Connect with us

ದಿನದ ಸುದ್ದಿ

ಡಿ ಬಾಸ್ ನ ಈ ಪುಟ್ಟ ಅಭಿಮಾನಿಯ ದಾರುಣ ಪರಿಸ್ಥಿತಿಯನ್ನ ನೋಡಿದ್ರೆ ನೀವು ಕಣ್ಣೀರು ಹಾಕ್ದೆ ಇರಲ್ಲ..!

Published

on

ಮಗುವಿಗೆ ನಟ ದರ್ಶನ್ ಅಂದ್ರೆ ಪಂಚಪ್ರಾಣ, ದರ್ಶನ್ ಅಭಿನಯದ ಎಲ್ಲಾ ಚಿತ್ರಗಳನ್ನ ಸಹ ನೋಡಿದ್ದಾನೆ. ಜೊತೆಗೆ ದರ್ಶನ್ ಅಭಿನಯದ ಪೊಲೀಸ್ ಪಾತ್ರಗಳನ್ನ ಮಾಡುವುದು ತಾನು ಪೊಲೀಸ್ ಆಗಬೇಕು ಎಂಬ ಭಯಕೆಯನ್ನ ಸಹ ಹೊಂದಿದ್ದಾನೆ. ಆದ್ರೆ ವಿಧಿ ಲಿಖಿತ ಹಾಗೂ ವೈದ್ಯರು ಮಾಡಿದ ಯಡವಟ್ಟಿನಿಂದ ಈಗ ತನ್ನೆರಡು ಕಾಲುಗಳನ್ನ ಕಳೆದುಕೊಂಡು ಒಂದು ಮೂಲೆಯಲ್ಲಿ ಕೂರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಅಷ್ಟಕ್ಕು ಆ ಮಗುವಿಗೆ ಆಗಿದ್ದಾದರು ಏನು? ಈ ಸ್ಟೋರಿ ನೋಡಿ.

ಹರಳು ಉರಿದಂತೆ ನಟ ದರ್ಶನ್ ಡೈಲಗ್ ಹೊಡೆಯುತ್ತಿರುವ ಬಾಲಕ, ತನ್ನ ಮಗನ ವ್ಯವಸ್ಥೆ ಕಂಡು ಕಣ್ಣೀರು ಹಾಕುತ್ತಿರುವ ತಾಯಿ, ಸಂಬಂಧವಿಲ್ಲದ್ದಿದ್ದರು ಮರುಕ ಪಡುತ್ತಿರುವ ಜನರು. ಇಂತದೊಂದು ಸನ್ನಿವೇಶ ಕಂಡು ಬಂದದ್ದು ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಎಡೆಹಳ್ಳಿ ಗ್ರಾಮದಲ್ಲಿ. ಎಡೆಹಳ್ಳಿ ಗ್ರಾಮದ ಕುರುವತ್ತಪ್ಪ ಹಾಗೂ ನೇತ್ರಾ ಎಂಬುವರ ಎರಡನೇ ಮಗವೇ ಕೀರ್ತಿರಾಜ್, ಕಳೆದ ಒಂದು ವರ್ಷದ ಹಿಂದೆ ಬಾಲಕ ಕೀರ್ತಿರಾಜ್ ಗೆ ಎದೆನೋವು ಕಾಣಿಸಿಕೊಂಡಿದೆ. ಇದರಿಂದ ಸ್ಥಳೀಯ ಆಸ್ಪತ್ರೆಗೆ ತೋರಿಸಿದ್ದರು ಏನು ಪ್ರಯೋಜನವಾಗಿರಲಿಲ್ಲ. ಅಲ್ಲದೆ ದಾವಣಗೆರೆ ಬಾಪೂಜಿ ಆಸ್ಪತ್ರೆಗೆ ಮಗುವನ್ನ ದಾಖಲಿಸಿದಾಗ ಕಾಯಿಲೆ ಗುಣ ಲಕ್ಷಣ ಗೊತ್ತಾಗಿಲ್ಲ, ಬೇರೆ ಕಡೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದಾರೆ. ಅಲ್ಲದೆ ಆತ್ಮೀಯರೊಬ್ಬರು ಮಂಗಳೂರಿನ ಎಜೆ ಆಸ್ಪತ್ರೆ ಚಿಕಿತ್ಸೆ ಉತ್ತಮವಾಗಿರುತ್ತದೆ ಎಂದು ಹೇಳಿದ್ದಕ್ಕೆ ಎಜೆ ಆಸ್ಪತ್ರೆಗೆ ಕರೆದುಕೊಂಡು ಚಿಕಿತ್ಸೆ ನೀಡಿಸಿದ್ದಾರೆ. ಅಲ್ಲಿಯವರೆಗೂ ಊಟ ಮಾಡಿಕೊಂಡು ಜಿಂಕೆಯಂತೆ ಓಡಾಡಿಕೊಂಡಿದ್ದ ಕೀರ್ತಿರಾಜ್, ವೈದ್ಯರು ಬೆನ್ನಿನಲ್ಲಿ ನೀರು ಇದೆ ಎಂದು ಶಸ್ತ್ರ ಚಿಕಿತ್ಸೆ ಮಾಡಿದ ಮೇಲೆ ಮಗು ತನ್ನೆರಡು ಕಾಲುಗಳನ್ನ ಕಳೆದುಕೊಂಡಿದ್ದಾನೆ. ಈ ಬಗ್ಗೆ ವೈದ್ಯರನ್ನ ಪ್ರಶ್ನೆ ಮಾಡಿದ್ದಕ್ಕೆ ಮಗುವಿನೊಂದಿಗೆ ದಂಪತಿಯನ್ನ ಸಹ ಮಂಗಳೂರಿನ ಎಜೆ ಆಸ್ಪತ್ರೆ ವೈದ್ಯರು ಅಮಾನುಷವಾಗಿ  ಹೊರ ಹಾಕಿದ್ದಾರೆ.

