Connect with us

ದಿನದ ಸುದ್ದಿ

ಹೊಸ ವರ್ಷಾಚರಣೆ ಸಾರ್ವಜನಿಕರು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮ

Published

on

ಸುದ್ದಿದಿನ,ಶಿವಮೊಗ್ಗ : ಪೊಲೀಸ್ ಇಲಾಖೆಯು 2020 ನೇ ಹೊಸ ವರ್ಷ ಸಂಭ್ರಮಾಚರಣೆ ಸಂಬಂಧ ಡಿಸೆಂಬರ್ 31ರ ರಾತ್ರಿ ಜಿಲ್ಲಾಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರು ನಡೆದುಕೊಂಡು ಹೊಸ ವರ್ಷಾಚರಣೆಯು ಯಶಸ್ವಿಯಾಗಿ ಮತ್ತು ಶಾಂತ ರೀತಿಯಿಂದ ಆಚರಿಸುವ ಸಂಬಂಧ ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಚಿಸಿದ್ದಾರೆ.

ನಗರಗಳ ಮತ್ತು ತಾಲ್ಲೂಕು ಕೇಂದ್ರಗಳಲ್ಲಿನ ಎಲ್ಲಾ ಹೋಟೆಲ್‍ಗಳು, ಭೋಜನ ಗೃಹ, ಕ್ಲಬ್‍ಗಳು, ಆಶ್ರಯ ಸ್ಥಾನಗಳು, ಮತ್ತು ಸಂಘಗಳು, ಹಮ್ಮಿಕೊಂಡಿರುವ ಔತಣಕೂಟ/ಸಮಾರಂಭಗಳನ್ನು ಡಿಸೆಂಬರ್ 31ರ ರಾತ್ರಿ ನಿಗಧಿತ ಸಮಯದೊಳಗೆ ಮುಕ್ತಾಯಗೊಳಿಸುವುದು.

ಹೊಸ ವರ್ಷದ ಔತಣಕೂಟ/ಸಮಾರಂಭಗಳನ್ನು ನಡೆಸುವ ಬಗ್ಗೆ ಪೂರ್ವಾನುಮತಿಯನ್ನು ಪಡೆಯುವುದು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ನೋಡಿಕೊಳ್ಳುವುದು.ಏನಾದರೂ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಪಟ್ಟ ಆಯೋಜಕರ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.

ಹೊಸ ವರ್ಷಾವರಣೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮಧ್ಯಪಾನ ವಾಹನ ಚಲಾವಣೆ ಮಾಡಬಾರದು. ಪಾನಮತ್ತರಾಗಿ ವಾಹನ ಚಾಲನೆ ಮಾಡಿದವರ ಮೇಲೆ ಡ್ರಂಕ್ & ಡ್ರೈವ್ ಪ್ರಕರಣ ದಾಖಲಿಸಿ, ಚಾಲನಾ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು ಎಂದವರು ತಿಳಿಸಿದ್ದಾರೆ.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದಾಗಲೀ, ದ್ವಿಚಕ್ರ ವಾಹನದಲ್ಲಿ ಮೂರು ಜನ ಸವಾರಿ ಮಾಡುವುದು, ಸಾಹಸ ಪ್ರದರ್ಶನ/ವೀಲಿಂಗ್ ನಡೆಸುವುದು ನಿಷೇದಿಸಿದೆ. ಇಲಾಖಾವತಿಯಿಂದ ಚುರುಕು ಪ್ರತಿಕ್ರಯಿಸುವ ತಂಡ ಮತ್ತು ಕಾವಲು ಪಡೆಯನ್ನು ರಚಿಸಿದ್ದು, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಹೋಟೆಲ್/ಭೋಜನಗೃಹ/ಕ್ಲಬ್‍ಗಳಿಗೆ ಅವರುಗಳೇ ಖಾಸಗಿ ಭದ್ರತಾ ವ್ಯವಸ್ಥೆ ಏರ್ಪಡಿಸಲು ಸೂಚಿಸಿರುತ್ತೆ. ಸಿಸಿಟಿವಿ ಅಳವಡಿಸದಿದ್ದಲ್ಲಿ ಅಳವಡಿಸಲು ಸೂಚಿಸಿರುತ್ತೆ. ಹೋಟೆಲ್/ರೆಸಾರ್ಟ್/ಕ್ಲಬ್‍ಗಳ ಮುಖ್ಯಸ್ಥರುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವವರ ಪೂರ್ಣ ವಿವರಗಳನ್ನು ಸರಹದ್ದಿನ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಒದಗಿಸುವುದು.

ವಿವಿಧ ಸಂಘಟನೆಯವರು ವಿವಿಧ ಕಾರ್ಯಕ್ರಮಗಳ ಸಲುವಾಗಿ ಅನುಮತಿ ಪಡೆದು ಹಾಕಿರುವ ಬ್ಯಾನರ್/ಬಟ್ಟಿಂಗ್ಸ್/ಧ್ವಜಗಳ ಸುರಕ್ಷತೆಯನ್ನು ಸಂಬಂಧಪಟ್ಟವರೇ ಸುರಕ್ಷತೆಯನ್ನು ಕಾಯ್ದುಕೊಳ್ಳುವಂತೆ ಅವರು ಸೂಚಿಸಿದ್ದಾರೆ.

ಅನುಮತಿಯನ್ನು ಪಡೆಯದೇ ಬ್ಯಾನರ್/ಬಂಟ್ಟಿಂಗ್ಸ್/ಧ್ವಜಗಳನ್ನು ಹಾಕಿದ್ದೆ ಆದಲ್ಲಿ ಅಂತಹವರ ವಿರುದ್ದ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಆಂಪ್ಲಿಫೈಡ್ ಸೌಂಡ್ ಸಿಸ್ಟಂ ಬಳಸಿದ್ದಲ್ಲಿ ಪೂರ್ವಾನುಮತಿ ಪಡೆಯತಕ್ಕದ್ದು.

ಸೌಂಡ್ ಸಿಸ್ಟಂ ಅಳವಡಿಸಿದ್ದಲ್ಲಿ ಅಕ್ಕಪಕ್ಕದವರಿಗೆ ತೊಂದರೆಯಾಗದ ರೀತಿ ಮೇಲು ಧ್ವನಿಯಲ್ಲಿ ಬಳಕೆ ಮಾಡದೇ, ನಿಗಧಿತ ಮಿತಿಯಲ್ಲಿ ಮತ್ತು ಸಮಯದಲ್ಲಿ ಮುಗಿಸುವುದು. ವಿದೇಶಿಯರು ಹೋಟೆಲ್/ರೆಸಾರ್ಟ್/ಹೋಮ್‍ಸ್ಟೇ ಹಾಗೂ ಇತರೆ ತಂಗುದಾಣಗಳಲ್ಲಿ ವಾಸವಿದ್ದಲ್ಲಿ ಸುರಕ್ಷತೆಗಾಗಿ ಭದ್ರತೆ ಒದಗಿಸುವುದು.

ಹೊಸ ವರ್ಷದ
ಸಂಭ್ರಮಾಚರಣೆಯಲ್ಲಿರುವವರು ಸಾರ್ವಜನಿಕ ಅಸ್ಥಿಪಾಸ್ಥಿಗೆ ಹಾನಿ ಉಂಟು ಮಾಡದಂತೆ ಆಚರಣೆ ಮಾಡುವುದು. ಹೊಸವರ್ಷದ ಆಚರಣೆಯ ಸಮಾರಂಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗಿದ್ದಲ್ಲಿ ಆಯೋಜಕರೆ ಜವಬ್ದಾರರಾಗಿರುತ್ತೀರಿ ಎಂದವರು ಎಚ್ಚರಿಸಿದ್ದಾರೆ.

