Connect with us

ನೆಲದನಿ

ದ್ವಿಕಂಠ ಸಿರಿ ಮುರಾರ್ಜಿ ಎಂಬ ದಲಿತ ಕಲಾವಿದನ ಹೋರಾಟ ಕಥನ

Published

on

ಭಾರತದಲ್ಲಿ ವೈದಿಕತೆಯು ತನ್ನ ಅಸ್ತಿತ್ವದ ಉಳಿವಿಗಾಗಿ ರೂಪಿಸಿಕೊಂಡು ಬಂದ ಶ್ರೇಣಿಕೃತ ವ್ಯವಸ್ಥೆಯಲ್ಲಿ ಅಸೃಶ್ಯರೆಂಬ ಪಟ್ಟವನ್ನು ಸ್ವೀಕರಿಸಿ, ಉನ್ನತ ವರ್ಗಗಳ ಸೇವೆಯನ್ನು ಪ್ರಾಮಾಣಿಕ ನೆಲೆಯಲ್ಲಿ ನೆಡೆಸಿಕೊಂಡು ಬಂದವರು ನೆಲಮೂಲ ಸಂಸ್ಕøತಿಯ ಹೊಲೆಯ ಮತ್ತು ಮಾದಿಗ ಸಮುದಾಯದವರು. ಆಧುನಿಕ ಶಿಕ್ಷಣದಿಂದ ಜಾಗೃತರಾಗಿ ಈ ದಲಿತ ಸಮುದಾಯದ ವಿಮೋಚನೆಗಾಗಿ ಬಾಬಾಸಾಹೇಬ ಅಂಬೇಡ್ಕರರು ಸಂವಿಧಾನಿಕ ಹಕ್ಕು ಹಾಗೂ ಮೀಸಲಾತಿಯನ್ನು ಕಲ್ಪಿಸಿಕೊಡುವ ತನಕವೂ ಈ ಸಮುದಾಯದ ಸ್ಥಿತಿಗತಿಯನ್ನು ಕಲ್ಪಿಸಿಕೊಳ್ಳುವುದಕ್ಕೂ ಕಷ್ಟಸಾಧ್ಯವಾಗಿತ್ತು. ಆದರೆ ಅಂಬೇಡ್ಕರ್ ಅವರ ಹೋರಾಟದ ಫಲವಾಗಿ ದಲಿತರು ನಾವು ಮಾನವರೆಂಬುದಾಗಿ ಸ್ವಲ್ಪ ನೆಮ್ಮದಿಯುತವಾಗಿ ಬದುಕುವಂತಾಗಿದೆ. ಇಂತಹ ದಮನಿತ ಸಮುದಾಯದಲ್ಲಿ ಬೆಳೆದುಬಂದು, ತಮ್ಮ ಬದುಕಿನ ಭಾಗವಾಗಿ ರೂಢಿಸಿಕೊಂಡು ಬಂದ ಕಲೆಯಿಂದಲೆ ತನ್ನ ಬದುಕನ್ನು ರೂಪಿಸಿಕೊಂಡು, ಆ ಮೂಲಕ ತನ್ನ ಸಮುದಾಯದ ಜನತೆ ಹಾಗೂ ಸಮಾಜದಲ್ಲಿನ ಮಾರಕ ನೆಲೆಯ ಸನ್ನಿವೇಶಗಳ ಕುರಿತಾಗಿ ಅರಿವು ಮೂಡಿಸುವ ನೆಲೆಯಲ್ಲಿ ಹಲವಾರು ದಮನಿತ ಕಲಾವಿದರು ನೆಲದ ದನಿಯಾಗಿ ತಮ್ಮ ಪ್ರಾಮಾಣಿಕ ಸೇವೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ನಮ್ಮ ನಡುವೆ ಇರುವ ಇಂತಹ ಜೀವಪರ ದನಿಗಳನ್ನು ಗುರುತಿಸುವ ಕಿರು ಪ್ರಯತ್ನದ ಭಾಗವೇ ಪ್ರಸ್ತುತ ಲೇಖನದ ಆಶಯವಾಗಿದೆ.

ಜಾನಪದ ಸಾಹಿತ್ಯ, ಸಂಗೀತ ನೆಲೆಯೂರಿರುವುದೆ ಗ್ರಾಮೀಣ ಜನಜೀವನದಲ್ಲಿ, ಅದರಲ್ಲೂ ವಿಶೇಷವಾಗಿ ತಳಸಮುದಾಯಗಳು ಹಾಗೂ ಶ್ರಮಿಕ ವರ್ಗಗಳಲ್ಲಿ. ನಮ್ಮ ಜಾನಪದ ಪರಂಪರೆ ಹಾಗೂ ದೇಶಿ ಸಾಹಿತ್ಯದ ಸೊಬಗನ್ನು ಇಂದಿಗೂ ಜೀವಂತವಾಗಿ ಗುರುತಿಸುವುದಾದರೆ ಅದು ದಲಿತರು ಹಾಗೂ ತಳವರ್ಗಗಳಲ್ಲಿ ಮಾತ್ರ. ಆಧುನಿಕತೆಯ ಸ್ಪರ್ಶ ಹಾಗೂ ಆರ್ಥಿಕತೆಯ ಸುಧಾರಣೆಯ ಹಂತವನ್ನು ತಲುಪಿದ ಬಹುತೇಕ ಕುಟುಂಬಗಳಲ್ಲಿ ಈ ಮೌಖಿಕ ಜಾನಪದವು ಕಣ್ಮರೆಯಾಗಿರುವ ಸಾಧ್ಯತೆ ಹೆಚ್ಚಾಗಿ ಕಂಡುಬರುತ್ತದೆ. ಇದು ಪ್ರಕೃತಿಯ ಬದಲಾವಣೆಯ ನಿಯಮಗಳಲ್ಲೊಂದಾಗಿರುವ ಸಹಜ ಪ್ರಕ್ರಿಯೆಯಾಗಿದೆ. ಹಿಂದಿನಿಂದಲೂ ಜಾನಪದ ಸಾಹಿತ್ಯ ಪರಂಪರೆಯನ್ನು ಸೂಕ್ಷ್ಮವಾಗಿ ಗಮನಿಸಿದಾಗ ಜಾನಪದ ಮತ್ತು ಬಡತನಕ್ಕೂ ಅವಿನಾಭಾವ ಸಂಬಂಧವಿರುವುದು ಕಂಡುಬರುತ್ತದೆ. ಇಂದಿಗೂ ಎಷ್ಟೋ ಜನ ಜಾನಪದ ಕಲಾವಿದರು ತಮ್ಮ ಸಾಹಿತ್ಯ ಹಾಗೂ ಕಲೆಯ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೂ ಉಳಿಸುವ ಸಲುವಾಗಿ ಬಡತನದ ಬೇಗೆಯಲ್ಲಿ ತಾವು ಬೆಂದು, ತಮ್ಮ ಕಲೆಯನ್ನು ಮುಂದುವರೆಸಿಕೊಂಡು ಬರುತ್ತಿದ್ದಾರೆ. ಆದರೆ ಇಲ್ಲಿ ಜಾನಪದ ಸಾಹಿತ್ಯದ ಮೂಲಕವೇ ತನ್ನ ಬಡತನದ ಬದುಕು ಹಾಗೂ ಆರ್ಥಿಕತೆಯ ಮಟ್ಟವನ್ನು ಸುಧಾರಿಸಿಕೊಂಡ ಗ್ರಾಮೀಣ ಪ್ರತಿಭೆಯಾದ ಮುರಾರ್ಜಿ ಎಂಬ ದ್ವಿಕಂಠ ಕಲಾವಿದನ ಬದುಕಿನ ಸಂಕಥನವನ್ನು ಪರಿಚಯಿಸುವುದು ಪ್ರಸ್ತುತ ಲೇಖನದ ಉದ್ದೇಶವಾಗಿದೆ.

2

ಚಿತ್ರದುರ್ಗ ಜಿಲ್ಲೆಯ ಚಿನ್ನೋಬನಹಳ್ಳಿ ಎಂಬ ಗ್ರಾಮದ ದಲಿತ ಕುಟುಂಬವೊಂದರಲ್ಲಿ ಶ್ರೀ ಡಿ.ಬಿ. ಓಬ್ಬಯ್ಯ ಹಾಗೂ ಶ್ರೀಮತಿ ಮಾರಮ್ಮ ಎಂಬ ದಂಪತಿಗಳ ಮಗನಾಗಿ ಜನ್ಮತಳೆದ ಶ್ರೀಯುತ ಮುರಾರ್ಜಿಯವರು ಬಾಲ್ಯದಿಂದಲೂ ಜಾನಪದ ಸಾಹಿತ್ಯ ಸಂಗೀತದಂತಹ ವಾತವರಣದ ನಡುವೆ ಬೆಳೆದು ಬಂದವರು. ಇವರ ತಂದೆ ತತ್ವಪದ ಹಾಗೂ ಭಜನೆಯಂತಹ ಸಾಹಿತ್ಯ ವಲಯದಲ್ಲಿ ಸಾಕಷ್ಟು ಪ್ರಸಿದ್ಧಿಯನ್ನು ಪಡೆದುಕೊಂಡಿದ್ದು, ಇವರ ತಾಯಿ ಮಾರಮ್ಮನವರು ಸೋಬಾನೆ ಹಾಡುಗಾರ್ತಿಯಾಗಿಯೂ ಪ್ರಸಿದ್ದಿಯನ್ನು ಪಡೆದವರು. ಇವರ ಪ್ರಭಾವದ ನಡುವೆ ಬೆಳೆದು ಬಂದ ಮುರಾರ್ಜಿಯವರು ಜಾನಪದ ಸಂಗೀತ ಹಾಗೂ ನಾಟಕವನ್ನು ತಮ್ಮ ಕಾರ್ಯಕ್ಷೇತ್ರವಾಗಿ ಆಯ್ದುಕೊಂಡರು. ತನ್ನ ಬಡತನದ ಬದುಕಿನ ನಡುವೆಯೇ ಗಾಯನ ಕಲೆಯನ್ನು ಹವ್ಯಾಸವಾಗಿ ರೂಢಿಸಿಕೊಂಡ ಇವರು, ತಮ್ಮ ಪ್ರಾದೇಶಿಕ ಪರಿಸರದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಸಾಮಾಜಿಕ ನಾಟಕಗಳಿಂದ ಪ್ರಭಾವಿತರಾದರು. ಈ ಸಾಮಾಜಿಕ ನಾಟಕಗಳ ಪ್ರಭಾವದಿಂದಾಗಿ ಹೆಣ್ಣು ಮತ್ತು ಗಂಡಿನ ದನಿಯನ್ನು ಅನುಕರಿಸುವ ಮೂಲಕವಾಗಿ ಹಾಡುಗಳನ್ನು ಮಧುರವಾಗಿ ಹಾಡತೊಡಗಿದರು. ಈ ಹಾಡುಗಾರಿಕೆಯನ್ನು ಮನರಂಜನೆಯ ಒಂದು ಭಾಗವಾಗಿ ಮುಂದುವರೆಸಿಕೊಂಡು ಬಂದ ಇವರಿಗೆ ಬಾಲ್ಯದಿಂದಲೂ ಗಾಯನ ಕಲೆಯು ಹತ್ತಿರದಿಂದ ಪರಿಚಿತವಾದ ಕಲೆಯಾಗಿತ್ತು.

