ದಿನದ ಸುದ್ದಿ
ಹೊಸ ವರ್ಷಾಚರಣೆ ಸಾರ್ವಜನಿಕರು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮ
ಸುದ್ದಿದಿನ,ಶಿವಮೊಗ್ಗ : ಪೊಲೀಸ್ ಇಲಾಖೆಯು 2020 ನೇ ಹೊಸ ವರ್ಷ ಸಂಭ್ರಮಾಚರಣೆ ಸಂಬಂಧ ಡಿಸೆಂಬರ್ 31ರ ರಾತ್ರಿ ಜಿಲ್ಲಾಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರು ನಡೆದುಕೊಂಡು ಹೊಸ ವರ್ಷಾಚರಣೆಯು ಯಶಸ್ವಿಯಾಗಿ ಮತ್ತು ಶಾಂತ ರೀತಿಯಿಂದ ಆಚರಿಸುವ ಸಂಬಂಧ ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಚಿಸಿದ್ದಾರೆ.
ನಗರಗಳ ಮತ್ತು ತಾಲ್ಲೂಕು ಕೇಂದ್ರಗಳಲ್ಲಿನ ಎಲ್ಲಾ ಹೋಟೆಲ್ಗಳು, ಭೋಜನ ಗೃಹ, ಕ್ಲಬ್ಗಳು, ಆಶ್ರಯ ಸ್ಥಾನಗಳು, ಮತ್ತು ಸಂಘಗಳು, ಹಮ್ಮಿಕೊಂಡಿರುವ ಔತಣಕೂಟ/ಸಮಾರಂಭಗಳನ್ನು ಡಿಸೆಂಬರ್ 31ರ ರಾತ್ರಿ ನಿಗಧಿತ ಸಮಯದೊಳಗೆ ಮುಕ್ತಾಯಗೊಳಿಸುವುದು.
ಹೊಸ ವರ್ಷದ ಔತಣಕೂಟ/ಸಮಾರಂಭಗಳನ್ನು ನಡೆಸುವ ಬಗ್ಗೆ ಪೂರ್ವಾನುಮತಿಯನ್ನು ಪಡೆಯುವುದು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ನೋಡಿಕೊಳ್ಳುವುದು.ಏನಾದರೂ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಪಟ್ಟ ಆಯೋಜಕರ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.
ಹೊಸ ವರ್ಷಾವರಣೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮಧ್ಯಪಾನ ವಾಹನ ಚಲಾವಣೆ ಮಾಡಬಾರದು. ಪಾನಮತ್ತರಾಗಿ ವಾಹನ ಚಾಲನೆ ಮಾಡಿದವರ ಮೇಲೆ ಡ್ರಂಕ್ & ಡ್ರೈವ್ ಪ್ರಕರಣ ದಾಖಲಿಸಿ, ಚಾಲನಾ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು ಎಂದವರು ತಿಳಿಸಿದ್ದಾರೆ.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದಾಗಲೀ, ದ್ವಿಚಕ್ರ ವಾಹನದಲ್ಲಿ ಮೂರು ಜನ ಸವಾರಿ ಮಾಡುವುದು, ಸಾಹಸ ಪ್ರದರ್ಶನ/ವೀಲಿಂಗ್ ನಡೆಸುವುದು ನಿಷೇದಿಸಿದೆ. ಇಲಾಖಾವತಿಯಿಂದ ಚುರುಕು ಪ್ರತಿಕ್ರಯಿಸುವ ತಂಡ ಮತ್ತು ಕಾವಲು ಪಡೆಯನ್ನು ರಚಿಸಿದ್ದು, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಹೋಟೆಲ್/ಭೋಜನಗೃಹ/ಕ್ಲಬ್ಗಳಿಗೆ ಅವರುಗಳೇ ಖಾಸಗಿ ಭದ್ರತಾ ವ್ಯವಸ್ಥೆ ಏರ್ಪಡಿಸಲು ಸೂಚಿಸಿರುತ್ತೆ. ಸಿಸಿಟಿವಿ ಅಳವಡಿಸದಿದ್ದಲ್ಲಿ ಅಳವಡಿಸಲು ಸೂಚಿಸಿರುತ್ತೆ. ಹೋಟೆಲ್/ರೆಸಾರ್ಟ್/ಕ್ಲಬ್ಗಳ ಮುಖ್ಯಸ್ಥರುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವವರ ಪೂರ್ಣ ವಿವರಗಳನ್ನು ಸರಹದ್ದಿನ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಒದಗಿಸುವುದು.
ವಿವಿಧ ಸಂಘಟನೆಯವರು ವಿವಿಧ ಕಾರ್ಯಕ್ರಮಗಳ ಸಲುವಾಗಿ ಅನುಮತಿ ಪಡೆದು ಹಾಕಿರುವ ಬ್ಯಾನರ್/ಬಟ್ಟಿಂಗ್ಸ್/ಧ್ವಜಗಳ ಸುರಕ್ಷತೆಯನ್ನು ಸಂಬಂಧಪಟ್ಟವರೇ ಸುರಕ್ಷತೆಯನ್ನು ಕಾಯ್ದುಕೊಳ್ಳುವಂತೆ ಅವರು ಸೂಚಿಸಿದ್ದಾರೆ.
ಅನುಮತಿಯನ್ನು ಪಡೆಯದೇ ಬ್ಯಾನರ್/ಬಂಟ್ಟಿಂಗ್ಸ್/ಧ್ವಜಗಳನ್ನು ಹಾಕಿದ್ದೆ ಆದಲ್ಲಿ ಅಂತಹವರ ವಿರುದ್ದ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಆಂಪ್ಲಿಫೈಡ್ ಸೌಂಡ್ ಸಿಸ್ಟಂ ಬಳಸಿದ್ದಲ್ಲಿ ಪೂರ್ವಾನುಮತಿ ಪಡೆಯತಕ್ಕದ್ದು.
ಸೌಂಡ್ ಸಿಸ್ಟಂ ಅಳವಡಿಸಿದ್ದಲ್ಲಿ ಅಕ್ಕಪಕ್ಕದವರಿಗೆ ತೊಂದರೆಯಾಗದ ರೀತಿ ಮೇಲು ಧ್ವನಿಯಲ್ಲಿ ಬಳಕೆ ಮಾಡದೇ, ನಿಗಧಿತ ಮಿತಿಯಲ್ಲಿ ಮತ್ತು ಸಮಯದಲ್ಲಿ ಮುಗಿಸುವುದು. ವಿದೇಶಿಯರು ಹೋಟೆಲ್/ರೆಸಾರ್ಟ್/ಹೋಮ್ಸ್ಟೇ ಹಾಗೂ ಇತರೆ ತಂಗುದಾಣಗಳಲ್ಲಿ ವಾಸವಿದ್ದಲ್ಲಿ ಸುರಕ್ಷತೆಗಾಗಿ ಭದ್ರತೆ ಒದಗಿಸುವುದು.
ಹೊಸ ವರ್ಷದ
ಸಂಭ್ರಮಾಚರಣೆಯಲ್ಲಿರುವವರು ಸಾರ್ವಜನಿಕ ಅಸ್ಥಿಪಾಸ್ಥಿಗೆ ಹಾನಿ ಉಂಟು ಮಾಡದಂತೆ ಆಚರಣೆ ಮಾಡುವುದು. ಹೊಸವರ್ಷದ ಆಚರಣೆಯ ಸಮಾರಂಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗಿದ್ದಲ್ಲಿ ಆಯೋಜಕರೆ ಜವಬ್ದಾರರಾಗಿರುತ್ತೀರಿ ಎಂದವರು ಎಚ್ಚರಿಸಿದ್ದಾರೆ.
ಹೊಸವರ್ಷದ ಶುಭಾಶಯ ಕೋರುವ ನೆಪದಲ್ಲಿ ರಸ್ತೆಯ ಮೇಲೆ ಮನಬಂದಂತೆ ಓಡಾಡುವುದನ್ನು ಕಡ್ಡಾಯವಾಗಿ ನಿಷೇದಿಸಿದೆ. ಸಮಾರಂಭದಲ್ಲಿ ಅವಹೇಳನ ರೀತಿಯಲ್ಲಿ ನಡೆದುಕೊಳ್ಳುವುದು / ಜೂಜಾಟಗಳನ್ನು/ಕಾನೂನು ಬಾಹಿರ ಚಟುವಟಿಕೆಗಳನ್ನು ನಿಷೇದಿಸಿದೆ. ಯುವಕರು ಮತ್ತು ವಯಸ್ಕರು ರಸ್ತೆಯಲ್ಲಿ ಹೊಸವರ್ಷ ಆಚರಣೆಯ ಕಾರಣದಿಂದ ದುರ್ವರ್ತನೆ ತೋರಬಾರದು.
ಅಬಕಾರಿ ಕಾಯ್ದೆ ಅಡಿಯಲ್ಲಿ ಪರವಾನಗಿ ಅನ್ವಯ ಮಧ್ಯ ಮಾರಾಟ ವೇಳೆಯನ್ನು ಅನುಸರಿಸುವುದು. ರಸ್ತೆಯಲ್ಲಿ ಮದ್ಯಪಾನ ಮಾಡುವುದನ್ನು ನಿಷೇಧಿಸಿದೆ. ಮಹಿಳೆಯರು/ಹೆಣ್ಣು ಮಕ್ಕಳೊಂದಿಗೆ ಸಭ್ಯತೆಯಿಂದ ವರ್ತಿಸುವುದು ಮತ್ತು ಆಯೋಜಿತ ಕಾರ್ಯಕ್ರಮಗಳಲ್ಲಿ ಸ್ಥಳದಲ್ಲಿ ಮಹಿಳೆಯವರಿಗೆ ಆಸನದ ಪ್ರತ್ಯೇಕ ವ್ಯವಸ್ಥೆ ಮಾಡುವುದು. ಇತರರಿಗೆ ತೊಂದರೆಯಾಗುವ ರೀತಿ ಪಟಾಕಿ ಸುಡುವುದನ್ನು ನಿಷೇಧಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಹೊಸವರ್ಷದ ಸಮಾರಂಭ ನಡೆಸಿದಲ್ಲಿ ವೀಡಿಯೋ ಚಿತ್ರೀಕರಿಸುವುದು. ಕರ್ತವ್ಯ ನಿರತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಸಹಕರಿಸುವುದು. ಹೋಟೆಲ್/ರೆಸಾರ್ಟ್/ಕ್ಲಬ್ಗಳ ಸುತ್ತಲು ವಿದ್ಯುತ್ ದೀಪದ ವ್ಯವಸ್ಥೆ ಅಳವಡಿಸುವುದು. ಹೊಸ ವರ್ಷ ಅಚರಣೆಯು ಸಾರ್ವಜನಿಕರಿಗೆ ತೊಂದರೆಯಾಗದಂತೆ ಆಚರಿಸುವುದು.
ಯಾವುದೇ ಸಮಸ್ಯೆ ಉಂಟಾದಲ್ಲಿ ಕೂಡಲೇ ಸರಹದ್ದಿನ ಪೊಲೀಸ್ ಠಾಣೆಗೆ ಮತ್ತು ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಮಾಹಿತಿ ನೀಡತಕ್ಕದ್ದು ಎಂದವರು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಂಟ್ರೋಲ್ ರೂಂ – 08182 261413, ದೂ 08182 270521. ಡಿಎಸ್ಪಿ ಶಿವಮೊಗ್ಗ – ಮೊ 9480803321, ದೂ 08182-261404, ವೃತ್ತ ನಿರೀಕ್ಷಕರು ಕೋಟೆ ವೃತ್ತ – ಮೊ 9480803331, ದೂ 08182-261408, ವೃತ್ತ ನಿರೀಕ್ಷಕರು ದೊಡ್ಡಪೇಟೆ ವೃತ್ತ – ಮೊ. 9480803330, ದೂ 08182261406.
ಡಿಎಸ್ಪಿ ಕಛೇರಿ ಭದ್ರಾವತಿ – ಮೊ 9480803320, ದೂ 08282 274252, ವೃತ್ತ ನಿರೀಕ್ಷಕರು, ಭದ್ರಾವತಿ ನಗರ ವೃತ್ತ – ಮೊ 9480803334, ದೂ 08182-266549, ವೃತ್ತ ನಿರೀಕ್ಷಕರು, ಭದ್ರಾವತಿ ಗ್ರಾಮಾಂತರ ವೃತ್ತ – ಮೊ. 9480803335, ದೂ 08182-272333, ಡಿಎಸ್ಪಿ ತೀರ್ಥಹಳ್ಳಿ – ಮೊ : 9480803340.
ದೂ 08181 220388, ವೃತ್ತ ನಿರೀಕ್ಷಕರು, ತೀರ್ಥಹಳ್ಳಿ – ಮೊ. 9480803333, ದೂ 08181-228310, ವೃತ್ತ ನಿರೀಕ್ಷಕರು, ಹೊಸನಗರ – ಮೊ : 9480803337, ದೂ 08185 221544., ಎ.ಎಸ್.ಪಿ. ಸಾಗರ – ಮೊ : 9480803322, ದೂ : 08183 226082, ಪೊಲೀಸ್ ಇನ್ಸ್ಪೆಕ್ಟರ್, ಸಾಗರ ಟೌನ್ ಠಾಣೆ . ಮೊ. 9480803336.
ದೂ. 081832 26067, ವೃತ್ತ ನಿರೀಕ್ಷಕರು, ಸಾಗರ ಗ್ರಾಮಾಂತರ, ಮೊ. 9480803360, ದೂ. 08183-226194, ಎಎಸ್ಪಿ ಶಿಕಾರಿಪುರ – ಮೊ : 9480803323, ದೂ 08187 222442., ವೃತ್ತ ನಿರೀಕ್ಷಕರು, ಶಿಕಾರಿಪುರ – ಮೊ. 9480803338, ದೂ. 08187 222430, ವೃತ್ತ ನಿರೀಕ್ಷಕರು ಸೊರಬ – ಮೊ : 9480803339, ದೂ. 08184 272122. ಇವರನ್ನು ಸಂಪರ್ಕಿಸಬಹುದಾಗಿದೆ.
ಒಟ್ಟಾರೆ ಹೊಸ ವರ್ಷ ಆಚರಣೆಯನ್ನು ಶಾಂತ ರೀತಿಯಾಗಿ ನೆರವೇರುವ ಸಲುವಾಗಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಯೋಗ್ಯವಾದ ರೀತಿಯಲ್ಲಿ ಬಂದೋಬಸ್ತ್ ನಿಯೋಜಿಸಿಕೊಂಡಿದೆ.
2020ನೇ ಹೊಸ ವರ್ಷ ಎಲ್ಲರ ಬಾಳಲಿ ನೆಮ್ಮದಿಯನ್ನು ಹಾಗೂ ಸುಖ ಶಾಂತಿಯನ್ನು ತರಲಿ ಎಂದು ಶಿವಮೊಗ್ಗ ಪೊಲೀಸ್ ಇಲಾಖೆ ಹಾರೈಸುತ್ತದೆ ಎಂದು ಪೊಲೀಸ್ ಅಧೀಕ್ಷಕರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ5 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ5 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ5 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ4 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ5 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ5 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ5 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ
-
ದಿನದ ಸುದ್ದಿ5 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್



