ದಿನದ ಸುದ್ದಿ
ನೀಟ್ ಅಕ್ರಮ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕಳಂಕ : ಸಾಬೀರ್ ಜಯಸಿಂಹ
ಸುದ್ದಿದಿನ,ದಾವಣಗೆರೆ:ದೇಶದ ಅತ್ಯಂತ ಕಠಿಣಾತಿ ಕಠಿಣ ಪರೀಕ್ಷೆ ನೀಟ್ನಲ್ಲೂ ಗೋಲ್ಮಾಲ್ ನಡೆದಿದೆ. ಬಳಿಕ ನೆಟ್ಪರೀಕ್ಷೆಗೂ ಅಕ್ರಮದ ವಾಸನೆ ಬಡಿದಿದ್ದರಿಂದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಗಳ ಅಕ್ರಮದ ವಿರುದ್ಧ ದೇಶಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಅಕ್ರಮಗಳ ಗದ್ದಲದಲ್ಲಿರುವ ಕೇಂದ್ರ ಸರ್ಕಾರ (26/06/2024) ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಕೂಡ ಕೊನೆಯ ಕ್ಷಣದಲ್ಲಿ ಮುಂದೂಡಿಕೆ ಮಾಡಿ ಆದೇಶಿಸಿದೆ.
ಸರ್ಕಾರಿ ನೇಮಕಾತಿಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗ್ತಿದ್ದು ಇತಿಹಾಸ. ಇದನ್ನೂ ಮೀರಿ ಈಗ ಕಠಿಣ ಪರೀಕ್ಷೆಗಳಾದ ನೀಟ್-ನೆಟ್ ಕೂಡ ಅಕ್ರಮದ ಗೂಡುಗಳಾಗಿ ಮಾರ್ಪಟ್ಟಿವೆ. ಲಕ್ಷ ಲಕ್ಷ ಹಣಕ್ಕೆ ಪ್ರಶ್ನೆ ಪತ್ರಿಕೆಗಳು ಬಿಕರಿಯಾಗಿರುವ ಆರೋಪ ಕೇಳಿಬಂದಿದೆ. ಪರೀಕ್ಷೆಗಳ ಪಾವಿತ್ರ್ಯತೆಗೆ ಭಂಗ ತಂದಿದ್ದು ಅಭ್ಯರ್ಥಿಗಳನ್ನು ಕಂಗೆಡಿಸಿವೆ. ಈ ಕೂಡಲೇ ಕೇಂದ್ರ ಶಿಕ್ಷಣ ಸಚಿವರನ್ನು ವಜಾ ಮಾಡಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಬೇಕು ಎಂದು ದಾವಣಗೆರೆ ಜಿಲ್ಲಾಧಿಕಾರಿಗಳ ರವರ ಮುಖಾಂತರ ದಲಿತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಘಟಕದ ವತಿಯಿಂದ ರಾಷ್ಟ್ರಪತಿಗಳಿಗೆ ಇಂದು ಮನವಿ ಸಲ್ಲಿಸಿದರು.
ನೀಟ್-ಯುಜಿ ಹಾಗೂ ಯಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಗದ್ದಲದಲ್ಲಿ ಮುಳುಗೇಳುತ್ತಿರುವ ಕೇಂದ್ರ ಸರಕಾರ ಇದೀಗ ನೀಟ್-ಪಿಜಿ ಪರೀಕ್ಷೆಯನ್ನು ಕೊನೇ ಕ್ಷಣದಲ್ಲಿ ಮುಂದೂಡಿಕೆ ಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಜೂನ್ 26 ರಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ನೀಡಿದೆ. ವಿದ್ಯಾರ್ಥಿಗಳಿಗೆ ಉಂಟಾದ ಅನನುಕೂಲತೆಗೆ ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಎಂದು ತಿಳಿಸಿದೆ. ಕೊನೆ ಗಳಿಗೆಯಲ್ಲಿ ಏಕಾಏಕಿ ಪರೀಕ್ಷೆ ರದ್ದುಪಡಿಸಿದ್ದರಿಂದ ಎಲ್ಲೂ ಮತ್ತೊಂದು ಕಡೆ ಅಕ್ರಮದ ನಡೆಯುತ್ತಿರುವುದು ಶಂಕೆ ವ್ಯಕ್ತವಾಗುತ್ತಿದೆ. ಆದರೆ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಬೇಕಾಗಿದ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳು ತಮ್ಮ ಕರ್ತವ್ಯದಲ್ಲಿ ವಿಫಲಗೊಂಡಿದ್ದಾರೆ ಎಂಬದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಜೂನ್ 26 ರ ಭಾನುವಾರದಂದು ದೇಶದ 270 ಕೇಂದ್ರಗಳಲ್ಲಿ ಪರೀಕ್ಷೆ ನಿಗದಿಯಾಗಿತ್ತು. 2.2 ಲಕ್ಷ ಅಭ್ಯರ್ಥಿಗಳು ನೀಟ್ – ಪಿಜಿ ಪರೀಕ್ಷೆ ಬರೆಯಬೇಕಿತ್ತು.