ಇವರಲ್ಲಿ ಅಂತರ್ಗತವಾಗಿದ್ದ ಈ ಕಲೆಯ ಅನಾವರಣಕ್ಕೆ ಪ್ರಾರಂಭಿಕ ವೇದಿಕೆ ಲಭಿಸಿದ್ದು ಮಾತ್ರ ಕಿರಿಯ ಪ್ರಾಥಮಿಕ ಶಿಕ್ಷಣದ ಪಡೆಯುವ ಅವಧಿಯಲ್ಲಿ. ಈ ಅವಧಿಯಲ್ಲಿ ಶಾಲೆಯಲ್ಲಿ ನಡೆಸುತ್ತಿದ್ದ ಶಾರದ ಪೂಜೆ ಹಾಗೂ ಇತರೆ ಸಮಾರಂಭಗಳಲ್ಲಿ ಇವರೇ ಪ್ರಾರ್ಥನೆಯನ್ನು ನೆರವೇರಿಸುತ್ತಿದ್ದರು. ಈ ಹಂತದಲ್ಲಿ ಇವರ ಕಂಠವನ್ನು ಮೆಚ್ಚಿ ಪ್ರೋತ್ಸಹಿಸುತ್ತಿದ್ದ ಶಿಕ್ಷಕರಿಂದ ಇವರಲ್ಲಿ ಮತ್ತೊಷ್ಟು ಬೆಂಬಲ ಹಾಗೂ ಆತ್ಮಸ್ಥೈರ್ಯ ಒಡಮೂಡಿತು. ಇಂಥ ಪ್ರೋತ್ಸಾಹಗಳ ನಡುವೆ ಬೆಳೆದುಬಂದ ಮುರಾರ್ಜಿಯವರಿಗೆ ಮಾಧ್ಯಮಿಕ ಹಾಗೂ ಪ್ರೌಢ ಶಿಕ್ಷಣದ ಅವಧಿಯಲ್ಲಿ ಶಿಕ್ಷಕ ವರ್ಗದಿಂದ ಉತ್ತಮವಾದ ಸಹಕಾರ ಲಭಿಸಿತು. ಇವರಲ್ಲಿ ಅಂತರ್ಗತವಾಗಿದ್ದ ಗಾಯನ ಕಲೆಗೆ ಮನಸೋತ ಶಿಕ್ಷಕ ವರ್ಗವು ಬಡತನದಲ್ಲಿದ್ದ ಮುರಾರ್ಜಿ ಎಂಬ ಈ ಪ್ರತಿಭೆಯನ್ನು ಪ್ರಚೋದಿಸುವ ನೆಲೆಯಲ್ಲಿ ಇವರ ವಿದ್ಯಾಭ್ಯಾಸಕ್ಕೆ ಬೇಕಾದ ಅಗತ್ಯ ವಸ್ತುಗಳನ್ನು ಪೂರೈಸುತ್ತ ಬಂದರು. ಶಿಕ್ಷಕ ವರ್ಗದ ಇಂತಹ ಸಹಕಾರದಿಂದಾಗಿ ವಿದ್ಯಾಭ್ಯಾಸ ಹಾಗೂ ಗಾಯನ ಕಲೆಯಲ್ಲಿ ಸಾಕಷ್ಟು ಆಸಕ್ತಿಯನ್ನು ಪಡೆದುಕೊಂಡರು. ಕಾಡುಹಕ್ಕಿ ಹಕ್ಕಿಯಂತೆ ತನ್ನ ಸ್ವರ ಮಾಧುರ್ಯವನ್ನು ಮುಂದುವರೆಸುತ್ತ ಬಂದ ಈ ಹಳ್ಳಿಹಕ್ಕಿಗೆ ಗಾಯನ ಕಲೆಯೇ ತನ್ನ ಬದುಕಿಗೆ ಸಾಕಷ್ಟು ಹೆಸರು ತಂದು ಕೊಟ್ಟಿರುವುದು ಮಾತ್ರವಲ್ಲದೆ, ಇವರ ಬದುಕಿಗೆ ವರವಾಗಿ ಪರಿಣಮಿಸಿತು.

3

ಮುರಾರ್ಜಿಯವರು ಬಾಲ್ಯದಿಂದಲೂ ಬಡತನದ ಬವಣೆಯಲ್ಲಿಯೇ ಬೆಳೆದುಬಂದವರು. ಇಂತಹ ಸಂದರ್ಭದಲ್ಲಿ ಹಣಕಾಸಿನ ತೊಂದರೆಯಿಂದಾಗಿ ಓದುವುದಕ್ಕೆ ಹಲವಾರ ತೊಂದರೆಗಳು ಎದುರಾದವು. ಇವರು ಪಿ.ಯು ಕಾಲೇಜು ಶಿಕ್ಷಣವನ್ನು ಪಡೆಯುವ ಸಂದರ್ಭದಲ್ಲಿ ಮನೆಯಲ್ಲಿ ಕಾಡುವ ಬಡತನದಿಂದಾಗಿ ಕುಟುಂಬ ನಿರ್ವಹಣೆಯ ಸಮಸ್ಯೆಯು ಎದುರಾದಾಗ ಇವರ ಶಿಕ್ಷಣ ಕುಂಟಿತವಾಯಿತು. ಈ ಅವಧಿಯಲ್ಲಿ ಕಾಲೇಜು ಶಿಕ್ಷಣದಿಂದ ವಂಚಿತರಾದ ಇವರನ್ನು ಸ್ವಗ್ರಾಮದಲ್ಲಿ ಜೀತಕ್ಕೆ ನೇಮಿಸಲಾಯಿತು. ಈ ಸಂದರ್ಭದಲ್ಲಿ ಎಮ್ಮೆ ಕಾಯಲು ಹೋಗುತ್ತಿರುವಾಗ ಬಿಡುವಿನ ವೇಳೆಯಲ್ಲಿ ತನ್ನ ಸಹೋದ್ಯೊಗಿಗಳ ಸಮ್ಮುಖದಲ್ಲಿ ಹಾಗೂ ಏಕಾಂತವಾಗಿರುವ ಸಮಯದಲ್ಲಿ ದ್ವಿಕಂಠದಲ್ಲಿ ತನ್ನ ಗಾಯನ ಕಲೆಯ ಪ್ರಯೋಗ ನಡೆಸುತ್ತಿದ್ದರು. ಈ ವೇಳೆಗಾಗಲೇ ಸಾಮಾಜಿಕ ನಾಟಕಗಳಿಂದ ಸಾಕಷ್ಟು ಪ್ರೇರಣೆಗೊಂಡಿದ್ದ ಇವರಿಗೆ ಹೆಣ್ಣು ಮತ್ತು ಗಂಡಿನ ಸ್ವರವನ್ನು ತಾನು ಹಾಡಬೇಕು ಎಂಬ ಛಲ ಮೂಡಿತು. ಬಾಲ್ಯದಿಂದಲೂ ಮಧುರವಾದ ಕಂಠವನ್ನು ಹೊಂದಿದ್ದ ಇವರಿಗೆ ಇದು ಕಷ್ಟದ ಕೆಲಸವೇನು ಆಗಿರಲಿಲ್ಲ. ಆದರೆ ಏಕಕಾಲಕ್ಕೆ ಗಂಡು ಮತ್ತು ಹೆಣ್ಣಿನ ಸ್ವರವನ್ನು ಬದಲಾಯಿಸಿ ಹಾಡುವುದಕ್ಕೆ ತಾಲಿಮಿನ ಅವಶ್ಯಕತೆ ಇವರಿಗೆ ಬೇಕಿತ್ತು. ಈ ಸಂದರ್ಭದಲ್ಲಿ ಇವರು ಯಾವುದೇ ಗುರುವಿನ ಬಳಿ ಕಲಿಯದೆ ಸ್ವತಃ ತಾವೇ ಪ್ರಯೋಗ ನಡೆಸಿ ದ್ವಿಕಂಠ ಕಲೆಯಲ್ಲಿ ಪರಿಣಿತಿಯನ್ನು ಸಾಧಿಸಿದರು. ಹಗಲೆಲ್ಲ ಜೀತ ಕೆಲಸ ಮಾಡಿಕೊಂಡೆ ಹಾಡುಗಾರಿಕೆಯ ಪ್ರಯೋಗ ನಡೆಸಿ ರಾತ್ರಿಯ ವೇಳೆಯಲ್ಲಿ ಎಲ್ಲಿ ಸಾಮಾಜಿಕ ನಾಟಕಗಳು ನಡೆಯುತ್ತವೊ, ಇಲ್ಲವೇ ಸಾಮಾಜಿಕ ನಾಟಕಗಳ ಪೂರ್ವ ತಯಾರಿ ನಡೆಯುತ್ತಿರುತ್ತವೊ ಅಲ್ಲಿಗೆ ಹೋಗಿ ಹಾರ್ಮೊನಿಯಂ ಮಾಸ್ಟರ್ ಜೊತೆ ರಾತ್ರಿ ಪೂರ ಅಲ್ಲಿಯೇ ಕಾಲ ಕಳೆಯುತ್ತಿದ್ದರು. ಈ ಸಮಯದಲ್ಲಿ ಮುರಾರ್ಜಿಯವರ ಚಿಕ್ಕಪ್ಪನಾದ ಬರ್ತಿ ಓಬಳೇಶ್ ಎಂಬುವವರು ಹಾರ್ಮೊನಿಯಂ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರು ನಾಟಕಗಳ ತಾಲೀಮು ನಡೆಸುವ ಸಮಯದಲ್ಲಿ ಅವರ ಬಳಿ ಇದ್ದು ಅವರಂತೆ ಹಾಡುವ ಹವ್ಯಾಸವನ್ನು ಕಲಿತುಕೊಂಡರು.

