ದಿನದ ಸುದ್ದಿ
‘ಸೋಷಿಯಲ್ ಮೀಡಿಯಾ ಹಬ್’ ಯೋಜನೆಗೆ ನೋ ರೆಸ್ಪಾನ್ಸ್..?
ಪ್ರಮುಖಾಂಶಗಳು
• ಸೋಷಿಯಲ್ ಮೀಡಿಯಾ ಹಬ್ ಐಡಿಯಾ ಟೆಂಡರ್ ನಾಲ್ಕು ಬಾರಿ ಮುಂದೂಡಿಕೆ
• ಯೋಜನೆಯನ್ನು ಮರುಪರಿಶೀಲಿಸಲು ನಿರ್ಧಾರ
ಸುದ್ದಿದಿನ ಡೆಸ್ಕ್ : ಕೇಂದ್ರ ಸರ್ಕಾರದ ಬಹುನಿರೀಕ್ಷೆ ಮಹತ್ವಾಕಾಂಕ್ಷೆಯ ಯೋಜನೆಯಾದ “ಸೋಷಿಯಲ್ ಮೀಡಿಯಾ ಹಬ್” ಯೋಜನೆಯ ಟೆಂಡರ್ ಪಡೆದುಕೊಳ್ಳಲು ನಿರೀಕ್ಷಿತ ಬಿಡ್.ದಾರರು ನಿರಾಸಕ್ತಿ ವ್ಯಕ್ತವಾಗುತ್ತಿದೆ.
ಈ ಪ್ರಾಜೆಕ್ಟ್ನ ಹೊಣೆ ಹೊತ್ತಿರುವ ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಟೆಂಡರ್ ಕೊನೆಯ ದಿನಾಂಕವನ್ನು ಮುಂದೂಡಿದ್ದು, ಇದು ನಾಲ್ಕನೇ ಬಾರಿ ಟೆಂಡರ್ ಪ್ರಕ್ರಿಯೆಯನ್ನು ಮುಂದಕ್ಕೆ ಹಾಕಿದೆ. ಯೋಜನೆ ಆರಂಭಕ್ಕೂ ಮೊದಲು ಟೆಂಡರ್ ದಾರರಿಂದ ನಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಿಡಿಯಾ ಹಬ್.ಗೆ ಸಾಫ್ಟ್ವೇರ್ ಒದಗಿಸಲು ಬಿಇಸಿಐಎಲ್ (BECIL) ಮೇ 17ರಂದು ಟೆಂಡರ್ ಕರೆದಿತ್ತು. ಆದರೆ, ಯಾವುದೇ ಬಿಡ್.ದಾರರು ಮುಂದೆಬಾರದ ಕಾರಣ ಟೆಂಡರ್ ದಿನಾಂಕ ಮೇ 24ಕ್ಕೆ ವಿಸ್ತರಣೆಗೊಂಡಿತು. ಆಗಲೂ ಯಾರೂ ಬರದಿದ್ದರಿಂದ ಅದು ಮೇ 31ಕ್ಕೆ ಮುಂದಕ್ಕೆ ಹೋಯಿತು. ಆನಂತರ ಜೂನ್ 18ರಿಂದ ಆಗಸ್ಟ್ 20ಕ್ಕೆ ದಿನಾಂಕ ಮುಂದೂಡಲಾಗಿದೆ.
ಟೆಂಡರನ್ನು ನಾಲ್ಕು ಬಾರಿ ಮುಂದೂಡಿದಾಗಲೂ ನಿರೀಕ್ಷಿತ ಟೆಂಡರ್ ದಾರರು ಅರ್ಜಿ ಹಾಕಿರಲಿಲ್ಲ. ಹೀಗಾಗಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಯೋಜನೆಯನ್ನು ಪುನರ್ವಿಮರ್ಶಿಸಲು ನಿರ್ಧರಿಸಿದೆ
ಎಂದು ಇಲಾಖೆ ಮೂಲಗಳು ತಿಳಿಸಿವೆ.
