ದಿನದ ಸುದ್ದಿ
2 ಸಾವಿರ ಹೊಸ ಬಸ್ ಖರೀದಿಗೆ ಅನುದಾನ ಬಿಡುಗಡೆ
ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ 2 ಸಾವಿರ ಹೊಸ ಬಸ್ ಖರೀದಿ ಮಾಡಲು 130ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದೆ ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗರೆಡ್ಡಿ ನಿನ್ನೆ ಶಿರಸಿಯಲ್ಲಿ ಹೇಳಿದ್ದಾರೆ.
ಶಿರಸಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಉತ್ತರ ಕನ್ನಡ ವಿಭಾಗದ ಶಿರಸಿ ಕೇಂದ್ರ ಬಸ್ ನಿಲ್ದಾಣ ಮತ್ತು ಸಾರಿಗೆ ಇಲಾಖೆಯ ಶಿರಸಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ನೂತನ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243