ದಿನದ ಸುದ್ದಿ
ಶಿವಮೊಗ್ಗದಿಂದ ತಿರುಪತಿ ಮತ್ತು ಚೆನ್ನೈಗೆ ಹೊಸ ರೈಲು ಸೇವೆ ಆರಂಭ
ಸುದ್ದಿದಿನ,ಶಿವಮೊಗ್ಗ : ನೈಋತ್ಯ ರೈಲ್ವೆಯು ಶಿವಮೊಗ್ಗದಿಂದ ವಾರಕ್ಕೆ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಪ್ರಾರಂಭಿಸಿದೆ. ಈ ವಿಶೇಷ ಎಕ್ಸ್ಪ್ರೆಸ್ ರೈಲು ಮೆಟ್ರೋಪಾಲಿಟನ್ ನಗರವಾದ ಚೆನ್ನೈ ಮತ್ತು ಯಾತ್ರಿ ಕೇಂದ್ರವಾದ ತಿರುಪತಿ (ರೇಣಿಗುಂಟ)ಗೆ ನೇರ ಸಂಪರ್ಕವನ್ನು ಒದಗಿಸಲಿದೆ.
ವಾರದಲ್ಲಿ ಎರಡು ದಿನ ಹೊರಡುವ ವಿಶೇಷ ರೈಲಿನ ಉದ್ಘಾಟನಾ ಕಾರ್ಯಕ್ರಮವನ್ನು ಸಂಸದರಾದ ಬಿ.ವೈ.ರಾಘವೇಂದ್ರ ರವರು ಶಿವಮೊಗ್ಗ ಟೌನ್ ರೈಲು ನಿಲ್ದಾಣದಲ್ಲಿ 17 ಏಪ್ರಿಲ್ ರಂದು ಭಾನುವಾರ ಸಂಜೆ 6 ಗಂಟೆಗೆ ಹಸಿರು ಬಾವುಟ ತೋರಿಸುವ ಮೂಲಕ ನೆರವೇರಿಸುವರು.
ಶಿವಮೊಗ್ಗದಿಂದ ಚೆನ್ನೈ ಮತ್ತು ತಿರುಪತಿಗೆ ನೇರ ರೈಲು ಸಂಪರ್ಕದ ಬೇಡಿಕೆಯನ್ನು ನವೆಂಬರ್ 2019 ರಲ್ಲಿ ಪೂರೈಸಿದ್ದು, ಕೋವಿಡ್ ಕಾರಣದಿಂದಾಗಿ ಈ ರೈಲುಗಳ ಸೇವೆಗಳನ್ನು ಕೊನೆಗೊಳಿಸಲಾಗಿತ್ತು. ಆದರೆ ರೈಲು ಸಂಪರ್ಕ ಸೇವೆಯ ಹೆಚ್ಚಿನ ಬೇಡಿಕೆ ಇದ್ದ ಕಾರಣ ಮೆಟ್ರೋಪಾಲಿಟನ್ ನಗರವಾದ ಚೆನ್ನೈ ಮತ್ತು ಯಾತ್ರಿ ತಾಣವಾದ ತಿರುಪತಿ (ರೇಣಿಗುಂಟ)ಗಳಿಗೆ ರೈಲನ್ನು ಮರು ಪ್ರಾರಂಭಿಸಲು ಲೊಕಸಭಾ ಸದಸ್ಯರಾದ ಬಿ.ವೈ. ರಾಘವೇಂದ್ರ ಅವರ ಬೇಡಿಕೆಯಿಂದ ಈಗ ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ಹೊಸ ರೈಲನ್ನು ಪ್ರಾರಂಭಿಸಲು ರೈಲ್ವೆ ಸಚಿವಾಲಯದ ಒಪ್ಪಿಗೆಯನ್ನು ಪಡೆಯಲು ಯಶಸ್ವಿಯಾಗಿದೆ.