ಮುರಾರ್ಜಿಯವರು ತಮ್ಮಲ್ಲಿ ಕರಗತವಾಗಿರುವ ದ್ವಿಕಂಠ ಕಲೆಯನ್ನು ಪ್ರದರ್ಶಿಸುವ ಅವಕಾಶಕ್ಕಾಗಿ ರಾತ್ರಿಯಿಡಿ ಕಾಯುತ್ತಿದ್ದರು. ಪ್ರಾರಂಭಿಕ ಹಂತದಲ್ಲಿ ನಾಟಕದ ಕೊನೆಯ ವೇಳೆಯಲ್ಲಿ ಒಂದು ಇಲ್ಲವೆ ಎರಡು ಹಾಡುಗಳನ್ನು ಹಾಡುವುದಕ್ಕೆ ಅವಕಾಶ ಲಭಿಸಿದರೆ ಇದೇ ಇವರಿಗೆ ತೃಪ್ತಿಯನ್ನು ತಂದು ಕೊಡುತ್ತಿತ್ತು. ಹೀಗೆ ಅವಕಾಶಗಳಿಗಾಗಿ ಹಗಲಿರುಳು ಶ್ರಮಿಸುತ್ತಿದ್ದ ಇವರು 1995 ರಲ್ಲಿ ಚಳ್ಳಕೆರೆ ತಾಲ್ಲೂಕು ದಿಮ್ಮಿನಕೆರೆ ಎಂಬ ಗ್ರಾಮದ ನಾಟಕವೊಂದರಲ್ಲಿ ಸ್ವತಂತ್ರ ಗಾಯಕನಾಗಿ ತನ್ನ ದ್ವಿಕಂಠ ಗಾಯನವನ್ನು ಪ್ರದರ್ಶಿಸಿದರು. ಈ ನಾಟಕದಿಂದ ಸಾಕಷ್ಟು ಹೆಸರು ಮಾಡಿ ಜನಮನ ಗೆದ್ದ ಮುರಾರ್ಜಿಯವರು ಇದೇ ಕ್ಷೇತ್ರದಲ್ಲಿ ಸಂಪೂರ್ಣವಾಗಿ ತನ್ನನ್ನು ತೊಡಗಿಸಿಕೊಂಡರು. ಇದರಿಂದ ಸಾಕಷ್ಟು ಅವಕಾಶಗಳು ಇವರನ್ನು ಹುಡುಕಿಕೊಂಡು ಬಂದವು. ಇದರಿಂದಾಗಿ ಇವರ ಕೌಟುಂಬಿಕ ಪರಿಸ್ಥಿತಿಯು ಸುಧಾರಣೆಯನ್ನು ಕಂಡುಕೊಂಡಿತು. ಹೀಗೆ ದ್ವಿಕಂಠ ಗಾಯನ ಕಲೆಯನ್ನು ಹವ್ಯಾಸವಾಗಿ ರೂಢಿಸಿಕೊಂಡು ಬಂದ ಇವರು ಮುಂದೆ ಈ ಕಲೆಯನ್ನು ಪ್ರವೃತ್ತಿಯಾಗಿಸಿಕೊಂಡು ಬಂದರು. ಈ ಕಲೆಯ ಮೂಲಕವಾಗಿ ಚಿತ್ರದುರ್ಗ, ಬಳ್ಳಾರಿ, ದಾವಣಗೆ ಹಾಗೂ ಕರ್ನಾಟಕದ ವಿವಿಧ ಪ್ರಾಂತ್ಯಗಳಲ್ಲಿ ತಮ್ಮನ್ನು ಗುರುತಿಸಿಕೊಂಡರು.
ಗ್ರಾಮೀಣ ಭಾಗದ ಜನತೆಯ ಮನರಂಜನ ಕಲೆಗಳಲ್ಲಿ ಒಂದಾಗಿರುವ ಸಾಮಾಜಿಕ ನಾಟಕಗಳಲ್ಲಿ ಕಲಾವಿದರು ಹಾಡುಗಾರಿಕೆಯ ಮೂಲಕ ನಾಟಕ ಪ್ರದರ್ಶನ ಮಾಡುವುದು ಕಷ್ಟದ ಕೆಲಸವಾಗಿತ್ತು. ಅದರಲ್ಲೂ ಮಹಿಳೆಯರಿಗೆ ನಟನೆಯ ಜೊತೆ ಜೊತೆಯಲ್ಲಿ ಹಾಡುಗಾರಿಕೆಯನ್ನು ಪ್ರದರ್ಶಿಸುವುದು ತುಂಬ ಕಷ್ಟದ ಕೆಲಸವಾಗಿತ್ತು. ಹಾಡುಗಾರಿಕೆಯನ್ನು ವೃತ್ತಿಯಾಗಿಸಿಕೊಂಡ ಮಹಿಳೆಯರು ಕೂಡ ಲಭಿಸುತ್ತಿರಲಿಲ್ಲ. ಆದ ಕಾರಣದಿಂದಾಗಿ ಗಂಡು ಮತ್ತು ಹೆಣ್ಣಿನ ಎರಡು ಕಂಠಗಳನ್ನು ಹಾಡುವ ಕಲಾವಿದರಿಗೆ ಸಾಮಾಜಿಕ ನಾಟಕಗಳಲ್ಲಿ ಹೆಚ್ಚಿನ ಬೇಡಿಕೆಯೂ ಇತ್ತು. ಈ ಕಾರಣದಿಂದಾಗಿ ಮುರಾರ್ಜಿಯವರಿಗೆ ಕರಗತವಾಗಿದ್ದ ದ್ವಿಕಂಠ ಕಲೆಗೆ ಸಾಕಷ್ಟು ಬೇಡಿಕೆ ಲಭಿಸಿತು. ಈ ಕ್ಷೇತ್ರದಲ್ಲಿ ಮುನ್ನೆಡದ ಇವರು 1995 ರಿಂದ ಪ್ರತಿವರ್ಷ ಸುಮಾರು 150ಕ್ಕೂ ಅಧಿಕ ನಾಟಕಗಳಿಗೆ ತಮ್ಮ ಕಂಠಸಿರಿಯನ್ನು ನೀಡುತ್ತ ಬಂದಿದ್ದಾರೆ. ಇವರ ಅದಾಜಿನ ಪ್ರಕಾರ ಇಲ್ಲಿಯವರೆಗೆ ಸುಮಾರು 3000 ಸಾವಿರಕ್ಕೂ ಅಧಿಕ ನಾಟಕಗಳಿಗೆ ಹೆಣ್ಣು ಮತ್ತು ಗಂಡಿನ ಕಂಠವನ್ನು ನೀಡಿರುವುದಾಗಿ ತಿಳಿದುಬರುತ್ತದೆ.

4

ಶ್ರೀಯುತ ಮುರಾರ್ಜಿಯವರು ಸಾಮಾಜಿಕ ನಾಟಕಗಳಿಗೆ ತಮ್ಮ ಕಂಠಸಿರಿಯನ್ನು ನೀಡುವುದರ ಜೊತೆಗೆ ಸಾಮಾಜಿಕ ಜನಜೀವನದಲ್ಲಿ ಬೆರೆತುಕೊಂಡು ಸಾಮಾಜಿಕ ಸೇವೆಯನ್ನು ನೆರವೇರಿಸುತ್ತ ಬಂದಿದ್ದಾರೆ. ಒಬ್ಬ ಸೃಜನಶೀಲ ವ್ಯಕ್ತಿಯು ಒಂದೇ ಕಾರ್ಯದಲ್ಲಿ ತನ್ನನ್ನು ತೊಡಗಿಸಿಕೊಳ್ಳುವುದಿಲ್ಲ. ಯಾವಾಗಲು ತನ್ನ ಬಹುಮುಖ ಪ್ರತಿಭೆಯನ್ನು ಅನಾವರಣಗೊಳಿಸುವತ್ತ ಶ್ರಮಿಸುತ್ತಿರುತ್ತಾನೆ. ಇದಕ್ಕೆ ಮುರಾರ್ಜಿಯವರು ಸೂಕ್ತ ಉದಾಹರಣೆಯಾಗಿ ನಿಲ್ಲುತ್ತಾರೆ. ಗಾಯನ ಕಲೆಯ ಜೊತೆ ಜೊತೆಯಲ್ಲಿಯೇ ಸಮಾಜ ಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಶ್ರೀಯುತರು ಚಿತ್ರದುರ್ಗ ಜಿಲ್ಲಾ ದಲಿತ ಸಂಘರ್ಷ ಕಲಾ ಸಮಿತಿಯ ಸಂಚಾಲಕರಾಗಿ ಹಲವಾರು ಸಾಮಾಜಿಕ ಸುಧಾರಣೆಯ ಕಾರ್ಯಕ್ರಮಗಳನ್ನು ನಡೆಸುತ್ತ ಬಂದಿದ್ದಾರೆ. ದಲಿತ ಕಲಾ ಮಂಡಳಿಯ ಅಡಿಯಲ್ಲಿ ಬಾಲ ಕಾರ್ಮಿಕ ಪದ್ಧತಿ, ಸಾಕ್ಷರತ ಆಂದೋಲನ, ವಯಸ್ಕರ ಶಿಕ್ಷಣ ಪದ್ಧತಿಯಂತಹ ಕಾರ್ಯಕ್ರಮಗಳ ಕುರಿತಾಗಿ ಗ್ರಾಮೀಣ ಜನತೆಗೆ ಜಾಗೃತಿ ಮೂಡಿಸುವ ನೆಲೆಯಲ್ಲಿ ಬೀದಿ ನಾಟಕಗಳನ್ನು ಪ್ರದರ್ಶಿಸುತ್ತಾ ಬಂದಿದ್ದಾರೆ. ಹಾಗೆಯೇ ಸಾಮಾಜಿಕ ಸಮಸ್ಯೆಗಳಾದ ವರದಕ್ಷಿಣೆ, ಅಪರಾಧ ತಡೆ ಮಾಸಾಚರಣೆ, ಏಡ್ಸ್, ಸ್ವಚ್ಚ ಭಾರತ ಆಂದೋಲನದಂತಹ ವಿಶಿಷ್ಟವಾದ ಕಾರ್ಯಕ್ರಮಗಳ ಬಗೆಗೆ ಬೀದಿ ನಾಟಕಗಳ ಮೂಲಕವಾಗಿ ಅರಿವು ಮೂಡಿಸುವಲ್ಲಿ ಇವರು ಮಹತ್ವದ ಪಾತ್ರವನ್ನು ನಿರ್ವಹಿಸುತ್ತ ಬಂದಿದ್ದಾರೆ.

ಹೀಗೆ ನಾಟಕ ರಂಗಭೂಮಿ ಕ್ಷೇತ್ರದ ಮೂಲಕ ಗುರುತಿಸಿಕೊಂಡಿರುವ ಮುರಾರ್ಜಿಯವರು ಜನಪರವಾದ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಆ ಮೂಲಕವಾಗಿ ಚಿತ್ರದುರ್ಗ ಜಿಲ್ಲಾ ಕಲಾವಿದರ ಒಕ್ಕೂಟವನ್ನು ರಚಿಸಿಕೊಂಡು ಸರ್ಕಾರದಿಂದ ಕಲಾವಿದರಿಗೆ ಲಭ್ಯವಿರುವ ವಿವಿಧ ಸವಲತ್ತುಗಳನ್ನು ಕಲ್ಪಿಸಿಕೊಡುವಲ್ಲಿ ಇವರು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತ ಬಂದಿದ್ದಾರೆ. ಈ ಮೂಲಕ ಜಿಲ್ಲೆಯ ಕಲಾವಿದರ ದನಿಯಾಗಿ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಇದರ ಜೊತೆಯಲ್ಲಿ ‘ಅಕ್ಷರ ಗ್ರಾಮೀಣ ವಿಕಾಸ ಸಂಸ್ಥೆ’ಯ ಅಡಿಯಲ್ಲಿ ಮಹಿಳೆಯರಿಗೆ ಗೃಹೋಪಯೋಗಿ ವಸ್ತು ತಯಾರಿಕೆ ತರಬೇತಿ, ಅನಕ್ಷರಸ್ಥ ಗ್ರಾಮ ಪಂಚಾಯಿತಿ ಸದಸ್ಯರಿಗೆ ಶಿಕ್ಷಣ ತರಬೇತಿ, ಸರ್ಕಾರದ ‘ಬಿ ಆರ್ ಜಿ ಎಫ್’ ಯೋಜನೆಗಳ ಬಗೆಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದ್ದಾರೆ. ಸರ್ಕಾರದ ವಿವಿಧ ಇಲಾಖೆಗಳಾದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳ ಸಹಯೋಗದಲ್ಲಿ ಸಂಪೂರ್ಣ ಗ್ರಾಮ ನೈರ್ಮಲ್ಯ, ಸ್ವಚ್ಚ ಭಾರತ ಅಭಿಯಾನ, ಮಹಾತ್ಮಗಾಂಧಿ ಉದ್ಯೋಗಖಾತರಿ ಯೋಜನೆಗಳಂತಹ ವಿಶೇಷ ಕಾರ್ಯಕ್ರಮಗಳ ಕುರಿತಾಗಿ ಬೀದಿ ನಾಟಕಗಳನ್ನು ಪ್ರದರ್ಶಿಸುತ್ತ ಬಂದಿದ್ದಾರೆ. ಬಾಲ್ಯದ ದಿನಗಳಿಂದಲೂ ಬಡತನದ ನಡುವೆಯೇ ಬೆಳೆದು ಬಂದ ಇವರು ತಮ್ಮ ಗ್ರಾಮೀಣ ಭಾಗದ ಜನತೆಗೆ ಅರಿವು ಮೂಡಿಸುವ ನೆಲೆಯಲ್ಲಿ ಇಂತಹ ಹಲವಾರು ಜನಪರವಾದ ಯೋಜನೆಗಳನ್ನು ರೂಪಿಸಿಕೊಂಡು ಬಂದಿದ್ದಾರೆ. ಇವರು ಕರಗತಮಾಡಿಕೊಂಡಿದ್ದ ರಂಗಭೂಮಿ ಕಲೆಯನ್ನು ಕೇವಲ ವೃತಿಯಾಗಿ ಬಳಸಿಕೊಳ್ಳದೆ ಇದರ ಅಡಿಯಲ್ಲಿ ಸಮಾಜ ಸೇವೆಯನ್ನು ಕೈಗೊಂಡರು. ಇದು ಕಲಾವಿದನೊಬ್ಬ ಸಮಾಜ ಸುಧಾರಕನಾಗಿಯೂ ತನ್ನನ್ನು ಗುರುತಿಸಿಕೊಳ್ಳಬಲ್ಲ ಎಂಬುದಕ್ಕೆ ಇವರು ಮಾದರಿಯಾಗಿ ನಿಲ್ಲುತ್ತಾರೆ. ನಮ್ಮ ಗ್ರಾಮೀಣ ಭಾಗದ ಜನರಲ್ಲಿ ಅಂತರ್ಗತವಾಗಿರುವ ಬಹುತೇಕ ಕಲೆಗಳು ಬಡತನದಲ್ಲಿ ಬಾಳಿ ಬೆಳಗಿದ ಬಗೆಯನ್ನು ನಾವು ಈಗಾಗಲೇ ನೋಡಿದ್ದೇವೆ. ಆದರೆ ಈ ಕಲೆಯ ಅಡಿಯಲ್ಲಿ ಆಧುನಿಕ ಬದುಕಿನ ತಲ್ಲಣಗಳಿಗೆ ಆರೋಗ್ಯಕರವಾದ ನೆಲೆಯಲ್ಲಿ ಸ್ಪಂದಿಸುವ ವಿಶೇಷ ಆಯಾಮವೊಂದನ್ನು ಇವರು ಕಂಡುಕೊಂಡಿದ್ದಾರೆ. ಇದು ಕಲಾ ಜೀವನದೊಂದಿಗೆ ಸಾಮಾಜಿಕ ಜಾಗೃತಿಯನ್ನು ಮೂಡಿಸುವ ಕ್ರಮವಾಗಿದೆ.

ಶ್ರೀಯುತ ಮುರಾರ್ಜಿಯವರು ಕಲೆಯ ಮೂಲಕವಾಗಿ ಸಾಮಾಜಿಕ ಜಾಗೃತಿಯನ್ನು ಮೂಡಿಸುತ್ತಲೆ ಕಲೆಯನ್ನು ಆಧುನಿಕ ಸಂದರ್ಭಕ್ಕೆ ತಕ್ಕಂತೆ ಪ್ರಗತಿಯತ್ತ ಮುನ್ನೆಡುಸುತ್ತ ಬಂದಿದ್ದಾರೆ. ನಾಟಕ ರಂಗಭೂಮಿ ಕ್ಷೇತ್ರದ ಮೂಲಕ ಕಲಾಕ್ಷೇತ್ರವನ್ನು ಪ್ರವೇಶಿಸಿದ ಇವರು ಸಂಗೀತ ಕ್ಷೇತ್ರದಲ್ಲಿ ಮಹತ್ತರವಾದ ಸಾಧನೆಗೂ ಮುಂದಾಗಿದ್ದಾರೆ. ತಮ್ಮ ಹೆಸರಿನಲ್ಲಿ ಅಡಿಯಲ್ಲಿ ‘ಮುರಾರ್ಜಿ ಸುಗಮ ಸಂಗೀತ ತಂಡ’ ಹಾಗೂ ‘ಮುರಾರ್ಜಿ ಆರ್ಕೆಸ್ಟ್ರಾ ತಂಡ’ಗಳನ್ನು ರಚಿಸಿಕೊಂಡು ಸಂಗೀತ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ. ಅಷ್ಟೇ ಅಲ್ಲದೇ ಜಾನಪದ ಹಾಡು, ತತ್ವಪದ ಹಾಡು, ಭಾವಗೀತೆಗಳು, ವಚನಗಳನ್ನು ಹೊರ ರಾಜ್ಯಗಳಲ್ಲೂ ಹಾಡುವ ಮೂಲಕವಾಗಿ ಮೆಚ್ಚುಗೆಯನ್ನು ಗಳಿಸಿದ್ದಾರೆ. ಹೀಗಾಗಿಯೇ ಮುರಾರ್ಜಿಯವರನ್ನು ಬಹುಮುಖ ಪ್ರತಿಭೆ ಎಂದು ಗುರುತಿಸಲಾಗಿದೆ.

5

ರಂಗಭೂಮಿ ಮತ್ತು ಗಾಯನ ಕಲೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದ ಮುರಾರ್ಜಿಯವರು ರಾಜಕೀಯ ಕ್ಷೇತ್ರದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಮುರಾರ್ಜಿಯವರು ತಮ್ಮ ಸಾಮಾಜಿಕ ಸೇವೆಯ ಮುಖಾಂತರವಾಗಿ ತಮ್ಮ ಭಾಗದಲ್ಲಿ ಸಾಕಷ್ಟು ಹೆಸರುಗಳಿಸಿದ್ದರು. ಹೀಗಾಗಿ ಜಿಲ್ಲಾ ಪಂಚಾಯಿತಿ ಮಹಿಳಾ ಮೀಸಲಾತಿ ಕ್ಷೇತ್ರಕ್ಕೆ ಇವರ ತಾಯಿಯವರು ಸ್ಪರ್ಧಿಸಿ ಜಯಶೀಲರಾಗಿರುತ್ತಾರೆ. ಈ ಚುನಾವಣ ಜಯಕ್ಕೆ ಮುರಾರ್ಜಿಯವರ ಕ್ರಿಯಾಶೀಲ ವ್ಯಕ್ತಿತ್ವವೇ ಪ್ರಮುಖ ಕಾರಣವಾಗಿರುತ್ತದೆ. ಅಷ್ಟೆ ಅಲ್ಲದೆ ಇವರ ಗಾಯನ ಕಲೆಯಿಂದಾಗಿ ಚಿತ್ರದುರ್ಗ ಹಾಗೂ ಬಳ್ಳಾರಿ ಪ್ರಾಂತ್ಯದ ಬಹುತೇಕ ಮಠಾಧೀಶರ ನೇರ ಸಂಪರ್ಕವನ್ನು ಗಳಿಸುವ ಮೂಲಕವಾಗಿ ಈ ಮಠಗಳ ವಿಶೇಷ ಕಾರ್ಯಕ್ರಮಗಳಲ್ಲಿ ಶರಣರ ವಚನಗಳನ್ನು ಗಾಯನ ಮಾಡಿತ್ತ ಬಂದಿದ್ದಾರೆ.

ಮುರಾರ್ಜಿಯವರಲ್ಲಿ ಅಂತರ್ಗತವಾಗಿರುವ ಈ ಗಾಯನ ಕಲೆಯು ವಂಶ ಪಾರಂಪರ್ಯವಾಗಿ ಬಂದ ಬಳುವಳಿಯಾಗಿದೆ. ಇವರ ಗ್ರಾಮ, ಅದರಲ್ಲೂ ಇವರ ಕೌಟುಂಬಿಕ ಪರಿಸರವು ಸಾಹಿತ್ಯ ಹಾಗೂ ಸಾಂಸ್ಕøತಿಕ ವಾತವರಣದಿಂದ ಕೂಡಿರುವಂತದ್ದಾಗಿದೆ. ಇವರ ತಂದೆ ತತ್ವಪದ, ಭಜನೆಪದ, ವಚನಗಳನ್ನು ಹಾಡುತ್ತ ಬಂದಿದ್ದು, ಸ್ವತಃ ತತ್ವಪದಗಳನ್ನು ರಚಿಸುವ ಕಲೆಯನ್ನು ರೂಢಿಸಿಕೊಂಡು ಬಂದಿದ್ದಾರೆ. ಇವರ ತಂದೆಯೇ ಇವರಿಗೆ ಗುರುವಾದರು. ಆರಂಭಿಕ ಹಂತದಲ್ಲಿ ಶಾಲೆಯ ಮೆಟ್ಟಿಲೇರಿರದ ಮುರಾರ್ಜಿಯವರಿಗೆ ಇವರ ತಂದೆ ಓಬಯ್ಯನವರೇ ಪ್ರಥಮ ಗುರುವಾದರು. ಆ ವೇಳೆಗಾಗಲೇ ನಾಲ್ಕನೇ ತರಗತಿಯವರೆಗೆ ಶಿಕ್ಷಣವನ್ನು ಪಡೆದಿದ್ದ ಓಬಯ್ಯನವರು ತಮ್ಮ ಮಗನಿಗೆ ಕೈ ಹಿಡಿದು ಅಕ್ಷರ ಬರೆಯುವುದನ್ನು ಕಲಿಸಿದ್ದರು. ಅದರ ಜೊತೆಯಲ್ಲಿ ತಂದೆ ತಾಯಿಯರಲ್ಲಿ ಕರಗತವಾಗಿದ್ದ ಗಾಯನ ಕಲೆಯ ಪ್ರಭಾವವು ಮುರಾರ್ಜಿಯವರ ಮೇಲಾಗಿತ್ತು. ಮುಂದೆ ಇದನ್ನೆ ತಮ್ಮ ಬದುಕಿನ ಒಂದು ವೃತ್ತಿಯಾಗಿ ಆಯ್ದುಕೊಂಡ ಮುರಾರ್ಜಿಯವರು ಸಾಮಾಜಿಕವಾಗಿ, ರಾಜಕಿಯವಾಗಿ ಹಾಗೂ ಆರ್ಥಿಕವಾಗಿ ಪ್ರಗತಿಯನ್ನು ಸಾಧಿಸಿದರು. ಈ ಮೂಲಕವಾಗಿ ಜಾನಪದ ಕಲೆಯೊಂದು ಆಧುನಿಕ ಸಂದರ್ಭದಲ್ಲಿ ವಿವಿಧ ನೆಲೆಯಲ್ಲಿ ತನ್ನ ವಿಸ್ತಾರತೆಯನ್ನು ಕಂಡುಕೊಳ್ಳುವಂತಾಯಿತು.

ಹಾಗೆಯೇ ಈ ಜಾನಪದ ಸಾಹಿತ್ಯವು ಒಬ್ಬ ವ್ಯಕ್ತಿಯ ಬದುಕಿಗೆ ಆಸರೆಯಾಗಿ ಸಾಕಷ್ಟು ಕೀರ್ತಿಯನ್ನು ತಂದುಕೊಟ್ಟಿದೆ. ಜಾನಪದವು ನಿಂತ ನೀರಲ್ಲ, ಅದು ಸದಾ ಪ್ರವಹಿಸುತ್ತಿರುವ ಶುದ್ಧ ಜಲ. ಹೀಗಾಗಿ ಈ ಪ್ರಕಾರವು ಬದಲಾದ ಕಾಲಕ್ಕಿ ತಕ್ಕಂತೆ ಭೂತದೊಂದಿಗೆ ವರ್ತಮಾನವನ್ನು ಬೆಸೆಯುತ್ತ ಮನ್ನೆಡೆಯುತ್ತಿರುತ್ತದೆ. ಅದರಂತೆ ಮುರಾರ್ಜಿಯವರ ಬದುಕಿನಲ್ಲಿ ಕೂಡ ನಮ್ಮ ಜಾನಪದವು ಇದೇ ಮಾರ್ಗದಲ್ಲಿ ಮುಂದುವರೆಯುತ್ತ ಬಂದಿದೆ.
ನಮ್ಮ ಜಾನಪದ ಸಾಹಿತ್ಯ ಪ್ರಕಾರಗಳಲ್ಲಿ ಸಾಮಾಜಿಕ ನಾಟಕವು ಒಂದು ವಿಶಿಷ್ಟ ಪ್ರಕಾರವಾಗಿ ಕಂಡುಬರುತ್ತದೆ. ಈ ನಾಟಕಗಳು ಗ್ರಾಮೀಣ ಬದುಕಿನ ಬಹುಮುಖ್ಯ ಮನರಂಜನ ಮಾಧ್ಯಮವಾಗಿವೆ.

ಮುರಾರ್ಜಿಯವರಿಗೆ ಈ ನಾಟಕ ಪ್ರಪಂಚವು ಮೊದಲು ಆಕರ್ಷಿದ್ದು ಮಾತ್ರ ಅದೊಂದು ಮನರಂಜನೆಯ ಭಾಗವಾಗಿ. ಈ ವೇಳೆಗಾಗಲೆ ಶಾಲಾ ಹಂತದಿಂದ ತನ್ನಲ್ಲಿದ ಸುಮಧುರವಾದ ಗಾಯನ ಕಲೆಯಿಂದ ಶಿಕ್ಷರರು ಹಾಗೂ ತನ್ನ ಸುತ್ತಮುತ್ತಲಿನ ಜನತೆಯಿಂದ ಮೆಚ್ಚುಗೆಯನ್ನು ಗಳಿಸಿದ್ದ ಇವರಿಗೆ ಈ ಸಾಮಾಜಿಕ ನಾಟಕಗಳಲ್ಲಿ ತನ್ನ ಕಂಠವನ್ನು ಪ್ರದರ್ಶಿಸಬೇಕು ಎಂಬ ಕಾತುರ ಹಾಗೂ ತುಡಿತ ಇವರನ್ನು ಬಾದಿಸುತ್ತಿತ್ತು. ಇದಕ್ಕೆ ಕಾರಣವು ಇದೆ. ಈ ಸಂದರ್ಭಕ್ಕಾಗಲೆ ಇವರ ಶಿಕ್ಷಣವು ಮನೆಯಲ್ಲಿ ಕಾಡುವ ಬಡತನದಿಂದ ಕುಂಟಿತವಾಗಿತ್ತು. ತಾನು ಓದಿನಲ್ಲಿ ಮುಂದಿದ್ದರೂ ಓದುವುದಕ್ಕೆ ಸಾಧ್ಯವಾಗದೆ ಜೀತ ಮಾಡುವಂತಹ ಸ್ಥಿತಿಯನ್ನು ತಲುಪಿದಾಗ ಇವರನ್ನು ಆ ನೋವು ಬಲವಾಗಿ ಕಾಡಿರುವ ಸಾಧ್ಯತೆಯೂ ಇದೆ. ಇಂತಹ ಸಂದಿಗ್ದ ಸನ್ನಿವೇಶದಲ್ಲಿ ಇವರು ನಾಟಕದಂತಹ ಮನರಂಜನಾ ಕ್ಷೇತ್ರದತ್ತ ತಮ್ಮ ಚಿತ್ತವನ್ನು ಕೇಂದ್ರಿಕರಿಸುತ್ತಾರೆ.

ಪುರುಷ ದನಿಯಲ್ಲಿ ಸಹಜವಾಗಿ ಹಾಡುವುದನ್ನು ಬಾಲ್ಯದಿಂದಲೂ ಕರಗತ ಮಾಡಿಕೊಂಡಿದ್ದ ಇವರು ಹೆಣ್ಣಿನ ದನಿಯ ಮಹತ್ವವನ್ನು ಅರಿತು ಅದರಲ್ಲಿಯೂ ಪರಿಣಿತಿಯನ್ನು ಪಡೆದುಕೊಳ್ಳುತ್ತಾರೆ. ಈ ಹೆಣ್ಣಿನ ಕಂಠವನ್ನು ಅನುಕರಿಸುವುದು ಅಂದಿಗೆ ಅನಿವಾರ್ಯವು ಆಗಿತ್ತು. ಸಾಧನೆಯ ಮುಂದೆ ಯಾವುದು ಅಸಾಧ್ಯವಲ್ಲ ಎಂಬುದನ್ನರಿತ ಇವರು ಜೀತ ಮಾಡುತ್ತ ಎಮ್ಮೆ ಕಾಯುವ ಸಂದರ್ಭದ ಬಿಡುವಿನ ವೇಳೆಯಲ್ಲಿ ಸಹಜವಾಗಿಯೇ ಹೆಣ್ಣಿನ ಕಂಠದಲ್ಲಿ ಹಾಡುವ ಕಲೆಗಾರಿಕೆಯನ್ನು ಕರಗತ ಮಾಡಿಕೊಳ್ಳುತ್ತಾರೆ. ಏಕಕಾಲಕ್ಕೆ ಹೆಣ್ಣು ಮತ್ತು ಗಂಡಿನ ಸ್ವರವನ್ನು ವ್ಯಕ್ತಪಡಿಸುವುದು ಸುಲಭದ ಮಾತಲ್ಲ. ಆದರೆ ಬದುಕಿನ ಅನಿವಾರ್ಯ ಒತ್ತಡ ಹಾಗೂ ರಂಗಭೂಮಿಯ ಮೇಲಿರುವ ಇವರ ಆಸಕ್ತಿಯಿಂದಾಗಿ ಇವರು ದ್ವಿಕಂಠ ಕಲೆಯಲ್ಲಿ ಸಿದ್ಧಿಯನ್ನು ಪಡೆದುಕೊಂಡು ನಾಡಿನಾದ್ಯಂತ ಸಾಕಷ್ಟು ಹೆಸರು ಮತ್ತು ಕೀರ್ತಿಯನ್ನು ಗಳಿಸಿದ್ದಾರೆ. ಆ ಮೂಲಕವಾಗಿ ಸಂಗೀತದ ವಿವಿಧ ಪ್ರಕಾರಗಳ್ನು ತಮ್ಮ ಕಲೆಯ ವ್ಯಾಪ್ತಿಗೊಳಪಡಿಸಿಕೊಂಡು ಹೊರ ರಾಜ್ಯಗಳಲ್ಲಿಯೂ ತಮ್ಮ ಕಲೆಯನ್ನು ಪ್ರದರ್ಶಿಸಿ ಮೆಚ್ಚುಗೆಯನ್ನು ಗಳಿಸಿದ್ದಾರೆ. ಇದಕ್ಕೆ ಪ್ರತಿಫಲವಾಗಿ ‘ಜಿಲ್ಲಾ ಪ್ರಶಸ್ತಿ’, ಯೋಜನಾ ಸೇವಾ ಪ್ರಶಸ್ತಿ, ಹಾಗೂ ಅಕ್ಷರ ಸಂಸ್ಥೆಯ ಅಡಿಯಲ್ಲಿನ ಸಮಾಜ ಸೇವೆಗೆ ರಾಜ್ಯ ಪ್ರಶಸ್ತಿಗಳು ಇವರಿಗೆ ಲಭಿಸಿವೆ.

ಶ್ರೀಯುತ ಮುರಾರ್ಜಿಯವರ ಸುಮಾರು ಈ ಇಪ್ಪತ್ತು ವರ್ಷಗಳ ಅವಧಿಯ ಸಂಗೀತ ಕ್ಷೇತ್ರದ ಪಯಣದಲ್ಲಿ ಸದಾ ಕ್ರಿಯಾಶೀಲರಾಗಿದ್ದು, ಸಾಮಾನ್ಯ ಜನತೆಯ ನೋವಿಗೆ ಸ್ಪಂದಿಸುತ್ತ ಬಂದಿದ್ದಾರೆ. ಸಮಾಜ ಸೇವೆಯನ್ನು ತಮ್ಮ ಬದುಕಿನ ಒಂದು ಭಾಗವಾಗಿಸಿಕೊಂಡ ಇವರು ತನಗೆ ಅನ್ನವನ್ನು ನೀಡಿ, ಬದುಕಿಗೆ ಆಶ್ರಯವನ್ನು ಕಲ್ಪಿಸಿದ ಈ ಕಲೆಯನ್ನು ಕೊನೆಯ ಉಸಿರಿರುವರೆಗೂ ಮುನ್ನೆಡೆಸುವ ಆಶಯವೊತ್ತು ಸಾಗುತ್ತಿದ್ದಾರೆ. ಜಾನಪದ ಬದುಕಿನೊಳಗೆ ಬೆಳೆದುಬಂದ ದಲಿತ ಪ್ರತಿಭೆಯೊಂದು ತನ್ನ ಕ್ರಿಯಾಶೀಲ ವ್ಯಕ್ತಿತ್ವದಿಂದ ವಿವಿಧ ಕ್ಷೇತ್ರಗಳನ್ನು ತನ್ನ ವ್ಯಾಪ್ತಿಯೊಳಗೆ ಸೇರಿಸಿಕೊಂಡು ಮುನ್ನಡೆಯುತ್ತಿರುವ ಬಗೆಯು ಜಾನಪದ ಸೊಗಡನ್ನು ಆಧುನಿಕ ಯುಗದಲ್ಲಿ ಜೀವಂತಗೊಳಿಸುವ ವಿಧಾನವಾಗಿ ಕಂಡುಬರುತ್ತದೆ.

ಅಂಕಣ

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ’; ವಿದ್ಯಾರ್ಥಿಗಳ ಕಲರವ

Published

on

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ – 2025″ ಅದ್ದೂರಿಯಾಗಿ ನಡೆಯಿತು.

ಜಾನಪದ ತಜ್ಞ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ, ಅವರು ಉತ್ಸವಕ್ಕೆ ಚಾಲನೆ ನೀಡಿದರು.

ಎತ್ತಿನ ಬಂಡಿಯಲ್ಲಿ ಅಧ್ಯಾಪಕರು, ಅತಿಥಿಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರು ತುಂಬಿದ ಪೂರ್ಣ ಕುಂಭಗಳನ್ನು ಹೊತ್ತು ಅತಿಥಿಗಳನ್ನು ಸ್ವಾಗತಿಸಿದರು.

ಅಂದು ಕಾಲೇಜಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವರ್ಷದಲ್ಲಿ ಬರುವ ಯುಗಾದಿ, ಸಂಕ್ರಾಂತಿ, ಶಿವರಾತ್ರಿ, ಕ್ರಿಸ್ ಮಸ್, ರಂಜಾನ್, ದಸರಾ, ಭೂಮಿ ಹುಣ್ಣಿಮೆ, ರಾಶಿ ಪೂಜೆ ಸೇರಿದಂತೆ, ಬಳೆಗಾರ, ಕಣಿಹೇಳುವ, ಚೌಕಾಬಾರಾ, ಗುರುಕುಲ, ಆಯುರ್ವೇದ, ಗೋ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯನ್ನು ಪುನರ್ ನಿರ್ಮಾಣಮಾಡಿದ್ದವು.

ಉತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು, ಪಂಚೆ, ಅಂಗಿ, ಕುರ್ತಾ, ಲಂಗಾದಾವಣಿ, ಸೀರೆ ಉಟ್ಟು ,ಬುರ್ಕಾ, ತೊಟ್ಟು ಸಡಗರ ಸಂಭ್ರಮದಿಂದ ಕುಣಿದಾಡಿದರು.

ರಾಮನವಮಿಯ ಬೆಲ್ಲದ ಪಾನಕ – ಕೋಸಂಬರಿ, ಕ್ರಿಸ್ಮಸ್ ನ ಕೇಕ್, ರಂಜಾನ್ ಹಬ್ಬದ ಇಪ್ತಾರ್ ಕೂಟದ ಫಲಾಹಾರ, ಗಣಪತಿ ಹಬ್ಬದ ಕಡುಬು, ಯುಗಾದಿಯ ಹೋಳಿಗೆ, ಭೂಮಿ‌ಪೂಜೆಯ ಪಾಯಸ ಹೀಗೆ ವಿವಿಧ ಬಗೆಯ ತಿಂಡಿತಿನಿಸುಗಳು 30 ಜಿಲ್ಲೆಗಳ ವಿಶೇಷ ಖಾಧ್ಯಗಳು ಹಬ್ಬದ ಸಡಗರವನ್ನು ಇಮ್ಮಡಿಗೊಳಿಸಿದವು.

ವಸ್ತು ಪ್ರದರ್ಶನ

ಸುಮಾರು ವರ್ಷಗಳ ಹಿಂದೆ ಬಳಕೆಯಲ್ಲಿದ್ದ ಬೀಸು ಕಲ್ಲು, ಒನಕೆ, ಸೌದೆ ಒಲೆ, ಕೊಡಲಿ, ಮಚ್ಚು, ಬರ್ಜಿ, ಚನ್ನೆಮಣೆ, ಕೀಲುಗೊಂಬೆ, ಪಾರಂಪರಿಕ ಔಷಧಿ, ಕುಡುಗೋಲು, ಬಂಡಿ,ನಾಣ್ಯಗಳು,ಸೇರು, ಒಳಕಲ್ಲು, ಶಹನಾಯಿ,ಮಜ್ಜಿಗೆಯ ಕಡೆಗೋಲು, ತಾಳ, ಹಾರ್ಮೊನಿಯಂ, ಗಂಡುಕೊಡಲಿ,ಶಾವಿಗೆ ಒತ್ತು,ಹುತ್ತದ ಮಾದರಿ,ವಿಭಿನ್ನ ಬಗೆಯ ರಂಗವಲ್ಲಿ, ವಿವಿಧ ಧಾನ್ಯದ ರಾಶಿ,ಕಳಸ, ದಸರಾ ಗೊಂಬೆಗಳು, ನವರಾತ್ರಿಯ ಮಾತೃದೇವತೆ, ಕುರಾನ್ ಪ್ರತಿ, ಜಾನಮಾಜ್,ಕ್ರಿಸ್ತನ ಜನನದ ಗೋದರಿ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಮಾದರಿ ಚಿತ್ರಗಳು ವಸ್ತುಪ್ರದರ್ಶನದಲ್ಲಿದ್ದವು.

ದೇಸೀ ಆಟಗಳು

ದೇಸೀ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಬುಗುರಿ, ಕುಂಟೋಬಿಲ್ಲೆ ಹಾಗೂ ಜನಪದ ನೃತ್ಯ-ಹಾಡು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಭಾಗವಹಿಸಿದರು.

ಉತ್ಸವದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಬಿ.ಜಿ.ಅಮೃತೇಶ್ವರ ಅವರು ವಹಿಸಿಕೊಂಡಿದ್ದರು. ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಪಕ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷ್ಮುಖಪ್ಪ ಕೆ.ಹೆಚ್, ಐಕ್ಯುಎಸಿ ಸಂಚಾಲಕ ಪ್ರೊ.ವಿಜಯ್ ಕುಮಾರ್, ಉತ್ಸವದ ಕ್ರೀಡೆಗಳ ಆಯೋಜಕ ಹಾಗೂ ದೈಹಿಕ ನಿರ್ದೇಶಕರಾದ ಕಲ್ಲೇಶಪ್ಪ ಎಸ್.ಜಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ಬೋಧಕೇತರ ಸಿಬಂದಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

ಜಾನಪದ ಕಲೆ, ಸಂಸ್ಕೃತಿಯು ಹಿಂದಿನಿಂದಲೂ ಮನುಷ್ಯ ಜೀವನದೊಂದಿಗೆ ಸಂಬಂಧ ಹೊಂದಿದ್ದು ಇಂದಿನ ಪೀಳಿಗೆಯ ಮಕ್ಕಳು ಜಾನಪದ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅವಶ್ಯಕತೆ ಇದೆ. ಜನಪದ ಪರಂಪರೆಯ ಪ್ರತೀಕವಾಗಿ ‘ಜನಪದ ಉತ್ಸವ – 2025’ ನಮ್ಮ‌ಸಂಸ್ಕೃತಿ ನಮ್ಮ ಹೆಮ್ಮೆ ಹೆಚ್ಚು ಅರ್ಥ ಪೂರ್ಣವಾಗಿ ಮೂಡಿ ಬಂದಿದೆ.
| ಜಾನಪದ ತಜ್ಞ, ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ

ನಮ್ಮ ದೇಶಿ ಸಂಸ್ಕೃತಿಯನ್ನು ಸಂರಕ್ಷಿಸಿ, ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ತಲೆಮಾರುಗಳಿಂದ ಹೊಂದಿರುವ, ಆಯಾ ಪ್ರಾದೇಶಿಕ ಗ್ರಾಮೀಣ ವ್ಯಾಪ್ತಿಯಲ್ಲಿ ಆಚರಣೆಯಲ್ಲಿರುವ ಈ ಮೌಖಿಕ ಪರಂಪರೆಯ ಜಾನಪದ ಸಂಸ್ಕೃತಿಯ ಸೊಗಡುಗಳು ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ಒಂದು ಅತ್ಯುತ್ತಮ ಪ್ರಯತ್ನ ‘ಜಾನಪದ ‌ಉತ್ಸವ’-2025.
| ಡಾ.ಬಿ‌.ಜಿ.ಅಮೃತೇಶ್ವರ, ಪ್ರಾಂಶುಪಾಲರು

ಜನಪದರ ಬದುಕು, ಆಧುನಿಕ ಜಾಗತೀಕರಣದ ಕಾಲದಲ್ಲಿ ಹೆಚ್ಚು ಪ್ರಸ್ತುತವಾಗುತ್ತಿದೆ ಅದರ ಸದಾಶಯವನ್ನು ಕಾಲೇಜು ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ನಮ್ಮ ಕಾಲೇಜಿನ ವಿಧ್ಯಾರ್ಥಿಗಳು ಎಲ್ಲಾ ಅಧ್ಯಾಪಕರ ಸಹಾಯದಿಂದ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ ಅವರಿಗೆ ಅಭಿನಂದನೆಗಳು.
| ಷಣ್ಮುಖಪ್ಪ ಕೆ ಎಚ್ ,ಕಾರ್ಯಕ್ರಮದ ನಿರ್ದೇಶಕರು, ಸಂಚಾಲಕರು,ಸಾಂಸ್ಕೃತಿಕ ವೇದಿಕೆ

Continue Reading

ಅಂತರಂಗ

ಮಹಿಳಾ ದಿನಾಚರಣೆ | ಸಾಧನೆಯ ಸುಗಂಧ, ಪ್ರೇರಣೆಯ ಬೆಳಕು

Published

on

  • ಡಾ. ವೆಂಕಟೇಶ ಬಾಬು ಎಸ್, ಸಹ ಪ್ರಾಧ್ಯಾಪಕರು, ದಾವಣಗೆರೆ

ಇಂದು ಮಹಿಳಾ ದಿನಾಚರಣೆ ಪ್ರಯುಕ್ತ ಎಲ್ಲಾ ಮಹಿಳೆಯರಿಗೆ ಶುಭಾಷಯಗಳು

ಪ್ರತಿಯೊಂದು ಮಹಿಳೆ ತನ್ನ ಜೀವನದಲ್ಲಿ ವಿವಿಧ ಹಂತಗಳನ್ನು ದಾಟುತ್ತಾ, ಆತ್ಮವಿಶ್ವಾಸ, ಪ್ರೇರಣೆ ಹಾಗೂ ಶಕ್ತಿ ಹೊಂದುವ ಪ್ರತಿರೂಪವಾಗಿರುತ್ತಾರೆ. ವಿಶ್ವ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ, ಇದು ಮಹಿಳೆಯರ ಹಕ್ಕುಗಳು, ಸಾಧನೆಗಳು ಮತ್ತು ಅವರ ಜಗತ್ತಿನ ಮೇಲೆ ಬೀರಿದ ಪ್ರಭಾವವನ್ನು ಗೌರವಿಸುವ ಒಂದು ಅದ್ಭುತ ಅವಕಾಶ.

ಮಹಿಳೆಯರ ಬದುಕು ಕೇವಲ ಕುಟುಂಬದ ಕೇಂದ್ರದಲ್ಲಿಯೇ ಸೀಮಿತವಾಗಿಲ್ಲ; ಅವರು ಸಾಮಾಜಿಕ, ಶೈಕ್ಷಣಿಕ, ರಾಜಕೀಯ, ಆರ್ಥಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲೂ ಮಹತ್ತರ ಪಾತ್ರ ವಹಿಸುತ್ತಿದ್ದಾರೆ. ಅಮ್ಮನಾಗಿ, ಪತ್ನಿಯಾಗಿ, ಮಗುವಾಗಿ, ಸಂಸ್ಥಾಪಕಿಯಾಗಿ, ನಾಯಕಿಯಾಗಿ, ವೈಜ್ಞಾನಿಕರಾಗಿ, ಕ್ರೀಡಾಪಟುವಾಗಿ – ಎಲ್ಲಾ ಪಾತ್ರಗಳಲ್ಲೂ ಮಹಿಳೆಯರು ತಮ್ಮ ಅದ್ಭುತ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ.

ಈಗ ಮಹಿಳೆಯರು ತಮ್ಮ ಇಚ್ಛಾಶಕ್ತಿಯೊಂದಿಗೆ ಮತ್ತು ಶಿಕ್ಷಣದ ಹಾದಿಯ ಮೂಲಕ ಜೀವನವನ್ನು ರೂಪಿಸಿಕೊಳ್ಳುತ್ತಿದ್ದಾರೆ. ಇಂದು ಕಲ್ಪನಾ ಚಾವ್ಲಾ, ಮೇರೀ ಕೋಮ್, ಸುಧಾ ಮುರ್ತಿ, ಕಿರಣ್ ಮಜುಂದಾರ್ ಶಾ, ಫಾಲ್ಗುಣಿ ನಾಯರ್ ಮುಂತಾದ ಅನೇಕ ಮಹಿಳೆಯರು ತಮ್ಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡುತ್ತಿದ್ದಾರೆ.

ಮಹಿಳಾ ದಿನಾಚರಣೆ – ಇತಿಹಾಸ ಮತ್ತು ಹಿನ್ನೆಲೆ

ಮಹಿಳಾ ದಿನಾಚರಣೆ (International Women’s Day – IWD) ಪ್ರತಿ ವರ್ಷ ಮಾರ್ಚ್ 8 ರಂದು ಆಚರಿಸಲಾಗುತ್ತದೆ. ಇದು ಮಹಿಳೆಯರ ಹಕ್ಕುಗಳು, ಸಶಕ್ತೀಕರಣ, ಸಾಧನೆಗಳು ಮತ್ತು ಲಿಂಗ ಸಮಾನತೆಯ ಪ್ರಗತಿ ಕುರಿತು ಜಾಗೃತಿಯನ್ನು ಮೂಡಿಸುವ ಮಹತ್ವದ ದಿನ.

