ದಿನದ ಸುದ್ದಿ
ಹೊಸ ವರ್ಷಾಚರಣೆ ಸಾರ್ವಜನಿಕರು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮ
ಸುದ್ದಿದಿನ,ಶಿವಮೊಗ್ಗ : ಪೊಲೀಸ್ ಇಲಾಖೆಯು 2020 ನೇ ಹೊಸ ವರ್ಷ ಸಂಭ್ರಮಾಚರಣೆ ಸಂಬಂಧ ಡಿಸೆಂಬರ್ 31ರ ರಾತ್ರಿ ಜಿಲ್ಲಾಯಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರು ನಡೆದುಕೊಂಡು ಹೊಸ ವರ್ಷಾಚರಣೆಯು ಯಶಸ್ವಿಯಾಗಿ ಮತ್ತು ಶಾಂತ ರೀತಿಯಿಂದ ಆಚರಿಸುವ ಸಂಬಂಧ ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಪಾಲಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಚಿಸಿದ್ದಾರೆ.
ನಗರಗಳ ಮತ್ತು ತಾಲ್ಲೂಕು ಕೇಂದ್ರಗಳಲ್ಲಿನ ಎಲ್ಲಾ ಹೋಟೆಲ್ಗಳು, ಭೋಜನ ಗೃಹ, ಕ್ಲಬ್ಗಳು, ಆಶ್ರಯ ಸ್ಥಾನಗಳು, ಮತ್ತು ಸಂಘಗಳು, ಹಮ್ಮಿಕೊಂಡಿರುವ ಔತಣಕೂಟ/ಸಮಾರಂಭಗಳನ್ನು ಡಿಸೆಂಬರ್ 31ರ ರಾತ್ರಿ ನಿಗಧಿತ ಸಮಯದೊಳಗೆ ಮುಕ್ತಾಯಗೊಳಿಸುವುದು.
ಹೊಸ ವರ್ಷದ ಔತಣಕೂಟ/ಸಮಾರಂಭಗಳನ್ನು ನಡೆಸುವ ಬಗ್ಗೆ ಪೂರ್ವಾನುಮತಿಯನ್ನು ಪಡೆಯುವುದು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಯೋಜಕರು ನೋಡಿಕೊಳ್ಳುವುದು.ಏನಾದರೂ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಪಟ್ಟ ಆಯೋಜಕರ ಮೇಲೆ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು.
ಹೊಸ ವರ್ಷಾವರಣೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಮಧ್ಯಪಾನ ವಾಹನ ಚಲಾವಣೆ ಮಾಡಬಾರದು. ಪಾನಮತ್ತರಾಗಿ ವಾಹನ ಚಾಲನೆ ಮಾಡಿದವರ ಮೇಲೆ ಡ್ರಂಕ್ & ಡ್ರೈವ್ ಪ್ರಕರಣ ದಾಖಲಿಸಿ, ಚಾಲನಾ ಪರವಾನಿಗೆಯನ್ನು ರದ್ದುಗೊಳಿಸಲಾಗುವುದು ಎಂದವರು ತಿಳಿಸಿದ್ದಾರೆ.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದಾಗಲೀ, ದ್ವಿಚಕ್ರ ವಾಹನದಲ್ಲಿ ಮೂರು ಜನ ಸವಾರಿ ಮಾಡುವುದು, ಸಾಹಸ ಪ್ರದರ್ಶನ/ವೀಲಿಂಗ್ ನಡೆಸುವುದು ನಿಷೇದಿಸಿದೆ. ಇಲಾಖಾವತಿಯಿಂದ ಚುರುಕು ಪ್ರತಿಕ್ರಯಿಸುವ ತಂಡ ಮತ್ತು ಕಾವಲು ಪಡೆಯನ್ನು ರಚಿಸಿದ್ದು, ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ಹೋಟೆಲ್/ಭೋಜನಗೃಹ/ಕ್ಲಬ್ಗಳಿಗೆ ಅವರುಗಳೇ ಖಾಸಗಿ ಭದ್ರತಾ ವ್ಯವಸ್ಥೆ ಏರ್ಪಡಿಸಲು ಸೂಚಿಸಿರುತ್ತೆ. ಸಿಸಿಟಿವಿ ಅಳವಡಿಸದಿದ್ದಲ್ಲಿ ಅಳವಡಿಸಲು ಸೂಚಿಸಿರುತ್ತೆ. ಹೋಟೆಲ್/ರೆಸಾರ್ಟ್/ಕ್ಲಬ್ಗಳ ಮುಖ್ಯಸ್ಥರುಗಳು ಕಾರ್ಯಕ್ರಮದಲ್ಲಿ ಭಾಗವಹಿಸುವವರ ಪೂರ್ಣ ವಿವರಗಳನ್ನು ಸರಹದ್ದಿನ ಪೊಲೀಸ್ ಠಾಣಾ ಅಧಿಕಾರಿಗಳಿಗೆ ಒದಗಿಸುವುದು.
ವಿವಿಧ ಸಂಘಟನೆಯವರು ವಿವಿಧ ಕಾರ್ಯಕ್ರಮಗಳ ಸಲುವಾಗಿ ಅನುಮತಿ ಪಡೆದು ಹಾಕಿರುವ ಬ್ಯಾನರ್/ಬಟ್ಟಿಂಗ್ಸ್/ಧ್ವಜಗಳ ಸುರಕ್ಷತೆಯನ್ನು ಸಂಬಂಧಪಟ್ಟವರೇ ಸುರಕ್ಷತೆಯನ್ನು ಕಾಯ್ದುಕೊಳ್ಳುವಂತೆ ಅವರು ಸೂಚಿಸಿದ್ದಾರೆ.
ಅನುಮತಿಯನ್ನು ಪಡೆಯದೇ ಬ್ಯಾನರ್/ಬಂಟ್ಟಿಂಗ್ಸ್/ಧ್ವಜಗಳನ್ನು ಹಾಕಿದ್ದೆ ಆದಲ್ಲಿ ಅಂತಹವರ ವಿರುದ್ದ ಕಾನೂನು ರೀತ್ಯ ಕ್ರಮ ಜರುಗಿಸಲಾಗುವುದು. ಆಂಪ್ಲಿಫೈಡ್ ಸೌಂಡ್ ಸಿಸ್ಟಂ ಬಳಸಿದ್ದಲ್ಲಿ ಪೂರ್ವಾನುಮತಿ ಪಡೆಯತಕ್ಕದ್ದು.
ಸೌಂಡ್ ಸಿಸ್ಟಂ ಅಳವಡಿಸಿದ್ದಲ್ಲಿ ಅಕ್ಕಪಕ್ಕದವರಿಗೆ ತೊಂದರೆಯಾಗದ ರೀತಿ ಮೇಲು ಧ್ವನಿಯಲ್ಲಿ ಬಳಕೆ ಮಾಡದೇ, ನಿಗಧಿತ ಮಿತಿಯಲ್ಲಿ ಮತ್ತು ಸಮಯದಲ್ಲಿ ಮುಗಿಸುವುದು. ವಿದೇಶಿಯರು ಹೋಟೆಲ್/ರೆಸಾರ್ಟ್/ಹೋಮ್ಸ್ಟೇ ಹಾಗೂ ಇತರೆ ತಂಗುದಾಣಗಳಲ್ಲಿ ವಾಸವಿದ್ದಲ್ಲಿ ಸುರಕ್ಷತೆಗಾಗಿ ಭದ್ರತೆ ಒದಗಿಸುವುದು.
ಹೊಸ ವರ್ಷದ
ಸಂಭ್ರಮಾಚರಣೆಯಲ್ಲಿರುವವರು ಸಾರ್ವಜನಿಕ ಅಸ್ಥಿಪಾಸ್ಥಿಗೆ ಹಾನಿ ಉಂಟು ಮಾಡದಂತೆ ಆಚರಣೆ ಮಾಡುವುದು. ಹೊಸವರ್ಷದ ಆಚರಣೆಯ ಸಮಾರಂಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗಿದ್ದಲ್ಲಿ ಆಯೋಜಕರೆ ಜವಬ್ದಾರರಾಗಿರುತ್ತೀರಿ ಎಂದವರು ಎಚ್ಚರಿಸಿದ್ದಾರೆ.
ಹೊಸವರ್ಷದ ಶುಭಾಶಯ ಕೋರುವ ನೆಪದಲ್ಲಿ ರಸ್ತೆಯ ಮೇಲೆ ಮನಬಂದಂತೆ ಓಡಾಡುವುದನ್ನು ಕಡ್ಡಾಯವಾಗಿ ನಿಷೇದಿಸಿದೆ. ಸಮಾರಂಭದಲ್ಲಿ ಅವಹೇಳನ ರೀತಿಯಲ್ಲಿ ನಡೆದುಕೊಳ್ಳುವುದು / ಜೂಜಾಟಗಳನ್ನು/ಕಾನೂನು ಬಾಹಿರ ಚಟುವಟಿಕೆಗಳನ್ನು ನಿಷೇದಿಸಿದೆ. ಯುವಕರು ಮತ್ತು ವಯಸ್ಕರು ರಸ್ತೆಯಲ್ಲಿ ಹೊಸವರ್ಷ ಆಚರಣೆಯ ಕಾರಣದಿಂದ ದುರ್ವರ್ತನೆ ತೋರಬಾರದು.
ಅಬಕಾರಿ ಕಾಯ್ದೆ ಅಡಿಯಲ್ಲಿ ಪರವಾನಗಿ ಅನ್ವಯ ಮಧ್ಯ ಮಾರಾಟ ವೇಳೆಯನ್ನು ಅನುಸರಿಸುವುದು. ರಸ್ತೆಯಲ್ಲಿ ಮದ್ಯಪಾನ ಮಾಡುವುದನ್ನು ನಿಷೇಧಿಸಿದೆ. ಮಹಿಳೆಯರು/ಹೆಣ್ಣು ಮಕ್ಕಳೊಂದಿಗೆ ಸಭ್ಯತೆಯಿಂದ ವರ್ತಿಸುವುದು ಮತ್ತು ಆಯೋಜಿತ ಕಾರ್ಯಕ್ರಮಗಳಲ್ಲಿ ಸ್ಥಳದಲ್ಲಿ ಮಹಿಳೆಯವರಿಗೆ ಆಸನದ ಪ್ರತ್ಯೇಕ ವ್ಯವಸ್ಥೆ ಮಾಡುವುದು. ಇತರರಿಗೆ ತೊಂದರೆಯಾಗುವ ರೀತಿ ಪಟಾಕಿ ಸುಡುವುದನ್ನು ನಿಷೇಧಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಹೊಸವರ್ಷದ ಸಮಾರಂಭ ನಡೆಸಿದಲ್ಲಿ ವೀಡಿಯೋ ಚಿತ್ರೀಕರಿಸುವುದು. ಕರ್ತವ್ಯ ನಿರತ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ಸಹಕರಿಸುವುದು. ಹೋಟೆಲ್/ರೆಸಾರ್ಟ್/ಕ್ಲಬ್ಗಳ ಸುತ್ತಲು ವಿದ್ಯುತ್ ದೀಪದ ವ್ಯವಸ್ಥೆ ಅಳವಡಿಸುವುದು. ಹೊಸ ವರ್ಷ ಅಚರಣೆಯು ಸಾರ್ವಜನಿಕರಿಗೆ ತೊಂದರೆಯಾಗದಂತೆ ಆಚರಿಸುವುದು.
ಯಾವುದೇ ಸಮಸ್ಯೆ ಉಂಟಾದಲ್ಲಿ ಕೂಡಲೇ ಸರಹದ್ದಿನ ಪೊಲೀಸ್ ಠಾಣೆಗೆ ಮತ್ತು ಈ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಮಾಹಿತಿ ನೀಡತಕ್ಕದ್ದು ಎಂದವರು ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲಾ ಕಂಟ್ರೋಲ್ ರೂಂ – 08182 261413, ದೂ 08182 270521. ಡಿಎಸ್ಪಿ ಶಿವಮೊಗ್ಗ – ಮೊ 9480803321, ದೂ 08182-261404, ವೃತ್ತ ನಿರೀಕ್ಷಕರು ಕೋಟೆ ವೃತ್ತ – ಮೊ 9480803331, ದೂ 08182-261408, ವೃತ್ತ ನಿರೀಕ್ಷಕರು ದೊಡ್ಡಪೇಟೆ ವೃತ್ತ – ಮೊ. 9480803330, ದೂ 08182261406.
ಡಿಎಸ್ಪಿ ಕಛೇರಿ ಭದ್ರಾವತಿ – ಮೊ 9480803320, ದೂ 08282 274252, ವೃತ್ತ ನಿರೀಕ್ಷಕರು, ಭದ್ರಾವತಿ ನಗರ ವೃತ್ತ – ಮೊ 9480803334, ದೂ 08182-266549, ವೃತ್ತ ನಿರೀಕ್ಷಕರು, ಭದ್ರಾವತಿ ಗ್ರಾಮಾಂತರ ವೃತ್ತ – ಮೊ. 9480803335, ದೂ 08182-272333, ಡಿಎಸ್ಪಿ ತೀರ್ಥಹಳ್ಳಿ – ಮೊ : 9480803340.
ದೂ 08181 220388, ವೃತ್ತ ನಿರೀಕ್ಷಕರು, ತೀರ್ಥಹಳ್ಳಿ – ಮೊ. 9480803333, ದೂ 08181-228310, ವೃತ್ತ ನಿರೀಕ್ಷಕರು, ಹೊಸನಗರ – ಮೊ : 9480803337, ದೂ 08185 221544., ಎ.ಎಸ್.ಪಿ. ಸಾಗರ – ಮೊ : 9480803322, ದೂ : 08183 226082, ಪೊಲೀಸ್ ಇನ್ಸ್ಪೆಕ್ಟರ್, ಸಾಗರ ಟೌನ್ ಠಾಣೆ . ಮೊ. 9480803336.
ದೂ. 081832 26067, ವೃತ್ತ ನಿರೀಕ್ಷಕರು, ಸಾಗರ ಗ್ರಾಮಾಂತರ, ಮೊ. 9480803360, ದೂ. 08183-226194, ಎಎಸ್ಪಿ ಶಿಕಾರಿಪುರ – ಮೊ : 9480803323, ದೂ 08187 222442., ವೃತ್ತ ನಿರೀಕ್ಷಕರು, ಶಿಕಾರಿಪುರ – ಮೊ. 9480803338, ದೂ. 08187 222430, ವೃತ್ತ ನಿರೀಕ್ಷಕರು ಸೊರಬ – ಮೊ : 9480803339, ದೂ. 08184 272122. ಇವರನ್ನು ಸಂಪರ್ಕಿಸಬಹುದಾಗಿದೆ.
ಒಟ್ಟಾರೆ ಹೊಸ ವರ್ಷ ಆಚರಣೆಯನ್ನು ಶಾಂತ ರೀತಿಯಾಗಿ ನೆರವೇರುವ ಸಲುವಾಗಿ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಪೊಲೀಸ್ ಇಲಾಖೆ ವತಿಯಿಂದ ಎಲ್ಲಾ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಯೋಗ್ಯವಾದ ರೀತಿಯಲ್ಲಿ ಬಂದೋಬಸ್ತ್ ನಿಯೋಜಿಸಿಕೊಂಡಿದೆ.
2020ನೇ ಹೊಸ ವರ್ಷ ಎಲ್ಲರ ಬಾಳಲಿ ನೆಮ್ಮದಿಯನ್ನು ಹಾಗೂ ಸುಖ ಶಾಂತಿಯನ್ನು ತರಲಿ ಎಂದು ಶಿವಮೊಗ್ಗ ಪೊಲೀಸ್ ಇಲಾಖೆ ಹಾರೈಸುತ್ತದೆ ಎಂದು ಪೊಲೀಸ್ ಅಧೀಕ್ಷಕರು ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