ಹೊಸವರ್ಷದ ಶುಭಾಶಯ ಕೋರುವ ನೆಪದಲ್ಲಿ ರಸ್ತೆಯ ಮೇಲೆ ಮನಬಂದಂತೆ ಓಡಾಡುವುದನ್ನು ಕಡ್ಡಾಯವಾಗಿ ನಿಷೇದಿಸಿದೆ. ಸಮಾರಂಭದಲ್ಲಿ ಅವಹೇಳನ ರೀತಿಯಲ್ಲಿ ನಡೆದುಕೊಳ್ಳುವುದು / ಜೂಜಾಟಗಳನ್ನು/ಕಾನೂನು ಬಾಹಿರ ಚಟುವಟಿಕೆಗಳನ್ನು ನಿಷೇದಿಸಿದೆ. ಯುವಕರು ಮತ್ತು ವಯಸ್ಕರು ರಸ್ತೆಯಲ್ಲಿ ಹೊಸವರ್ಷ ಆಚರಣೆಯ ಕಾರಣದಿಂದ ದುರ್ವರ್ತನೆ ತೋರಬಾರದು.

ಅಬಕಾರಿ ಕಾಯ್ದೆ ಅಡಿಯಲ್ಲಿ ಪರವಾನಗಿ ಅನ್ವಯ ಮಧ್ಯ ಮಾರಾಟ ವೇಳೆಯನ್ನು ಅನುಸರಿಸುವುದು. ರಸ್ತೆಯಲ್ಲಿ ಮದ್ಯಪಾನ ಮಾಡುವುದನ್ನು ನಿಷೇಧಿಸಿದೆ. ಮಹಿಳೆಯರು/ಹೆಣ್ಣು ಮಕ್ಕಳೊಂದಿಗೆ ಸಭ್ಯತೆಯಿಂದ ವರ್ತಿಸುವುದು ಮತ್ತು ಆಯೋಜಿತ ಕಾರ್ಯಕ್ರಮಗಳಲ್ಲಿ ಸ್ಥಳದಲ್ಲಿ ಮಹಿಳೆಯವರಿಗೆ ಆಸನದ ಪ್ರತ್ಯೇಕ ವ್ಯವಸ್ಥೆ ಮಾಡುವುದು. ಇತರರಿಗೆ ತೊಂದರೆಯಾಗುವ ರೀತಿ ಪಟಾಕಿ ಸುಡುವುದನ್ನು ನಿಷೇಧಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಹೊಸವರ್ಷದ ಸಮಾರಂಭ ನಡೆಸಿದಲ್ಲಿ ವೀಡಿಯೋ ಚಿತ್ರೀಕರಿಸುವುದು. ಕರ್ತವ್ಯ ನಿರತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಸಹಕರಿಸುವುದು. ಹೋಟೆಲ್/ರೆಸಾರ್ಟ್/ಕ್ಲಬ್‍ಗಳ ಸುತ್ತಲು ವಿದ್ಯುತ್ ದೀಪದ ವ್ಯವಸ್ಥೆ ಅಳವಡಿಸುವುದು. ಹೊಸ ವರ್ಷ ಅಚರಣೆಯು ಸಾರ್ವಜನಿಕರಿಗೆ ತೊಂದರೆಯಾಗದಂತೆ ಆಚರಿಸುವುದು.

ಯಾವುದೇ ಸಮಸ್ಯೆ ಉಂಟಾದಲ್ಲಿ ಕೂಡಲೇ ಸರಹದ್ದಿನ ಪೊಲೀಸ್ ಠಾಣೆಗೆ ಮತ್ತು ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಮಾಹಿತಿ ನೀಡತಕ್ಕದ್ದು ಎಂದವರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಂಟ್ರೋಲ್ ರೂಂ – 08182 261413, ದೂ 08182 270521. ಡಿಎಸ್‍ಪಿ ಶಿವಮೊಗ್ಗ – ಮೊ 9480803321, ದೂ 08182-261404, ವೃತ್ತ ನಿರೀಕ್ಷಕರು ಕೋಟೆ ವೃತ್ತ – ಮೊ 9480803331, ದೂ 08182-261408, ವೃತ್ತ ನಿರೀಕ್ಷಕರು ದೊಡ್ಡಪೇಟೆ ವೃತ್ತ – ಮೊ. 9480803330, ದೂ 08182261406.

