ದಿನದ ಸುದ್ದಿ
ನಾಟಿ ಮಾಡಿ ಕೃಷ್ಣ ಜಲಾಶಯಕ್ಕೆ ಭೇಟಿ ನೀಡಿದ ಎಚ್.ಡಿ.ಕೆ
ಸುದ್ದಿದಿನ ಡೆಸ್ಕ್ | ಪಾಂಡವಪುರ ತಾಲ್ಲೂಕಿನ ಅರಳಕುಪ್ಪೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀತಾಪುರ ಗ್ರಾಮದ ಹೊರವಲಯದಲ್ಲಿರುವ ಗದ್ದೆಯಲ್ಲಿ ಭತ್ತ ನಾಟಿ ಕಾರ್ಯಕ್ರಮದ ನಂತರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೃಷ್ಣರಾಜ ಜಲಾಶಯ ಪ್ರದೇಶಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ನಾಗಮಂಗಲ ತಾಲ್ಲೂಕಿನ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿ, ಸಚಿವರುಗಳಾದ ಸಿ.ಎಸ್.ಪುಟ್ಟರಾಜು, ಜಿ.ಟಿ.ದೇವೇಗೌಡ, ಸಾ .ರಾ .ಮಹೇಶ್, ಶಾಸಕರುಗಳಾದ ರವೀಂದ್ರ ಶ್ರೀಕಂಠಯ್ಯ, ಅನ್ನದಾನಿ, ಶ್ರೀಕಂಠೇಗೌಡ ಹಾಗೂ ಇತರರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401