ಯೋಜನೆ ಅಧ್ಯಯನಕ್ಕೆ ಸೂಚನೆ
ಇನ್ಫಾರ್ಮೇಶನ್ ಮತ್ತು ಬ್ರಾಡ್ಕಾಸ್ಟಿಂಗ್ ಇಲಾಖೆಯ ಹೊಸ ಕಾರ್ಯದರ್ಶಿ ಅಮಿತ್ ಖರೆ ಅಧಿಕಾರ ವಹಿಸಿಕೊಂಡ ನಂತರ ಯೋಜನೆಯನ್ನು ಕೆಲದಿನಗಳ ವರೆಗೆ (ಹೋಲ್ಡ್) ತಡೆಹಿಡಿದು, ಅದನ್ನು ಅಧ್ಯಯನ ಮಾಡಲು ಕೋರಿದ್ದು, ಹಬ್ ಬಳಸಿಕೊಳ್ಳಲು ಇರುವ ನೀತಿ, ನಿಯಮಗಳ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಸೂಚಿಸಿದ್ದಾರೆ.
ಸೋಷಿಯಲ್ ಮಿಡಿಯಾ ಹಬ್ ಯೋಜನೆಗೆ ವಿವಾದ ಸುತ್ತಿಕೊಂಡಿದ್ದು, ಈ ಬಗ್ಗೆ ಅನೇಕರು, ಪರೋಕ್ಷ ತನಿಖೆ ಹಾಗೂ ಮತದಾರರ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುವ ಉದ್ದೇಶ ಹೊಂದಿದ್ದು, ಸೋಷಿಯಲ್ ಮಿಡಿಯಾ (ಫೇಸ್ ಬುಕ್, ಟ್ವಿಟರ್, ಇನ್ಸ್ಟಾಗ್ರಾಮ್ ಹಾಗೂ ಇಮೇಲ್) ಮೇಲೆ ನಿಗಾ ಇಡುವ ಹಿಡನ್ ಅಜೆಂಡಾ ಇದೆ. ಈ ಉದ್ದೇಶದಿಂದಾಗಿ ಯೋಜನೆಯ ನಿರ್ವಹಣೆ ಸ್ಥಳೀಯ ಮಟ್ಟದಲ್ಲೇ ಬಹು ಭಾಷೆಯಲ್ಲಿ ನಡೆಯಲಿದೆ.
ವ್ಯಕ್ತಿಯ ಪ್ರೈವಸಿ ಧಕ್ಕೆ; ಬಳಕೆದಾರರ ವರ್ಗೀಕರಣ
ಸೋಷಿಯಲ್ ಮಿಡಿಯಾದಲ್ಲಿ ನಡೆಯುವ ಸಂಭಾಷಣೆ, ಚರ್ಚೆ, ಮಾತುಕತೆ, ವ್ಯಕ್ತಿಯ ಪ್ರೈವಸಿ ಮೇಲೆ ನಿಗಾ ಇಡಲಿದೆ. ಸೋಷಿಯಲ್ ಮಿಡಿಯಾದಲ್ಲಿ ನಡೆಯುವ ಚರ್ಚೆ ಆಧರಿಸಿ ಬಳಕೆದಾರರನ್ನು ವರ್ಗೀಕರಣ ಮಾಡಲಿದೆ. ಸಂಭಾಷಣೆ ಆಧರಿಸಿ ಪಾಸಿಟಿವ್, ನೆಗೆಟಿವ್, ನ್ಯೂಟ್ರಲ್ ಎಂದು ಮೂರು ಗುಂಪುಗಳನ್ನಾಗಿ ವರ್ಗೀಕರಿಸಲಿದೆ ಎಂದು ಹೇಳಲಾಗುತ್ತಿದೆ.