ಡಿಎಸ್‍ಪಿ ಕಛೇರಿ ಭದ್ರಾವತಿ – ಮೊ 9480803320, ದೂ 08282 274252, ವೃತ್ತ ನಿರೀಕ್ಷಕರು, ಭದ್ರಾವತಿ ನಗರ ವೃತ್ತ – ಮೊ 9480803334, ದೂ 08182-266549, ವೃತ್ತ ನಿರೀಕ್ಷಕರು, ಭದ್ರಾವತಿ ಗ್ರಾಮಾಂತರ ವೃತ್ತ – ಮೊ. 9480803335, ದೂ 08182-272333, ಡಿಎಸ್‍ಪಿ ತೀರ್ಥಹಳ್ಳಿ – ಮೊ : 9480803340.

ದೂ 08181 220388, ವೃತ್ತ ನಿರೀಕ್ಷಕರು, ತೀರ್ಥಹಳ್ಳಿ – ಮೊ. 9480803333, ದೂ 08181-228310, ವೃತ್ತ ನಿರೀಕ್ಷಕರು, ಹೊಸನಗರ – ಮೊ : 9480803337, ದೂ 08185 221544., ಎ.ಎಸ್.ಪಿ. ಸಾಗರ – ಮೊ : 9480803322, ದೂ : 08183 226082, ಪೊಲೀಸ್ ಇನ್ಸ್‍ಪೆಕ್ಟರ್, ಸಾಗರ ಟೌನ್ ಠಾಣೆ . ಮೊ. 9480803336.

ದೂ. 081832 26067, ವೃತ್ತ ನಿರೀಕ್ಷಕರು, ಸಾಗರ ಗ್ರಾಮಾಂತರ, ಮೊ. 9480803360, ದೂ. 08183-226194, ಎಎಸ್‍ಪಿ ಶಿಕಾರಿಪುರ – ಮೊ : 9480803323, ದೂ 08187 222442., ವೃತ್ತ ನಿರೀಕ್ಷಕರು, ಶಿಕಾರಿಪುರ – ಮೊ. 9480803338, ದೂ. 08187 222430, ವೃತ್ತ ನಿರೀಕ್ಷಕರು ಸೊರಬ – ಮೊ : 9480803339, ದೂ. 08184 272122. ಇವರನ್ನು ಸಂಪರ್ಕಿಸಬಹುದಾಗಿದೆ.

ಒಟ್ಟಾರೆ ಹೊಸ ವರ್ಷ ಆಚರಣೆಯನ್ನು ಶಾಂತ ರೀತಿಯಾಗಿ ನೆರವೇರುವ ಸಲುವಾಗಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಯೋಗ್ಯವಾದ ರೀತಿಯಲ್ಲಿ ಬಂದೋಬಸ್ತ್ ನಿಯೋಜಿಸಿಕೊಂಡಿದೆ.

2020ನೇ ಹೊಸ ವರ್ಷ ಎಲ್ಲರ ಬಾಳಲಿ ನೆಮ್ಮದಿಯನ್ನು ಹಾಗೂ ಸುಖ ಶಾಂತಿಯನ್ನು ತರಲಿ ಎಂದು ಶಿವಮೊಗ್ಗ ಪೊಲೀಸ್ ಇಲಾಖೆ ಹಾರೈಸುತ್ತದೆ ಎಂದು ಪೊಲೀಸ್ ಅಧೀಕ್ಷಕರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

