Connect with us

ದಿನದ ಸುದ್ದಿ

ಹೊಸ ವರ್ಷಾಚರಣೆ ಸಾರ್ವಜನಿಕರು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮ

Published

on

ಸುದ್ದಿದಿನ,ಶಿವಮೊಗ್ಗ : ಪೊಲೀಸ್ ಇಲಾಖೆಯು 2020 ನೇ ಹೊಸ ವರ್ಷ ಸಂಭ್ರಮಾಚರಣೆ ಸಂಬಂಧ ಡಿಸೆಂಬರ್ 31ರ ರಾತ್ರಿ ಜಿಲ್ಲಾಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರು ನಡೆದುಕೊಂಡು ಹೊಸ ವರ್ಷಾಚರಣೆಯು ಯಶಸ್ವಿಯಾಗಿ ಮತ್ತು ಶಾಂತ ರೀತಿಯಿಂದ ಆಚರಿಸುವ ಸಂಬಂಧ ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಚಿಸಿದ್ದಾರೆ.

ನಗರಗಳ ಮತ್ತು ತಾಲ್ಲೂಕು ಕೇಂದ್ರಗಳಲ್ಲಿನ ಎಲ್ಲಾ ಹೋಟೆಲ್‍ಗಳು, ಭೋಜನ ಗೃಹ, ಕ್ಲಬ್‍ಗಳು, ಆಶ್ರಯ ಸ್ಥಾನಗಳು, ಮತ್ತು ಸಂಘಗಳು, ಹಮ್ಮಿಕೊಂಡಿರುವ ಔತಣಕೂಟ/ಸಮಾರಂಭಗಳನ್ನು ಡಿಸೆಂಬರ್ 31ರ ರಾತ್ರಿ ನಿಗಧಿತ ಸಮಯದೊಳಗೆ ಮುಕ್ತಾಯಗೊಳಿಸುವುದು.

ಹೊಸ ವರ್ಷದ ಔತಣಕೂಟ/ಸಮಾರಂಭಗಳನ್ನು ನಡೆಸುವ ಬಗ್ಗೆ ಪೂರ್ವಾನುಮತಿಯನ್ನು ಪಡೆಯುವುದು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ನೋಡಿಕೊಳ್ಳುವುದು.ಏನಾದರೂ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಪಟ್ಟ ಆಯೋಜಕರ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.

ಹೊಸ ವರ್ಷಾವರಣೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮಧ್ಯಪಾನ ವಾಹನ ಚಲಾವಣೆ ಮಾಡಬಾರದು. ಪಾನಮತ್ತರಾಗಿ ವಾಹನ ಚಾಲನೆ ಮಾಡಿದವರ ಮೇಲೆ ಡ್ರಂಕ್ & ಡ್ರೈವ್ ಪ್ರಕರಣ ದಾಖಲಿಸಿ, ಚಾಲನಾ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು ಎಂದವರು ತಿಳಿಸಿದ್ದಾರೆ.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದಾಗಲೀ, ದ್ವಿಚಕ್ರ ವಾಹನದಲ್ಲಿ ಮೂರು ಜನ ಸವಾರಿ ಮಾಡುವುದು, ಸಾಹಸ ಪ್ರದರ್ಶನ/ವೀಲಿಂಗ್ ನಡೆಸುವುದು ನಿಷೇದಿಸಿದೆ. ಇಲಾಖಾವತಿಯಿಂದ ಚುರುಕು ಪ್ರತಿಕ್ರಯಿಸುವ ತಂಡ ಮತ್ತು ಕಾವಲು ಪಡೆಯನ್ನು ರಚಿಸಿದ್ದು, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಹೋಟೆಲ್/ಭೋಜನಗೃಹ/ಕ್ಲಬ್‍ಗಳಿಗೆ ಅವರುಗಳೇ ಖಾಸಗಿ ಭದ್ರತಾ ವ್ಯವಸ್ಥೆ ಏರ್ಪಡಿಸಲು ಸೂಚಿಸಿರುತ್ತೆ. ಸಿಸಿಟಿವಿ ಅಳವಡಿಸದಿದ್ದಲ್ಲಿ ಅಳವಡಿಸಲು ಸೂಚಿಸಿರುತ್ತೆ. ಹೋಟೆಲ್/ರೆಸಾರ್ಟ್/ಕ್ಲಬ್‍ಗಳ ಮುಖ್ಯಸ್ಥರುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವವರ ಪೂರ್ಣ ವಿವರಗಳನ್ನು ಸರಹದ್ದಿನ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಒದಗಿಸುವುದು.

ವಿವಿಧ ಸಂಘಟನೆಯವರು ವಿವಿಧ ಕಾರ್ಯಕ್ರಮಗಳ ಸಲುವಾಗಿ ಅನುಮತಿ ಪಡೆದು ಹಾಕಿರುವ ಬ್ಯಾನರ್/ಬಟ್ಟಿಂಗ್ಸ್/ಧ್ವಜಗಳ ಸುರಕ್ಷತೆಯನ್ನು ಸಂಬಂಧಪಟ್ಟವರೇ ಸುರಕ್ಷತೆಯನ್ನು ಕಾಯ್ದುಕೊಳ್ಳುವಂತೆ ಅವರು ಸೂಚಿಸಿದ್ದಾರೆ.

ಅನುಮತಿಯನ್ನು ಪಡೆಯದೇ ಬ್ಯಾನರ್/ಬಂಟ್ಟಿಂಗ್ಸ್/ಧ್ವಜಗಳನ್ನು ಹಾಕಿದ್ದೆ ಆದಲ್ಲಿ ಅಂತಹವರ ವಿರುದ್ದ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಆಂಪ್ಲಿಫೈಡ್ ಸೌಂಡ್ ಸಿಸ್ಟಂ ಬಳಸಿದ್ದಲ್ಲಿ ಪೂರ್ವಾನುಮತಿ ಪಡೆಯತಕ್ಕದ್ದು.

ಸೌಂಡ್ ಸಿಸ್ಟಂ ಅಳವಡಿಸಿದ್ದಲ್ಲಿ ಅಕ್ಕಪಕ್ಕದವರಿಗೆ ತೊಂದರೆಯಾಗದ ರೀತಿ ಮೇಲು ಧ್ವನಿಯಲ್ಲಿ ಬಳಕೆ ಮಾಡದೇ, ನಿಗಧಿತ ಮಿತಿಯಲ್ಲಿ ಮತ್ತು ಸಮಯದಲ್ಲಿ ಮುಗಿಸುವುದು. ವಿದೇಶಿಯರು ಹೋಟೆಲ್/ರೆಸಾರ್ಟ್/ಹೋಮ್‍ಸ್ಟೇ ಹಾಗೂ ಇತರೆ ತಂಗುದಾಣಗಳಲ್ಲಿ ವಾಸವಿದ್ದಲ್ಲಿ ಸುರಕ್ಷತೆಗಾಗಿ ಭದ್ರತೆ ಒದಗಿಸುವುದು.

ಹೊಸ ವರ್ಷದ
ಸಂಭ್ರಮಾಚರಣೆಯಲ್ಲಿರುವವರು ಸಾರ್ವಜನಿಕ ಅಸ್ಥಿಪಾಸ್ಥಿಗೆ ಹಾನಿ ಉಂಟು ಮಾಡದಂತೆ ಆಚರಣೆ ಮಾಡುವುದು. ಹೊಸವರ್ಷದ ಆಚರಣೆಯ ಸಮಾರಂಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗಿದ್ದಲ್ಲಿ ಆಯೋಜಕರೆ ಜವಬ್ದಾರರಾಗಿರುತ್ತೀರಿ ಎಂದವರು ಎಚ್ಚರಿಸಿದ್ದಾರೆ.