ಮಹಿಳಾ ದಿನಾಚರಣೆಯ ಇತಿಹಾಸ

ಮಹಿಳಾ ದಿನಾಚರಣೆಯ ಮೂಲವು 1900ರ ದಶಕದ ಪ್ರಾರಂಭದಲ್ಲಿ ಕೈಗೆತ್ತಿಕೊಳ್ಳಲಾದ ಮಹಿಳಾ ಹಕ್ಕುಗಳ ಹೋರಾಟಕ್ಕೆ ಸರಿಹೊಂದಿದೆ. ಈ ದಿನವನ್ನು ಆಚರಿಸಲು ಪ್ರೇರಣೆ ನೀಡಿದ ಪ್ರಮುಖ ಘಟನೆಗಳು ಹೀಗಿವೆ:

1. 1908 – ಮಹಿಳಾ ಹಕ್ಕುಗಳ ಹೋರಾಟ:

ಅಮೇರಿಕಾದ ನ್ಯೂಯಾರ್ಕ್ ನಗರದಲ್ಲಿ ಸಾವಿರಾರು ಮಹಿಳಾ ಕಾರ್ಮಿಕರು ಕಡಿಮೆ ಕೆಲಸದ ಘಂಟೆಗಳು, ಉತ್ತಮ ಸಂಬಳ ಮತ್ತು ಮತದಾನದ ಹಕ್ಕುಕ್ಕಾಗಿ ಪ್ರತಿಭಟನೆ ನಡೆಸಿದರು.

2. 1909 – ಮೊದಲ ಮಹಿಳಾ ದಿನಾಚರಣೆ:

ಫೆಬ್ರವರಿ 28, 1909 ರಂದು ಅಮೆರಿಕಾದ ಸೋಶಲಿಸ್ಟ್ ಪಾರ್ಟಿ ದೇಶದಾದ್ಯಂತ ಮಹಿಳಾ ದಿನವನ್ನು ಆಚರಿಸಿತು.

3. 1910 – ಅಂತಾರಾಷ್ಟ್ರೀಯ ಹೋರಾಟ:

ಡೆನ್ಮಾರ್ಕ್‌ನ ಕೊಪನ್‌ಹೇಗನ್ ನಲ್ಲಿ ನಡೆದ ಸೋಶಲಿಸ್ಟ್ ವುಮೆನ್ಸ್ ಕಾನ್ಫರೆನ್ಸ್ ನಲ್ಲಿ ಜರ್ಮನಿಯ ಕ್ಲಾರಾ ಜೆಟ್ಕಿನ್ ಅವರು ಪ್ರಪಂಚದಾದ್ಯಂತ ಮಹಿಳಾ ದಿನ ಆಚರಿಸುವ ಸಲಹೆ ನೀಡಿದರು.

4. 1911 – ಪ್ರಥಮ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ:

ಮೊದಲ ಬಾರಿ ಆಸ್ಟ್ರಿಯಾ, ಡೆನ್ಮಾರ್ಕ್, ಜರ್ಮನಿ ಮತ್ತು ಸ್ವಿಟ್ಜರ್ಲೆಂಡ್ ದೇಶಗಳಲ್ಲಿ ಮಹಿಳಾ ದಿನವನ್ನು ಮಾರ್ಚ್ 19ರಂದು ಆಚರಿಸಲಾಯಿತು.

5. 1913 – ಮಾರ್ಚ್ 8ಕ್ಕೆ ದಿನಾಂಕ ಬದಲಾವಣೆ:

1913ರಿಂದ ಮಾರ್ಚ್ 8ನೇ ತಾರೀಖನ್ನು ಅಧಿಕೃತವಾಗಿ ಮಹಿಳಾ ದಿನಾಚರಣೆಗೆ ಮೀಸಲಾಗಿಸಲಾಯಿತು.

6. 1975 – ವಿಶ್ವ ಮಹಿಳಾ ವರ್ಷ:

UNO1975ನೇ ವರ್ಷವನ್ನು “ಅಂತರಾಷ್ಟ್ರೀಯ ಮಹಿಳಾ ವರ್ಷ” ಎಂದು ಘೋಷಿಸಿ, ಮಹಿಳಾ ದಿನವನ್ನು ಅಧಿಕೃತವಾಗಿ ಅಂಗೀಕರಿಸಿತು

7. 2011 – 100ನೇ ವಾರ್ಷಿಕೋತ್ಸವ:

2011ರಲ್ಲಿ ಮಹಿಳಾ ದಿನಾಚರಣೆ ಶತಮಾನೋತ್ಸವವನ್ನು ಪೂರೈಸಿತು.

ಮಹಿಳಾ ದಿನಾಚರಣೆಯ ಉದ್ದೇಶ

ಮಹಿಳಾ ದಿನವನ್ನು ಆಚರಿಸುವ ಪ್ರಮುಖ ಉದ್ದೇಶಗಳು:
✔ ಮಹಿಳಾ ಸಮಾನತೆ ಮತ್ತು ಹಕ್ಕುಗಳನ್ನು ಬಲಪಡಿಸುವುದು.
✔ ಮಹಿಳೆಯರ ಸಾಧನೆಗಳನ್ನು ಗುರುತಿಸಿ, ಗೌರವ ನೀಡುವುದು.
✔ ಅವರ ಸಮಸ್ಯೆಗಳನ್ನು ಅರಿತು, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುವುದು.
✔ ಮಹಿಳಾ ಶಕ್ತಿ ಮತ್ತು ಸ್ವಾವಲಂಬನೆಯ ಕುರಿತು ಜಾಗೃತಿಯನ್ನು ಹರಡುವುದು.

ಮಹಿಳಾ ದಿನಾಚರಣೆ – ಇಂದಿನ ಪ್ರಸ್ತುತತೆ

ಇಂದಿನ ಹೊತ್ತಿನಲ್ಲಿ, ಮಹಿಳೆಯರು ಶಿಕ್ಷಣ, ಉದ್ಯಮ, ರಾಜಕೀಯ, ಕ್ರೀಡೆ, ವಿಜ್ಞಾನ, ತಂತ್ರಜ್ಞಾನ, ಸೇವಾ ಕ್ಷೇತ್ರ ಮತ್ತು ಉದ್ಯಮಶೀಲತೆ ಎಲ್ಲೆಲ್ಲಿಯೂ ತಮ್ಮ ಸಾಮರ್ಥ್ಯವನ್ನು ತೋರಿಸುತ್ತಿದ್ದಾರೆ. ಮಹಿಳಾ ದಿನವು “Gender Equality – ಲಿಂಗ ಸಮಾನತೆ”, “Break the Bias – ಲಿಂಗತಾತ್ವಿಕ ಭೇದಭಾವವನ್ನು ಕಳಚುವುದು”, “DigitALL: Innovation and technology for gender equality” ಮುಂತಾದ ವಿಶೇಷ ಥೀಮ್‌ಗಳೊಂದಿಗೆ ಪ್ರತಿವರ್ಷ ಜಾಗೃತಿಯನ್ನು ಮೂಡಿಸುತ್ತದೆ.

ಮಹಿಳೆಯರು ಬದುಕಿನ ಉತ್ಸಾಹ

ಮಹಿಳೆಯರು ತಮ್ಮ ಕುಟುಂಬ, ಸಮಾಜ ಮತ್ತು ದೇಶದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಅವರಲ್ಲಿರುವ ಹೃದಯಸ್ಪರ್ಶಿ ಭಾವನೆ, ತ್ಯಾಗ, ಶ್ರಮ ಹಾಗೂ ಪ್ರೀತಿ ಅವರ ಬದುಕಿನ ಹಾದಿಯನ್ನು ಮಾದರಿಯಾಗಿ ಮಾಡುತ್ತದೆ. ಶಿಕ್ಷಣ, ಉದ್ಯೋಗ, ರಾಜಕೀಯ, ಕಲೆ, ಕ್ರೀಡೆ, ವಿಜ್ಞಾನ ಹೀಗೆ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ.

ಅನೇಕ ಮಹಿಳೆಯರು ಸಂಕಷ್ಟಗಳನ್ನು ಎದುರಿಸುತ್ತಾ, ಸಾಧನೆಗೆ ಹೊಸ ಪರಿಮಾಣ ನೀಡಿದ ಉದಾಹರಣೆಗಳಿವೆ. ಐದು ದಶಕಗಳ ಹಿಂದೆಯೂ ಮಹಿಳೆಯರು ಮನೆಯಲ್ಲಿ ಸೀಮಿತವಾಗಿದ್ದರೆ, ಇಂದು ಅವರು ಅಂತರಿಕ್ಷ ಯಾತ್ರೆ, ವ್ಯವಹಾರ ನಿರ್ವಹಣೆ, ಕಾನೂನು, ತಂತ್ರಜ್ಞಾನ, ಆಡಳಿತ ಮತ್ತು ರಾಜಕೀಯದಲ್ಲಿ ಮುಂಚೂಣಿಯಲ್ಲಿದ್ದಾರೆ.

ಸಾಧನೆಗಳ ಬೆಳಕು

1. ಶಿಕ್ಷಣ ಮತ್ತು ಸಶಕ್ತೀಕರಣ:

ಜಗತ್ತಿನ ಅನೇಕ ದೇಶಗಳಲ್ಲಿ ಈಗ ಮಹಿಳಿಯರಿಗೆ ಶಿಕ್ಷಣ ಹಕ್ಕುಗಳನ್ನು ಒದಗಿಸಲಾಗುತ್ತಿದೆ, ಇದರಿಂದ ಮಹಿಳೆಯರು ಸಮಾಜದ ಮುಖ್ಯಧಾರೆಯಲ್ಲಿರಲು ಸಾಧ್ಯವಾಗಿದೆ. ಭಾರತದಲ್ಲಿ ಸವಿತ್ರಿಬಾಯಿ ಫುಲೆ, ಇಂದಿರಾ ಗಾಂಧಿ, ಕಲ್ಪನಾ ಚಾವ್ಲಾ, ಮೇರೀ ಕೋಮ್ ಮುಂತಾದವರು ಮಹಿಳಾ ಶಿಕ್ಷಣ ಮತ್ತು ಸಶಕ್ತೀಕರಣದಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.

2. ಉದ್ಯೋಗ ಹಾಗೂ ಉದ್ಯಮಶೀಲತೆ:

ಈಗ ಮಹಿಳೆಯರು ಉದ್ಯೋಗ ಮಾತ್ರವಲ್ಲದೆ, ಸ್ವಂತ ಉದ್ಯಮಗಳನ್ನು ನಿರ್ಮಿಸಿ ಉದ್ಯಮಶೀಲತೆ ತೋರಿಸುತ್ತಿದ್ದಾರೆ. ಫಾಲ್ಗುಣಿ ನಾಯರ್ (ನೈಕಾ), ಕಿರಣ್ ಮಜುಂದಾರ್ ಶಾ (ಬಯೋಕಾನ್), ವಂದನಾ ಲೂತರ (ಪೇಪರ್ ಶೈರಿ) ಮುಂತಾದವರು ಉದ್ಯಮ ವಲಯದಲ್ಲಿ ತಮ್ಮ ಅಚ್ಚಳಿಯದ ಗುರುತು ಮೂಡಿಸಿದ್ದಾರೆ.

