ದಿನದ ಸುದ್ದಿ
ಬೆಳಗಿನ ಪ್ರಮುಖ ಸುದ್ದಿಗಳು
![](https://suddidina.com/wp-content/uploads/2022/05/news_live_suddidina.jpg)
ಬೆಳಗಿನ ಪ್ರಮುಖ ಸುದ್ದಿಗಳು
- ಬೆಂಗಳೂರು ಗ್ರಾಮಾಂತರ ಜಿಯ ಹೊಸಕೋಟೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದು, ನಗರಸಭೆ ಕಾರ್ಯಾಲಯದ ನೂತನ ಕಟ್ಟಡ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ರಸ್ತೆಗಳ ಉದ್ಘಾಟನೆ ನೆರವೇರಿಸಲಿದ್ದಾರೆ.
- ಪ್ರಧಾನಮಂತ್ರಿ ಉಜ್ವಲ ಯೋಜನೆ ಅನುಷ್ಠಾನದಲ್ಲಿ ಹಾವೇರಿ ಜಿಲ್ಲೆ ಕರ್ನಾಟಕದಲ್ಲೇ ಮೊದಲ ಸ್ಥಾನ ಗಳಿಸಿದೆ ಎಂದು ಹಾವೇರಿ ಸಂಸದ ಶಿವಕುಮಾರ ಉದಾಸಿ ಹೇಳಿದ್ದಾರೆ.
- ಕರ್ನಾಟಕ ವಿಶ್ವವಿದ್ಯಾಲಯದ 72 ನೇ ಘಟಿಕೋತ್ಸವ ಸಮಾರಂಭ ಇಂದು ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ವಿಶ್ವವಿದ್ಯಾಲಯದ ಕುಲಸಚಿವ ಯಶಪಾಲ ಕ್ಷೀರಸಾಗರ ಧಾರವಾಡದಲ್ಲಿ ತಿಳಿಸಿದ್ದಾರೆ. ದೆಹಲಿಯ ಇಂಟರ್ ನ್ಯಾಷನಲ್ ಸೆಂಟರ್ ಫಾರ್ ಜೆನೆಟಿಕ್ ಇಂಜಿನಿಯರಿಂಗ್ ಮತ್ತು ಬಯೋಟೆಕ್ನಾಲಜಿ ನಿರ್ದೇಶಕ ಡಾ.ದಿನಕರ ಎಂ. ಸಾಳುಂಕೆ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
- ಎರಡು ದಿನಗಳ ಅಧಿಕೃತ ಭೇಟಿಗಾಗಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು, ಇದೇ 13 ರಂದು ಸೋಮವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಗರದಲ್ಲಿ ನಡೆಯಲಿರುವ ರಾಷ್ಟ್ರೀಯ ಸೈನಿಕ ಶಾಲೆಯ ಅಮೃತ ಮಹೋತ್ಸವದಲ್ಲಿ ರಾಷ್ಟ್ರಪತಿ ಅವರು ಪಾಲ್ಗೊಳ್ಳಲಿದ್ದಾರೆ. 14 ರಂದು ಕನಕಪುರ ರಸ್ತೆಯ ದೊಡ್ಡ ಕಲ್ಲಸಂದ್ರ ವೈಕುಂಠ ಬೆಟ್ಟದಲ್ಲಿ ತಿರುಪತಿ-ತಿರುಮಲ ದೇವಾಲಯ ಹೋಲುವ ಇಸ್ಕಾನ್ ದೇಗುಲದ ಲೋಕಾರ್ಪಣಾ ಸಮಾರಂಭದಲ್ಲಿ ಭಾಗವಹಿಸಿ ಅಂದೇ ದೆಹಲಿಗೆ ಹಿಂತಿರುಗಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
- ಐಆರ್ಸಿಟಿಸಿ ಜಾಲತಾಣ ಮತ್ತು ಅಪ್ಲಿಕೇಶನ್ ಮೂಲಕ ರೈಲು ಪ್ರಯಾಣ ಆನ್ಲೈನ್ ಬುಕ್ಕಿಂಗ್ ಟಿಕೆಟ್ ಸಂಖ್ಯೆಯನ್ನು ಭಾರತೀಯ ರೈಲ್ವೆ ಏರಿಕೆ ಮಾಡಿದೆ. ಆಧಾರ್ ಜೋಡಣೆಯಾಗದಿರುವ ಐಡಿ ಮೂಲಕ ಮಾಸಿಕ ಟಿಕೆಟ್ ಬುಕ್ಕಿಂಗ್ ಸಂಖ್ಯೆಯನ್ನು ಗರಿಷ್ಠ 6ರಿಂದ 12 ಟಿಕೆಟ್ಗಳಿಗೆ ಏರಿಕೆ ಮಾಡಲಾಗಿದೆ. ಅಲ್ಲದೆ ಆಧಾರ್ ಸಂಖ್ಯೆ ಜೋಡಣೆಯಾಗಿರುವ ಐಡಿ ಮೂಲಕ ಟಿಕೆಟ್ ಬುಕ್ಕಿಂಗ್ ಸಂಖ್ಯೆಯನ್ನು ಗರಿಷ್ಠ 13ರಿಂದ 24 ಕ್ಕೆ ಏರಿಕೆ ಮಾಡಲಾಗಿದೆ ಎಂದು ಭಾರತೀಯ ರೈಲ್ವೆ ತಿಳಿಸಿದೆ.
- ಏಳು ದಿನಗಳ ಸಾಂಪ್ರದಾಯಿಕ ಸೀತಾಳ ಷಷ್ಠಿ ಹಬ್ಬ ನಿನ್ನೆ ಆರಂಭಗೊಂಡಿತು. ಹಿಂದು ಪರಂಪರೆಯಲ್ಲಿ ಪೌರಾಣಿಕವಾಗಿ ಈಶ್ವರ ಮತ್ತು ಪಾರ್ವತಿಯ ವಿವಾಹ ದಿನವಾಗಿ ಜೇಷ್ಠ ಮಾಸದ ಶುಕ್ಲ ಪಕ್ಷದ ೬ನೇ ದಿನದಂದು ದೇಶದ ಉತ್ತರ ಮತ್ತು ಪೂರ್ವ ಭಾಗದಲ್ಲಿ ಈ ಹಬ್ಬವನ್ನು ಹೆಚ್ಚಾಗಿ ಆಚರಿಸಲಾಗುತ್ತದೆ. ಸುಡುವ ಬಿಸಿಲನ್ನು ಈಶ್ವರ ಸಂಕೇತಿಸುತ್ತಿದ್ದು, ಮಾತೆ ಪಾರ್ವತಿ ಮೊದಲ ಮಳೆಯ ಸಂಕೇತ. ಉತ್ತಮ ಮುಂಗಾರು ಆಗಮನಕ್ಕೆ ಈ ಇಬ್ಬರ ವಿವಾಹ ಆಚರಣೆ ಮೂಲಕ ಪ್ರಾರ್ಥಿಸಲಾಗುತ್ತದೆ.
- ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಷ್ಟ್ರೀಯ ಬುಡಕಟ್ಟು ಸಂಶೋಧನಾ ಸಂಸ್ಥೆಯನ್ನು ದೆಹಲಿಯಲ್ಲಿ ಇಂದು ಲೋಕಾರ್ಪಣೆ ಮಾಡಲಿದ್ದಾರೆ. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ, ಕಾನೂನು ಸಚಿವ ಕಿರಣ್ ರಿಜಿಜು ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
- ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿನ್ನೆ ಕಾರ್ಯಾರಂಭಗೊಂಡಿದೆ. ಬೆಂಗಳೂರಿನಿಂದ ಎರ್ನಾಕುಲಂಗೆ ತೆರಳುವ ಎಕ್ಸ್ಪ್ರೆಸ್ ರೈಲು ನಿನ್ನೆ ಸಂಜೆ 7 ಗಂಟೆಗೆ ಬೈಯಪ್ಪನಹಳ್ಳಿಯಿಂದ ಹೊರಡುವುದರೊಂದಿಗೆ ನೂತನ ಟರ್ಮಿನಲ್ ಕಾರ್ಯಾರಂಭ ಮಾಡಿತು. ಇದರೊಂದಿಗೆ ನೈಋತ್ಯ ರೈಲ್ವೆ ವಲಯದ ಹೆಚ್ಚು ದೂರ ಪ್ರಯಾಣಿಸುವ ಮೂರು ರೈಲುಗಳನ್ನು ಬಾಣಸವಾಡಿ ನಿಲ್ದಾಣದಿಂದ ಬೈಯಪ್ಪನಹಳ್ಳಿ ಟರ್ಮಿನಲ್ಗೆ ವರ್ಗಾಯಿಸಲಾಗಿದೆ.
- ’ಆಜಾದಿ ಕಾ ಅಮೃತ ಮಹೋತ್ಸವ’ದ ಅಂಗವಾಗಿ ದೆಹಲಿಯಲ್ಲಿ ಆಯೋಜಿಸಿರುವ ಐಕಾನಿಕ್ ಸಪ್ತಾಹದ ಇಂದಿನ ಕಾರ್ಯಕ್ರಮಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ ನೀಡಲಿದ್ದಾರೆ. ಇದೇ ವೇಳೆ ಅವರು ರಾಷ್ಟ್ರೀಯ ಸಿಎಸ್ಆರ್ ವಿನಿಮಯ ಪೋರ್ಟಲ್ ಲೋಕಾರ್ಪಣೆ ಮಾಡಲಿದ್ದಾರೆ.
- ಬುದ್ಧನ ಕಾಲದಷ್ಟು ಹಿಂದೆಯೇ ಭಾರತದಲ್ಲಿ ಪ್ರಜಾತಂತ್ರ ವ್ಯವಸ್ಥೆ ಜಾರಿಯಲ್ಲಿದ್ದು, ಭಾರತೀಯ ಪ್ರಜಾಪ್ರಭುತ್ವ ಪಾಶ್ಚಾತ್ಯ ಜಗತ್ತಿನಿಂದ ಬಂದದ್ದಲ್ಲ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ಲಖನೌದಲ್ಲಿ ನಿನ್ನೆ ಉತ್ತರ ಪ್ರದೇಶ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ರಾಷ್ಟ್ರಪತಿ, ಪ್ರಾಚೀನ ಭಾರತದ ಕೌಶಾಂಬಿ ಮತ್ತು ಶ್ರಾವಸ್ತಿಯಲ್ಲಿದ್ದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಹ ಉಲ್ಲೇಖಿಸಿದ್ದಾರೆ ಎಂದು ವಿವರಿಸಿದರು.
- ಮಧ್ಯಮ ದೂರಗಾಮಿ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-4 ಪರೀಕ್ಷಾರ್ಥ ಪ್ರಯೋಗ ನಿನ್ನೆ ಯಶಸ್ವಿಯಾಗಿದೆ. ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ಕ್ಷಿಪಣಿ ಉಡಾವಣೆ ಮಾಡಲಾಗಿದ್ದು, ಸಕಾಲದಲ್ಲಿ ನಿಗದಿತ ಗುರಿ ತಲುಪಿದೆ ಎಂದು ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!