ಹೊಸವರ್ಷದ ಶುಭಾಶಯ ಕೋರುವ ನೆಪದಲ್ಲಿ ರಸ್ತೆಯ ಮೇಲೆ ಮನಬಂದಂತೆ ಓಡಾಡುವುದನ್ನು ಕಡ್ಡಾಯವಾಗಿ ನಿಷೇದಿಸಿದೆ. ಸಮಾರಂಭದಲ್ಲಿ ಅವಹೇಳನ ರೀತಿಯಲ್ಲಿ ನಡೆದುಕೊಳ್ಳುವುದು / ಜೂಜಾಟಗಳನ್ನು/ಕಾನೂನು ಬಾಹಿರ ಚಟುವಟಿಕೆಗಳನ್ನು ನಿಷೇದಿಸಿದೆ. ಯುವಕರು ಮತ್ತು ವಯಸ್ಕರು ರಸ್ತೆಯಲ್ಲಿ ಹೊಸವರ್ಷ ಆಚರಣೆಯ ಕಾರಣದಿಂದ ದುರ್ವರ್ತನೆ ತೋರಬಾರದು.

ಅಬಕಾರಿ ಕಾಯ್ದೆ ಅಡಿಯಲ್ಲಿ ಪರವಾನಗಿ ಅನ್ವಯ ಮಧ್ಯ ಮಾರಾಟ ವೇಳೆಯನ್ನು ಅನುಸರಿಸುವುದು. ರಸ್ತೆಯಲ್ಲಿ ಮದ್ಯಪಾನ ಮಾಡುವುದನ್ನು ನಿಷೇಧಿಸಿದೆ. ಮಹಿಳೆಯರು/ಹೆಣ್ಣು ಮಕ್ಕಳೊಂದಿಗೆ ಸಭ್ಯತೆಯಿಂದ ವರ್ತಿಸುವುದು ಮತ್ತು ಆಯೋಜಿತ ಕಾರ್ಯಕ್ರಮಗಳಲ್ಲಿ ಸ್ಥಳದಲ್ಲಿ ಮಹಿಳೆಯವರಿಗೆ ಆಸನದ ಪ್ರತ್ಯೇಕ ವ್ಯವಸ್ಥೆ ಮಾಡುವುದು. ಇತರರಿಗೆ ತೊಂದರೆಯಾಗುವ ರೀತಿ ಪಟಾಕಿ ಸುಡುವುದನ್ನು ನಿಷೇಧಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಹೊಸವರ್ಷದ ಸಮಾರಂಭ ನಡೆಸಿದಲ್ಲಿ ವೀಡಿಯೋ ಚಿತ್ರೀಕರಿಸುವುದು. ಕರ್ತವ್ಯ ನಿರತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಸಹಕರಿಸುವುದು. ಹೋಟೆಲ್/ರೆಸಾರ್ಟ್/ಕ್ಲಬ್‍ಗಳ ಸುತ್ತಲು ವಿದ್ಯುತ್ ದೀಪದ ವ್ಯವಸ್ಥೆ ಅಳವಡಿಸುವುದು. ಹೊಸ ವರ್ಷ ಅಚರಣೆಯು ಸಾರ್ವಜನಿಕರಿಗೆ ತೊಂದರೆಯಾಗದಂತೆ ಆಚರಿಸುವುದು.

ಯಾವುದೇ ಸಮಸ್ಯೆ ಉಂಟಾದಲ್ಲಿ ಕೂಡಲೇ ಸರಹದ್ದಿನ ಪೊಲೀಸ್ ಠಾಣೆಗೆ ಮತ್ತು ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಮಾಹಿತಿ ನೀಡತಕ್ಕದ್ದು ಎಂದವರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಂಟ್ರೋಲ್ ರೂಂ – 08182 261413, ದೂ 08182 270521. ಡಿಎಸ್‍ಪಿ ಶಿವಮೊಗ್ಗ – ಮೊ 9480803321, ದೂ 08182-261404, ವೃತ್ತ ನಿರೀಕ್ಷಕರು ಕೋಟೆ ವೃತ್ತ – ಮೊ 9480803331, ದೂ 08182-261408, ವೃತ್ತ ನಿರೀಕ್ಷಕರು ದೊಡ್ಡಪೇಟೆ ವೃತ್ತ – ಮೊ. 9480803330, ದೂ 08182261406.

