Connect with us

ದಿನದ ಸುದ್ದಿ

ಗ್ರಾಮ ಪಂಚಾಯತಿಗಳಲ್ಲಿ ಪಕ್ಷ ರಾಜಕೀಯ ಬೇಡ : ಸಚಿವ ಕೆ.ಎಸ್. ಈಶ್ವರಪ್ಪ

Published

on

ಸುದ್ದಿದಿನ,ದಾವಣಗೆರೆ :ಕೋವಿಡ್ ಸಂಕಷ್ಟ ಕಾಲದಲ್ಲಿ ನಗರಗಳಿಂದ ಗ್ರಾಮಗಳಿಗೆ ಮರಳಿದ ಅನೇಕ ಯುವಕರಿಗೆ ಗ್ರಾಮೀಣ ಉದ್ಯೋಗಖಾತ್ರಿ ನರೇಗಾ ಯೋಜನೆ ಸ್ಥಳೀಯವಾಗಿ ಕೆಲಸ ನೀಡುವ ಮೂಲಕ ಆರ್ಥಿಕ ನೆರವು ನೀಡುವುದರ ಜೊತೆಗೆ ಸ್ವಾಭಿಮಾನದ ಬದುಕನ್ನೂ ಸಹ ಕಲಿಸಿಕೊಟ್ಟಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೇಳಿದರು.

75ನೇ ವರ್ಷದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಮೈಸೂರು ಹಾಗೂ ಜಿಲ್ಲಾ ಪಂಚಾಯತಿ ಇವರುಗಳ ಸಹಯೋಗದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಅಭಿವೃದ್ಧಿ ವಿಷಯಗಳ ಕುರಿತು ನಗರದ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಏರ್ಪಡಿಸಿದ ಒಂದು ದಿನದ ಕಾರ್ಯಗಾರದ ಸಮಾರೋಪ ಭಾಷಣ ಮಾಡಿದರು.

ಕೋವಿಡ್ ಲಾಕ್‍ಡೌನ್ ಪರಿಣಾಮವಾಗಿ ನಗರಗಳಲ್ಲಿ ಉದ್ಯೋಗ ಕಂಡುಕೊಂಡಿದ್ದ ಅನೇಕ ಇಂಜಿನಿಯರ್‍ಗಳು, ಪದವೀಧರರು ಗ್ರಾಮಗಳಿಗೆ ಮರಳಿದ್ದು, ಇಂತಹ ಅನೇಕರು ನರೇಗಾ ಯೋಜನೆಯಡಿ ಕೂಲಿ ಕೆಲಸ ಮಾಡಿರುವ ನಿದರ್ಶನ ನಮ್ಮ ಮುಂದೆ ಇದೆ. ಕಳೆದ ವರ್ಷ ನರೇಗಾದಡಿ ರಾಜ್ಯಕ್ಕೆ 13 ಕೋಟಿ ಮಾನವದಿನಗಳ ಸೃಜನೆಯ ಗುರಿ ನೀಡಲಾಗಿತ್ತು. ಆದರೆ ಕಳೆದ ಡಿಸೆಂಬರ್ ನಲ್ಲಿಯೇ ಗುರಿ ಮೀರಿ ಸಾಧನೆ ಮಾಡಲಾಯಿತು.

ಹೀಗಾಗಿ ಕೇಂದ್ರ ಸರ್ಕಾರ ಕೂಡ ರಾಜ್ಯಕ್ಕೆ ಶಹಬ್ಬಾಸ್‍ಗಿರಿ ನೀಡಿ, ಇನ್ನೂ 2 ಕೋಟಿ ಹೆಚ್ಚುವರಿ ಮಾನವದಿನಗಳ ಸೃಜನೆಗೆ ಅವಕಾಶ ನೀಡಿ, 800 ಕೋಟಿ ರೂ. ಹೆಚ್ಚುವರಿ ಅನುದಾನ ನೀಡಿತ್ತು. ಹೀಗಾಗಿ ನರೇಗಾ ಯೋಜನೆ ಗ್ರಾಮೀಣರಿಗೆ ಆರ್ಥಿಕ ಸಬಲತೆ ನೀಡುವುದರ ಜೊತೆಗೆ ಸ್ವಾಭಿಮಾನದ ಬದುಕನ್ನೂ ನೀಡಿದೆ. ಈ ಯೋಜನೆಯಡಿ ಶಾಲಾ ಕಾಂಪೌಂಡ್, ತೋಟಗಾರಿಕೆ ವಿಸ್ತರಣೆ, ಕೃಷಿ ಜಮೀನುಗಳಲ್ಲಿ ಕೆಲಸ, ಕೆರೆ, ಕಲ್ಯಾಣಿ, ಮುಂತಾದ ಜಲರಕ್ಷಣೆ ಪ್ರದೇಶಗಳ ಹೂಳೆತ್ತಿ ಅಭಿವೃದ್ಧಿಪಡಿಸುವುದೂ ಸೇರಿದಂತೆ ಹಲವಾರು ಕಾಮಗಾರಿಗಳಿಗೆ ಅವಕಾಶಕೊಟ್ಟಿದೆ.

ಗ್ರಾಮ ಪಂಚಾಯತಿಗಳ ನೇತೃತ್ವ ವಹಿಸಿರುವ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಸರ್ಕಾರದ ಯೋಜನೆಗಳ ಬಗ್ಗೆ ಸರಿಯಾಗಿ ಮಾಹಿತಿ ಪಡೆದುಕೊಳ್ಳಬೇಕು. ಗ್ರಾಮಗಳಲ್ಲಿ ಯಾವುದೇ ಕುಟುಂಬ ಶೌಚಾಲಯ ರಹಿತವಾಗಿರಬಾರದು. ಯಾರೂ ಕೂಡ ರಸ್ತೆಗಳ ಬದಿಯಲ್ಲಿ ಶೌಚಕ್ಕೆ ಹೋಗುವ ಪರಿಸ್ಥಿತಿ ಇರಬಾರದು. ಪ್ರತಿಯೊಂದು ಗ್ರಾ.ಪಂ. ಗಳಲ್ಲಿ ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ಘಟಕ ಆಗಬೇಕು.

ಸ್ವಸಹಾಯ ಸಂಘದ ಒಕ್ಕೂಟದವರಿಗೆ ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ನೀಡಲು ಈಗಾಗಲೆ ಸೂಚನೆ ನೀಡಲಾಗಿದೆ. ಜಿಲ್ಲೆಯ 195 ಗ್ರಾ.ಪಂ. ಗಳ ಪೈಕಿ ಕೇವಲ 13 ಗ್ರಾ.ಪಂ. ಗಳಲ್ಲಿ ಮಾತ್ರ ಘನತ್ಯಾಜ್ಯ ವಿಲೇವಾರಿ ಘಟಕಗಳು ಆಗಿದ್ದು, ಒಂದು ವರ್ಷದ ಒಳಗಾಗಿ ಜಿಲ್ಲೆಯ ಎಲ್ಲ ಗ್ರಾ.ಪಂ. ಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭವಾಗಬೇಕು ಎಂದು ಸಚಿವರು ಹೇಳಿದರು.