Published

on

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ ಶಿವಕುಮಾರ್ ಅವರು ಇಮ್ಮಡಿ ಪುಲ್ಲಕೇಶಿ ಸಾಮ್ರಾಟ್ ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

ನಂತರ ಜಿಲ್ಲಾಧ್ಯಕ್ಷರಾದ ಶಿವರತನ್ ಮಾತನಾಡಿ ,ನಾಡಿನ ಇತಿಹಾಸ ಪುಟಗಳಲ್ಲಿ ಕಣ್ಮರೆಯಾಗಿರುವ ಕನ್ನಡದ ಶ್ರೇಷ್ಠ ಸಾಮ್ರಾಟರಲ್ಲಿ ಇಮ್ಮಡಿ ಪುಲಿಕೇಶಿ ಅಗ್ರ ಸ್ಥಾನ ಪಡೆದಿದ್ದಾರೆ. ಇಂತಹ ಮಹಾನ್ ಸಾಮ್ರಾಟರನ್ನ ನೆನಪಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿಯನ್ನು ನಾವೆಲ್ಲರೂ ಹೊರಬೇಕಾಗಿದೆ ಎಂದರು.

ಭಾರತೀಯ ನೌಕಾಪಡೆಯ ಪಿತಾಮಹ ಎಂದೇ ಕರೆಯಲಾಗುವ ಇಮ್ಮಡಿ ಪುಲಿಕೇಶಿ ಸಾಮ್ರಾಟರ ಜನ್ಮದಿನದ ಪ್ರಯುಕ್ತ ಭಾರತೀಯ ನೌಕಾಪಡೆ ದಿನಾಚರಣೆಯೆoದು ಆಚರಿಸುವುದು ಕನ್ನಡಿಗರಿಗೆ ಹೆಮ್ಮೆಯ ವಿಚಾರ.

ಬೇರೆಲ್ಲ ಜಯಂತಿಗಳನ್ನು ಆಚರಿಸುವ ಸರ್ಕಾರಗಳು ಇಮ್ಮಡಿ ಪುಲಿಕೇಶಿ ಜಯಂತಿಯನ್ನು ಕಡ್ಡಾಯವಾಗಿ ಎಲ್ಲೆಡೆ ಆಚರಿಸಲು ಆಡಳಿತಾತ್ಮಕವಾಗಿ ಜಾರಿಗೊಳಿಸಲು ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.

ಮಹಿಳಾ ಅಧ್ಯಕ್ಷೆ ಶುಭಮಂಗಳ ಅವರು ಸಿಹಿ ವಿತರಿಸಿದರು. ಕನ್ನಡ ಚಳವಳಿಯ ಹಿರಿಯ ಹೋರಾಟಗಾರರು , ಕನ್ನಡ ಚಳವಳಿಯ ಮಾಜಿ ಅಧ್ಯಕ್ಷರಾದ ಬಂಕಾಪುರ ಚನ್ನಬಸಪ್ಪ, ದಾ.ಹ. ಶಿವಕುಮಾರ್. ಈಶ್ವರ್. ಪ್ರಕಾಶ್. ವಾರ್ತಾ ಇಲಾಖೆ ನಿವೃತ್ತ ಬಿ.ಎಸ್. ಬಸವರಾಜ್ ಹಾಗೂ ಹಲವಾರು ಕನ್ನಡಪರ ಹೋರಾಟಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಉಪನಿರ್ದೇಶಕರು ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ ಪಡೆದು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 24 ರೊಳಗಾಗಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಬಾಲಕರ ಬಾಲಮಂದಿರ ಕಟ್ಟಡ, 14ನೇ ಮುಖ್ಯ ರಸ್ತೆ, ಕುವೆಂಪುನಗರ, ಎಂ.ಸಿ.ಸಿ, ‘ಬಿ’ ಬ್ಲಾಕ್, ದಾವಣಗೆರೆ ದೂ.ಸಂ:08192-264056 ಸಲ್ಲಿಸಬೇಕೆಂದು ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending