ನೆಲದನಿ
ಮೈಸೂರು ನಿರಂತರ ‘ರಂಗ ಉತ್ಸವ’
ಮೈಸೂರಿನ ನಿರಂತರ ರಂಗ ತಂಡದಿಂದ ರಾಜ್ಯಮಟ್ಟದ ಐದು ದಿನಗಳ ನಿರಂತರ ರಂಗೋತ್ಸವ ಪ್ರಾರಂಭವಾಗಿದೆ. ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡರವರು ನಿರಂತರ ರಂಗೋತ್ಸವವನ್ನು ಉದ್ಘಾಟಿಸಿದ್ದು. ಇಂದು ಮೂರು ಕಾಸಿನ ಸಂಗೀತ ನಾಟಕ ಪ್ರದರ್ಶನ ಗೊಂಡಿದೆ. ಇನ್ನು ನಾಲ್ಕು ದಿನಗಳು ಮೊಕಾಮ್ ಪೋಸ್ಟ್ ಬೊಂಬಿಲವಾಡಿ, ಚೋಮನ ದುಡಿ, ಮೊದಲೆ ನೆನೆದೇವು, ಹಾಗು ಸಂದೇಶ ಸಾಮ್ರಾಜ್ಯ ನಾಟಕ ಪ್ರದರ್ಶನಗೊಳ್ಳಲಿವೆ. ಇನ್ನು ಈ ರಂಗೋತ್ಸವಕ್ಕೆ ರಾಜ್ಯಾದ್ಯಂತ ಹಲವು ಕಡೆಗಳಿಂದ ರಂಗಾಸಕ್ತತರು ಭಾಗವಹಿಸಲಿದ್ದು. ಮೈಸೂರಿನ ರಂಗಾಸಕ್ತತರಿಗೆ ಹಬ್ಬದ ವಾತಾವರಣಗಲಿದೆ.
ಭಾರತೀಯ ಕಲಾ ಪರಂಪರೆಯಲ್ಲಿ ರಂಗಭೂಮಿಗೆ ಅತ್ಯಂತ ಮಹತ್ವದ ಸ್ಥಾನ. ಜನರ ನೋವು ನಲಿವು, ದುಃಖ ದುಮ್ಮಾನ, ಸಿಟ್ಟು ಸೆಡವು ಎಲ್ಲವುಗಳ ನೇರ ಅಭಿವ್ಯಕ್ತಿ ರಂಗಭೂಮಿಯಲ್ಲಿ ಸಾಧ್ಯ. ಅಂತೆಯೇ ಮನುಷ್ಯನ ಅಂತರಂಗಕ್ಕೂ ಬಹಿರಂಗಕ್ಕೂ ನೇರ ಮುಖಾಮುಖಿ ಈ ರಂಗಭೂಮಿ. ಹಾಗಾಗಿಯೇ ಇದು ಮನುಷ್ಯನ ಸಾಧ್ಯತೆಗಳ ತಿಳಿವಿನ ವಿಸ್ತ್ತರಣೆಯೂ ಹೌದು.
ನಿರಂತರ ‘ರಂಗ ಉತ್ಸವ’ ಇಂಥ ಸಾಧ್ಯತೆಗಳ ವಿಸ್ತರಣೆಯಾಗಿ ಹೊರಹೊಮ್ಮಿದೆ. ಇದು ಕನ್ನಡದ ರಂಗ ಚಳುವಳಿಗೆ ನಿರಂತರದ ಅಳಿಲು ಪಾಲು. ರಾಜ್ಯದ ಹಾಗೂ ಹೊರ ರಾಜ್ಯಗಳ ರಂಗ ಕ್ರಿಯೆಗಳನ್ನು, ಚಟುವಟಿಕೆಗಳನ್ನು ಮೈಸೂರಿನಲ್ಲಿ ಆವಿರ್ಭವಿಸಿಕೊಳ್ಳುವ ಒಂದು ಪ್ರಯತ್ನವಾಗಿ ಮುಂದುವರಿದು ಯಶಸ್ಸನ್ನೂ ಕಂಡಿದೆ. ಭಾರತದ ಸಾಂಸ್ಕøತಿಕ ಕೊಡುಕೊಳ್ಳುವಿಕೆಯಲ್ಲಿ ಈ ರಂಗ ಉತ್ಸವ ಮಹತ್ವದ ಸ್ಥಾನ ನಿಭಾಯಿಸಿದೆ. ಭಿನ್ನ ಭಿನ್ನ ಪ್ರಾದೇಶಿಕ ನೆಲೆಗಳಲ್ಲಿ ಅಭಿವ್ಯಕ್ತಿಯೊಂದು ರೂಪು ತಳೆಯುವ ಬಗೆಯನ್ನು ಅದು ವ್ಯಕ್ತಪಡಿಸುವ ಸಾಂಸ್ಕøತಿಕ ಚಲನಶೀಲತೆಯನ್ನು ಕಾಣುವ, ಕಂಡು ಅರಿಯುವ ಪ್ರಯತ್ನವಾಗಿ ನಿರಂತರ ‘ರಂಗ ಉತ್ಸವ’ ಕಳೆದ ಒಂಬತ್ತು ವರ್ಷಗಳಿಂದ ಸಾಕಾರಗೊಳ್ಳುತ್ತಾ ಬಂದಿದೆ. ಇದು ಹತ್ತನೇ ರಂಗ ಉತ್ಸವ.
ಇದೊಂದು ಸಾಂಸ್ಕøತಿಕ ಹಬ್ಬ. ಐದು ದಿನಗಳ ಕಾಲ ಶ್ರೇಷ್ಠ ನಾಟಕಗಳು, ನಿರ್ದೇಶಕರು, ದೇಶದ ನಾನಾ ಭಾಗಗಳ ಕಲಾವಿದರು ಒಂದೆಡೆ ಸೇರಿ ಬೆರೆಯುವ ಹಾಗೂ ಪರಸ್ಪರ ಕೊಡು ಕೊಳ್ಳುವ ರಂಗ ಹಬ್ಬ. ಪ್ರತೀ ರಂಗ ಉತ್ಸವವೂ ಸಹ ನಾಡಿನ ಹೆಸರಾಂತ ಮತ್ತು ಸಂವೇದನಾಶೀಲ ವ್ಯಕ್ತಿಗಳಿಂದ ಉದ್ಘಾಟನೆಗೊಂಡು ಮುಂದುವರಿಯುತ್ತದೆ.
2009 ರಲ್ಲಿ ಆರಂಭವಾದ ರಂಗ ಉತ್ಸವವು ಜ್ಞಾನಪೀಠ ಪ್ರಶಸ್ತಿ ಪುರಸ್ಕøತರಾದ ‘ಚಂದ್ರಶೇಖರ ಕಂಬಾರ’ರಿಂದ ಉದ್ಘಾಟನೆಗೊಂಡು, ರಂಗಭೀಷ್ಮ ಬಿ ವಿ ಕಾರಂತರು ನಿರ್ದೇಶಿಸಿದ ಗೋಕುಲ ನಿರ್ಗಮನ ಮತ್ತು ಬ್ರೆಕ್ಟ್ನ ಮದರ್ ಕರೇಜ್ ಹಾಗೂ ಅಂಬೆ ಅಂಬಿಕೆ ಎಂಬ ನಾಡಿನ ಪ್ರಮುಖ ನಾಟಕಗಳು ಪ್ರದರ್ಶಿತಗೊಂಡವು. ಇನ್ನು ಎರಡನೇ ಉತ್ಸವವು 2010 ರಲ್ಲಿ ಖ್ಯಾತ ರಂಗಕಲಾವಿದ ಮತ್ತು ಚಿತ್ರನಟರಾದ ಸಿ ಆರ್ ಸಿಂಹ ಮತ್ತು ಸಾಹಿತಿಗಳಾದ ಲಿಂಗದೇವರು ಹಳೆಮನೆಯವರಿಂದ ಚಾಲನೆಯನ್ನು ಪಡೆದು, ಜೋಕುಮಾರಸ್ವಾಮಿ ಮತ್ತು ‘ಛತ್ತೀಸ್ಘಡದ ಛಾವ್ ನೃತ್ಯ’ದೊಂದಿಗೆ ಹಲವು ನಾಟಕಗಳು ಪ್ರದರ್ಶಿತಗೊಂಡವು. ಹೀಗೆ ನಂತರದ ಉತ್ಸವಗಳಲ್ಲಿ, ಸಾಹಿತಿಗಳಾದ ಪ್ರಭುಶಂಕರ, ಜನಪದ ವಿದ್ವಾಂಸರಾದ ಹಿ ಶಿ ರಾಮಚಂದ್ರೇಗೌಡರು, ರಂಗ ನಿರ್ದೇಶಕರಾದ ಬಿ ವಿ ರಾಜಾರಾಂ, ಗ್ರೀನ್ ಆಸ್ಕರ್ ವಿಜೇತರಾದ ಕೃಪಾಕರ, ಸೇನಾನಿ, ಚಿದಂಬರರಾವ್ ಜಂಬೆ, ಪ್ರಸನ್ನ (ಹೆಗ್ಗೋಡು), ಸಂಪಾದಕಾರದ ದಿವಂಗತ ರಾಜಶೇಖರ ಕೋಟಿ, ಸಾಹಿತಿಗಳಾದ ಜಯಂತ ಕಾಯ್ಕಿಣಿ, ಪಿ ಗಂಗಾಧರಸ್ವಾಮಿ, ಪ್ರೊ, ಕೆ ಎಸ್ ರಂಗಪ್ಪ, ಮುಂತಾದ ಹಲವು ಗಣ್ಯರಿಂದ ಉತ್ಸವವು ಉದ್ಘಾಟನೆಗೊಂಡು ಸಮಾರೋಪವನ್ನೂ ಕಂಡಿದೆ.
ಹಾಗೆಯೇ ರಾಜ್ಯದ ಮತ್ತು ದೇಶದ ನಾನಾ ಭಾಗಗಳಿಂದ ಹಲವಾರು ರಂಗತಂಡಗಳ ಹೆಸರಾಂತ ನಿರ್ದೇಶಕರ ನಾಟಕಗಳಾದ, ಹಯವದನ, ನೀರು ತಂದವರು, ಅಗ್ನಿಲೋಕ, ಮದುವೆ ಹೆಣ್ಣು, ಚಿರಕುಮಾರ ಸಭಾ, ಸಾಹೇಬರ ಸರ್ಕೀಟು, ಅಹಲ್ಯೆ, ನಂದರಾಜ ವಿನೋದ ಅರ್ಥಾತ್ ಶನಿಪ್ರಭಾವ, ರಬ್ಡಿ, ನಿಮಿತ್ತ, ತುಘಲಕ್, ಮರಾಠಿ ನಾಟಕ- ಆಷಾಟತ್ತಿಲ್ ಏಕ್ ದಿವಸ್, ಸಂಸ್ಕøತ ನಾಟಕ- ಪ್ರತಿಮಾ ನಾಟಕಂ, ಸೋರುತಿಹುದು ಸಂಬಂಧ, ಒರೆಸ್ತಿಸ್ ಪುರಾಣ, ಮೃತ್ಯುಂಜಯ, ಸೋರುತಿಹುದು ಸಂಬಂಧ, ರುಢಾಲಿ, ಚಕಾವ್ ಟು ಶಾಂಪೇನ್, ವಾಲಿವಧೆ, ಸ್ವಪ್ನವಾಸವದತ್ತ, ಮಹಾರಾಜ ಉಬು, ಮುಂತಾದ ಹತ್ತಾರು ನಾಟಕಗಳು ಪ್ರದರ್ಶನ ಕಂಡಿದೆ. ಇವುಗಳೊಂದಿಗೆ ನಿರಂತರದ ಟೀ ಹೌಸ್, ಶಿವರಾತ್ರಿ, ಕೂಡಲಸಂಗಮ, ರಸ್ತೆ ನಕ್ಷತ್ರದಂತಹ ಪ್ರಮುಖ ನಾಟಕಗಳೂ ಪ್ರದರ್ಶನಗೊಂಡಿದೆ.
ಇವೆಲ್ಲಾ ವಿಶೇಷಗಳೊಂದಿಗೆ ನಿರಂತರವು ರಾಷ್ಟ್ರಮಟ್ಟದ ರಂಗ ಉತ್ಸವವನ್ನು 2014-15ರಲ್ಲಿ ಹಮ್ಮಿಕೊಂಡು, ಇಡೀ ರಾಜ್ಯದ ಗಮನವನ್ನು ಸೆಳೆದಿದೆ. ಅತುಲ್ ಪೇಟೆ, ಪಣಿಕ್ಕರ್ರಂತಹ ಪ್ರಮುಖ ನಿರ್ದೇಶಕರ ನಾಟಕಗಳ ಪ್ರದರ್ಶನ, ಮುಖ್ತಿಯಾರ್ ಅಲಿರವರ ಸೂಫೀ ಸಂಗೀತ, ಹತ್ತಾರು ಜನಪದ ಕಲಾಪ್ರದರ್ಶನಗಳು, ರಂಗವಿಚಾರ ಸಂಕಿರಣ, ಸಂವಾದ, ಚರ್ಚೆ, ಛಾಯಾಚಿತ್ರ ಗ್ಯಾಲರಿ, ಚಿತ್ರಕಲಾ ಪ್ರದರ್ಶನ, ಮುಂತಾದ ಹತ್ತುಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ಒಂದು ಹವ್ಯಾಸಿ ತಂಡವಾಗಿ ಯಾವುದೇ ವೃತ್ತಿಪರ ತಂಡದ ಕಾರ್ಯಕ್ರಮಕ್ಕೂ ಕಡಿಮೆಯಿಲ್ಲದಂತೆ ಇಷ್ಟು ದೊಡ್ಡಮಟ್ಟದ ಕಾರ್ಯಕ್ರಮ ರೂಪಿಸಿ, ಎಲ್ಲರಿಂದಲೂ ಮನ್ನಣೆಗೆ ಪಾತ್ರವಾಯಿತು.
ಹೀಗೆ ಹವ್ಯಾಸಿಯಾದರೂ ವೃತ್ತಿಪರತೆಯಿಂದ ಕಳೆದ ವರ್ಷಗಳ ರಂಗ ಉತ್ಸವವನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದು ಇದೀಗ ಹತ್ತನೇ ವರ್ಷದ ರಂಗ ಉತ್ಸವಕ್ಕೆ ಅಣಿಯಾಗಿದೆ. ಈ ಬಾರಿಯೂ ಬ್ರೆಕ್ಟ್ನ ‘ಮೂರುಕಾಸಿನ ಸಂಗೀತ ನಾಟಕ’, ಮುಕ್ಕಾಂ ಪೋಸ್ಟ್ ಬೊಂಬಿಲವಾಡಿ, ಚೋಮನ ದುಡಿ, ನಿರಂತರದ ರಂಗಗೀತೆಗಳ ಪ್ರಸ್ತುತಿ, ಸಂದೇಹ ಸಾಮ್ರಾಜ್ಯ ನಾಟಕಗಳೊಂದಿಗೆ ಚಂಡೆವಾದನ, ತತ್ವಪದ ಗಾಯನ, ಸೋಮನ ಕುಣಿತ, ನೀಲಗಾರರ ಮೇಳದಂತಹ ಪ್ರಮುಖ ಜನಪದ ಕಲಾಪ್ರದರ್ಶನಗಳನ್ನು ಆಯೋಜಿಸಲಾಗಿದೆ. ಬದ್ಧತೆ, ಪ್ರಾಮಾಣಿಕತೆ, ನೈತಿಕತೆ, ಸಂವೇದನೀಯತೆಯಿಂದ ರೂಪಿಸಲಾದ ಈ ಎಲ್ಲಾ ಕಾರ್ಯಕ್ರಮಗಳೂ ಯಶಸ್ವಿಯಾಗಲು ಬೆನ್ನೆಲುಬಾಗಿ ನಿಂತ ನಾಡಿನ ಹಲವು ಹಿರಿಯರ ಮಾರ್ಗದರ್ಶನ ಪ್ರಮುಖ ಪಾತ್ರ ವಹಿಸಿದೆ. ಸಾಂಸ್ಕøತಿಕವಾಗಿ ನಾವೆಲ್ಲ ಚೂರು ಚೂರಾಗಿ ಒಡೆದು ಹೋಗುತ್ತಿರುವ ಈ ಇಕ್ಕಟ್ಟಿನ ಸಂದರ್ಭದಲ್ಲಿ ಇಂಥ ರಂಗ ಉತ್ಸವ ಜನರ ಒಳ ದನಿಯನ್ನು ಕಂಡುಕೊಳ್ಳುವ ಪ್ರಯತ್ನ ಮಾಡಲಿದೆ ಎಂಬ ಆಶಯದೊಂದಿಗೆ ಪ್ರತೀ ವರ್ಷವೂ ಈ ರಂಗಹಬ್ಬವನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮ್ಯಾಸ ನಾಯಕ ಬುಡಕಟ್ಟನಲ್ಲಿ ದೀಪಾವಳಿ ಹಬ್ಬದ ಆಚರಣೆ

ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ.
ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ. ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ.
ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ. ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.
ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸದ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು. ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ.
ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ. ಪ್ರಕೃತಿಯ ವಿಶಿಷ್ಟತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತಮ್ಮನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.
ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ. ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ.
ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ.
ತೆಲುಗಿನಲ್ಲಿ ಇದನ್ನು ‘ದುಯಿಲಪಂಡುವ’ ಎಂದು ಕರೆಯಲಾಗುತ್ತದೆ. ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ.ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ. ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ.ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ.
ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ. ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ.
ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ. ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ. ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ. ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿಂದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.
ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ್ಮಿಕ ಜಗತ್ತಿನಲ್ಲಿ ಸರ್ಪಣಾಭಾವ ಮತ್ತು ಪಾರಂಪರಿಕ ಸಂಬಂಧ ಮುಖ್ಯವಾಗಿರುತ್ತದೆ. ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನೆಲದನಿ
ಮ್ಯಾಸ ನಾಯಕ ಬುಡಕಟ್ಟಿನಲ್ಲಿ ದೂಲಿ ಹಬ್ಬದ ಆಚರಣೆ

- ಡಾ. ಸಿ ಬಿ ಅನ್ನಪೂರ್ಣ ಜೋಗೇಶ್, ನಿವೃತ್ತ ಪ್ರಾಂಶುಪಾಲರು, ಬೆಂಗಳೂರು
ಭಾರತ ತನ್ನ ಭೌಗೋಳಿಕ ಸ್ವರೂಪದಲ್ಲಿ ವೈವಿಧ್ಯತೆಯನ್ನು ಹೊಂದಿರುವಂತೆ ಅನೇಕ ಬಗೆಯ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿದೆ. ದೇಶದ ಪ್ರತಿಯೊಂದು ಸಮುದಾಯವು ಬದುಕಿನ ಕ್ರಮದಲ್ಲಿ ತನ್ನದೇ ಆದ ವೈವಿಧ್ಯತೆಯನ್ನು ಹೊಂದಿದ್ದು ಹಬ್ಬಗಳ ಆಚರಣೆಯಲ್ಲಿಯೂ ಈ ಭಿನ್ನತೆಯನ್ನು ಕಾಣಬಹುದಾಗಿದೆ.
ಈಗ ನಡೆಯುತ್ತಿರುವ ದೀಪಾವಳಿ ಹಬ್ಬದ ಆಚರಣೆಯೂ ಇದರಿಂದ ಹೊರತಾಗಿಲ್ಲ. ಇಡೀ ಭಾರತ ಸಂಭ್ರಮದಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದೆ ಎಂಬುದು ಸಾಮಾನ್ಯವಾದ ಹೇಳಿಕೆಯಾಗಿರುತ್ತದೆ. ದೀಪಾವಳಿ ಎಂದರೆ ದೀಪವನ್ನು ಬೆಳಗಿಸುವ ಹಬ್ಬ.
ಜಗದ ಕತ್ತಲೆಯನ್ನು, ಮನದ ಕತ್ತಲೆಯನ್ನು, ಕಳೆಯುವ ಹಬ್ಬ ಎಂಬುದು ಒಂದು ನಂಬಿಕೆಯಾದರೆ ಬಲಿಚಕ್ರರ್ತಿಯನ್ನು ವರ್ಷಕೊಮ್ಮೆ ನೆನಪಿಸಿಕೊಳ್ಳುವುದು, ನರಕಾಸುರನನ್ನು ಶ್ರೀ ಕೃಷ್ಣ ಪರಮಾತ್ಮ ಕೊಂದು ಆತನ ಸೆರೆಯಲ್ಲಿದ್ದ ಅಸಂಖ್ಯಾತ ಮಹಿಳೆಯರಿಗೆ ಬಿಡುಗಡೆ ದೊರಕಿಸಿದ ದಿನವಿದು ಎಂದು ನೆನೆಪಿಸಿಕೊಳ್ಳುವುದು ಹೀಗೆಲ್ಲಾ ಪ್ರಚಲಿತ ಪುರಾಣಮೂಲಗಳಿಂದ ಈ ಹಬ್ಬದ ಆಚರಣೆಯ ಸಾಂಕೇತಿಕತೆಯನ್ನು ಅರ್ಥೈಸಲಾಗುತ್ತದೆ.
ಈ ಎರಡೂ ಘಟನೆಗಳನ್ನು ಕುರಿತು ಬೇರೆ ಬೇರೆ ನೆಲೆಯಿಂದ ಯೋಚಿಸಿದಾಗ ಇದನ್ನು ದೇಶದಾದ್ಯಂತ ಎಲ್ಲರೂ ಸಡಗರಿಸಬೇಕೆ? ಆಳುವವರ ಸಡಗರ ಎಲ್ಲರ ಸಡಗರವಾಗಲೇಬೇಕಾದ ಅನಿವಾರ್ಯವೇ? ಎಂಬ ನೆಲೆಗಳಿಂದ ಅರ್ಥೈಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕಾಗುತ್ತದೆ.
ನಿಸರ್ಗಮೂಲ ಸಿದ್ದಾಂತವನ್ನು ಅನ್ವಯಿಸಿಕೊಂಡರೇ ಬಹುಶಃ ಈ ದೀಪಾವಳಿಯ ತಿಂಗಳು, ಅಂದರೇ ಕಾರ್ತಿಕ ಮಾಸ ಹವಾಮಾನದಲ್ಲಿ ವಿಶೇಷತೆಯಿದೆ. ಕಾರ್-ಅಂದರೇ ಮಳೆ ಸುರಿಯುವುದು. ಕರ್ತೀಕ ಅಂದರೇ ಮಳೆಗಾಲದ ಕೊನೆಯ ದಿನಗಳಿವು, ಹಿಂಗಾರಿನ ಕೊನೆಯ ಮಳೆಗಳು ಸುರಿಯುವ ಮತ್ತು ಇದರೊಂದಿಗೆ ಚಳಿಗಾಲವೂ ಆರಂಭವಾಗುವುದರಿಂದ ಮಂಜುಮುಸುಕಿದ ವಾತಾವರಣವೂ ಜೊತೆಗೂಡಿ ಕತ್ತಲೆಯ ಆಧಿಕ್ಯ ಹೆಚ್ಚು.
ಬಹುಶಃ ಈ ಕತ್ತಲೆಯನ್ನು ನಿವಾರಿಸಿಕೊಳ್ಳಲು ಮನೆಮನೆಯ ಮುಂದೆ ದೀಪಗಳನ್ನು ಹಚ್ಚಿ ಬೆಳಕನ್ನು ಕಂಡುಕೊಳ್ಳುವ ಉದ್ದೇಶವೂ ಇರಬಹುದೆನ್ನಿಸುತ್ತದೆ. ಒಟ್ಟಾರೆ ನಾಡಿನಾದ್ಯಂತ ಆಚರಿಸಲಾಗುವ ಈ ದೀಪಾವಳಿ ಹಬ್ಬವನ್ನು ಮ್ಯಾಸಮಂಡಲದಲ್ಲಿಯೂ ಆಚರಿಸಲಾಗುತ್ತದೆ. ಮ್ಯಾಸಬುಡಕಟ್ಟಿನ ದೇವರು ಕಾಣದ ಲೋಕದವರಲ್ಲ.
ಪ್ರಕೃತಿಯ ವಿಶಿಷ್ಟ್ಯತೆಯನ್ನೇ ದೈವ ಎಂದು ಭಾವಿಸಿ ಪೂಜಿಸುವುದು, ಸೃಷ್ಟಿಗೆ ಕಾರಣವಾಗುವ ತಾಯಿಯನ್ನೇ ಮೊದಲ ದೈವ ಎಂದು ಪೂಜಿಸುವುದು, ತಮಗೆ ಬದುಕನ್ನು ಕಟ್ಟಿಕೊಟ್ಟು ತನ್ನನ್ನು ಮುನ್ನಡೆಸಿದ ಹಿರಿಯರನ್ನೇ, ನಾಯಕರನ್ನೇ ತಮ್ಮದೇವರು ಎಂದು ಪೂಜಿಸುವುದು, ಮತ್ತು ತಮ್ಮ ಬದುಕಿಗೆ ಆಧಾರವಾಗಿದ್ದ ಪಶುಸಂಪತ್ತನ್ನೇ ತಮ್ಮ ಹಿರಿಯರೊಂದಿಗೆ ಸಮೀಕರಿಸಿ ದೈವಗಳೆಂದು ಭಾವಿಸಿ ಪೂಜಿಸುವುದು ಈ ಬುಡಕಟ್ಟಿನ ವಿಶೇಷತೆ. ತಮ್ಮ ನಾಯಕ ಅಥವಾ ನಾಯಕಿ ಬಳಸುತ್ತಿದ್ದ ವಸ್ತುವನ್ನು ಬಿದಿರಿನ ಬುಟ್ಟಿಯಲ್ಲಿಟ್ಟು, ಕೆಲವು ಕಡೆ ಸಾಲಿಗ್ರಾಮಗಳನ್ನು ಮತ್ತು ನಾಯಕ/ನಾಯಕಿ ಬಳಸುತ್ತಿದ್ದ ಬಿಲ್ಲು, ಬಾಣ/ ಖಡ್ಗವನ್ನೇ ದೇವರೆಂದು ನಂಬಿ ಪೂಜಿಸುವ ಸಮುದಾಯದಲ್ಲಿ ದೀಪಾವಳಿಯನ್ನು ಇವುಗಳಿಗೆ ಪೂಜೆ ಸಲ್ಲಿಸುವ ಮೂಲಕವೇ ಆಚರಿಸಲಾಗುತ್ತದೆ.
ಮ್ಯಾಸಮಂಡಲದ ಎಲ್ಲಾ ಗುಡಿಕಟ್ಟುಗಳಲ್ಲಿಯೂ ಮತ್ತು ಇದಕ್ಕೆ ಸಂಬಂಧಿಸಿದ ಎತ್ತಿನಗೂಡುಗಳಲ್ಲಿ ಈ ಹಬ್ಬದ ಆಚರಣೆ ನಡೆಯುತ್ತದೆ. ದೀಪಾವಳಿ ಅಮಾವಾಸ್ಯೆಕಳೆದು ಪಾಡ್ಯದ ಸೋಮವಾರ ಹೀರೆಹಳ್ಳಿಯ ದಡ್ಡಿಸೂರನಾಯಕನ ಗುಡಿಗೆ ಈತನಿಂದ ಸಂರಕ್ಷಿಸಲ್ಪಟ್ಟ ದನಕರುಗಳ ಪರಂಪರೆಯಿಂದ ಇಂದಿಗೂ ಉಳಿದು ಬಂದಿರುವ ಆಕಳ ಗೂಡಿನಿಂದ (ಗುಡೇಕೋಟಿ ಬಳಿ ಇರುವ} ಕಿಲಾರಿಗಳು ಮೊಸರು,ತುಪ್ಪವನ್ನು ತಂದು ಸೋಮವಾರ ಸಂಜೆ ಗುಡಿಗೆ ಒಪ್ಪಿಸುತ್ತಾರೆ. ತಮ್ಮ ಹೊಲಗಳಲ್ಲಿ ಬೆಳೆದ ಹಸನಾದ ಸಜ್ಜೆಯತೆನೆಗಳನ್ನು ತಂದು ಒಪ್ಪಿಸುವ ವಾಡಿಕೆಯೂ ಇದೆ.
ರಾತ್ರಿಯಿಡಿ ಎಲ್ಲರೂ ಸೇರಿ ಗುಡಿಯಲ್ಲಿ ಹುರುಳಿ, ಗುಗ್ಗರಿ ಬೇಯಿಸಿ ಜೋಳ ಅಥವಾ ಸಜ್ಜೆಯ ಅನ್ನ ಮಾಡಿ ಗೂಡಿನಿಂದ ತಂದ ಮೊಸರನ್ನು ಸೇರಿಸಿ ಬೆಳಗಿನಜಾವ ದಡ್ಡಿಸೂರನಾಯಕನಿಗೆ ನೈವೇದ್ಯ ಮಾಡಲಾಗುತ್ತದೆ. ರಾತ್ರಿಯಿಡೀ ಉರುಮೆ ವಾದ್ಯದ ಸೇವೆ, ನಾಯಕನನ್ನು ಕುರಿತು ಪದ ಹೇಳುವುದು ನಡೆಯುತ್ತದೆ, ಹೀಗೆ ಗುಡಿಯಲ್ಲಿ ನಡೆಯುವ ಪೂಜೆಯೇ ತಮಗೆ ದೀಪಾವಳಿ ಹಬ್ಬದ ಆಚರಣೆಯಾಗಿದ್ದು ಮನೆ ಮನೆಯ ಮುಂದೆ ದೀಪ ಬೆಳಗಿಸುವ, ರಂಗೋಲಿ ಹಾಕುವ, ಪಟಾಕಿ ಸಿಡಿಸುವ ಆಚರಣೆಗಳು ಇಲ್ಲಿ ಇರುವುದಿಲ್ಲ.
ಕಂಪಳ ದೇವರ ಹಟ್ಟಿಯಲ್ಲಿ ಇದಕ್ಕಿಂತ ಸ್ವಲ್ಪ ಭಿನ್ನವಾಗಿ ಹಬ್ಬದ ಆಚರಣೆ ನಡೆಯುತ್ತದೆ. ಮಾಘ ಮಾಸದಲ್ಲಿ ನಡೆಯುವ ಗುಗ್ಗರಿ ಹಬ್ಬದಲ್ಲಿ ಮಾಡುವಂತೆ ಈ ಸಮಯದಲ್ಲಿಯೂ ಅಮಾವಾಸ್ಯೆ ನಂತರದ ಶುಕ್ರವಾರದಂದು ಪೆಟ್ಟಿ ದೇವರನ್ನು ಗುಡಿಯಿಂದ ತಂದು ಹಟ್ಟಿಯ ಹೊರವಲಯದಲ್ಲಿ ಹೊಸ ಉದಿ/ಪದಿಯನ್ನು ಕಟ್ಟಿ ಇದರಲ್ಲಿ ಕೂರಿಸಿ ಮೂರು ದಿನಗಳ ಹಬ್ಬದ ಆಚರಣೆ ನಡೆಸಲಾಗುತ್ತದೆ. ಮ್ಯಾಸ ಭಾಷೆಯಲ್ಲಿ ಇದನ್ನು ‘ದೂಲಿ ಪಂಡುವ’ ಎಂದು ಕರೆಯಲಾಗುತ್ತದೆ.
ಕಂಪಳ ದೇವರ ಪೆಟ್ಟಿಯೊಂದಿಗೆ ಜಗಲೂರು ಪಾಪನಾಯಕನನ್ನು ಸಂಕೇತಿಸುವ ಬಿಲ್ಲು ದೇವರನ್ನೂ ತಂದು ಪೂಜಿಸಲಾಗುತ್ತದೆ. ಆಕಳಗೂಡಿನ ಮೀಸಲು ಮೊಸರು ಮತ್ತು ಬೆಣ್ಣೆಯನ್ನು ಅರ್ಪಿಸುವುದು
ಇಲ್ಲಿ ಬಹಳ ವಿಶೇಷವಾದುದು. ಗತಿಸಿದ ಎತ್ತು ಮತ್ತು ಆಕಳಿಂದ ಸಂಗ್ರಹಿಸಿದ ಕೊಂಬನ್ನು ಇಲ್ಲಿ ಬೆಣ್ಣೆಯನ್ನು ಶೇಕರಿಸಲು ಬಳಸಲಾಗುತ್ತದೆ. ಬುಡಕಟ್ಟಿನ ಜನತೆ ತಮಗೆ ಸಿಗುವ ವಸ್ತುಗಳನ್ನೇ ಸಲಕರಣೆಗಳನ್ನಾಗಿ ಬಳಸುವ ವಿಧಾನ ಇಲ್ಲಿ ಗಮನ ಸೆಳೆಯುತ್ತದೆ.
ಹೀಗೆ ಸಂಗ್ರಹಿಸಿದ ಬೆಣ್ಣೆಯನ್ನು ಕಾಯಿಸಿ ತುಪ್ಪ ಮಾಡಿ ಪದಿಯಲ್ಲಿ ದೀಪವನ್ನು ಉರಿಸಲಾಗುತ್ತದೆ. ಮೊಸರು,ಜೋಳದ/ಸಜ್ಜೆಯ ಅನ್ನ,ಬಾಳೆಹಣ್ಣು,ಬೆಲ್ಲವನ್ನು ಬೆಳಗಿನಜಾವದಲ್ಲಿ ನೈವೇದ್ಯ,ಮಾಡಲಾಗುತ್ತದೆ. ಇದರೊಂದಿಗೆ ಎತ್ತುಗಳನ್ನೂ ಹರಿಯಿಸುವುದು, ಮಣೇವು, ಉರಿಯುವ ಪಂಜುಗಳನ್ನೇ ನುಂಗುವುದು ಈ ಹಬ್ಬದ ಪ್ರಮುಖ ಆಚರಣೆಗಳಾಗಿವೆ.
ನನ್ನಿವಾಳದ ಕಟ್ಟಿಮನೆಗೆ ಸೇರಿದ ಬಂಗಾರುದೇವರ ಹಟ್ಟಿಯಲ್ಲಿ ದೇವರುಗಳನ್ನು ಮತ್ತು ಬೆಳಗಟ್ಟದ ಸೂರೆಯರಗಾಟನಾಯಕನಿಗೆ ಸಂಬಂಧಿಸಿದಂತೆ, ಬೋಸೇದೇವರ ಹಟ್ಟಿಯ ಬೋಸೇರಂಗಯ್ಯನ ಪೆಟ್ಟಿಗೆಯನ್ನು, ದೊಣಮಂಡಲಹಟ್ಟಿಯ ಮಂಡಬೊಮ್ಮದೇವರನ್ನು ಹಟ್ಟಿಯಿಂದ ಹೊರಗೆ ತಂದು ಊರ ಹೊರಗೆ ಹೊಸ ಪದಿಯನ್ನು ಕಟ್ಟಿ, ಗೂಡಿನಿಂದ ಎತ್ತುಗಳನ್ನು ಕರೆಸಿ ಗೌರವಿಸಿ ಪೂಜಿಸುವ ಕ್ರಮವಿದೆ. ಒಟ್ಟಾರೆ ಈಮ್ಯಾಸಮಂಡಲದ ದೀಪಾವಳಿ ಹಬ್ಬಕ್ಕೆ ಆಯಾ ಗುಂಪಿನವರೆಲ್ಲರೂ ಕಾಸು,ಹಾಲು, ಮೊಸರನ್ನು ಅರ್ಪಿಸಿ ಪಾಲ್ಗೊಳ್ಳುವಿಕೆಯೇ ಇಲ್ಲಿ ಸಾಮುದಾಯಿಕತೆಯ ಮಹತ್ವವನ್ನು ಪಡೆಯುತ್ತದೆ.
ಈ ದೀಪಾವಳಿ ಹಬ್ಬದ ಆಚರಣೆಯಲ್ಲಿಎಲ್ಲಾ ಪದಿಗಳಲ್ಲಯೂ ದಾಸೋಹ ವಿಶೇಷವಾಗಿ ನಡೆಯುತ್ತದೆ.ಮುಂಗಾರು ಮಳೆ ಸುರಿದು ಸೊಂಪಾಗಿ ಬೆಳೆದ ಹುಲ್ಲನ್ನು ತಿಂದು ಹಸುಗಳು ಸಾಕಷ್ಟು ಹಾಲನ್ನು ಕೊಡುವುದರಿಂದ ಸಮೃದ್ಧವಾದ ಹಾಲು,ಮೊಸರು ಈ ಹಬ್ಬಕ್ಕೆ ಒದಗುತ್ತದೆ.ಇದನ್ನು ಎಡೆ ಮಾಡಿದ ನಂತರ ಎಲ್ಲರಿಗೂ ದಾಸೋಹದಲ್ಲಿ ನೀಡಲಾಗುತ್ತದೆ.
ಈ ಬುಡಕಟ್ಟಿನ ದೀಪಾವಳಿ ಹಬ್ಬದ ಆಚರಣೆಯ ಹಿಂದೆ ನಮ್ಮ ಭಾರತದ ಪೌರಾಣಿಕ ಕಥನಗಳಾವುವು ಕೇಳಿ ಬರುವುದಿಲ್ಲ.ಮನೆ ಮನೆಯ ಮುಂದೆ ದೀಪಗಳನ್ನು ಹಚ್ಚಿ ಸಡಗರಿಸುವುದು ಇಲ್ಲಿಲ್ಲ.
ರಂಗೋಲಿ ಹಾಕುವುದಂತೂ ಬುಡಕಟ್ಟಿನ ನಿಶೇಧಗಳಲ್ಲಿ ಒಂದಾಗಿರುವುದರಿAದ ಆ ಪ್ರಸ್ತಾಪವೇ ಇಲ್ಲಿಲ್ಲ. ಬದಲಾಗಿ ತಮ್ಮ ಮನೆ ದೇವರಾದ ಪೆಟ್ಟಿಗೆ ದೇವರು/ಬಿಲ್ಲು ದೇವರು/ಎತ್ತುಗಳನ್ನು ಗೌರವಿಸಿ ಪೂಜಿಸುವುದು. ಈ ಮೂಲಕವಾಗಿಯೇ ತಮ್ಮ ಮುಂದಿನ ಬದುಕಿಗೆ ಬೇಕಾದ ಬೆಳಕನ್ನು, ಚೈತನ್ಯವನ್ನು ಕೋರುವುದು ಇಲ್ಲಿ ಮುಖ್ಯವಾಗಿರುತ್ತದೆ.
ತಾನು ಬದುಕಿರುವ ಪರಿಸರ, ತಮಗೆ ಬದುಕನ್ನು ಕಟ್ಟಿಕೊಡುವ ಪ್ರಾದೇಶಿಕತೆ ಮತ್ತು ಭೌತಿಕ ಪ್ರಪಂಚ ಮತ್ತು ತನಗೆ ನೈತಿಕ ಬೆಂಬಲವಾಗಿ ನಿಂತ ತನ್ನ ಸಾಂಸ್ಕೃತಿಕ ಜಗತ್ತು ಈ ಎಲ್ಲವುಗಳ ಮೂಲಕ ಒಡಮೂಡುವ ದೇಸಿತನ ಆಯಾ ಬುಡಕಟ್ಟಿನ ಆಚರಣೆಗಳಿಗೆ ಸೈದ್ಧಾಂತಿಕತೆಯನ್ನು ಒದಗಿಸಿಕೊಡುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಮ್ಯಾಸಬೇಡ ಬುಡಕಟ್ಟಿನ ಈ ದೀಪಾವಳಿ ಆಚರಣೆಯಲ್ಲಿ ಈ ದೇಸಿತನವೇ ಒಡಮೂಡಿರುವುದನ್ನು ಕಾಣಬಹುದಾಗಿದೆ.ಆದಿವಾಸಿಗಳ ಧರ್ಮಿಕ ಜಗತ್ತಿನಲ್ಲಿ ಸರ್ಪಣಾಭಾವ ಮತ್ತು ಪಾರಂಪರಿಕ ಸಂಬAಧ ಮುಖ್ಯವಾಗಿರುತ್ತದೆ.ಈ ಆಚರಣೆಗಳನ್ನು ಸಮುದಾಯದ ಸಾಂಸ್ಕೃತಿಕ ಅಸ್ಮಿತೆಗಳು ಎಂಬುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ನೆಲದನಿ
ಜಾನಪದದ ಬೇರು, ಶಿಕ್ಷಣ-ರಂಗಭೂಮಿಯ ತೇರು ‘ಡಾ.ಎಂ.ಜಿ. ಈಶ್ವರಪ್ಪ’

- ಡಾ.ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಪದವಿ ಪೂರ್ವಕಾಲೇಜು,ದಾವಣಗೆರೆ
ಕರ್ನಾಟಕ ಕಲೆ, ಸಾಹಿತ್ಯ, ಸಂಸ್ಕೃತಿ, ಸಂಗೀತ, ವೈಚಾರಿಕತೆ ಮತ್ತು ಮಾನವೀಯತೆಯ ನೆಲೆವೀಡು. ಈ ನಾಡು ಪಂಪ, ರನ್ನ, ಪೊನ್ನ, ಜನ್ನ, ಹರಿಹರ, ರಾಘವಾಂಕ, ಕುಮಾರವ್ಯಾಸರಂತಹ ಅನೇಕ ಕವಿಗಳು ನೆಲೆಸಿದ್ದ ಪುಣ್ಯಭೂಮಿ. ಕನ್ನಡ ಸಾಹಿತ್ಯ ಪರಂಪರೆಯಲ್ಲಿಜನಪದಕ್ಕೆ ಶ್ರೀಸಾಮಾನ್ಯರ, ವಚನಕ್ಕೆ ಶರಣರ, ಕೀರ್ತನ ಸಾಹಿತ್ಯಕ್ಕೆದಾಸರಕೊಡುಗೆಅಪಾರವಾಗಿದ್ದು ದೇಸಿ ನೆಲೆಗಟ್ಟಿನೊಂದಿಗೆ ಮೌಲ್ಯಪ್ರಜ್ಞೆ ಬಿತ್ತುವಲ್ಲಿ ಸಿದ್ಧಹಸ್ತವಾಗಿವೆ. ಕವಿವಾಣಿ ಹೂವಾದರೆಜನವಾಣಿ ಬೇರಾಗಿ ಕಂಗೊಳಿಸುತ್ತದೆ.
ಇಂತಹಜನಪದ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿಜಾನಪದ ವಿದ್ವಾಂಸರಾಗಿ ಗುರುತಿಸಿಕೊಂಡಿರುವ ಹಲವರಲ್ಲಿ ಮಧ್ಯಕರ್ನಾಟಕದ ಹೃದಯ ಭಾಗವಾದದಾವಣಗೆರೆ ನಗರದಲ್ಲಿ ನೆಲೆಸಿರುವ ಜಾನಪದತಜ್ಞರಾದಡಾ.ಎಂ.ಜಿ.ಈಶ್ವರಪ್ಪ ಪ್ರಮುಖರು.
ಬಾಲ್ಯ ಮತ್ತು ಶಿಕ್ಷಣ
ಜ್ಞಾನದಿಂ ಮೇಲಿಲ್ಲ, ಶ್ವಾನನಿಂ ಕೀಳಿಲ್ಲ
ಭಾನುವಿನಿಂದಧಿಕ ಬೆಳಕಿಲ್ಲ ಜಗದೊಳಗೆ
ಜ್ಞಾನವೇ ಮಿಗಿಲು ಸರ್ವಜ್ಞ
ಎಂಬ ನುಡಿಗೆ ಪೂರಕವಾಗಿಜ್ಞಾನದ ಹಾದಿಯನ್ನು ಹಿಡಿದು ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಚಿಂತಕರಾಗಿ, ವಿದ್ಯಾರ್ಥಿಗಳ ಅಚ್ಚು ಮೆಚ್ಚಿನಅಧ್ಯಾಪಕರಾಗಿ, ಉತ್ತಮ ಮಾತುಗಾರರಾಗಿ, ಸರ್ವರ ಮನಸ್ಸನ್ನುಗೆದ್ದಿರುವಡಾ.ಎಂ.ಜಿ. ಈಶ್ವರಪ್ಪ ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿ ಎಂಬ ಗ್ರಾಮದಲ್ಲಿ ಶ್ರೀಮತಿ ಗಿರಿಜಮ್ಮ ಮತ್ತು ಶ್ರೀ ರುದ್ರಪ್ಪ ದಂಪತಿಗಳ ಪುತ್ರರಾಗಿ 02-12-1950ರಲ್ಲಿ ಜನಿಸಿದರು.ತಂದೆ ಕೃಷಿ ಕಾಯಕವನ್ನು ಅವಲಂಬಿಸಿದ್ದರಿಂದ ಕೃಷಿ ಚಟುವಟಿಕೆಗಳನ್ನು ರೂಢಿಸಿಕೊಂಡು ಗ್ರಾಮೀಣ ಸೊಗಡನ್ನುಆಸ್ವಾದಿಸುತ್ತಿದ್ದರು.
ಪದವಿ ಶಿಕ್ಷಣವನ್ನು ವಿಜ್ಞಾನ ವಿಷಯದಲ್ಲಿ ಪೂರೈಸಿ ನಂತರ ಮೈಸೂರು ವಿಶ್ವವಿದ್ಯಾನಿಲಯದಿಂದಕನ್ನಡ ವಿಷಯದಲ್ಲಿಸ್ನಾತಕೋತ್ತರ ಪದವಿಯನ್ನು ಪಡೆದರು. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದ್ದಇವರುಖ್ಯಾತಜಾನಪದ ವಿದ್ವಾಂಸರಾದ ಜಿ.ಶಂ.ಪರಮಶಿವಯ್ಯ ಅವರ ಮಾರ್ಗದರ್ಶನದಲ್ಲಿ ‘ವ್ಯವಸಾಯಜಾನಪದ’ ಎಂಬ ವಿಷಯದ ಮೇಲೆ ಪಿಹೆಚ್.ಡಿ ಪದವಿಯನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಪಡೆದಿದ್ದಾರೆ.
ಅಧ್ಯಾಪಕರಾಗಿ ಎಂ.ಜಿ.ಈಶ್ವರಪ್ಪ
ಅರ್ಚಕಸ್ಯ ಪ್ರಭಾವೇನ ಶಿಲಾಭವತಿ ಶಂಕರಃ
ಆಚಾರ್ಯಸ್ಯ ಪ್ರಭಾವೇನ ಶಿಷ್ಯಭವತಿ ಸುಶಿಕ್ಷಿತಃ
ಎಂಬ ನುಡಿಯಂತೆ ವಿದ್ಯಾರ್ಥಿಗಳ ಮೆಚ್ಚಿನಅಧ್ಯಾಪಕರಾಗಿದಾವಣಗೆರೆಯ ಪ್ರತಿಷ್ಟಿತ ವಿದಾಕೇಂದ್ರವಾದ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅಧ್ಯಾಪಕ ಸಂಘ, ವಿದ್ಯಾರ್ಥಿ ಸಂಘಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಇವರುಎನ್,ಎಸ್.ಎಸ್ಅಧಿಕಾರಿಯಾಗಿ 11 ವರ್ಷಗಳ ಕಾಲ 6 ಶಿಬಿರಗಳನ್ನು ನಡೆಸಿ ಗ್ರಾಮೀಣಜನಜೀವನದ ಸಮಸ್ಯೆಗಳ ಪರಿಚಯವನ್ನು ಮಾಡಿಕೊಂಡರು. ನಂತರ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.
