಗಿ ಬೆಳೆಯುತ್ತವೆ. ಇಂದು ಪ್ರಕೃತಿ ವಿಶೇಷ. ಬೇವಿನ ಮರಗಳ ಮೇಲಿಂದ ಬೀಸುವಗಾಳಿಯು ಬಿಸಿಲಿನ ತಾಪಂದಿಂದ ಬಳಲಿದ ದೇಹಕ್ಕೆ ತಂಪು ನೀಡುತ್ತದೆ. ಇದು ಆರೋಗ್ಯಕರ ಕೂಡ ಹೌದು.
ಇದನ್ನು ಓದಿ: ನಿಯಮಿತ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ !
# ಬೇವಿನ ಉಪಯೋಗ 3). ಬೇವಿನಿಂದ ಮಲೇರಿಯಾ ದೂರ !
ಬೇವಿನ ಸೊಪ್ಪು, ಬೇವಿನ ಹೋವು, ಬೇವಿನ ಎಣ್ಣೆ, ಬೇವಿನ ತೊಗಟೆಯಲ್ಲಿ ಹಲವು ರೋಗ ನಿವಾರಕ ಅಂಶಗಳಿದ್ದು, ಇವುಗಳಿಂದ ಔಷಧ ತಯಾರಿಸಲಾಗುತ್ತದೆ. ಚರ್ಮ ರೋಗನಿವಾರಣೆಗೆ ಬೇವು ಸಿದ್ಧ ಔಷಧ. ಬೇವಿನ ತಾಜಾ ಸೊಪ್ಪನ್ನು ಹಿಂಡಿ ಸೇವಿಸಿದರೆ ಶಾರೀರಿಕ ದೋಷ ಕೂಡ ನಿವಾರಣೆ ಆಗುತ್ತವೆ ಎಂಬುದು ತಜ್ಞರ ಅಂಬೋಣ.
ಬೇವಿನ ಮರದ ಬುಡದಲ್ಲಿನ ತೊಗಟೆಯನ್ನು ಕೆತ್ತಿ ತೆಗೆದು ಅದರಲ್ಲಿ ಕಷಾಯ ತಯಾರಿಸಿ ಸೇವಿಸುವುದರಿಂದ ಕುಷ್ಟ ರೋಗಾದಿ ಚರ್ಮ ರೋಗಗಳು ನಿವಾರಣೆಯಾಗುವುವು. ಮಧುಮೇಹ, ನಿಶ್ಯಕ್ತಿ, ವಾಕರಿಕೆ, ಬಾಯಾರಿಕೆ, ಗಡುವಿನ ಜ್ವರ ಸೇರಿದಂತೆ ಅನೇಕ ದೋಷಗಳಿಗೆ ಬೇವು ರಾಮಬಾಣ.
ಮಲೇರಿಯಾ ಜ್ವರದಲ್ಲಿ 2 ಅಥವಾ 3 ಗ್ರಾಂ ಬೇವಿನ ಎಲೆಗಳ ಚೂರ್ಣವನ್ನಾಗಲೀ, ತೊಗಟೆಯ ಚೂರ್ಣವನ್ನಾಗಲಿ ಬಿಸಿ ನೀರಿನೊಂದಿಗೆ ಸೇವಿಸುವುದರಿಂದ ಆರೋಗ್ಯ ವೃಧ್ಧಿಸುತ್ತದೆ.
ಸೀಮೆಎಣ್ಣೆಯೊಂದಿಗೆ ಬೇವಿನ ಎಣ್ಣೆ ಬೆರೆಸಿ ದೀಪ ಉರಿಸುವುದರಿಂದ ಸೊಳ್ಳೆಗಳ ಕಾಟ ತಪ್ಪಿಸ ಬಹುವುದು. ದ್ವಿಶತಾಂಶ ಬೇವಿನ ಎಣ್ಣೆಯೊಂದಿಗೆ ಕೊಬ್ಬರಿ ಎಣ್ಣೆಯನ್ನು ಮಿಶ್ರಣ ಮಾಡಿ ದೇಹಕ್ಕೆ ಲೇಪಿಸಿದರೆ ಸೊಳ್ಳೆಗಳು ಹತ್ತಿರಕ್ಕೆ ಬರುವುದಿಲ್ಲ.
ಬೇವಿನ ಎಲೆಗಳ ರಸವನ್ನು ಸಕ್ಕರೆಯೊಂದಿಗೆ ಸೇವಿಸುವುದರಿಂದ ಆಮಾತಿಸಾರ (dysentery) ಮತ್ತು ಅತಿಸಾರ (diarrhoea) ದಿಂದ ಗುಣಮುಖವಾಗಬಹುದು. ಪ್ರತಿದಿನ ಬೆಳಗ್ಗೆ 10-12 ಬೇವಿನ ಎಲೆಗಳನ್ನು ಬಾಯಿಗೆ ಹಾಕಿಕೊಂಡು ಚನ್ನಾಗಿ ಅಗೆದು ಒಂದು ಬಟ್ಟಲು ನೀರು ಕುಡಿದರೆ ಕ್ಯಾನ್ಸರ್ ಸಂಬಂಧಿ ರೋಗಗಳು ದೂರವಾಗುತ್ತವೆ ಎಂಬುದು ಹಿರಿಯರ ಅಭಿಪ್ರಾಯ.
ಇದನ್ನು ಓದಿ: ಒಂದು ಚಿಕ್ಕ ಬೆಳ್ಳುಳ್ಳಿ ಶಕ್ತಿ ಎಂತದ್ದು ಗೊತ್ತಾ ?
# ಬೇವಿನ ಉಪಯೋಗ 4). ಕಹಿ ಬೇವು ಗುಣದಲ್ಲಿ ಅಮೃತ !
ಒಟ್ಟಾರೆ ಬೇವು ಗುಣದಲ್ಲಿ ಕಹಿ ಎನಿಸಿದರೂ ಅದರ ಉಪಯೋಗದಲ್ಲಿ ಮಾತ್ರ ಅಮೃತ. ಬೇವು ಅಂದಕೂಡಲೇ ನಾವು ಮುಖ ಸಿಂಡರಸಿಕೊಳ್ಳುತ್ತೆವೆ. ಆದರೆ ಬೇವಿನ ಉಪಯೋಗ ಅರಿತು ಅದನ್ನು ನಿಯಮಿತವಾಗಿ ಬಳಕೆ ಮಾಡಿದರೆ ಆರೋಗ್ಯಯುತ ಜೀವನ ನಡೆಸಬಹುದು ಎಂಬುದು ನಮ್ಮ ಪೂರ್ವಜರ ಸಲಹೆ.
-ಸಂಗ್ರಹ
ಆರೋಗ್ಯ, ಆಹಾರ, ಜೀವನಶೈಲಿ ಕುರಿತು suddidina.com ಗೆ ನೀವು ಕೂಡ ಲೇಖನ ಕಳುಹಿಸಬಹುದು. ಹೆಚ್ಚಿನ ಮಾಹಿತಿಗೆ suddidina@gmail.com ಗೆ ಸಂಪರ್ಕಿಸಿ.
#ಆರೋಗ್ಯ #ಆಹಾರ #ಜೀವನಶೈಲಿ #kannadatips #kannadahealthtips #healthtips

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಜಾತಿಗಣತಿ ಮರು ಸಮೀಕ್ಷೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ ಎಂದು ಹೇಳಿದ್ದಾರೆ.
54 ಮಾನದಂಡಗಳನ್ನು ಇಟ್ಟುಕೊಂಡು ಹೋಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ನೀಡಿದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ವಿಚಾರದಲ್ಲಿ ಸರಿಯಾದ ಸ್ಪಷ್ಟತೆ ನೀಡಬೇಕು ಎಂದು ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯನವರೇ ಜಾತಿ ಗಣತಿಗೆ 200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು161 ಕೋಟಿ ರೂಪಾಯಿ ಖರ್ಚಾಗಿದೆ ಎಂದು ಹೇಳಿ, ಇದೀಗ ಜಾತಿ ಜನಗಣತಿಯನ್ನು ವಾಪಸ್ ಪಡೆಯುವುದಾಗಿ ಹೇಳುತ್ತಿರುವುದು ಹಾಸ್ಯಸ್ಪದವಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
RCB ಸಂಭ್ರಮಾಚರಣೆ : 18 ರೂಪಾಯಿಗೆ ಬಿರಿಯಾನಿ ಮಾರಾಟ

ಸುದ್ದಿದಿನ,ಬೆಂಗಳೂರು:ಆರ್ಸಿಬಿ ವಿಜಯೋತ್ಸವದಲ್ಲಿ ಬೆಂಗಳೂರು ಮಿಂದೆದ್ದಿದೆ. ಜನ ವಿಭಿನ್ನ ರೀತಿಯಲ್ಲಿ ತಮ್ಮ ಸಂಭ್ರಮಾಚರಣೆ ವ್ಯಕ್ತಪಡಿಸಿದ್ದಾರೆ. ಹೋಟೆಲ್ ರೆಸ್ಟೋರೆಂಟ್ಗಳೂ ಕೂಡ ಇದನ್ನೇ ಬಂಡವಾಳ ಮಾಡಿಕೊಂಡು ಭರ್ಜರಿ ವ್ಯಾಪಾರ ಮಾಡಿವೆ.
ಬೆಂಗಳೂರಿನ #NativeCooks ಫುಡ್ ಡೆಲಿವರಿ ಸಂಸ್ಥೆಯು ಕೇವಲ 18 ರೂಪಾಯಿಗೆ ಬಿರಿಯಾನಿ ಮಾರಾಟ ಮಾಡುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನ ಗೆದ್ದಿದೆ.
ಹೌದು, ಹೆಬ್ಬಾಳ, ಆರ್ಟಿ ನಗರ, ಸದಾಶಿವನಗರದಲ್ಲಿ ಡೆಲಿವರಿ ಶುಲ್ಕವಿಲ್ಲದೆ ಅತಿ ಕಡಿಮೆ ದರದಲ್ಲಿ ಫುಡ್ ಡೆಲಿವರಿ ಮಾಡುತ್ತಿರುವ #NativeCooks ಸಂಸ್ಥೆಯು ಆರ್ಸಿಬಿ ಅಭಿಮಾನಿಗಳನ್ನು ಖುಷಿಪಡಿಸಲು ಈ ರೀತಿ ಹೊಸ ಆಫರ್ ಬಿಟ್ಟಿತ್ತು. ಮೂಲಗಳ ಪ್ರಕಾರ ಸುಮಾರು ಒಂದು ಸಾವಿರ ಬಿರಿಯಾನಿ ಲಂಚ್ಬಾಕ್ಸ್ಗಳನ್ನು ತಲಾ 18ರೂಪಾಯಿಯಂತೆ ಮಾರಾಟ ಮಾಡಿದೆ.
ಮನೆಯಲ್ಲೇ ಮಾಡಿದ ಆಹಾರ ಪದಾರ್ಥಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವ ನೇಟೀವ್ ಕುಕ್ಸ್ ಸಂಸ್ಥೆಯು ಹೆಣ್ಣುಮಕ್ಕಳೇ ಸೇರಿ ನಡೆಸುತ್ತಿರುವ ಪುಟ್ಟ ಕೇಟರಿಂಗ್ ಆಗಿದೆ. ವಾರದಲ್ಲಿ 6 ದಿನಗಳ ಕಾಲ ಕಾರ್ಯ ನಿರ್ವಹಿಸುವ ಈ ಕೇಟರಿಂಗ್. ವೆಜ್ ಊಟವನ್ನು ಕೇವಲ 80 ರೂಪಾಯಿಗೆ ಹಾಗೂ ನಾನ್ವೆಜ್ ಊಟವನ್ನು 135 ರೂಪಾಯಿಗೆ ಹಾಗೂ ಎಕ್ ಮೀಲ್ಅನ್ನು ಕೇವಲ 110 ರೂಪಾಯಿಗೆ ಮಾರಾಟ ಮಾಡುತ್ತಿದೆ.
ಸದ್ಯಕ್ಕೆ ಹೆಬ್ಬಾಳ, ಆರ್ಟಿನಗರ ಹಾಗೂ ಸದಾಶಿವನಗರಕ್ಕೆ ಡೆಲಿವರಿ ಶುಲ್ಕ ಇಲ್ಲದೇ ಆಹಾರ ವಿತರಿಸುತ್ತಿದ್ದು, ಹೆಚ್ಚಿನ ಮಾಹಿತಿಗೆ 80 4853 6206 ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಕ್ರೀಡಾ ಸಾಮಾಗ್ರಿಗಳ ಸರಬರಾಜಿಗೆ ಯುವ ಸಂಘಗಳಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ23 hours ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ23 hours ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ23 hours ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್