ದಿನದ ಸುದ್ದಿ

ಮಧ್ಯಾಹ್ನದ ಪ್ರಮುಖ ಸುದ್ದಿಗಳು

Published

on

ಮಧ್ಯಾಹ್ನದ ಪ್ರಮುಖ ಸುದ್ದಿಗಳು

  1. ಉದ್ಘಾಟನೆಯಾದ ಕೇವಲ ಎರಡು ತಿಂಗಳಲ್ಲಿಯೇ ಕುಸಿದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಚಾವಣಿ ಕುಸಿತಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ. ಕ್ರೀಡಾಂಗಣದ ರಚನೆಯಲ್ಲಿ ದೋಷವಿದೆಯೇ ಅಥವಾ ಬೇರೆ ಕಾರಣದಿಂದ ಕುಸಿತವಾಗಿಯೇ ಎಂಬುದನ್ನು ನಾವು ಇನ್ನೂ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದೇವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
  2. ಬೆಂಗಳೂರಿನ ನೆಲಮಂಗಲ ಸಮೀಪ ಇಂದು ಜೆಡಿಎಸ್ ಜನತಾ ಜಲಧಾರೆ ಸಮಾರೋಪ ಸಮಾವೇಶ ನಡೆಯಲಿದೆ. ಸಮಾವೇಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.
  3. ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಪೂರ್ವಭಾವಿಯಾಗಿ ಬೆಂಗಳೂರಿನ ದೂರದರ್ಶನ ಕೇಂದ್ರದ ಆವರಣದಲ್ಲಿ ಇಂದು ದೂರದರ್ಶನ ಹಾಗೂ ಆಕಾಶವಾಣಿಯ ಸಿಬ್ಬಂದಿ ವರ್ಗಕ್ಕೆ ವಿಶೇಷ ಯೋಗ ಶಿಬಿರ ಆಯೋಜಿಸಲಾಗಿತ್ತು. ಯೋಗ ಗುರು ರಾಜೇಶ್ ಆಚಾರ್ಯ ಅವರ ನೇತೃತ್ವದಲ್ಲಿ ಯೋಗಾಭ್ಯಾಸ ನಡೆಯಿತು. ಚಿತ್ರನಟರಾದ ರಾಧಿಕಾ ನಾರಾಯಣ, ಸೂರಜ್ ಗೌಡ ಪಾಲ್ಗೊಂಡಿದ್ದರು.
  4. ತುರ್ತು ಕಾಮಗಾರಿ ಹಾಗೂ ಪಂಪ್‌ಹೌಸ್‌ನಲ್ಲಿ ದುರಸ್ಥಿ ಕಾರ್ಯ ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಹಲವು ಬಡಾವಣೆಗಳಲ್ಲಿ ನಾಳೆ ನೀರಿನ ಪೂರೈಕೆಯ ವ್ಯತ್ಯಯ ಉಂಟಾಗಲಿದೆ ಎಂದು ಜಲಮಂಡಳಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
  5. ಪ್ರಸ್ತುತ ಕೈಗೊಂಡಿರುವ ಟ್ರಾನ್ಸ್‌ಫಾರ್ಮರ್ ನಿರ್ವಹಣಾ ಅಭಿಯಾನದ ಜೊತೆಗೆ ಬೆಂಗಳೂರು ನಗರ ಜಿಲ್ಲೆಯಲ್ಲಿ 2 ಸಾವಿರದ 500ಕ್ಕೂ ಹೆಚ್ಚು ವಿನೂತನ ವಿನ್ಯಾಸದ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಲು ತಯಾರಿ ನಡೆಸಲಾಗಿದೆ. ಅತಿ ಶೀರ್ಘದಲ್ಲೇ ಈ ಕಾರ್ಯಾಚರಣೆ ಕೈಗೊತ್ತಿಕೊಳ್ಳಲಾಗುವುದು ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
  6. ಇತಿಹಾಸ ಪ್ರಸಿದ್ದ ಚಾಮರಾಜನಗರದ ಚಾಮರಾಜೇಶ್ವರ ನೂತನ ರಥ ಇಂದು ಚಾಮರಾಜನಗರಕ್ಕೆ ಬರಲಿದೆ. ಸುಮಾರು 1ಕೋಟಿ 20 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊಸ ರಥವನು ಬೆಂಗಳೂರಿನ ಕಾಮಾಕ್ಷಿಪಾಳ್ಯದಲ್ಲಿ ನಿರ್ಮಾಣ ಮಾಡಲಾಗಿದೆ. ಇಂದು ಚಾಮರಾಜನಗರದ ಆದಿಶಕ್ತಿ ದೇವಸ್ಥಾನದ ಬಳಿ ವಿವಿಧ ಕಲಾತಂಡಗಳೊಡನೆ ರಥ ಮೆರವಣಿಗೆ ಮೂಲಕ ಹೊರಡಲಿದೆ.