ರಂಗಭೂಮಿ ಮತ್ತುಈಶ್ವರಪ್ಪ
ಒಳ್ಳೆಯ ನಟ, ನಿರ್ದೇಶಕರಾಗಿಎಲ್ಲಾ ಕ್ಷೇತ್ರಗಳಲ್ಲೂ ಆಸಕ್ತಿ ಹೊಂದಿರುವಈಶ್ವರಪ್ಪನವರು ವಿದ್ಯಾರ್ಥಿದೆಸೆಯಿಂದಲೆ ರಂಗಭೂಮಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡವರು. ನಾಟಕಅಕಾಡೆಮಿಯ ಅಫಿಲಿಯೇಶನ್ ಪಡೆದಿರುವದಾವಣಗೆರೆಯ ಪ್ರತಿಷ್ಟಿತ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯಾದ “ಪ್ರತಿಮಾ ಸಭಾ” ದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ 25 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. 1979ರಲ್ಲಿ ವಿಶ್ವವಿದ್ಯಾನಿಲಯದಧನಸಹಾಯಆಯೋಗದಿಂದ ನಡೆದರಾಷ್ಟ್ರ ಮಟ್ಟದರಂಗಭೂಮಿ, ರಂಗನಟನೆ, ರಂಗ ನಿರ್ದೇಶನಕುರಿತಂತೆ ಕೇರಳದ ತ್ರಿಚೂರಿನ ಸ್ಕೂಲ್ಆಫ್ಡ್ರಾಮಾದಲ್ಲಿ ಭಾಗಿಯಾಗಿ, ಪ್ರತಿಮಾ ಸಭಾ ನಡೆಸಿದ ರಂಗ ಶಿಬಿರದಲ್ಲಿ ಕ್ರಿಯಾತ್ಮಕವಾಗಿ ಪಾಲ್ಗೊಂಡಿದ್ದಾರೆ.
ಈಡಿಪಸ್, ಸಂಕ್ರಾಂತಿ, ಸಂತೆಯಲ್ಲಿ ನಿಂತಕಬೀರ, ಸೆಜುವಾನಿನ ಸಾಧ್ವಿ, ಕೊಡೆಗಳು ಮುಂತಾದ ನಾಟಕಗಳಲ್ಲಿ ನಟಿಸಿದ್ದಾರೆ.ಜಾತ್ರೆ, ಸಾಯೋಆಟ, ಅಪ್ಪ, ಕಡೇಮನೆಕಡೇಗಲ್ಲಿ, ಹಳ್ಳಿಚಿತ್ರ, ಹಳ್ಳಿಮೇಷ್ಟು, ಮಾರೀಚನ ಬಂಧುಗಳು, ಇಲಿಬೋನು, ನಾಗನ ಕತೆ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದಾರೆ.ನಾಗನ ಕತೆ ನಾಟಕಕ್ಕೆಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಅಖಿಲ ಕರ್ನಾಟಕ ಮಕ್ಕಳ ಸಮ್ಮೇಳನದಲ್ಲಿ ಪ್ರಥಮ ಬಹುಮಾನ ಲಭಿಸಿದೆ.
1979 ರಲ್ಲಿ ಹೆಗ್ಗೋಡಿನಲ್ಲಿ ನಡೆದ ಚಲನಚಿತ್ರ ಸಹೃದಯ ಶಿಬಿರ, 1983 ರಲ್ಲಿರಂಗ ನಿರ್ದೇಶಕರ ಶಿಬಿರ, 1984ರಲ್ಲಿ ನಾಟಕಅಕಾಡೆಮಿಕೊಂಡಜ್ಜಿಯಲ್ಲಿ ನಡೆಸಿದ ನಾಟಕ ರಚನಾ ಶಿಬಿರದಲ್ಲಿ ಪಾಲ್ಗೊಂಡಿದ್ದಾರೆ. 1983ರಲ್ಲಿಕರ್ನಾಟಕ ನಾಟಕಅಕಾಡೆಮಿ ನೀಡಿದ ಧನಸಹಾಯದಿಂದ ದಿಗ್ಗಜ ಶ್ರೀ. ಬಿ.ವಿ ಕಾರಂತರ ಮಾರ್ಗದರ್ಶನದಲ್ಲಿ ಮಧ್ಯಪ್ರದೇಶದ ಭೋಪಾಲ್ ಮತ್ತುದೆಹಲಿಯಲ್ಲಿರಂಗಭೂಮಿಅಧ್ಯಯನ ನಡೆಸಿದ್ದಾರೆ.
1982 ರಲ್ಲಿ ಖ್ಯಾತ ಜಾನಪದ ವಿದ್ವಾಂಸರಾದ ಡಾ.ಜಿ.ಶಂ.ಪರಮಶಿವಯ್ಯ ಹಾಗೂ ದೆಹಲಿಯ ಜವಾಹರ್ಲಾಲ್ ನೆಹರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದಚಿತ್ರದುರ್ಗ, ಬಳ್ಳಾರಿ, ಧಾರವಾಡ ಜಿಲ್ಲೆಗಳ ಜಾನಪದಕಲಾವಿದರು ಮತ್ತುತಂತಿ ವಾದ್ಯಗಳ ಸಮೀಕ್ಷೆಯಲ್ಲಿ ಭಾಗಿಯಾಗಿದ್ದಾರೆ.ಕರ್ನಾಟಕದ ಇತರೆಡೆಗಳಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳಗಳಿಗೆ ಹಲವು ಬಾರಿಕಲಾವಿದರ ತಂಡಗಳ ನೇತೃತ್ವವನ್ನು ವಹಿಸಿದ್ದಾರೆ.
1986ರಲ್ಲಿಬೆಂಗಳೂರಿನಲ್ಲಿ ನಡೆದ ಸಾರ್ಕ್ ಸಮ್ಮೇಳನದಲ್ಲಿ ಚಿತ್ರದುರ್ಗಜಿಲ್ಲೆಯಕಿನ್ನರಿಜೋಗಿತಂಡದ ನೇತೃತ್ವವನ್ನು ವಹಿಸಿರುತ್ತಾರೆ.1987 ರಲ್ಲಿಕರ್ನಾಟಕ ವಿಶ್ವವಿದ್ಯಾನಿಲಯ ಮತ್ತು ಬಾಪೂಜಿ ವಿದ್ಯಾಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದಜಾನಪದ ಸಾಹಿತ್ಯ ಸಮ್ಮೇಳನ ಮತ್ತು ಕಲಾಮೇಳದ ಸಂಘಟನೆಯನ್ನು ಮಾಡಿಜಾನಪದರಂಗ ಪ್ರಕಾರಗಳನ್ನು ಆಧುನಿಕರಂಗಭೂಮಿಗೆ ಅಳವಡಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆ.
ಅಷ್ಟೇ ಅಲ್ಲದೆಜಾನಪದರಂಗಭೂಮಿಕುರಿತು ಸಾಕಷ್ಟು ತಜ್ಞ ಉಪನ್ಯಾಸಗಳನ್ನು ಆಕಾಶವಾಣಿಯಲ್ಲಿ ನೀಡಿದ್ದಾರೆ.1986 ಮತ್ತು1990 ರಲ್ಲಿಕರ್ನಾಟಕಜಾನಪದ ಮತ್ತುಯಕ್ಷಗಾನಅಕಾಡೆಮಿ ನಡೆಸಿದ ಜಾನಪದತಜ್ಞರ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ.
ಸಾಹಿತ್ಯ ಸೇವೆ
ಪುಸ್ತಕಗಳು ಜ್ಞಾನದ ಭಂಡಾರವಿದ್ದಂತೆ ಅವು ಮನುಷ್ಯನನ್ನುಉತ್ತಮ ಭವಿಷ್ಯಕ್ಕೆಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಮ್ಮಜ್ಞಾನವನ್ನುತಣಿಸುವ ಆಲಯಗಳಿವು ಎಂಬುದನ್ನರಿತ ಶ್ರೀಯುತರು ಮ್ಯಾಸಬೇಡರು, ಬೇಸಾಯ ಪದ್ಧತಿ, ಬಂಗಾರಕೂದಲ ಜೈರಾಣಿ, ಜಾನಪದ ಇಬ್ಬನಿಗಳು, ಸಾಹಿತ್ಯ ಸಂಚಲನ, ಕೃಷಿ ಜಾನಪದ, ಹುನಗುಂದ ಬಾಬಣ್ಣ…..ಹೀಗೆ ಸುಮಾರು 18 ಪುಸ್ತಕಗಳನ್ನು ಸಾಹಿತ್ಯಕ್ಷೇತ್ರಕ್ಕೆಕೊಡುಗೆಯಾಗಿ ನೀಡಿದ್ದಾರೆ.ಅಲ್ಲದೆ ಹಲವಾರು ಲೇಖನಗಳನ್ನು ಪ್ರಕಟಿಸಿದ್ದಾರೆ.
ಜೊತೆಗೆಜನಪದ, ವಚನ, ಬಂಡಾಯ ಮತ್ತುದಲಿತ ಸಾಹಿತ್ಯ ವಿಷಯಗಳ ಮೇಲೆ ವಿದ್ಯಾರ್ಥಿಗಳು ಪ್ರೌಢಪ್ರಬಂಧವನ್ನು ರಚಿಸಿ ಪಿಹೆಚ್.ಡಿ ಪದವಿ ಪಡೆಯಲು ಕುವೆಂಪು ವಿಶ್ವವಿದ್ಯಾನಿಲಯದಿಂದ ಮಾರ್ಗದರ್ಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ನಾಡಿನಎಲ್ಲ ಭಾಗಗಳಲ್ಲಿಯೂ ಸಂಚರಿಸಿ ಸಾಹಿತ್ಯಿಕ ಮತ್ತುಜಾನಪದ ವಿಷಯಗಳನ್ನು ಕುರಿತು ಉಪನ್ಯಾಸಗಳನ್ನು ನೀಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ 2 ಜಿಲ್ಲಾ ಸಮ್ಮೇಳನಗಳನ್ನು 2 ತಾಲೂಕು ಸಮ್ಮೇಳನಗಳನ್ನು ಹಾಗೂ ಗುಣಮಟ್ಟದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಸಂದ ಪ್ರಶಸ್ತಿಗಳು
ಶ್ರೀಯುತರ ಸಾಹಿತ್ಯ, ಜಾನಪದ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.
- 1993ರಲ್ಲಿ ಗುಂಡ್ಮಿಜಾನಪದ ಪ್ರಶಸ್ತಿ
- 1995 ಕು.ಶಿ. ಹರಿದಾಸ ಭಟ್ಟ ಪ್ರಶಸ್ತಿ
- 2000 ಕರ್ನಾಟಕ ನಾಟಕಅಕಾಡೆಮಿಗೌರವ ಫೆಲೋಷಿಪ್
- 2003 ಕರ್ನಾಟಕಜಾನಪದಅಕಾಡೆಮಿಯತಜ್ಞ ಪ್ರಶಸ್ತಿ
- 2010 ಹ.ಕ. ರಾಜೇಗೌಡಜಾನಪದ ಪ್ರಶಸ್ತಿ
2011ರಂಗ ಸಂಸ್ಥಾನ ಜಾನಪದ ಪ್ರಶಸ್ತಿ
- 2014ಮಹಲಿಂಗರಂಗ ಪ್ರಶಸ್ತಿ
- 2020ಕರ್ನಾಟಕರಾಜ್ಯೋತ್ಸವ ಪ್ರಶಸ್ತಿ
ತನ್ನ ನೋಡಲಿ ಎಂದುಕನ್ನಡಿಯುಕರೆವುದೆ
ತನ್ನಲ್ಲಿ ಜ್ಞಾನವುದಿಸಿದ ಮಹಾತ್ಮನು
ಕನ್ನಡಿಯಂತೆ ಸರ್ವಜ್ಞ
ಎಂಬ ನುಡಿಗೆ ಪೂರಕವಾಗಿ ಬದುಕುತ್ತಿರುವ ಡಾ.ಎಂ.ಜಿಈಶ್ವರಪ್ಪ ಒಳ್ಳೆಯ ಅಧ್ಯಾಪಕರಾಗಿ, ಜಾನಪದ ವಿದ್ವಾಂಸರಾಗಿ, ಶಿಕ್ಷಣ ತಜ್ಞರಾಗಿ, ಸಾಹಿತಿಯಾಗಿ, ಸರ್ವರ ಮನಸ್ಸನ್ನುಗೆದ್ದಿರುವಇವರು ಸದಾಕಾಲ ಹಸನ್ಮುಖಿ.ಎಲ್ಲರನ್ನು ಪ್ರೀತಿತುಂಬಿದ ಮನಸ್ಸಿನಿಂದ ಮಾತನಾಡಿಸುವ ಸರಳ ಸಜ್ಜನಿಕೆಯ ವ್ಯಕ್ತಿತ್ವದವರು.
ನಮ್ಮಂತಹ ಅನೇಕ ಕಿರಿಯ ಅಧ್ಯಾಪಕರಿಗೆ ಮಾರ್ಗದರ್ಶಕರಾಗಿರುವ ಈಶ್ವರಪ್ಪನವರುರಾಜ್ಯಮಟ್ಟದ 5 ನೇ ಭಕ್ತಿ ಸಾಹಿತ್ಯ ಸಮ್ಮೇಳನ ಪಂ.ಪುಟ್ಟರಾಜ ಸಾಹಿತ್ಯೋತ್ಸವದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಂತಸದ ವಿಷಯ. ಅಲ್ಲದೆ ನವೆಂಬರ್ 8 ರಂದು ಸಾಣೇಹಳ್ಳಿಯಲ್ಲಿ ನಡೆಯಲಿರುವರಾಷ್ಟ್ರೀಯ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಕೊಡಮಾಡುವ ಶ್ರೀ ಶಿವಕುಮಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ ಪರಮಪೂಜ್ಯ ಡಾ.ಶ್ರೀ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸನ್ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಪ್ರಶಸ್ತಿಯನ್ನು ಪಡೆಯುತ್ತಿರುವ ಡಾ.ಎಂ.ಜಿ.ಈಶ್ವರಪ್ಪನವರ ಸಾಧನೆಯ ಬದುಕು ನಮಗೆಲ್ಲ ಸ್ಫೂರ್ತಿಯಾಗಲಿ ಎಂಬ ಆಶಯದೊಂದಿಗೆ.
[ಅಕ್ಟೋಬರ್-30 ರಂದು ದಾವಣಗೆರೆಯಲ್ಲಿ ನಡೆಯಲಿರುವ 05ನೆಯ ರಾಜ್ಯಮಟ್ಟದ ಭಕ್ತಿ ಸಾಹಿತ್ಯ ಸಮ್ಮೇಳನ (ಪಂ.ಪುಟ್ಟರಾಜ ಸಾಹಿತ್ಯೋತ್ಸವ-2022)ದ ಸಮ್ಮೇಳನಾಧ್ಯಕ್ಷರಾಗಿ ಜಾನಪದ ವಿದ್ವಾಂಸ ಡಾ.ಎಂ.ಜಿ.ಈಶ್ವರಪ್ಪ ಆಯ್ಕೆಯಾಗಿದ್ದು ತನ್ನಿಮಿತ್ತ ಈ ಲೇಖನ]
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ6 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ2 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ4 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ1 day ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