ಕಣ್ಗಾವಲಿಗೆ ಪತ್ರಕರ್ತರ ನೇಮಕ
ಬಳಕೆದಾರರಿಗೆ ಸರ್ಕಾರದ ಯೋಜನೆಗಳ ಮಾಹಿತಿ ಹಾಗೂ ರಾಜಕೀಯ ಸುದ್ದಿಗಳು ತಲುಪುವ “ರಿಯಲ್ ಟೈಮ್” ಅನ್ನು ಟ್ರ್ಯಾಕ್ ಮಾಡುವ ಉದ್ದೇಶ ಹೊಂದಿದೆ ಎಂಬ ಆರೋಪವಿದೆ. ಸೋಷಿಯಲ್ ಮಿಡಿಯಾದ ನಿಗಾ ಇಡುವುದ್ದಾಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ಪತ್ರಕರ್ತರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಇರಾದೆ ಸರ್ಕಾರಕ್ಕಿದೆ.
ನೆಗೆಟಿವ್ ಒಪಿನಿಯನ್ ಪಾಸಿಟಿವ್ ಮಾಡುವ ಉದ್ದೇಶ
ಸರ್ಕಾರದ ಯೋಜನೆಗಳ ಬಗ್ಗೆ ನಕಾರಾತ್ಮಕ ಅಭಿಪ್ರಾಯಗಳನ್ನು ಸಕಾರಾತ್ಮಕವಾಗಿ ಪರಿವರ್ತಿಸಿ, ಸರ್ಕಾರದ ಯೋಜನೆಗಳನ್ನು ಪ್ರಮೋಟ್ ಮಾಡಲು ಸಲಹೆ, ಸೂಚನೆ ಪಡೆದುಕೊಳ್ಳುವ ಉದ್ದೇಶ ಹೊಂದಿದೆ.
ಸುದ್ದಿದಿನ|ವಾಟ್ಸಾಪ್|9986715401

ದಿನದ ಸುದ್ದಿ
ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ
ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ ಚಿಕಿತ್ಸೆಗಳು ನೋವು ಕಡಿಮೆ ಮಾಡುವುದರ ಜೊತೆಗೆ, ರೋಗಿಗಳು ಮತ್ತೆ ಸ್ವತಂತ್ರವಾಗಿ ನಡೆಯಲು, ದಿನನಿತ್ಯದ ಚಟುವಟಿಕೆಗಳಿಗೆ ಮರಳಲು ಮತ್ತು ಆತ್ಮವಿಶ್ವಾಸದಿಂದ ಬದುಕಲು ನೆರವಾಗುತ್ತಿವೆ ಎಂದು ಮಣಿಪಾಲ್ ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರ ಚಿಕಿತ್ಸಾ ತಜ್ಞರಾದ ಡಾ. ಲೋಕೇಶ್ ಎ. ವೀರಪ್ಪ ತಿಳಿಸಿದರು.
ಬುಧವಾರ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು
‘ಆರೋಗ್ಯಕರ ವಯೋವೃದ್ಧತೆ: ಅಸ್ತಿ ಸಮಸ್ಯೆಗಳ ನಿರ್ವಹಣೆ ಮತ್ತು ಪರಿಣಾಮಕಾರಿ ಚಿಕಿತ್ಸಾ ವಿಧಾನಗಳು ಕುರಿತು ಮೂಳೆ ಆರೋಗ್ಯದ ಮಹತ್ವವನ್ನು ಒತ್ತಿ ಹೇಳಿದರು.
ಇಂದಿನ ದಿನಗಳಲ್ಲಿ ಮೊಣಕಾಲು, ಸೊಂಟ ಮತ್ತು ಭುಜ ಸಂಧಿ ಸಮಸ್ಯೆಗಳು, ವಿಶೇಷವಾಗಿ ವಯೋವೃದ್ಧರಲ್ಲಿ ಹೆಚ್ಚುತ್ತಿವೆ. ‘ಇಂದು ಜನರು ಕೇವಲ ನೋವು ನಿವಾರಣೆಯನ್ನು ಮಾತ್ರ ಬಯಸುವುದಿಲ್ಲ. ಅವರು ಸುಲಭವಾಗಿ ನಡೆಯಲು, ಮೆಟ್ಟಿಲೇರಲು, ಮತ್ತೆ ಕೆಲಸಕ್ಕೆ ಹೋಗಲು, ಪ್ರವಾಸ ಮಾಡಲು ಮತ್ತು ಚುರುಕಿನ ಜೀವನವನ್ನು ಮುಂದುವರಿಸಲು ಬಯಸುತ್ತಾರೆ,” ಎಂದು ಹೇಳಿದರು.
