ದಿನದ ಸುದ್ದಿ
ಬೆಳಗಿನ ಪ್ರಮುಖ ಸುದ್ದಿಗಳು
ಬೆಳಗಿನ ಪ್ರಮುಖ ಸುದ್ದಿಗಳು
- ಬೆಂಗಳೂರು ಗ್ರಾಮಾಂತರ ಜಿಯ ಹೊಸಕೋಟೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದು, ನಗರಸಭೆ ಕಾರ್ಯಾಲಯದ ನೂತನ ಕಟ್ಟಡ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ರಸ್ತೆಗಳ ಉದ್ಘಾಟನೆ ನೆರವೇರಿಸಲಿದ್ದಾರೆ.
- ಪ್ರಧಾನಮಂತ್ರಿ ಉಜ್ವಲ ಯೋಜನೆ ಅನುಷ್ಠಾನದಲ್ಲಿ ಹಾವೇರಿ ಜಿಲ್ಲೆ ಕರ್ನಾಟಕದಲ್ಲೇ ಮೊದಲ ಸ್ಥಾನ ಗಳಿಸಿದೆ ಎಂದು ಹಾವೇರಿ ಸಂಸದ ಶಿವಕುಮಾರ ಉದಾಸಿ ಹೇಳಿದ್ದಾರೆ.
- ಕರ್ನಾಟಕ ವಿಶ್ವವಿದ್ಯಾಲಯದ 72 ನೇ ಘಟಿಕೋತ್ಸವ ಸಮಾರಂಭ ಇಂದು ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಸಚಿವ ಯಶಪಾಲ ಕ್ಷೀರಸಾಗರ ಧಾರವಾಡದಲ್ಲಿ ತಿಳಿಸಿದ್ದಾರೆ. ದೆಹಲಿಯ ಇಂಟರ್ ನ್ಯಾಷನಲ್ ಸೆಂಟರ್ ಫಾರ್ ಜೆನೆಟಿಕ್ ಇಂಜಿನಿಯರಿಂಗ್ ಮತ್ತು ಬಯೋಟೆಕ್ನಾಲಜಿ ನಿರ್ದೇಶಕ ಡಾ.ದಿನಕರ ಎಂ. ಸಾಳುಂಕೆ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
- ಎರಡು ದಿನಗಳ ಅಧಿಕೃತ ಭೇಟಿಗಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಇದೇ 13 ರಂದು ಸೋಮವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಗರದಲ್ಲಿ ನಡೆಯಲಿರುವ ರಾಷ್ಟ್ರೀಯ ಸೈನಿಕ ಶಾಲೆಯ ಅಮೃತ ಮಹೋತ್ಸವದಲ್ಲಿ ರಾಷ್ಟ್ರಪತಿ ಅವರು ಪಾಲ್ಗೊಳ್ಳಲಿದ್ದಾರೆ. 14 ರಂದು ಕನಕಪುರ ರಸ್ತೆಯ ದೊಡ್ಡ ಕಲ್ಲಸಂದ್ರ ವೈಕುಂಠ ಬೆಟ್ಟದಲ್ಲಿ ತಿರುಪತಿ-ತಿರುಮಲ ದೇವಾಲಯ ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣಾ ಸಮಾರಂಭದಲ್ಲಿ ಭಾಗವಹಿಸಿ ಅಂದೇ ದೆಹಲಿಗೆ ಹಿಂತಿರುಗಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
- ಐಆರ್ಸಿಟಿಸಿ ಜಾಲತಾಣ ಮತ್ತು ಅಪ್ಲಿಕೇಶನ್ ಮೂಲಕ ರೈಲು ಪ್ರಯಾಣ ಆನ್ಲೈನ್ ಬುಕ್ಕಿಂಗ್ ಟಿಕೆಟ್ ಸಂಖ್ಯೆಯನ್ನು ಭಾರತೀಯ ರೈಲ್ವೆ ಏರಿಕೆ ಮಾಡಿದೆ. ಆಧಾರ್ ಜೋಡಣೆಯಾಗದಿರುವ ಐಡಿ ಮೂಲಕ ಮಾಸಿಕ ಟಿಕೆಟ್ ಬುಕ್ಕಿಂಗ್ ಸಂಖ್ಯೆಯನ್ನು ಗರಿಷ್ಠ 6ರಿಂದ 12 ಟಿಕೆಟ್ಗಳಿಗೆ ಏರಿಕೆ ಮಾಡಲಾಗಿದೆ. ಅಲ್ಲದೆ ಆಧಾರ್ ಸಂಖ್ಯೆ ಜೋಡಣೆಯಾಗಿರುವ ಐಡಿ ಮೂಲಕ ಟಿಕೆಟ್ ಬುಕ್ಕಿಂಗ್ ಸಂಖ್ಯೆಯನ್ನು ಗರಿಷ್ಠ 13ರಿಂದ 24 ಕ್ಕೆ ಏರಿಕೆ ಮಾಡಲಾಗಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.
- ಏಳು ದಿನಗಳ ಸಾಂಪ್ರದಾಯಿಕ ಸೀತಾಳ ಷಷ್ಠಿ ಹಬ್ಬ ನಿನ್ನೆ ಆರಂಭಗೊಂಡಿತು. ಹಿಂದು ಪರಂಪರೆಯಲ್ಲಿ ಪೌರಾಣಿಕವಾಗಿ ಈಶ್ವರ ಮತ್ತು ಪಾರ್ವತಿಯ ವಿವಾಹ ದಿನವಾಗಿ ಜೇಷ್ಠ ಮಾಸದ ಶುಕ್ಲ ಪಕ್ಷದ ೬ನೇ ದಿನದಂದು ದೇಶದ ಉತ್ತರ ಮತ್ತು ಪೂರ್ವ ಭಾಗದಲ್ಲಿ ಈ ಹಬ್ಬವನ್ನು ಹೆಚ್ಚಾಗಿ ಆಚರಿಸಲಾಗುತ್ತದೆ. ಸುಡುವ ಬಿಸಿಲನ್ನು ಈಶ್ವರ ಸಂಕೇತಿಸುತ್ತಿದ್ದು, ಮಾತೆ ಪಾರ್ವತಿ ಮೊದಲ ಮಳೆಯ ಸಂಕೇತ. ಉತ್ತಮ ಮುಂಗಾರು ಆಗಮನಕ್ಕೆ ಈ ಇಬ್ಬರ ವಿವಾಹ ಆಚರಣೆ ಮೂಲಕ ಪ್ರಾರ್ಥಿಸಲಾಗುತ್ತದೆ.
- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಷ್ಟ್ರೀಯ ಬುಡಕಟ್ಟು ಸಂಶೋಧನಾ ಸಂಸ್ಥೆಯನ್ನು ದೆಹಲಿಯಲ್ಲಿ ಇಂದು ಲೋಕಾರ್ಪಣೆ ಮಾಡಲಿದ್ದಾರೆ. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ, ಕಾನೂನು ಸಚಿವ ಕಿರಣ್ ರಿಜಿಜು ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
- ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿನ್ನೆ ಕಾರ್ಯಾರಂಭಗೊಂಡಿದೆ. ಬೆಂಗಳೂರಿನಿಂದ ಎರ್ನಾಕುಲಂಗೆ ತೆರಳುವ ಎಕ್ಸ್ಪ್ರೆಸ್ ರೈಲು ನಿನ್ನೆ ಸಂಜೆ 7 ಗಂಟೆಗೆ ಬೈಯಪ್ಪನಹಳ್ಳಿಯಿಂದ ಹೊರಡುವುದರೊಂದಿಗೆ ನೂತನ ಟರ್ಮಿನಲ್ ಕಾರ್ಯಾರಂಭ ಮಾಡಿತು. ಇದರೊಂದಿಗೆ ನೈಋತ್ಯ ರೈಲ್ವೆ ವಲಯದ ಹೆಚ್ಚು ದೂರ ಪ್ರಯಾಣಿಸುವ ಮೂರು ರೈಲುಗಳನ್ನು ಬಾಣಸವಾಡಿ ನಿಲ್ದಾಣದಿಂದ ಬೈಯಪ್ಪನಹಳ್ಳಿ ಟರ್ಮಿನಲ್ಗೆ ವರ್ಗಾಯಿಸಲಾಗಿದೆ.
- ’ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ ದೆಹಲಿಯಲ್ಲಿ ಆಯೋಜಿಸಿರುವ ಐಕಾನಿಕ್ ಸಪ್ತಾಹದ ಇಂದಿನ ಕಾರ್ಯಕ್ರಮಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಅವರು ರಾಷ್ಟ್ರೀಯ ಸಿಎಸ್ಆರ್ ವಿನಿಮಯ ಪೋರ್ಟಲ್ ಲೋಕಾರ್ಪಣೆ ಮಾಡಲಿದ್ದಾರೆ.
- ಬುದ್ಧನ ಕಾಲದಷ್ಟು ಹಿಂದೆಯೇ ಭಾರತದಲ್ಲಿ ಪ್ರಜಾತಂತ್ರ ವ್ಯವಸ್ಥೆ ಜಾರಿಯಲ್ಲಿದ್ದು, ಭಾರತೀಯ ಪ್ರಜಾಪ್ರಭುತ್ವ ಪಾಶ್ಚಾತ್ಯ ಜಗತ್ತಿನಿಂದ ಬಂದದ್ದಲ್ಲ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ಲಖನೌದಲ್ಲಿ ನಿನ್ನೆ ಉತ್ತರ ಪ್ರದೇಶ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ, ಪ್ರಾಚೀನ ಭಾರತದ ಕೌಶಾಂಬಿ ಮತ್ತು ಶ್ರಾವಸ್ತಿಯಲ್ಲಿದ್ದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಹ ಉಲ್ಲೇಖಿಸಿದ್ದಾರೆ ಎಂದು ವಿವರಿಸಿದರು.
- ಮಧ್ಯಮ ದೂರಗಾಮಿ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-4 ಪರೀಕ್ಷಾರ್ಥ ಪ್ರಯೋಗ ನಿನ್ನೆ ಯಶಸ್ವಿಯಾಗಿದೆ. ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಕ್ಷಿಪಣಿ ಉಡಾವಣೆ ಮಾಡಲಾಗಿದ್ದು, ಸಕಾಲದಲ್ಲಿ ನಿಗದಿತ ಗುರಿ ತಲುಪಿದೆ ಎಂದು ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