ನೀಟ್, ನೆಟ್ ಪರೀಕ್ಷೆಗಳಲ್ಲಿ ಅಕ್ರಮ ಹಿನ್ನೆಲೆ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ತಿಳಿದು ಬರುತ್ತಿದೆ. ನೀಟ್ – ಪಿಜಿ
ಹೊಸ ಪರೀಕ್ಷೆಯ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಹೇಳಿ ಕೇಂದ್ರ ಸರ್ಕಾರ ಕೊನೆ ಕ್ಷಣದಲ್ಲಿ ಪರೀಕ್ಷೆ ರದ್ದುಪಡಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿ ಕಾಪಾಡುವಲ್ಲಿ ಎಲ್ಲ ವಿಫಲತೆ ಎಂದು ಕಾಣುತ್ತದೆ.
ಇದೇ ವೇಳೆ ಕೇಂದ್ರವು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಮಹಾನಿರ್ದೇಶಕ ಸುಬೋಧ್ ಸಿಂಗ್ ಅವರನ್ನು ವಜಾಗೊಳಿಸಿದೆ. ಏಜೆನ್ಸಿಯ ಕಾರ್ಯಚಟುವಟಿಕೆಗಳನ್ನು ಪರಿಶೀಲಿಸಲು ಮತ್ತು ಪರೀಕ್ಷಾ ಸುಧಾರಣೆಗಳನ್ನು ಶಿಫಾರಸು ಮಾಡಲು ಇಸ್ರೊ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್ ನೇತೃತ್ವದಲ್ಲಿ ಏಳು ಸದಸ್ಯರ ಸಮಿತಿಯನ್ನು ರಚಿಸಿದ್ದು ಸ್ವಾಗತ ಆದರೆ ಪದೇ ಪದೇ ಪರೀಕ್ಷೆಯಲ್ಲಿನ ಅಕ್ರಮಗಳಿಂದ ಲಕ್ಷಾಂತರ ಪರೀಕ್ಷಾರ್ಥಿಗಳಿಗೆ ತೊಂದರೆ ಅನುಭವಿಸುವಂತಾಗಿದೆ. ಈ ಅಕ್ರಮಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳು ಅವಕಾಶ ವಂಚಿತರಾಗುವ ಸಾಧ್ಯತೆ ದಟ್ಟವಾಗಿವೆ. ಹಗಲು ರಾತ್ರಿ ಎನ್ನದೆ ಕಷ್ಟ ಪಟ್ಟು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪದೇ ಪದೇ ಪರೀಕ್ಷೆಯಲ್ಲಿ ನಡೆಯುವ ಅಕ್ರಮಗಳಿಂದ ಆತ್ಮಸ್ಥೈರ್ಯ ಮತ್ತು ನೆಮ್ಮದಿ ಹಾಳಾಗಿದೆ ಮತ್ತು ಲಕ್ಷಾಂತರ ವಿದ್ಯಾರ್ಥಿಗಳ ಹಾಗೂ ಅವರ ಪಾಲಕರ ಕನಸುಗಳಿಗೆ ಪೆಟ್ಟು ಬಿದ್ದಿದೆ.
ಎರಡು ಪರೀಕ್ಷೆಯಲ್ಲಿ ನಡೆದ ಅಕ್ರಮದ ಸಂಪೂರ್ಣ ತನಿಖೆ ಆಗಬೇಕು, ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ನಡೆಸಲು ವಿಫಲಗೊಂಡಿರುವ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಸಚಿವರಿಗೆ ಮತ್ತು ಇಲಾಖೆಗಳ ಅಧಿಕಾರಿಗಳಿಗೆ ವಜಾಗೊಳಿಸಬೇಕು ಇದರ ಜೊತೆಗೆ ಶೈಕ್ಷಣಿಕ ಸೀಟ್ ಹಂಚಿಕೆ ಮಾಡಲು ನೀಟ್ – ನೆಟ್ ಪರೀಕ್ಷೆ ನಡೆಸುವ ಅಧಿಕಾರವನ್ನು ಆಯಾ ರಾಜ್ಯಗಳ ಸರ್ಕಾರಕ್ಕೆ ನೀಡಬೇಕೆಂದು ಈ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ ಪರಿಷತ್ ಸಂಘಟನೆ ಆಗ್ರಹಿಸಿದೆ.
ಈ ಸಂದರ್ಭದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತು ಜಿಲ್ಲಾ ಸಂಚಾಲಕಹಾಗೂ ಪುರಸಭಾ ಸದಸ್ಯ ಸಾಬೀರ್ ಜಯಸಿಂಹ. ಹರಿಹರ ತಾಲೂಕು ಗೌರವ ಸಂಚಾಲಕ ಭೋವಿ ಶಿವಣ್ಣ, ಪುರಸಭಾ ಸದಸ್ಯರಾದ ನಯಾಜ್ ಅಹಮದ್, ಶಬ್ಬೀರ್ ಖಾನ್,ಗೌಡ್ರ ಮಂಜಪ್ಪ ಹಾಗೂ ಅನ್ವರ್ ಸಾಬ್,ಕೆ ಪಿ ಗಂಗಾಧರ್, ಭಾನುವಳ್ಳಿ ಸುರೇಶ್, ಮತ್ತಿತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243