“ರೋಬೋಟಿಕ್ ಜಾಯಿಂಟ್ ರಿಪ್ಲೇಸ್ಟೆಂಟ್ ಶಸ್ತ್ರಚಿಕಿತ್ಸೆ ಅಸ್ತಿ ಚಿಕಿತ್ಸೆಯ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯನ್ನು ತಂದಿದೆ. ರೋಗಿಯ ದೇಹರಚನೆಗೆ ಅನುಗುಣವಾಗಿ ಶಸ್ತ್ರಚಿಕಿತ್ಸೆಯನ್ನು ಹೆಚ್ಚು ನಿಖರವಾಗಿ ಯೋಜಿಸಲು ಈ ತಂತ್ರಜ್ಞಾನ ಸಹಕಾರಿಯಾಗಿದೆ. ಇದರಿಂದ ಇಂಪ್ಲಾಂಟ್ಗಳ ಸರಿಯಾದ ಅಳವಡಿಕೆ, ಉತ್ತಮ ಜಾಯಿಂಟ್ ಅಲೈನ್ಮೆಂಟ್ ಮತ್ತು ಸಹಜ ಚಲನೆಯ ಸಾಧ್ಯತೆ ಹೆಚ್ಚುತ್ತದೆ. ರೋಗಿಗಳಿಗೆ ಕಡಿಮೆ ರಕ್ತಸ್ರಾವ, ಕಡಿಮೆ ಶಸ್ತ್ರಚಿಕಿತ್ಸೆತರ ನೋವು, ವೇಗವಾದ ಚೇತರಿಕೆ ಹಾಗೂ ಬೇಗನೆ ಸಾಮಾನ್ಯ ಜೀವನಕ್ಕೆ ಮರಳುವ ಅವಕಾಶ ದೊರೆಯುತ್ತದೆ. ಮೊಣಕಾಲು ಮತ್ತು ಸೊಂಟದ ಸಂಪೂರ್ಣ ಅಥವಾ ಭಾಗಶಃ ಜಾಯಿಂಟ್ ಬದಲಾವಣೆ (TKR/PKR) ಶಸ್ತ್ರ ಚಿಕಿತ್ಸೆಗಳಲ್ಲಿ ಈ ತಂತ್ರಜ್ಞಾನ ಉತ್ತಮ ಫಲಿತಾಂಶ ನೀಡುತ್ತಿದೆ,” ಎಂದರು.
“ಇದರ ಜೊತೆಗೆ ಭುಜದ ಆರ್ಥೋಸ್ಕೋಪಿ ಅಥವಾ ‘ಕೀಹೋಲ್ ಸರ್ಜರಿ’ಯಂತಹ ಅತ್ಯಾಧುನಿಕ ಚಿಕಿತ್ಸೆಗಳಲ್ಲಿಯೂ ಉತ್ತಮ ಫಲಿತಾಂಶಗಳನ್ನು ಕಾಣುತ್ತಿದ್ದೇವೆ. ಭುಜದ ಡಿಪ್ಲೊಕೇಶನ್ (ಭುಜದ ಕೀಲಿನ ಸರಿತ) ರೋಟೇಟರ್ ಕಫ್ (ಹರಿದ ಭುಜದ ಮಾಂಸ ಖಂಡ) ಗಾಯಗಳು, ಫೋಜನ್ ಶೋಲ್ಡರ್ (ಭುಜದ ಬಿಗಿತ) ಮೊದಲಾದ ಸಮಸ್ಯೆಗಳು ಬಹಳ ಸಾಮಾನ್ಯವಾಗಿದ್ದು, ಸಮಯಕ್ಕೆ ಚಿಕಿತ್ಸೆ ಪಡೆಯದೇ ಇದ್ದರೆ ದೈನಂದಿನ ಚಟುವಟಿಕೆಗಳ ಮೇಲೆಯೇ ಪರಿಣಾಮ ಬೀರುತ್ತವೆ. ಈಗ ಮಿನಿಮಲ್ಲಿ ಇನ್ನೇಸಿವ್ ಸರ್ಜರಿಸ್ ಅಂದರೆ ಅತಿ ಸಣ್ಣ ಕಟ್ ಮೂಲಕ ಮಾಡುವ ಈ ಶಸ್ತ್ರಚಿಕಿತ್ಸೆಗಳು ರೋಗಿಗಳಿಗೆ ಕಡಿಮೆ ನೋವು ಹಾಗೂ ವೇಗವಾದ ಚೇತರಿಕೆಯನ್ನು ನೀಡುತ್ತಿವೆ, ಎಂದು ತಿಳಿಸಿದರು.
ಇದೇ ವೇಳೆ, ಸಂಕೀರ್ಣ ಪೆಲ್ವಿಕ್ ಟ್ರಾಮಾ ಶಸ್ತ್ರಚಿಕಿತ್ಸೆಗಳು, ‘ಕಪ್ ಅಂಡ್ ಬಾಲ್’ ಜಾಯಿಂಟ್ ಸಂಬಂಧಿತ ಪ್ರೊಸೀಜರ್ಗಳು, ಹಾಗು ಮೊಣಕಾಲು, ಅಂಕಲ್ ಮತ್ತು ಮೊಣಕೈಗೆ ಸಂಬಂಧಿಸಿದ ಮಿನಿಮಲಿ ಇನ್ನೇಸಿವ್ ಕೀಹೋಲ್ ಶಸ್ತ್ರಚಿಕಿತ್ಸೆಗಳ ಕುರಿತು ಕೂಡ ಅವರು ಮಾಹಿತಿ ಹಂಚಿಕೊಂಡರು.
ಇವುಗಳ ಪ್ರಮುಖ ಉದ್ದೇಶ ರೋಗಿಗಳ ಚಲನವಲನವನ್ನು ಪುನಃಸ್ಥಾಪಿಸಿ, ಅವರನ್ನು ಆತ್ಮವಿಶ್ವಾಸದಿಂದ ದಿನನಿತ್ಯದ ಬದುಕಿಗೆ ಮರಳಿಸುವುದಾಗಿದೆ ಎಂದು ಹೇಳಿದರು.
ಸಂವಾದದ ವೇಳೆ ವೈದ್ಯರು, ದಾವಣಗೆರೆ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಂದ ಅನೇಕ ರೋಗಿಗಳು ಸಂಕೀರ್ಣ ಅಸ್ಥಿ ಚಿಕಿತ್ಸೆಗಳು ಹಾಗೂ ಅತ್ಯಾಧುನಿಕ ಜಾಯಿಂಟ್ ಕೇರ್ಗಾಗಿ ಹಳೆ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ನಿರಂತರವಾಗಿ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು.