ಈ ವೇಳೆಗಾಗಲೇ ಸುಮಾರು 7 ಲಕ್ಷವನ್ನ ಕಳೆದುಕೊಂಡಿದ್ದ ದಂಪತಿ, ಮಗುವಿನ ಚಿಕಿತ್ಸೆಗಾಗಿ ಮಂಗಳೂರಿನಲ್ಲಿ ಮರಳು ಕೆಲಸ ಮಾಡಿ ಹಣವನ್ನ ವೈದ್ಯರಿಗೆ ನೀಡಿದ್ದಾರೆ. ಅಷ್ಟೇ ಅಲ್ಲದೆ ತನ್ನ ಮಗ ಮೊದಲಿನಂತಾಗಲಿ ಎಂದು ಜಮೀನು ಮಾರಿಕೊಂಡು, ಬೇರೆಯವರ ಬಳಿ ಸಾಲ ಮಾಡಿ ಪೋಷಕರು ಚಿಕಿತ್ಸೆ ನೀಡಿಸುತ್ತಿದ್ದಾರೆ. ಇಷ್ಟಿದ್ದರು ಮಗು ಮಾತ್ರ ತನ್ನ ಎರಡು ಕಾಲುಗಳನ್ನ ಪುನಃ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಅಲ್ಲದೆ ಮಗು ದರ್ಶನ್ ಅಭಿಮಾನಿಯಾಗಿದ್ದು, ಅವರಿಂದ ಏನಾದ್ರು ಸಹಾಯ ಸಿಗಬಹುದ ಎಂದು ಪೋಷಕರು ಎದುರು ನೋಡುತ್ತಿದ್ದಾರೆ.

ಒಂದು ಕಡೆ ಆರ್ಥಿಕ ದುರ್ಬಲರು, ಇನ್ನೊಂದು ಕಡೆ ಮಗುವಿನ ಕಾಲು ಬರುತ್ತದೆ ಎಂಬ ಭರವಸೆ, ಈ ನಡುವೆ ನಟ ದರ್ಶನ್ ಅಭಿಮಾನಿಯಾಗಿರುವ ಕೀರ್ತಿರಾಜ್ ಪೊಲೀಸ್ ಅಧಿಕಾರಿಯಾಗಬೇಕು ಎಂಬ ಹಂಬಲ. ಈ ನಡುವೆ ಯಾರಾದ್ರು ಅವರಿಗೆ ಆರ್ಥಿಕ ಸಹಾಯ ಮಾಡಿದ್ರೆ ಮಗುವಿಗೆ ಪುನರ್ಜನ್ಮ ಬಂದಂತಾಗುತ್ತದೆ.

ಆರ್ಥಿಕ ಸಹಾಯ ಮಾಡುವ ಇಚ್ಚಿಸುವವರು

ನೇತ್ರಮ್ಮ W/O ಕುರುವತ್ತೆಪ್ಪ
ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್
ತೆಲಗಿ ಬ್ರಾಂಚ್
ಹರಪನಹಳ್ಳಿ ತಾಲೂಕು
ಅಕೌಂಟ್ ನಂಬರ್-10838101041776
ಐಎಫ್ ಎಸ್ ಸಿ ಕೋಡ್-PKGB0010838

ಈ ಅಕೌಂಟ್ ಗೆ ಹಣ ಸಂದಾಯ ಮಾಡಿ

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ4 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ4 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ5 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ5 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ5 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ7 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ7 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ19 hours ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ20 hours ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ20 hours ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending