ದಿನದ ಸುದ್ದಿ
ಹೊಸ ರಾಷ್ಟ್ರೀಯ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಏನಿದೆ..?
ಸುದ್ದಿದಿನ,ನವದೆಹಲಿ: ಇನ್ನು ಮುಂದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) ಭಾರತದಲ್ಲಿ ಜಾರಿಯಾಗಲಿದೆ. ಈಗ ಇರುವ 10+2 ಶಿಕ್ಷಣ ವ್ಯವಸ್ಥೆ 5+3+3+4 ಮಾದರಿಯಾಗಿ ಬದಲಾವಣೆಯಾಗಲಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯ ಕರಡನ್ನು ಕೇಂದ್ರ ಸರ್ಕಾರ ಈ ಹಿಂದೆ ಪ್ರಕಟಿಸಿತ್ತು. ಸಾರ್ವಜನಿಕರಿಂದ ಸಲಹೆಗಳನ್ನು ಪಡೆದು ಈಗ ಈ ಹೊಸ ಎನ್ಇಪಿಗೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಸುದ್ದಿಗೋಷ್ಠಿ ನಡೆಸಿ ಹೊಸ ನೀತಿಯ ವಿವರಗಳನ್ನು ನೀಡಿದರು.
2015ರಿಂದ ಎನ್ಇಪಿ ಜಾರಿ ಸಂಬಂಧ ಚರ್ಚೆ ನಡೆಯುತ್ತಿತ್ತು. ಈಗ ಹೊಸ ನೀತಿ ಜಾರಿಯಾಗಿದೆ. 34 ವರ್ಷದ ಹಿಂದೆ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಆಗಿತ್ತು. ಆದಾದ ಬಳಿಕ ಈಗ ಬದಲಾವಣೆ ಆಗುತ್ತಿದೆ.
ಎನ್ಇಪಿಯಲ್ಲಿ ಏನಿದೆ..?
ಇನ್ನು ಮುಂದೆ 10+2 ಶಿಕ್ಷಣ ವ್ಯವಸ್ಥೆ ಇರುವುದಿಲ್ಲ. ಇದನ್ನು 5+3+3+4 ರಂತೆ ವಿಂಗಡನೆ ಮಾಡಲಾಗಿದೆ. ಇದರರ್ಥ ಶಾಲೆಯ ಮೊದಲ ಐದು ವರ್ಷಗಳು ಅಡಿಪಾಯ ಹಂತ, 3 ರಿಂದ 5 ನೇ ತರಗತಿಯವರೆಗಿನ ಮೂರು ವರ್ಷಗಳನ್ನು ಪೂರ್ವಸಿದ್ಧತಾ ಹಂತವಾಗಿ ವಿಂಗಡಿಸಲಾಗಿದೆ. ನಂತರ ಮೂರು ವರ್ಷಗಳು ಮಧ್ಯಮ ಹಂತವಾಗಿ ವಿಂಗಡಿಸಲಾಗಿದೆ. ನಂತರದ ನಾಲ್ಕು ವರ್ಷವನ್ನು ದ್ವಿತೀಯ ಹಂತವನ್ನಾಗಿ ವಿಂಗಡಿಸಲಾಗಿದೆ. ಶಾಲೆಗಳು ಶಾಲೆಗಳು ಕಲೆ, ವಾಣಿಜ್ಯ, ವಿಜ್ಞಾನದ ಹೊಳೆಗಳ ಯಾವುದೇ ಕಟ್ಟುನಿಟ್ಟಿನ ರಚನೆಯನ್ನು ಹೊಂದಿರುವುದಿಲ್ಲ, ವಿದ್ಯಾರ್ಥಿಗಳು ತಾವು ಬಯಸುವ ಯಾವುದೇ ಕೋರ್ಸ್ಗಳನ್ನು ತೆಗೆದುಕೊಳ್ಳಬಹುದು.
- 5ನೇ ತರಗತಿಯವರೆಗೆ ಮಾತೃ ಭಾಷೆಯಲ್ಲಿ ಶಿಕ್ಷಣ ಅಥವಾ ಪ್ರಾದೇಶಿಕ ಭಾಷೆಯಲ್ಲಿ ಶಿಕ್ಷಣ ನೀಡಬೇಕು
- 6ನೇ ತರಗತಿಯಿಂದಲೇ ಕೋಡಿಂಗ್ ಪಾಠವನ್ನು ಹೇಳಿಕೊಡಬೇಕು.
- ಸಂಶೋಧನೆ ಸಂಬಂಧ ಇನ್ನು ಮುಂದೆ ಯಾವುದೇ ಎಂಪಿಎಲ್ ಇರುವುದಿಲ್ಲ.
- ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯವನ್ನು ಶಿಕ್ಷಣ ಸಚಿವಾಲಯ ಎಂದು ಮರು ನಾಮಕರಣ
- ಬೋರ್ಡ್ ಪರೀಕ್ಷೆಗಳ ಮಹತ್ವ ಕಡಿಮೆ ಮಾಡುವುದು, ಪರೀಕ್ಷೆಗಳನ್ನು ವರ್ಷಕ್ಕೆ ಎರಡು ಬಾರಿ ನಡೆಸಲಾಗುವುದು
- ಮಾರ್ಕ್ಸ್ ಕಾರ್ಡ್ಗಳು ಕೇವಲ ಅಂಕಗಳು ಮತ್ತು ಹೇಳಿಕೆಗಳಿಗೆ ಬದಲಾಗಿ ಕೌಶಲ್ಯ ಮತ್ತು ಸಾಮರ್ಥ್ಯಗಳ ಕುರಿತು ಸಮಗ್ರ ವರದಿ ನೀಡುವುದು
- ಪ್ರತಿ ವಿದ್ಯಾರ್ಥಿ ಒಂದು ಕೌಶಲ್ಯವನ್ನು ಕಲಿಯಲೇಬೇಕು
- ವಯಸ್ಕರಿಗೆ ಆ್ಯಪ್ ,ಆನ್ ಲೈನ್, ಟಿವಿ , ಆನ್ ಲೈನ್ ಬುಕ್ ಗಳ ಮೂಲಕ ಕಲಿಕೆಗೆ ಅವಕಾಶ
- ಪ್ರಾದೇಶಿಕ ಭಾಷೆಗಳಲ್ಲಿ ಇ- ಕಂಟೆಂಟ್ ಪೂರೈಕೆ
- ಮಧ್ಯದಲ್ಲಿ ಕೋರ್ಸ್ ಬಿಡಲು ಬಯಸುವರಿಗೆ ಪ್ರವೇಶ ಮತ್ತು ನಿರ್ಗಮನ ಆಯ್ಕೆ
- ಉನ್ನತ ಶಿಕ್ಷಣ ಮತ್ತು ವಿಶ್ವವಿದ್ಯಾಲಯಗಳ ಪ್ರವೇಶಕ್ಕೆ ಏಕರೂಪದ ಪರೀಕ್ಷೆ
- ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಸರ್ಕಾರದಿಂದಲೇ ಶುಲ್ಕ ನಿಗದಿ
- ಉನ್ನತ ಶಿಕ್ಷಣದ ನೀಡುವ ಕಾಲೇಜುಗಳಲ್ಲಿ ಸಾಹಿತ್ಯ, ಸಂಗೀತ, ತತ್ವಶಾಸ್ತ್ರ, ಕಲೆ, ನೃತ್ಯ, ರಂಗಭೂಮಿ, ಶಿಕ್ಷಣ, ಗಣಿತ, ಅಂಕಿಅಂಶ, ಶುದ್ಧ ಮತ್ತು ಅನ್ವಯಿಕ ವಿಜ್ಞಾನ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ಕ್ರೀಡೆ, ಅನುವಾದ ಮತ್ತು ವ್ಯಾಖ್ಯಾನ ಇತ್ಯಾದಿ ವಿಭಾಗಗಳು ಇರಬೇಕು.
- ಉನ್ನತ ಶಿಕ್ಷಣದಲ್ಲೂ ಮೂರು ರೀತಿಯ ಭಾಷೆ ಕಲಿಕೆಗೆ ಅವಕಾಶ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