ಈ ದೀರ್ಘಕಾಲದ ವಿಶ್ವಾಸವನ್ನು ಗುರುತಿಸಿಕೊಂಡಿರುವ ಆಸ್ಪತ್ರೆ, ರೋಬೋಟಿಕ್ ನೆರವಿನ ಶಸ್ತ್ರಚಿಕಿತ್ಸೆಗಳು, ವಿಶೇಷ ಅಸ್ಥಿ ತಜ್ಞರ ಸೇವೆಗಳು ಮತ್ತು ಪುನಶ್ವೇತನ ಚಿಕಿತ್ಸೆಯನ್ನು ಮಧ್ಯ ಕರ್ನಾಟಕದ ಜನರಿಗೆ ಇನ್ನಷ್ಟು ಸುಲಭವಾಗಿ ಲಭ್ಯವಾಗುವಂತೆ ಮಾಡುವ ಬದ್ಧತೆಯನ್ನು ಪುನರುಚ್ಛರಿಸಿತು. “ನಮ್ಮ ಉದ್ದೇಶ ಕೇವಲ ಶಸ್ತ್ರಚಿಕಿತ್ಸೆ ನಡೆಸುವುದಲ್ಲ; ಜನರು ಮತ್ತೆ ಸ್ವತಂತ್ರವಾಗಿ ನಡೆಯಲು, ತಮ್ಮ ಜೀವನಶೈಲಿಗೆ ಮರಳಲು ಮತ್ತು ಸುಖಕರ ವಯೋವೃದ್ಧತೆಯನ್ನು ಅನುಭವಿಸಲು ಸಹಾಯ ಮಾಡುವುದಾಗಿದೆ,” ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ “ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026″ ಎಂಬ ವಿಶಿಷ್ಟ ಮತ್ತು ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಕಾರ್ಯಾಧ್ಯಕ್ಷ ಕೊಟ್ರೇಶ್ ಅವರು ತಿಳಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಖಾಸಗಿ ಅನುದಾನರಹಿತ ಶಾಲೆಗಳು ಎದುರಿಸುತ್ತಿರುವ ಅನೇಕ ಜ್ವಲಂತ ಸಮಸ್ಯೆಗಳು ಹಾಗೂ ಆಡಳಿತಾತ್ಮಕ ಸವಾಲುಗಳಿಗೆ ಪರಿಹಾರ ಮತ್ತು ಕಾನೂನುಬದ್ದ ಮಾರ್ಗದರ್ಶನ ಒದಗಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದರು.
ಈ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಕಡ್ಡಾಯ ಭೂ-ಪರಿವರ್ತನೆ, ಕಟ್ಟಡ ಮತ್ತು ಅಗ್ನಿ ಸುರಕ್ಷತಾ ನಿಯಮಗಳು, RTE ಸಂಬಂಧಿತ ವಿಷಯಗಳು, ಶಾಲಾ ಕಟ್ಟಡಗಳಿಗೆ ಆಸ್ತಿ ತೆರಿಗೆ, ESI, PF, GRATUITY, LWF ಹಾಗೂ ಕಾರ್ಮಿಕ ಕಾನೂನುಗಳನ್ನು ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತದೆ ಎಂದರು.
ಇದಲ್ಲದೆ, ರಾಜ್ಯದಲ್ಲಿ ಯಶಸ್ವಿಯಾಗಿ 10 ವರ್ಷ ಹಾಗೂ 25 ವರ್ಷ ಪೂರೈಸಿರುವ ಖಾಸಗಿ ಶಾಲೆಗಳಿಗೆ ಅಭಿನಂದನಾ ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಹೇಳಿದರು.
ಶಿಕ್ಷಣ ಕ್ಷೇತ್ರದ ಹೊಸ ತಂತ್ರಜ್ಞಾನಗಳು, ಆಡಳಿತಾತ್ಮಕ ಪರಿಹಾರಗಳು, ಕಾನೂನು ಸಲಹೆಗಳು ಹಾಗೂ ಶಿಕ್ಷಣ ಕ್ಷೇತ್ರದ ಇತ್ತೀಚಿನ ಬೆಳವಣಿಗೆಗಳ ಕುರಿತು ತಿಳಿದುಕೊಳ್ಳಲು ಇದು ಅತ್ಯುತ್ತಮ ವೇದಿಕೆಯಾಗಿದ್ದು, ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರು ಹಾಗೂ ಶಿಕ್ಷಣಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.
ಸುದ್ದಿಗೋಷ್ಟಿಯಲ್ಲಿ Ours ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.
4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

