ದಿನದ ಸುದ್ದಿ
ಮಕ್ಕಳ ಮನಸ್ಸಿಗೆ ಮುದ ನೀಡಿದ ‘ನವ್ಯರಾಗ’
ಸುದ್ದಿದಿನ,ದಾವಣಗೆರೆ : ನಿನ್ನೆ (ಜುಲೈ 29) ಗೋಪನಾಳು ಇಂದಿರಾಗಾಂಧಿ ವಸತಿ ಶಾಲೆಯ ಆವರಣದ ತುಂಬ ಎಲ್ಲೆಲ್ಲೂ ಮಧುರ ನಿನಾದದ ಅಲೆ ಹರಡಿತ್ತು. ಮಕ್ಕಳ ಮುಖದಲ್ಲ್ಲಿ ಸಂತಸದ ನಗೆ ಹೊಮ್ಮಿತ್ತು. ಆ ಇಂಪಾದ ರಾಗಾಲಾಪನೆಯ ನವ್ಯರಾಗ ಮಕ್ಕಳಲ್ಲಿ ಹೊಸತು ಸಾಧನೆಯ ಸ್ಫೂರ್ತಿಗೂ ಕಾರಣವಾಯಿತು.
ಭಕ್ತಿಗೀತೆ, ಭಜನೆ, ಸುಗಮ ಸಂಗೀತ, ಗಮಕ ಕಲೆ ಇತ್ಯಾದಿ ಪ್ರಕಾರಗಳಲ್ಲಿ ಬಾಲ್ಯದಿಂದಲೂ ಸಂಗೀತ ಕ್ಷೇತ್ರದಲ್ಲಿ ಮಧುರ ಗಾಯಕಿ ಎಂದೇ ಗುರುತಿಸಿಕೊಂಡಿರುವ ಹರಿಹರದ ನವ್ಯಾ ಆರ್ ಭಟ್ ಅವರು ಅಂದು ಇಂದಿರಾಗಾಂಧಿ ವಸತಿ ಶಾಲೆಗೆ ಆಗಮಿಸಿ ಮಕ್ಕಳಿಗೆ ಸಂಗೀತದ ರಸದೌತಣ ನೀಡಿದರು.
ಕೆಲವು ಭಕ್ತಿಗೀತೆ ಮತ್ತು ಭಾವಗೀತೆಗಳನ್ನು ಹಾಡಿ ರಂಜಿಸುವ ಜೊತೆ ಗುರು ಬ್ರಹ್ಮ ಗುರು ವಿಷ್ಣು,,, ತಾಯಿ ಶಾರದೆ ಲೋಕಪೂಜಿತೆ,,, ಅಮ್ಮಾ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ ಎಂಬಿತ್ಯಾದಿ ಗೀತೆಗಳನ್ನು ಮಕ್ಕಳಿಗೂ ಹೇಳಿಕೊಟ್ಟರು.
ತಮ್ಮ ಸಂಗೀತ ಕಲೆ ವಿಕಲ ಚೇತನ ಮಕ್ಕಳು ಹಾಗೂ ರೋಗಿಗಳ ಆರೋಗ್ಯ ಹಾಗೂ ಮಾನಸಿಕ ಸ್ಥಿತಿಯ ಸುಧಾರಣೆಗೆ ಬಳಕೆಯಾಗಬೇಕೆಂಬ ಸದುದ್ದೇಶ ಹೊಂದಿರುವ ಅವರು ಯಾವ ಸಂಭಾವನೆಯ ಆಪೇಕ್ಷೆ ಇಲ್ಲದೆ ಅಂದು ಆಗಮಿಸಿ ಮಕ್ಕಳ ಜೊತೆ ಕಾಲ ಕಳೆದು ತೆರಳಿದರು.
ಮನೆಯಿಂದ ಹೊರತಾಗಿ ವಸತಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಪದೇ ಪದೇ ಮನೆ ಮತ್ತು ಬಂಧುಗಳ ನೆನಪಾಗುವುದು ಸಹಜ. ಇದು ಕಲಿಕೆಯ ಹಿನ್ನಡೆಗೆ ಕಾರಣವಾಗುವುದಷ್ಟೇ ಅಲ್ಲದೆ ಮಕ್ಕಳ ಮನಸ್ಸಿನ ಮೇಲೂ ವ್ಯತಿರಿಕ್ತ ಪರಿಣಾಮವನ್ನುಂಟು ಮಾಡುತ್ತದೆ. ಆದರೆ ಇಂತಹ ಸದಭಿರುಚಿಯ ಸಾಂಸ್ಕøತಿಕ ವಾತಾವರಣ ನಿರ್ಮಿಸಿಕೊಡುವುದರಿಂದ ಮಕ್ಕಳು ಕಲಿಕೆಯಲ್ಲಿ ಉತ್ಸಾಹ ಹೊಂದುತ್ತಾರೆ. ಹಾಗಾಗಿ ವಿವಿಧ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಿಗೆ ಹೊಸ ಹುರುಪು ತುಂಬುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿರುವ ನಮ್ಮ ಪರಿಶ್ರಮಕ್ಕೆ ಸಹಕರಿಸಲು ಕೋರಿ ನಾವು ಆಹ್ವಾನಿಸಿದ ಮೇರೆಗೆ ಇಂದು ಆಗಮಿಸಿದ ಗಾಯಕಿ ನವ್ಯಾ ಭಟ್ ಅವರ ಸಹಕಾರ ಶ್ಲಾಘನೀಯ ಎಂದು ಪ್ರಶಂಸಿದ ಶಾಲೆಯ ಪ್ರಾಚಾರ್ಯರಾದ ವಿ.ಸಿ ಅಂಜಿನಪ್ಪ ಶಾಲೆಯ ಪರವಾಗಿ ನವ್ಯಾ ಅವರನ್ನು ಅಭಿನಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