ಮುಂದಿನ 05 ವರ್ಷಗಳ ಅವಧಿಯಲ್ಲಿ ಗ್ರಾಮಗಳ ಅಭಿವೃದ್ಧಿಗೆ ಕೈಗೊಳ್ಳಬೇಕಿರುವ ಕಾರ್ಯಗಳ ಬಗ್ಗೆ ಗುರಿ ನಿಗದಿಪಡಿಸಿಕೊಂಡು, ಪ್ರತಿ ವರ್ಷ ಅದನ್ನು ಸಾಧಿಸುವ ಮೂಲಕ ಮಾದರಿ ಗ್ರಾಮಗಳನ್ನು ನಿರ್ಮಿಸಬೇಕು. ಜನರ ಏಳಿಗೆಗೆ ಶ್ರಮಪಟ್ಟ ಬಗ್ಗೆ ಆತ್ಮತೃಪ್ತಿಯಾಗುವಂತೆ ಕೆಲಸ ಮಾಡಬೇಕು ಎಂದು ಸಚಿವರು ಮನವಿ ಮಾಡಿದರು. ಜಲ ಜೀವನ್ ಮಿಷನ್ ಯೋಜನೆ ಸಮರ್ಪಕವಾಗಿ ಬಳಕೆ ಮಾಡಿಕೊಂಡು ಗ್ರಾಮಗಳ ಮನೆ ಮನೆಗೆ ನಳ ಸಂಪರ್ಕದ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಿಡಿಒಗಳಿಗೆ ತರಬೇತಿ ಕಾರ್ಯಗಾರವನ್ನು ಜಿಲ್ಲಾ ಮಟ್ಟದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಆಯೋಜಿಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ ಸದ್ಯಸರಿಗೆ ತರಬೇತಿಯನ್ನು ತಾಲ್ಲೂಕು ಮಟ್ಟದಲ್ಲಿ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ಗ್ರಾ.ಪಂ. ಗಳಿಗೆ ಕೆರೆಗಳ ಉಸ್ತುವಾರಿ

ಈ ಮೊದಲು ಗ್ರಾಮಗಳ ವ್ಯಾಪ್ತಿಯಲ್ಲಿನ ಕೆರೆಗಳು ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಒಳಪಡುತ್ತಿದ್ದವು. ಇದೀಗ ಕೆರೆಗಳ ಸಂಪೂರ್ಣ ನಿರ್ವಹಣೆಯ ಹೊಣೆಯನ್ನು ಆಯಾ ಗ್ರಾಮ ಪಂಚಾಯತ್‍ಗಳಿಗೆ ನೀಡಿ ಆದೇಶ ಹೊರಡಿಸಲಾಗಿದೆ. ಹೀಗಾಗಿ ಗ್ರಾಮೀಣ ಕೆರೆಗಳ ಅಭಿವೃದ್ಧಿಯನ್ನು ಆಯಾ ಗ್ರಾ.ಪಂ. ಗಳೇ ನಿರ್ವಹಿಸಬೇಕು. ಕೆರೆಗಳ ಒತ್ತುವಾರಿ ಇದ್ದಲ್ಲಿ, ಡಿಸಿ ಮತ್ತು ಸಿಇಒ ಗಳ ಗಮನಕ್ಕೆ ತಂದು, ನಿಯಮಾನುಸಾರವಾಗಿ ಒತ್ತುವರಿ ತೆರವುಗೊಳಿಸುವುದು ಸೇರಿದಂತೆ ಕೆರೆಗಳ ಸಮಗ್ರ ನಿರ್ವಹಣೆ ಹಾಗೂ ಅಭಿವೃದ್ಧಿಗೆ ಗ್ರಾಮ ಪಂಚಾಯತ್‍ಗಳು ಸಹಕಾರ ನೀಡಬೇಕು ಎಂದು ಸಚಿವರು ಹೇಳಿದರು.