3. ಕ್ರೀಡೆ ಮತ್ತು ಸಾಹಸ:

ಕ್ರೀಡಾ ಕ್ಷೇತ್ರದಲ್ಲಿ ಮಹಿಳೆಯರು ಹೊಸ ದಾಖಲೆಗಳನ್ನು ನಿರ್ಮಿಸಿದ್ದಾರೆ. ಸೈನಾ ನೆಹ್ವಾಲ್, ಮೇರೀ ಕೋಮ್, ಪಿ.ವಿ. ಸಿಂಧು, ಮಿಥಾಲಿ ರಾಜ್ ಮುಂತಾದವರು ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಹೆಮ್ಮೆ ಹೆಚ್ಚಿಸಿದ್ದಾರೆ.

4. ಸಮಾಜಸೇವೆ ಮತ್ತು ಪ್ರಭಾವ:

ಮಹಿಳೆಯರು ಕೇವಲ ತಮ್ಮ ವ್ಯಕ್ತಿಗತ ಜೀವನದಲ್ಲಷ್ಟೇ ಅಲ್ಲದೆ, ಸಮಾಜಸೇವೆಯಲ್ಲಿ ಕೂಡ ದೊಡ್ಡ ಕೊಡುಗೆ ನೀಡುತ್ತಿದ್ದಾರೆ. ಮದರ್ ತೆರೆಸಾ, ಸುಧಾ ಮುರ್ತಿ ಮುಂತಾದವರು ತಮ್ಮ ಸಮಾಜಮುಖಿ ಕಾರ್ಯಗಳಿಂದ ಲಕ್ಷಾಂತರ ಜನರಿಗೆ ಪ್ರೇರಣೆ ನೀಡಿದ್ದಾರೆ.

ಸಮಾಜದ ಹೊಣೆಗಾರಿಕೆ – ಮಹಿಳಾ ಸಮಾನತೆ ಮತ್ತು ಗೌರವ

ಮಹಿಳೆಯರನ್ನು ಗೌರವಿಸುವ, ಅವರ ಆತ್ಮವಿಶ್ವಾಸ ಹೆಚ್ಚಿಸುವ, ಅವರಿಗೆ ಸಮಾನ ಅವಕಾಶ ಒದಗಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಮಹಿಳಾ ಸುರಕ್ಷತೆ, ಸಂವೇದನಾಶೀಲತೆ ಮತ್ತು ಗೌರವ ಹೊಂದಿದ ಸಮಾಜವನ್ನು ನಿರ್ಮಿಸುವುದು ಅನಿವಾರ್ಯ.

ನಮ್ಮ ಕರ್ತವ್ಯ – ಮಹಿಳಾ ಶಕ್ತಿಗೆ ಸಾಥ್

ಈ ಮಹಿಳಾ ದಿನಾಚರಣೆ ದಿನದಂದು ನಾವು ನಮ್ಮ ಜೀವನದಲ್ಲಿ ಶಕ್ತಿ, ಪ್ರೇರಣೆ, ಪ್ರೀತಿಯ ಬೆಳಕು ತುಂಬುವ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸೋಣ. ಅವರ ಸಾಧನೆಗಳನ್ನು ಗೌರವಿಸೋಣ ಮತ್ತು ಹೊಸ ತಲೆಮಾರಿನ ಮಹಿಳೆಯರಿಗೆ ಇನ್ನಷ್ಟು ಉತ್ಸಾಹ, ಶಿಕ್ಷಣ ಮತ್ತು ಅವಕಾಶಗಳನ್ನು ಒದಗಿಸುವ ಮೂಲಕ ಅವರನ್ನು ಸಶಕ್ತಗೊಳಿಸೋಣ.

“ಮಹಿಳೆಯರ ಪ್ರಗತಿ – ರಾಷ್ಟ್ರದ ಪ್ರಗತಿ!”(ಲೇಖನ-ಡಾ. ವೆಂಕಟೇಶ ಬಾಬು ಎಸ್,ಸಹ ಪ್ರಾಧ್ಯಾಪಕರು, ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 hours ago

ದಾವಣಗೆರೆ | ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು : ನೀಲಾನಹಳ್ಳಿಯಲ್ಲಿ ಎನ್.ಎಸ್.ಎಸ್ ಶಿಬಿರ

ಸುದ್ದಿದಿನ,ದಾವಣಗೆರೆ:ನಗರದ ಬಿ.ಎಸ್. ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ಮತ್ತು ನೀಲಾನಹಳ್ಳಿ ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಎರಡನೇ ದಿನದ ಎನ್.ಎಸ್.ಎಸ್.ಶಿಬಿರದ ಕಾರ್ಯಕ್ರಮ ಗುರುವಾರ (ಏ.10)ರಂದು ಜರುಗಿತು. 2024-25ನೇ ಸಾಲಿನ ರಾಷ್ಟ್ರೀಯ...

ದಿನದ ಸುದ್ದಿ5 hours ago

ಜಾನಪದ ಆಚರಣೆಗಳಲ್ಲಿ ವೈಜ್ಞಾನಿಕತೆ ಅಡಗಿದೆ : ಪ್ರೊ. ಮೋನಿಕಾ ರಂಜನ್

ಸುದ್ದಿದಿನ,ಬಳ್ಳಾರಿ:ಜಾನಪದ ಆಚರಣೆಯಲ್ಲಿ ವೈಜ್ಞಾನಿಕ ಅಂಶಗಳು ಅಡಗಿದ್ದು, ಜನಪದ ಕಲೆಗಳು ಮನಸಿಗೆ ಮುದ ನೀಡುತ್ತವೆ ಎಂದು ಪ್ರಾಂಶುಪಾಲರಾದ ಪ್ರೊ.‌ಮೋನಿಕಾ ರಂಜನ್ ತಿಳಿಸಿದರು. ನಗರದ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್...

ದಿನದ ಸುದ್ದಿ5 hours ago

ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚಿಸಿದ ಅಬಕಾರಿ ಸುಂಕವನ್ನು ರದ್ದುಗೊಳಿಸಿ : ಯುವ ಕಾಂಗ್ರೆಸ್ ಅಗ್ರಹ

ಸುದ್ದಿದಿನ,ಬಳ್ಳಾರಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೇಕಾಬಿಟ್ಟಿಯಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಹೆಚ್ಚಿಸುತ್ತಾ ಬರುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಸಾಮಾನ್ಯವಾಗಿ ಹೆಚ್ಚಳವಾಗುತ್ತಿದ್ದು,...

ದಿನದ ಸುದ್ದಿ21 hours ago

ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್‍ ಸಮುದಾಯ ಭವನ ಶಂಕುಸ್ಥಾಪನೆ

ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 14 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಸಕ್ರ್ಯೂಟ್ ಹೌಸ್ ಪಕ್ಕ...

ದಿನದ ಸುದ್ದಿ22 hours ago

ದಾವಣಗೆರೆ | ಏಪ್ರಿಲ್ 16, 17 ರಂದು ಸಿಇಟಿ ಪರೀಕ್ಷೆ : ಜಿಲ್ಲೆಯ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು

ಸುದ್ದಿದಿನ,ದಾವಣಗೆರೆ:ಸಿಇಟಿ-2025 ರ ಪರೀಕ್ಷೆಯು ಏಪ್ರಿಲ್ 16 ಮತ್ತು 17 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆಯಲ್ಲಿ 28 ಕೇಂದ್ರಗಳಲ್ಲಿ 12875 ವಿದ್ಯಾರ್ಥಿಗಳು ಪರೀಕ್ಷೆ ಬರೆಯುವರು. ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ...

ದಿನದ ಸುದ್ದಿ1 day ago

ಕೊಂಕಣ ರೈಲ್ವೆ, ಹಾಸನ-ಮಂಗಳೂರು ರೈಲ್ವೆ ಅಭಿವೃದ್ಧಿ ನಿಗಮ ಮತ್ತು ಭಾರತೀಯ ರೈಲ್ವೆ ವಿಲೀನ ಪ್ರಯತ್ನ ಪ್ರಗತಿಯಲ್ಲಿ

ಸುದ್ದಿದಿನಡೆಸ್ಕ್:ಕೊಂಕಣ ರೈಲ್ವೆ ಹಾಗೂ ಹಾಸನ-ಮಂಗಳೂರು ರೈಲ್ವೆ ಅಭಿವೃದ್ಧಿ ನಿಗಮ – HMRDCL ಅನ್ನು ಭಾರತೀಯ ರೈಲ್ವೆ ಜೊತೆ ವಿಲೀನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಸಚಿವರೊಂದಿಗೆ ಈಗಾಗಲೇ ಮಾತುಕತೆ...

ದಿನದ ಸುದ್ದಿ1 day ago

ಗುತ್ತಿಗೆದಾರರಿಗೆ ಕಮಿಷನ್ ಕೇಳಿದ್ದರೆ ಲೋಕಾಯುಕ್ತರಿಗೆ ದೂರು ನೀಡಿ : ಡಿಸಿಎಂ ಡಿ.ಕೆ. ಶಿವಕುಮಾರ್

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಕಮಿಷನ್ ಕೇಳಿದರೆ ಲೋಕಾಯುಕ್ತಕ್ಕೆ ದೂರು ನೀಡಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ದಿನದ ಸುದ್ದಿ1 day ago

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ’

ಸುದ್ದಿದಿನ,ದಾವಣಗೆರೆ: ಇಂದಿನ ಆಧುನಿಕ ಸಂಸ್ಕೃತಿಯ ನಡುವೆ ನಮ್ಮ ಮೂಲ ಸಂಸ್ಕೃತಿ ಜನಪದವು ಸರಿ ಹೋಗುತ್ತದೆ ಇದು ಉಳಿದರೆ ನಮ್ಮ ಸಂಸ್ಕೃತಿ ಉಳಿಯುತ್ತದೆ ಉಳಿಸುವ ಕಾರ್ಯ ಮಹತ್ತರವಾದದ್ದು ಆ...

ದಿನದ ಸುದ್ದಿ1 day ago

ದಾವಣಗೆರೆ | ಮಕ್ಕಳ ಬೇಸಿಗೆ ರಜೆಗೆ ಶುಭ ಕೋರಿದ ತಿಂಗಳ ಅಂಗಳ

ಸುದ್ದಿದಿನಡೆಸ್ಕ್:ದಾವಣಗೆರೆ ತಿಂಗಳ ಅಂಗಳ ಸಾಹಿತ್ಯ – ಸಾಂಸ್ಕೃತಿಕ ಬಳಗ ಹಾಗೂ V 1 ಕಾವ್ಯಧಾರೆಯ ಸಹಯೋಗದೊಂದಿಗೆ ಏಪ್ರಿಲ್ ತಿಂಗಳ ಕಾರ್ಯಕ್ರಮವನ್ನು ಏಪ್ರಿಲ್ 10 ರ ಗುರುವಾರ ಮಧ್ಯಾಹ್ನ...

ದಿನದ ಸುದ್ದಿ1 day ago

ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ | ಕೇಂದ್ರ ಕೊಡದಿದ್ದರೂ ರಾಜ್ಯ ಸರ್ಕಾರ ನೀಡಲಿದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಸುದ್ದಿದಿನಡೆಸ್ಕ್:ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿದ್ದ 5 ಸಾವಿರದ 300 ಕೋಟಿ ರೂಪಾಯಿ ಅನುದಾನ ನೀಡದೇ ಇದ್ದರೂ, ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯ ಸರ್ಕಾರ ಅಗತ್ಯ...

Trending