Connect with us

ದಿನದ ಸುದ್ದಿ

ಐದು ವರ್ಷದಿಂದ 40 ಆಯುರ್ವೇದ ಆಸ್ಪತ್ರೆಗಳಲಿ ರೋಗಿಗಳೇ ಇಲ್ಲ

Published

on

ಸುದ್ದಿದಿನ ಡೆಸ್ಕ್: ಕೇಂದ್ರ ಸರಕಾರವು ಆಯುರ್ವೇದ ಔಷಧೀಯ ಪದ್ಧತಿಯನ್ನು ಪುಷ್ಟೀಕರಿಸಲು ಏನೆಲ್ಲಾ ಮಾಡಿದರೂ ರಾಜಸ್ಥಾನದ 40 ಆಯುರ್ವೇದ ಆಸ್ಪತ್ರೆಗಳಲ್ಲಿ ಕಳೆದ ಐದು ವರ್ಷಗಳಿಂದ ಒಬ್ಬ ರೋಗಿಯೂ ಬಂದಿಲ್ಲ.
ಸಿಎಜಿ ವರದಿಯಿಂದ ಈ ಮಾಹಿತಿ ಹೊರಬಿದ್ದಿದೆ. 2012-13ರಿಂದ ಹಿಡಿದು 201-17ರ ವರೆಗೆ ರಾಜಸ್ಥಾನದ ಯಾವುದೇ ಆಯುರ್ವೇದ ಆಸ್ಪತ್ರೆಗಳಲ್ಲಿ ರೋಗಿಗಳು ದಾಖಲಾದ ಪ್ರಕರಣಗಳೇ ಇಲ್ಲ. ಅಥವಾ ಚಿಕಿತ್ಸೆ ನೀಡಿದ ಮಾಹಿತಿಯೂ ಇಲ್ಲ. ಈ ಆಸ್ಪತ್ರೆಗಳ ಬೆಡ್ ಸಂಖ್ಯೆಯನ್ನು ಶೇ. 60ರಷ್ಟು ಹೆಚ್ಚಿಗೆ ಮಾಡಿ ಎಷ್ಟೇ ಅನುದಾನ ನೀಡಿದರೂ ಆಯುರ್ವೇದ ಚಿಕಿತ್ಸೆ ಬಗ್ಗೆ ನಂಬಿಕೆ ಇಟ್ಟು ಯಾವ ರೋಗಿಯೂ ಬರುತ್ತಿಲ್ಲ ಎಂದು ವರದಿ ಹೇಳಿದೆ.
ಇದಕ್ಕೆ ಕಾರಣಗಳೇನು ಎಂಬುದಾಗಿ ಸಿಎಜಿ ರಾಜಸ್ಥಾನ ಸರಕಾವನ್ನು ಕೇಳಿದ್ದು, ಸಿಬ್ಬಂದಿ ಕೊರತೆ, ಮೂಲ ಸೌಲಭ್ಯಗಳಿಲ್ಲದಿರುವುದು, ಹಾಗೂ ಆಯುರ್ವೇದ ಚಿಕಿತ್ಸೆ ಕುರಿತು ಜನರಿಗೆ ಅರಿವಿಲ್ಲದೆ ಇರುವುದು ಮುಖ್ಯ ಕಾರಣಗಳು ಎಂದು ಅಲ್ಲಿನ ಸರಕಾರ ಸಬೂಬು ನೀಡಿದೆ.

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು, ದಿನಪತ್ರಿಕೆ ಹಾಕುವವರು, ಅಸಕ್ತ ಸಾರ್ವಜನಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಹಾಗೂ ಪಾನ್ ಕಾರ್ಡ್ ದಾಖಲಾತಿಗಳೊಂದಿಗೆ ಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ನಲ್ಮ್ ಶಾಖೆ(ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ) ಮಹಾಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿಯನ್ನು ಹರಿಹರ ಪೌರಾಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.

ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಬೀದಿ...

ದಿನದ ಸುದ್ದಿ19 hours ago

ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ,...

ದಿನದ ಸುದ್ದಿ1 day ago

ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ...

ದಿನದ ಸುದ್ದಿ3 days ago

ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2024 ನೇ ಸಾಲಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ3 days ago

ಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ (ಕ್ರ್ಸ್ರೈಸ್)ಗಳಲ್ಲಿನ ಪ್ರಾಂಶುಪಾಲರು ವಸತಿ ಶಾಲೆಗಳ ಆವರಣದಲ್ಲಿರುವ ವಸತಿ ಗೃಹಗಳಲ್ಲಿ ವಾಸ್ತವ್ಯ ಇರುವ ಬಗ್ಗೆ...

ದಿನದ ಸುದ್ದಿ3 days ago

ಚನ್ನಗಿರಿ | ಕೆ ಹೊಸಳ್ಳಿ ಗ್ರಾಮದ ಶಾಲೆ ಎದುರೇ ಕೆರೆ ; ಸಾವಿನ ಸನಿಹ ಮಕ್ಕಳ‌ ಕಲಿಕೆ : ಕಾಂಪೌಂಡ್ ನಿರ್ಮಿಸಲು ಗ್ರಾಮಸ್ಥರ ಮನವಿಗೆ ಕಿವಿಗೊಡದ ಅಧಿಕಾರಿಗಳು

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆ ಹೊಸಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ತಡೆಗೋಡೆ (ಕಾಂಪೌಂಡ್) ಕಾಣದೇ ಇಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪ್ರತಿ ದಿನವೂ ಅಪಾಯದ ನಡುವೆಯೇ ತಮ್ಮ ಜೀವವನ್ನು...

ದಿನದ ಸುದ್ದಿ5 days ago

ಗಿರೀಶ್ ಕುಮಾರ್.ಜಿ ಅವರಿಗೆ ಪಿಎಚ್.ಡಿ ಪದವಿ

ಬಳ್ಳಾರಿ/ ವಿಜಯನಗರ:ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನಂಬರ್ 1. ಇಟಿಗಿ ಗ್ರಾಮದ, ಪ್ರಸ್ತುತ ಬಳ್ಳಾರಿ ನಗರದ ಕಪ್ಪಗಲ್ಲು ರಸ್ತೆಯ ಕೋಟೇಶ್ ಲೇಔಟ್ ನಿವಾಸಿಗಳಾದ ನಿವೃತ್ತ ಪೊಲೀಸ್ ಸಬ್...

ದಿನದ ಸುದ್ದಿ5 days ago

ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ...

ದಿನದ ಸುದ್ದಿ5 days ago

ನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

ಸುದ್ದಿದಿನ,ದಾವಣಗೆರೆ:ನವೆಂಬರ್ 10 ರ ಬೆಳಿಗ್ಗೆ 10 ಗಂಟೆ ಸುಮಾರಿಗೆ, ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ...

ದಿನದ ಸುದ್ದಿ5 days ago

ಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ನರೇಗಾ ಕಾರ್ಮಿಕರ ಆರೋಗ್ಯದ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ...

Trending