  7. ದೇಶದಲ್ಲಿ ಇದುವರೆಗೆ ಸುಮಾರು 190 ಕೋಟಿ 97 ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಹಾಗೂ ಒಂದೇ ದಿನದಲ್ಲಿ 12ಲಕ್ಷದ 15ಸಾವಿರ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.
  8. ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಾಚರಣೆ ಈಗಿನಿಂದಲೇ ಆರಂಭವಾಗಿದೆ. ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
  9. ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ತುಸು ಕಡಿಮೆಯಾಗಿದೆ. ಒಂದೇ ದಿನದಲ್ಲಿ 3 ಸಾವಿರದ 841ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಒಂದೇ ದಿನದಲ್ಲಿ ಮೂರು ಸಾವಿರದ 295ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
  10. ಬೆಂಗಳೂರಿನ ನೆಲಮಂಗಲ ಸಮೀಪ ಇಂದು ಜೆಡಿಎಸ್ ಜನತಾ ಜಲಧಾರೆ ಸಮಾರೋಪ ಸಮಾವೇಶ ನಡೆಯಲಿದೆ. ಸಮಾವೇಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.
  11. ರಾಜ್ಯದಲ್ಲಿರುವ ವಕ್ಫ್ ಆಸ್ತಿಗಳ ಸಮೀಕ್ಷೆಯನ್ನು ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಾರಿ ಡ್ರೋಣ್ ಮೂಲಕ ಸರ್ವೇ ನಡೆಸಲು ಸಿದ್ಧತೆ ಕೈಗೊಳ್ಳಲಾಗಿದೆ. ಆಸ್ತಿಗಳ ನಕ್ಷೆಯನ್ನು ಗುರುತಿಸಿ, ಸಂರಕ್ಷಿಸಲು ಸರ್ಕಾರ 2.5 ಕೋಟಿ ಅನುದಾನ ಬಿಡುಗಡೆ ಮಾಡಲಿದೆ ಎಂದು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಎನ್.ಕೆ. ಮೊಹಮ್ಮದ್ ಶಾಫಿ ತಿಳಿಸಿದ್ದಾರೆ.
  12. ಸರ್ಕಾರಿ ನೌಕರರು ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಬೇಕಿದೆ. ನಿವೃತ್ತಿಯ ಅಂಚಿನಲ್ಲಿದ್ದಾಗ ಕೆಲಸದ ಬಗ್ಗೆ ಹೆಮ್ಮೆ ಮೂಡುವಂತೆ ಇರಬೇಕು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ತಿಳಿಸಿದ್ದಾರೆ.
  13. ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಮುಂದುವರಿದೆ. ಕೊರೊನಾ ನಾಲ್ಕನೇ ಅಲೆಯ ಆತಂಕ ಕೊಂಚ ನಿವಾರಣೆಯಾಗುತ್ತಿರುವ ಬೆನ್ನಲ್ಲೇ ಕೊರೊನಾ ಲಸಿಕೆ ಅಭಿಯಾನವನ್ನು ಇನ್ನಷ್ಟು ಹೆಚ್ಚುಗೊಳಿಸಲಾಗಿದೆ. ದೇಶದಲ್ಲಿ ಇದುವರೆಗೆ ಸುಮಾರು 190ಕೋಟಿ 97ಲಕ್ಷಕ್ಕೂ ಅಧಿಕ ಕೋವಿಡ್ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಹಾಗೂ ಒಂದೇ ದಿನದಲ್ಲಿ 12 ಲಕ್ಷದ 15 ಸಾವಿರ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version