ಡಿಎಸ್‍ಪಿ ಕಛೇರಿ ಭದ್ರಾವತಿ – ಮೊ 9480803320, ದೂ 08282 274252, ವೃತ್ತ ನಿರೀಕ್ಷಕರು, ಭದ್ರಾವತಿ ನಗರ ವೃತ್ತ – ಮೊ 9480803334, ದೂ 08182-266549, ವೃತ್ತ ನಿರೀಕ್ಷಕರು, ಭದ್ರಾವತಿ ಗ್ರಾಮಾಂತರ ವೃತ್ತ – ಮೊ. 9480803335, ದೂ 08182-272333, ಡಿಎಸ್‍ಪಿ ತೀರ್ಥಹಳ್ಳಿ – ಮೊ : 9480803340.

ದೂ 08181 220388, ವೃತ್ತ ನಿರೀಕ್ಷಕರು, ತೀರ್ಥಹಳ್ಳಿ – ಮೊ. 9480803333, ದೂ 08181-228310, ವೃತ್ತ ನಿರೀಕ್ಷಕರು, ಹೊಸನಗರ – ಮೊ : 9480803337, ದೂ 08185 221544., ಎ.ಎಸ್.ಪಿ. ಸಾಗರ – ಮೊ : 9480803322, ದೂ : 08183 226082, ಪೊಲೀಸ್ ಇನ್ಸ್‍ಪೆಕ್ಟರ್, ಸಾಗರ ಟೌನ್ ಠಾಣೆ . ಮೊ. 9480803336.

ದೂ. 081832 26067, ವೃತ್ತ ನಿರೀಕ್ಷಕರು, ಸಾಗರ ಗ್ರಾಮಾಂತರ, ಮೊ. 9480803360, ದೂ. 08183-226194, ಎಎಸ್‍ಪಿ ಶಿಕಾರಿಪುರ – ಮೊ : 9480803323, ದೂ 08187 222442., ವೃತ್ತ ನಿರೀಕ್ಷಕರು, ಶಿಕಾರಿಪುರ – ಮೊ. 9480803338, ದೂ. 08187 222430, ವೃತ್ತ ನಿರೀಕ್ಷಕರು ಸೊರಬ – ಮೊ : 9480803339, ದೂ. 08184 272122. ಇವರನ್ನು ಸಂಪರ್ಕಿಸಬಹುದಾಗಿದೆ.

ಒಟ್ಟಾರೆ ಹೊಸ ವರ್ಷ ಆಚರಣೆಯನ್ನು ಶಾಂತ ರೀತಿಯಾಗಿ ನೆರವೇರುವ ಸಲುವಾಗಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಯೋಗ್ಯವಾದ ರೀತಿಯಲ್ಲಿ ಬಂದೋಬಸ್ತ್ ನಿಯೋಜಿಸಿಕೊಂಡಿದೆ.

2020ನೇ ಹೊಸ ವರ್ಷ ಎಲ್ಲರ ಬಾಳಲಿ ನೆಮ್ಮದಿಯನ್ನು ಹಾಗೂ ಸುಖ ಶಾಂತಿಯನ್ನು ತರಲಿ ಎಂದು ಶಿವಮೊಗ್ಗ ಪೊಲೀಸ್ ಇಲಾಖೆ ಹಾರೈಸುತ್ತದೆ ಎಂದು ಪೊಲೀಸ್ ಅಧೀಕ್ಷಕರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

Published

on

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ‌ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.

ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ‌ಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.

ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.

ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

Published

on

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.

ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾ‌ನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾ‌ನ‌ ಪೀಠಿಕೆಯನ್ನು ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾ‌ನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.

ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

Published

on

  • ಪುರಂದರ್ ಲೋಕಿಕೆರೆ

ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.

ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.

100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.

ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.

ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.

ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.

ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending