ಭಾವ ಭೈರಾಗಿ
ಕವಿತೆ | ಬದಲಾವಣೆ ಕಾಣದ ಹೊಸವರ್ಷ

ಎಷ್ಟು ವರ್ಷಗಳು ಉರುಳಿದರೇನು
ಬದಲಾಗದ ಈ ಭಾರತದಲ್ಲಿ
ಋತುಗಳು ಬದಲಾದಂತೆ
ಹೊಸ ವರ್ಷವೆಂಬ ನಾಮದಡಿಯಲ್ಲಿ
ಮತ್ತೆ ಮತ್ತೆ ಸ್ವಾಗತಿಸಿ
ಸಂಭ್ರಮಿಸುತ್ತಿದ್ದೇವೆ…
ಬದಲಾಗಿರುವುದು ಮಾತ್ರ
ಬಣ್ಣ ಬಣ್ಣದ ಮಾತುಗಳು
ಬಣ್ಣ ಬಣ್ಣದ ಪೋಷಾಕುಗಳು
ವರ್ಣಮಯ ಚಿತ್ರಗಳು
ಶತಶತಮಾನಗಳು ಜಾರಿವೆ
ಹೊಸ ವರ್ಷವೆಂಬ
ಅದೆಷ್ಟೋ ನಾಳೆಗಳಲ್ಲಿ
ಇನ್ನೂ ಜೀವಂತವಿರುವ ದಿನಗಳಲ್ಲಿ
ಬದಲಾವಣೆಯೇ ಕಾಣದ
ಧರ್ಮಗಳು
ಸಮಾನತೆಯ ಪಾಲಿಸದ
ಜಾತಿಗಳು
ಸಹಬಾಳ್ವೆಯೇ ಇಲ್ಲದ
ಸಮಾಜಗಳು
ಬೇರು ಸಹಿತ ನಶಿಸದ
ಮೂಢ ನಂಬಿಕೆಗಳು
ಮತ್ತದೇ ಹೊಸ ವರ್ಷ
ಮತ್ತದೇ ಸಂಭ್ರಮ
ಹಾಳು ಸಂಪ್ರದಾಯಗಳು ಎಂದಿನಂತೆ
ಯುಗ ಯುಗಾಂತರಗಳು ಮಾಸಿವೆ
ದಿನಕರನ ಏರಿಳಿತಗಳಲ್ಲಿ
ಹೊಸ ವರ್ಷವೆಂಬ ಹಿನ್ನಾಳೆಗಳು
ಭಾಸ್ಕರನ ಉದಯವೇ ಬೆಳಗು
ಅಸ್ತಮವೇ ಮಂದಾತ್ರಿ
ಓದಿಲ್ಲ , ಬರಹವಿಲ್ಲ, ಜ್ಞಾನವಿಲ್ಲ
ಜೀವನ ಪರ್ಯಂತ
ಜೀತದಿಂದಲೇ ಬದುಕು
ನೂತನ ವರ್ಷವೆಂಬುದು
ಆಗಸದ ಚಂದ್ರಮನಂತೆ
ಅಸಮಾನತೆ, ಜಾತಿವರ್ಣಗಳು ಸಿದ್ಧ
ಇಂದು, ಸರ್ವರೂ ಜ್ಞಾನಿಗಳು
ಪಂಡಿತರು, ಬುದ್ಧಿವಂತರು
ಆದರೂ ಜಾತಿಭೇದ, ವರ್ಣಭೇದ
ಆಹಾರ ಭೇದ, ಭಾಷೆಭೇದ
ಮತ್ತೇಕೆ ಹೊಸವರ್ಷವೆಂಬ ನಾಟಕ
ಆಚರಿಸಿ ಪಾಶ್ಚಾತ್ಯ ಸಂಸ್ಕೃತಿ
ಬದಲಾಗಲಿ ಅವರಂತೆ ಸಂತತಿ
ಬದಲಾಗಿ ತೋರಿಸಲಿ ಭಾರತ
ಹೊಸವರ್ಷಕ್ಕೆ ಸಲ್ಲಲಿ ಸಂತಸ
–ಮಹದೇವ್ ಬಿಳುಗಲಿ
9611339024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಭಾವ ಭೈರಾಗಿ
ಕವಿತೆ | ಅವಳು

- ವಾಯ್.ಜೆ.ಮಹಿಬೂಬ
ಅವಳು ಬರೀ ಅವಳಲ್ಲ..!
ದಿನ ಬೆಳಗುವ ಬೆಳಕು-!
ಅವ ಬಯಸುವ ಬದುಕು
ಅವನಿಯೊಳಗಣ ಜನನಿ
ಭಾವದೊಳಗಿನ ಬಾಗಿನ
ಭಾನಿನಗಲದ ಭಕ್ತಿ..!
ಅವನ ಬಯಕೆಯ ಶಕ್ತಿ ..!
ಅವಳು ಬರೀ ಅವಳಲ್ಲ..!
ಬಾಳಿಗಂಟಿದ ಸಮತೆ
ಹಿತವನುಣಿಸುವ ಭಕ್ತೆ
ಮಿತವ ಬಯಸುವ ಶಾಂತೆ
ಅವನು ಆರಾದಿಸುವ ದಾತೆ
ಒಲವ ಉಳಿಸುವ ಕ್ಷಮತೆ
ಬಾಳ ದಂಡೆಯ ದೃಡತೆ..!
ಅವಳು ಬರೀ ಅವಳಲ್ಲ..!
ಕೋಪಗೊಳ್ಳುವ ಕೆಂಡ
ಎಲ್ಲಾ ತಿಳಿಯುವ ಹಂಡ
ಹಠವೂ ಮಾಡುವ ದಿಂಬ
ಕಾಡಿ ಕರೆಯುವ ಬೀಗು
ಮಾವಿನೊಳಗಿನ ಮಾಗು
ಚಂದನದ ಚೆಲುವು..!
ಅವಳು ಬರೀ ಅವಳಲ್ಲ
ಬರಹದೊಳಗಿನ ಭಾವ
ದೇವರೊಳಗಿನ ತ್ಯಾಗ
ನಿತ್ಯ ಬದುಕಿಸುವ ಆಸೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಭಾವ ಭೈರಾಗಿ
ಕರುಣಾಳು ಅವನು, ಅವನು ನನ್ನವನು..!

- ಸಿಂಚನ ಜಿ. ಏನ್, ಮೈಸೂರು
ಯಾರಿಟ್ಟ ಪ್ರೀತಿಯೋ, ಏನು ಇದರ ರೀತಿಯೋ ಎಂಬ ಮಾತಿನಂತೆ ಪ್ರೀತಿಯ ರೀತಿ -ನೀತಿಗಳ ತಿಳಿಯಲು ಇಡೀ ಬದುಕು ಸಾಲುವುದಿಲ್ಲ. ಆದರೂ ನನ್ನ ಮನದಲ್ಲಿ ಮಿಂಚಿದ ಪ್ರೇಮದ ಮಿಂಚೆ ಒಂದು ರೀತಿಯ ರೋಮಾಂಚನಕಾರಿ ಮೊದ ಮೊದಲಿಗೆ ” ಕ್ರಶ್ ” ಎಂದು ನಾಮಕರಣಗೊಂಡಿದ್ದು ತದ ನಂತರ ಆ ಕ್ರಶ್ ನಾ ಅಲ್ಲಿಗೆ ಬಿಡಲಾರದೆ ಮುಂದಿನ ಪೀಠಿಕೆ ಹಾಕಿ ನನ್ನ ಮನಸ್ಸು ಮುಂದೆ ಓಡುತಿತ್ತು.
ಹೂ ಮನಸ್ಸಿನಲ್ಲಿ ಪ್ರೇಮದ ಅರಮನೆಯ ಕಟ್ಟುವ ಛಲ ನನ್ನದು ಹೀಗಿರುವಾಗ ಸುಮ್ಮನೆ ಇರಲು ಮನಸ್ಸು ಬಿಡಬೇಕಲ್ಲ ಮನಸ್ಸು ನನ್ನನ್ನು ಮೋಸಗಾತಿಯಾಗಿ ಕಾಡುವುದಿಲ್ಲವೇ? ಅಷ್ಟಕ್ಕೂ ಅವನು ನನ್ನವನು ಪ್ರೀತಿ ಮಾಡಿದರು , ಪ್ರೀತಿ ಕೊಟ್ಟರು, ಪ್ರೀತಿ ಬಯಸಿದರು ಅದಕೆಲ್ಲ ಪ್ರತಿಧ್ವನಿ ಬರುತ್ತೆ ಯಾಕೆಂದರೆ ಅವನು ನನ್ನವನು.
ಕಣ್ಣು ತೆರೆದು ಅವನನ್ನು ಕಣ್ಣು ತುಂಬಿಸಿಕೊಳ್ಳುವ ಮುನ್ನವೇ ಮನದೊಳಗೆ ಮನೆ ಮಾಡಿದ ಅವನು ನನ್ನವನು, ಪ್ರೇಮ ಲೋಕವೇ ಹಾಗೆ ಕಲ್ಪನೆಯಲ್ಲಿಯೇ ಅರ್ಧ ಜೀವನ ಕಳೆದು ಬಿಡುತ್ತೆ . ಕಲ್ಪನೆಯ ಲೋಕಕ್ಕಿಂತ ನೈಜ್ಯವಾಗಿಯೇ ನನ್ನನು ಕಾಡಿಸಿ , ಪೀಡಿಸಿ ಪ್ರೀತಿ ಕೊಟ್ಟವನು ಅವನು ನನ್ನವನು, ನನ್ನೆಲ್ಲಾ ಪುಟ್ಟ ಆಸೆ ಈಡೇರಿಸುವ ಅವನು ನನಗೆ ಉತ್ತಮ ಗೆಳೆಯನಾದ.
ನನ್ನ ತುಂಟಾಟ ಸಹಿಸುವಾಗ ತಂದೆಯಾಗಿ ಸಲಹಿದ, ಅವನೆಲ್ಲ ಕಷ್ಟಗಳನ್ನು ಕೇಳುವ ನನ್ನೊಳಗೆ ಒಬ್ಬ ಅಮ್ಮ ಇರುತ್ತಿದ್ದಳು, ಅವನೆಲ್ಲ ದುಃಖಗಳಿಗೆ ಸ್ಪಂದಿಸುವಾಗ ಅವನಿಗೆ ಇಷ್ಟ ಆಗುವ ಗೆಳತಿ ನನ್ನೊಳಗೆ ಇರುತ್ತಿದ್ದಳು ಪ್ರೇಮ ಲೋಕದ ಪಾರಿವಾಳಗಳು ನಾವು , ನಿರ್ಭಯವಾಗಿದೆ ನಮ್ಮ ಲೋಕವು ಅವನು ನನ್ನವನು , ಅವನ ಹಠಕ್ಕೆ ಅವನ ಕೋಪಕ್ಕೆ ನಾನೇ ದೊಡ್ಡ ಅಭಿಮಾನಿ.
ಅವನಂತೆ ನನಗೂ ಮುನಿಸು ಕೂಡಲೇ ನನ್ನ ಮುದ್ದು ಮಗುವಾಗಿ ಬೇಡುತ್ತಿದ್ದನು . ಕಾಳಜಿ ತೋರ್ಪಡಿಸದೆ ಮುಚ್ಚಿಡುತ್ತಿದ್ದನ್ನು ಮನದಲ್ಲಿ, ಹುಡುಕಿಸುವ ಗುಂಗಿನಲ್ಲೆ ಕಾಡಿಸುತ್ತಿದ್ದನ್ನು ಅವನು ಏನೆ ಆಗಲಿ ಅವನು ನನ್ನವನು , ನನಗಾಗಿ ಬಂದವನು , ನನಗಾಗಿಯೆ ಬದುಕುವನು ಮೌನವಾಗಿಯೇ ಕಣ್ಣ ಸನ್ನೆಯಲ್ಲಿ ನನ್ನ ಮುದ್ದಾಡಿ ಮುತ್ತು ಇಡುವವನು.
ಪ್ರೇಮ ಲೋಕದ ಬಣ್ಣ ಬಣ್ಣದ ಬದುಕು ಹೇಳಿಕೊಟ್ಟವನು ನನ್ನ ಪ್ರತಿ ಪದಗಳ ಸ್ಫೂರ್ತಿದಾರನು ಅವನು ನನ್ನವನು ಗುಡ್ ಮಾರ್ನಿಂಗ್ ಸಂದೇಶದಿಂದ ಶುರುವಾಗಿ ಹುಷಾರು ಎಂಬ ಜೋಪಾನದ ತವಕದಲ್ಲಿ ನಿದ್ರೆಗೆ ಕಳುಹಿಸುತ್ತಿದ್ದನು ದಿನಕ್ಕೆರಡು ಬಾರಿ ಆದರೂ, ಕೆರಳಿಸಿ ಜಗಳ ಮಾಡುತ್ತಿದ್ದವನು ಒಂದೆರಡು ಮಾತುಗಳ ಕೆಟ್ಟದಾಗಿ ಆಡದೆ, ಮನ ನೋಯಿಸದೆ ಜೀವನವ ಸಂತೈಸುತ್ತ ನನ್ನೊಂದಿಗೆ ಹೆಜ್ಜೆ ಇಟ್ಟವನು ಅವನು ನನ್ನವನು.
ನನ್ನ ಪ್ರಪಂಚವೇ ಅವನು , ನಮ್ಮ ಲೋಕವೇ ಪುಣ್ಯದ ಪ್ರೇಮ ಲೋಕ , ವಿರಸ ಸರಸಗಳ ಸಮ್ಮಿಲನವೇ ನಮ್ಮ ನೂತನ ಶೈಲಿಯ ಪ್ರೀತಿ ಲವ್ ಯು ಎಂಬ ಪದದ ತಿದ್ದುಪಡಿ ನಮ್ಮಲಿಲ್ಲ ಈ ಪದವನ್ನು ಅರ್ಥೈಸುವ ಬಂಧನ ನಮ್ಮದು .
ಐ ವಾಂಟ್ ಯು ಎಂದು ಬೇಡುವುದಿಲ್ಲ ಬೇಕಾಗಿರುವ ಜೀವನ ಜೀವ ಇಬ್ಬರಿಗೂ ದೊರಕಿವೆ ನನ್ನ ಅದೆಷ್ಟೋ ಪತ್ರಗಳ ಮೀರಿ ಮೆರೆದ ಪದಗಳು ಇವು ಕಾರಣ ಅವನು ನನ್ನವನು.
ಬೈ ಸಿಂಪಲ್ ಸಿಂಚು ಹೂ ಮನಸಿಗರಿಗೆಲ್ಲ ಪ್ರೇಮಿಗಳ ದಿನದ ಶುಭಾಶಯಗಳು ನಿಮ್ಮ ಪ್ರೇಮ ಪಲ್ಲಕ್ಕಿಯಿಂದ ಬಿಡಿಸಿಕೊಂಡು ಪಕ್ಷಿಗಳು ಆದಷ್ಟು ಬೇಗ ಆಕಾಶದಲ್ಲಿ ಹಾರಾಡಿ ಎಂದು ಹಾರೈಸುವೆ… ಶುಭವಾಗಲಿ ಸ್ನೇಹಿತರೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಭಾವ ಭೈರಾಗಿ
ಕವಿತೆ | ಪ್ರೀತಿ ಇಲ್ಲದ ಮೇಲೆ

- ಜಿ.ಎಸ್. ಶಿವರುದ್ರಪ್ಪ
ಪ್ರೀತಿ ಇಲ್ಲದ ಮೇಲೆ –
ಹೂವು ಅರಳೀತು ಹೇಗೆ?
ಮೋಡ ಕಟ್ಟೀತು ಹೇಗೆ?
ಹನಿಯೊಡೆದು ಕೆಳಗಿಳಿದು
ನೆಲಕ್ಕೆ ಹಸಿರು ಮೂಡೀತು ಹೇಗೆ?
ಪ್ರೀತಿ ಇಲ್ಲದ ಮೇಲೆ –
ಮಾತಿಗೆ ಮಾತು ಕೂಡೀತು ಹೇಗೆ?
ಅರ್ಥ ಹುಟ್ಟೀತು ಹೇಗೆ?
ಬರೀ ಪದಕ್ಕೆ ಪದ ಜತೆಗಿದ್ದ ಮಾತ್ರಕ್ಕೆ
ಪದ್ಯವಾದೀತು ಹೇಗೆ?
ಪ್ರೀತಿ ಇಲ್ಲದ ಮೇಲೆ –
ದಕ್ಷಿಣಾಫ್ರಿಕದ ಕಗ್ಗತ್ತಲಿಗೆ
ಬೆಳಕು ಮೂಡೀತು ಹೇಗೆ?
ಸೆರೆಮನೆಯ ಕಂಬಿಯ ನಡುವೆ
ಕಮರುವ ಕನಸು ಕೊನರೀತು ಹೇಗೆ?
ಬಿಳಿ ಜನರ ಕರಾಳ ಕಪ್ಪು ಹೃದಯಕ್ಕೆ
ಕ್ರಿಸ್ತನ ಕರುಣೆ ಅರ್ಥವಾದೀತು ಹೇಗೆ?
ಪ್ರೀತಿ ಇಲ್ಲದ ಮೇಲೆ –
ಸಂಶಯದ ಗಡಿಗಳುದ್ದಕ್ಕು
ಸಿಡಿಗುಂಡುಗಳ ಕದನ ನಿಂತೀತು ಹೇಗೆ?
ಜಾತಿ-ಮತ-ಭಾಷೆ-ಬಣ್ಣಗಳ ಗೋಡೆಯ ನಡುವೆ
ನರಳುವ ಪಾಡು ತಪ್ಪೀತು ಹೇಗೆ?
ನಮ್ಮ ನಿಮ್ಮ ಮನಸ್ಸು
ಮರುಭೂಮಿಯಾಗದ ಹಾಗೆ
ತಡೆಗಟ್ಟುವುದು ಹೇಗೆ?
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ಅಂತರಂಗ5 days ago
‘ಪ್ರೀತಿಯಲ್ಲಿ ಗೆದ್ದವ ಚುನಾವಣೆಯಲ್ಲಿ ಗೆದ್ದು ಗದ್ದುಗೆಯೇರಿದ’..!
-
ದಿನದ ಸುದ್ದಿ5 days ago
ಬಡವರನ್ನು ಸಬಲೀಕರಣಗೊಳಿಸಲು ಉಚಿತ ಅನಿಲ ಸಂಪರ್ಕ ನೀಡಿದ್ದೇವೆ : ಪ್ರಧಾನಿ ಮೋದಿ
-
ಭಾವ ಭೈರಾಗಿ5 days ago
ಕರುಣಾಳು ಅವನು, ಅವನು ನನ್ನವನು..!
-
ದಿನದ ಸುದ್ದಿ5 days ago
ದಿಶಾ ಕೇಸ್ | ನನ್ನ ಆತ್ಮಸಾಕ್ಷಿಯನ್ನು ದಾಖಲೆ ಸಹಿತ ಒಪ್ಪಿಸಿ..! ಮೂರು ಪ್ರಶ್ನೆಗಳಿಗೆ ಉತ್ತರ ಕೊಡಿ ಎಂದ ನ್ಯಾಯಾಧೀಶರು..!
-
ಲೈಫ್ ಸ್ಟೈಲ್4 days ago
ಮೂತ್ರದಲ್ಲಿನ ಸಕ್ಕರೆ ಅಂಶ ನಿಯಂತ್ರಣದಲ್ಲಿಡುತ್ತೆ ಈ ಸೀಮೆ ಬದನೆಕಾಯಿ..!
-
ಕ್ರೀಡೆ4 days ago
ಭಾರತ ಟಿ20ಐ ಪಂದ್ಯಾವಳಿಗೆ ತಂಡ ಪ್ರಕಟಿಸಿದ ಬಿಸಿಸಿಐ
-
ಲೈಫ್ ಸ್ಟೈಲ್4 days ago
ರೆಸಿಪಿ | ಮನೇಲೇ ಮಾಡಿ ಜಿಲೇಬಿ
-
ದಿನದ ಸುದ್ದಿ5 days ago
ಫೆ.23 ರಂದು ಸೈಬರ್ ಸೆಕ್ಯೂರಿಟಿ ಮತ್ತು ಇ-ಆಡಳಿತ ಕುರಿತು ಕಾರ್ಯಾಗಾರ