ರೈಲು ಗಾಡಿ ಸಂ. 06223/06224 ಎರಡು ಎಸ್.ಎಲ್.ಆರ್.ಡಿ., ನಾಲ್ಕು ಸಾಮಾನ್ಯ ಕೋಚ್ಗಳು, ಆರು ಸ್ಲೀಪರ್ ಕೋಚ್ಗಳು, ಒಂದು ಎರಡನೆಯ ದರ್ಜೆ ಹವಾ ನಿಯಂತ್ರಿತ ಮತ್ತು ಒಂದು ಮೂರನೆಯ ದರ್ಜೆ ಹವಾ ನಿಯಂತ್ರಿತ ಕೋಚ್ಗಳನ್ನು ಒಳಗೊಂಡಿರುವ ಸಂಯೋಜನೆಯ 14 ಎಲ್ಎಚ್ಬಿ ಕೋಚ್ಗಳನ್ನು ಹೊಂದಿರುತ್ತದೆ.
ವಿಶೇಷ ಎಕ್ಸ್ಪ್ರೆಸ್ ರೈಲು ಗಾಡಿ ಸಂಖ್ಯೆ. 06223 17.04.2022 ರಿಂದ 28.06.2022 ರವರೆಗೆ (22 ಸಂಚಾರಗಳು) ವಾರದಲ್ಲಿ ಎರಡು ದಿನ ಪ್ರತಿ ಭಾನುವಾರ ಮತ್ತು ಮಂಗಳವಾರ ಶಿವಮೊಗ್ಗದಿಂದ ಹೊರಟು ರೇಣಿಗುಂಟಾ (ತಿರುಪತಿ) ಮಾರ್ಗವಾಗಿ ಪುರಚಿ ತಲೈವರ್ ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ನಿಲ್ದಾಣ ತಲುಪುವುದು.
ವಿಶೇಷ ಎಕ್ಸ್ಪ್ರೆಸ್ ರೈಲು ಗಾಡಿ ಸಂಖ್ಯೆ. 06224 18.04.2022 ರಿಂದ 29.06.2022 ರವರೆಗೆ (22 ಸಂಚಾರಗಳು) ಪ್ರತಿ ಸೋಮವಾರ ಮತ್ತು ಬುಧವಾರ ಈ ಎರಡು ದಿನ ಪುರಚಿ ತಲೈವರ್ ಎಂ.ಜಿ.ಆರ್. ಚೆನ್ನೈ ಸೆಂಟ್ರಲ್ ನಿಲ್ದಾಣದಿಂದ ಹೊರಟು ರೇಣಿಗುಂಟ (ತಿರುಪತಿ) ಮಾರ್ಗವಾಗಿ ಶಿವಮೊಗ್ಗಟೌನ್ ತಲುಪುತ್ತದೆ.
ರೈಲು ಸಂಖ್ಯೆ 06223 ಮತ್ತು 06224 ವಿಶೇಷ ಎಕ್ಸ್ಪ್ರೆಸ್ ರೈಲು ಸೇವೆಗಳನ್ನು ಪ್ರಾರಂಭದಲ್ಲಿ ಶಿವಮೊಗ್ಗ ಟೌನ್ ನಿಂದ 17.04.2022 ರಿಂದ 28.06.2022 (22 ಸಂಚಾರಗಳು) ಮತ್ತು ಚೆನ್ನೈನಿಂದ 18.04.2022 ರಿಂದ 29.06.2022 (22 ಸಂಚಾರಗಳು) ಅವಧಿಗೆ ಜನರ ಬಳಕೆ ಪರೀಕ್ಷಿಸಲು ಚಾಲನೆ ನೀಡಲಾಗುತ್ತಿದೆ.
ಪ್ರಾಯೋಗಿಕ ಅವಧಿಯ ನಂತರ ಶಿವಮೊಗ್ಗದಿಂದ ತಿರುಪತಿ ಮತ್ತು ಚೆನ್ನೈಗೆ ಸಂಪರ್ಕಿಸುವ ಹೊಸ ರೈಲು ಸೇವೆಗಳನ್ನು ಖಾಯಂಗೊಳಿಸಲಾಗುತ್ತದೆ. ಸಾರ್ವಜನಿಕರು ಈ ಅವಕಾಶವನ್ನು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳುವಂತೆ ನೈರುತ್ಯ ರೈಲ್ವೇ, ಮೈಸೂರು ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ6 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ6 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?
-
ದಿನದ ಸುದ್ದಿ5 days ago
ಕವಿತೆ | ನೆನಪು
-
ದಿನದ ಸುದ್ದಿ3 days ago
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
-
ದಿನದ ಸುದ್ದಿ2 days ago
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
-
ದಿನದ ಸುದ್ದಿ1 day ago
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