ಲೈಫ್ ಸ್ಟೈಲ್
ಸುದ್ದಿ ಪತ್ರಿಕಗಳೇ ಸುದ್ದಿಯಾಗುತ್ತಿವೆ..! ಕಾರಣ ?

ಪ್ರತಿ ದಿನ ಬೆಳಿಗ್ಗೆ ಎದ್ದೊಡನೆ ಬಿಸಿ ಬಿಸಿ ಕಾಫಿ ಸೇವಿಸುತ್ತಾ ದೇಶದ ಆಗುಹೋಗುಗಳ ಬಗ್ಗೆ ತಿಳಿಯಲು ನ್ಯೂಸ್ ಪೇಪರ್ ಓದುವ ಹವ್ಯಾಸ ನಮ್ಮಲ್ಲಿ ಹಲವರಿಗಿದೆ. ವಿಶೇಷ ಅಂದರೆ, ಸುದ್ದಿ ನೀಡುವ ಸುದ್ದಿ ಪತ್ರಿಕೆಗಳೇ ಸುದ್ದಿ ಆಗುತ್ತಿದೆ! ಇದೇನಪ್ಪಾ! ಎಂದು ಹುಬ್ಬೇರಿಸಬೇಡಿ, ನಾನು ಹೇಳುತ್ತಿರುವುದು , ಫ್ಯಾಷನ್ ಜಗತ್ತಿನಲ್ಲಿ ಸಂಚಲನ ಸೃಷ್ಟಿಸಿರುವ ನ್ಯೂಸ್ ಪ್ರಿಂಟ್ ಫ್ಯಾಷನ್ ಕುರಿತು.
ಗಾಬರಿ ಆಗಬೇಡಿ, ಇದು ಪರಿಸರ ಸ್ನೇಹಿ ಪೇಪರ್ ಉಡುಪುಗಳಲ್ಲ. ಅಪ್ಪಟ ನ್ಯೂಸ್ ಪೇಪರ್ ಪ್ರಿಂಟ್ ಇರುವ ಫ್ಯಾಬ್ರಿಕ್ ಡ್ರೆಸ್ಗಳು. ರೆಯಾನ್, ನೈಲಾನ್, ವಿನಿಲ್ , ಸಿಂಥೆಟಿಕ್, ಹೀಗೆ ಹಲವಾರು ಫ್ಯಾಬ್ರಿಕ್ ಗಳಲ್ಲಿ ನ್ಯೂಸ್ ಪ್ರಿಂಟ್ ಫ್ಯಾಷನ್ ಯುವಪೀಳಿಗೆಯ ಫೇವರಿಟ್ ಫಂಕೀ ಲುಕ್ ಎನಿಸಿಕೊಂಡಿದೆ.
ಜಗತ್ತಿನ ಆಗುಹೋಗುಗಳ ಬಗ್ಗೆ ತಿಳಿಯಲು , ಸದಾ ಬ್ಯಾಗ್ ನಲ್ಲಿರುತ್ತಿದ್ದ , ನ್ಯೂಸ್ ಪೇಪರ್, ಇಂದು ನ್ಯೂಸ್ ಪ್ರಿಂಟ್ ಫ್ಯಾಷನ್ ಹೆಸರಲ್ಲಿ ಯೂವಪೀಳಿಗೆಯ ಉಡುಪನ್ನಾವರಿಸಿದೆ. ಟಾಪ್, ಟ್ಯೂನಿಕ್, ಫ್ರಾಕ್, ಸಿಂಗಲ್ ಸ್ಟ್ರಾಪ್ ಡ್ರೆಸ್, ಲಾಂಗ್ ಗೌನ್, ಶೈಲಿಯ ನ್ಯೂಸ್ ಪ್ರಿಂಟ್ ಫ್ಯಾಷನ್ ಕಾಲೇಜು ಕ್ಯಾಂಪಸ್ ಗಳಲ್ಲಿ ಸುದ್ದಿ ಮಾಡುತ್ತಿದೆ.
ಈ ನ್ಯೂಸ್ ಪ್ರಿಂಟ್ ಖ್ಯಾತಿ ಕೇವಲ ಪಾಶ್ಚಾತ್ಯ ಉಡುಪುಗಳಿಗೆ ಮಾತ್ರ ಸೀಮಿತವಾಗಿರದೆ, ಭಾರತೀಯ ಸೊಗಡಿನ ಸೀರೆಗೂ ಲಗ್ಗೆ ಇಟ್ಟಿದೆ. ಹಲವಾರು ಫ್ಯಾಷನ್ ವಿನ್ಯಾಸಕರು ಈ ವಿಶಿಷ್ಟ ಟ್ರೆಂಡ್ ಸೃಷ್ಟಿಸುವಲ್ಲಿ ಯಶಸ್ವೀ ಆಗಿದ್ದಾರೆ. ಸುದ್ದಿ ಸಮಾಚಾರ ಸೀರೆಯ ಮೇಲೆ ಸುಂದರವಾಗಿ ಮುದ್ರಿಸಲಾಗಿದ್ದು, ಮಹಿಳಾಮಣಿಯರ ಕಿಟ್ಟಿ ಪಾರ್ಟಿ, ಗಳಲ್ಲಿ ಈ ಟ್ರೆಂಡ್ ಸೆಟ್ಟರ್ ಸೀರೆ ವೈರಲ್ ಆಗಿದೆ.
–ಚಿತ್ರಶ್ರೀ ಹರ್ಷ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025
ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ತುಂಗಭದ್ರಾ ಬೋರ್ಡ್ ಅಧಿಕಾರಿಗಳ ಕಳ್ಳಾಟ : ಕಬ್ಬಿಣ ಕಳ್ಳತನ ಆರೋಪದಲ್ಲಿ ಕಣ್ಣಮುಚ್ಚಾಲೆ ಆಟ ; ಶಾಸಕರ ಹೆಸರು ಪ್ರಸ್ತಾಪ
-
ದಿನದ ಸುದ್ದಿ7 days ago
25 ವರ್ಷಗಳ ನಂತರ ಸಾಕಾರಗೊಂಡ ಡಾ. ಬಿ.ಆರ್.ಅಂಬೇಡ್ಕರ್ ಭವನ ; ಅನುದಾನದ ಕೊರತೆ ಇಲ್ಲ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
-
ದಿನದ ಸುದ್ದಿ5 days ago
ಸುದ್ದಿದಿನ.ಕಾಂ ಫಲಶೃತಿ | ಕಬ್ಬಿಣ ಬಿಸಾಡಿ ಓಡಿ ಹೋದ ಶಾಸಕರ ಆಪ್ತರು ; ಗೇಟ್ ಗೆ ಡಿಕ್ಕಿ, ಕ್ಯಾಮರಾಗಳಲ್ಲಿ ಸೆರೆ
-
ದಿನದ ಸುದ್ದಿ5 days ago
ವಕ್ಫ್ ತಿದ್ದುಪಡಿ ಕಾಯ್ದೆ- 2025 | ಇಂದು ಸುಪ್ರೀಂ ವಿಚಾರಣೆ
-
ದಿನದ ಸುದ್ದಿ4 days ago
ಅಂಬೇಡ್ಕರ್ ಸ್ಮರಣೆಯಿಂದ ದೇಶ ಪ್ರಗತಿಪರವಾಗಲು ಸಾಧ್ಯ : ಸಹಾಯಕ ಪ್ರಾಧ್ಯಾಪಕ ಷಣ್ಮುಖಪ್ಪ ಕೆ.ಎಚ್
-
ರಾಜಕೀಯ3 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಆರು ಮಂದಿ ಬಂಧನ
-
ದಿನದ ಸುದ್ದಿ3 days ago
ಚನ್ನಗಿರಿ | ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ; ಕಾನೂನು ಮೂಲಕ ಪರಿಹಾರ ಕಂಡುಕೊಳ್ಳಿ : ಡಿವೈಎಸ್ಪಿ ಸ್ಯಾಮ್ ವರ್ಗೀಸ್ ಎಚ್ಚರಿಕೆ