ಗ್ರಾಪಂ ಗಳಲ್ಲಿ ಪಕ್ಷ ರಾಜಕೀಯ ಬೇಡ

ಗ್ರಾಮ ಪಂಚಾಯತ್ ಚುನಾವಣೆಯನ್ನು ಪಕ್ಷ ರಹಿತವಾಗಿ ನಡೆಸುತ್ತೇವೆ. ಹೀಗಾಗಿ ಕೈಮುಗಿದು ಬೇಡಿಕೊಳ್ಳುತ್ತೇನೆ ಗ್ರಾಮ ಪಂಚಾಯತ್ ಮಟ್ಟದ ಚುನಾಯಿತ ಸದಸ್ಯರುಗಳು ಯಾವುದೇ ಕಾರಣಕ್ಕೂ ಪಕ್ಷ ರಾಜಕೀಯ ಮಾಡಬೇಡಿ, ಗ್ರಾಮಗಳ ಅಭಿವೃದ್ಧಿಗೆ ಮಾತ್ರ ಆದ್ಯತೆ ನೀಡಬೇಕು. ರಾಜಕೀಯ ಏನಿದ್ದರೂ ಲೋಕಸಭೆ, ವಿಧಾನಸಭೆ ಚುನಾವಣೆಗೆ ಮಾತ್ರ ಇರಲಿ. ಎಲ್ಲ ಗ್ರಾಮ ಪಂಚಾಯತ್ ಕಚೇರಿಗಳಿಗೂ ಸೋಲಾರ್ ಲೈಟಿಂಗ್ ವ್ಯವಸ್ಥೆ ಕಲ್ಪಿಸಲು ಆದೇಶ ಹೊರಡಿಸಲಾಗಿದ್ದು, ಜಿಲ್ಲೆಯಲ್ಲಿ ಕೇವಲ 25 ಗ್ರಾ.ಪಂ. ಗಳಿಗೆ ಮಾತ್ರ ಅಳವಡಿಸಲಾಗಿದೆ. ಮುಂದಿನ 6 ತಿಂಗಳ ಒಳಗಾಗಿ ಎಲ್ಲ ಗ್ರಾಮ ಪಂಚಾಯತಿ ಕಚೇರಿಗಳಿಗೂ ಸೋಲಾರ್ ಲೈಟಿಂಗ್ ಅಳವಡಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರು ಗ್ರಾಮಗಳ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಗುರಿಗಳನ್ನು ಹೊಂದಿರಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಗೆ ಆದ್ಯತೆ, ಜಾಬ್‍ಕಾರ್ಡ್ ವಿತರಣೆ, ಪಿಂಚಣಿ ಸೌಲಭ್ಯ, ಎಬಿಎಆರ್‍ಕೆ ಆರೋಗ್ಯ ಕಾರ್ಡ್, ಲೈಬ್ರರಿ ಮತ್ತು ಓದುವ ಬೆಳಕು ಕಾರ್ಯಕ್ರಮ, ಡಿಜಿಟಲ್ ಲೈಬ್ರರಿ, ಘನತ್ಯಾಜ್ಯ ವಿಲೇವಾರಿ ಸಂಸ್ಕರಣೆ, ಸೋಲಾರ್ ಪ್ರಾಜೆಕ್ಟ್ ಈ ಗುರಿಗಳನ್ನು ಅಭಿವೃದ್ಧಿ ಪಡಿಸಲು ಆದ್ಯತೆ ನೀಡುವಂತೆ ಸಲಹೆ ನೀಡಿದರು. ಅಲ್ಲದೆ ಎಲ್ಲ ಗ್ರಾಮಗಳಲ್ಲೂ ಕೋವಿಡ್‍ನ ಮೂರನೆ ಅಲೆ ನಿಯಂತ್ರಣಕ್ಕೆ ಆದ್ಯತೆ ನೀಡುವಂತೆ ಸೂಚನೆ ನೀಡಿದರು.

ಸಮಾರಂಭದಲ್ಲಿ ಜಗಳೂರು ಶಾಸಕ ಎಸ್.ವಿ. ರಾಮಚಂದ್ರ, ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎ. ರವೀಂದ್ರನಾಥ್, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನಾ ಸಮಿತಿಯ ಉಪಾಧ್ಯಕ್ಷ ಪ್ರಮೋದ್ ಹೆಗಡೆ, ಅಬ್ದುಲ್ ನಜೀರ್‍ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಸಂಸ್ಥೆಯ ಗಾಯತ್ರಿ, ಪರಿಸರವಾದಿ ಶಿವಾನಂದ ಕಳವೆ, ಜಯರಾಂ, ಜಿ.ಪಂ ಸಿಇಒ ಡಾ. ವಿಜಯಮಹಾಂತೇಶ್ ದಾನಮ್ಮನವರ್ ಉಪಸ್ಥಿತರಿದ್ದರು.

ನರೇಗಾ ಯೋಜನೆ ಅನುಷ್ಠಾನದಲ್ಲಿ 2019-20 ಹಾಗೂ 2020-21 ನೇ ವರ್ಷದಲ್ಲಿ ಉತ್ತಮ ಸಾಧನೆ ತೋರಿದ ವಿವಿಧ ಅಧಿಕಾರಿಗಳು ಹಾಗೂ ಪಿಡಿಒ ಗಳನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

Trending