ದಿನದ ಸುದ್ದಿ
‘ಸೋಷಿಯಲ್ ಮೀಡಿಯಾ ಹಬ್’ ಯೋಜನೆಗೆ ನೋ ರೆಸ್ಪಾನ್ಸ್..?
ಪ್ರಮುಖಾಂಶಗಳು
• ಸೋಷಿಯಲ್ ಮೀಡಿಯಾ ಹಬ್ ಐಡಿಯಾ ಟೆಂಡರ್ ನಾಲ್ಕು ಬಾರಿ ಮುಂದೂಡಿಕೆ
• ಯೋಜನೆಯನ್ನು ಮರುಪರಿಶೀಲಿಸಲು ನಿರ್ಧಾರ
ಸುದ್ದಿದಿನ ಡೆಸ್ಕ್ : ಕೇಂದ್ರ ಸರ್ಕಾರದ ಬಹುನಿರೀಕ್ಷೆ ಮಹತ್ವಾಕಾಂಕ್ಷೆಯ ಯೋಜನೆಯಾದ “ಸೋಷಿಯಲ್ ಮೀಡಿಯಾ ಹಬ್” ಯೋಜನೆಯ ಟೆಂಡರ್ ಪಡೆದುಕೊಳ್ಳಲು ನಿರೀಕ್ಷಿತ ಬಿಡ್.ದಾರರು ನಿರಾಸಕ್ತಿ ವ್ಯಕ್ತವಾಗುತ್ತಿದೆ.
ಈ ಪ್ರಾಜೆಕ್ಟ್ನ ಹೊಣೆ ಹೊತ್ತಿರುವ ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಟೆಂಡರ್ ಕೊನೆಯ ದಿನಾಂಕವನ್ನು ಮುಂದೂಡಿದ್ದು, ಇದು ನಾಲ್ಕನೇ ಬಾರಿ ಟೆಂಡರ್ ಪ್ರಕ್ರಿಯೆಯನ್ನು ಮುಂದಕ್ಕೆ ಹಾಕಿದೆ. ಯೋಜನೆ ಆರಂಭಕ್ಕೂ ಮೊದಲು ಟೆಂಡರ್ ದಾರರಿಂದ ನಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಿಡಿಯಾ ಹಬ್.ಗೆ ಸಾಫ್ಟ್ವೇರ್ ಒದಗಿಸಲು ಬಿಇಸಿಐಎಲ್ (BECIL) ಮೇ 17ರಂದು ಟೆಂಡರ್ ಕರೆದಿತ್ತು. ಆದರೆ, ಯಾವುದೇ ಬಿಡ್.ದಾರರು ಮುಂದೆಬಾರದ ಕಾರಣ ಟೆಂಡರ್ ದಿನಾಂಕ ಮೇ 24ಕ್ಕೆ ವಿಸ್ತರಣೆಗೊಂಡಿತು. ಆಗಲೂ ಯಾರೂ ಬರದಿದ್ದರಿಂದ ಅದು ಮೇ 31ಕ್ಕೆ ಮುಂದಕ್ಕೆ ಹೋಯಿತು. ಆನಂತರ ಜೂನ್ 18ರಿಂದ ಆಗಸ್ಟ್ 20ಕ್ಕೆ ದಿನಾಂಕ ಮುಂದೂಡಲಾಗಿದೆ.
ಟೆಂಡರನ್ನು ನಾಲ್ಕು ಬಾರಿ ಮುಂದೂಡಿದಾಗಲೂ ನಿರೀಕ್ಷಿತ ಟೆಂಡರ್ ದಾರರು ಅರ್ಜಿ ಹಾಕಿರಲಿಲ್ಲ. ಹೀಗಾಗಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಯೋಜನೆಯನ್ನು ಪುನರ್ವಿಮರ್ಶಿಸಲು ನಿರ್ಧರಿಸಿದೆ
ಎಂದು ಇಲಾಖೆ ಮೂಲಗಳು ತಿಳಿಸಿವೆ.
ಯೋಜನೆ ಅಧ್ಯಯನಕ್ಕೆ ಸೂಚನೆ
ಇನ್ಫಾರ್ಮೇಶನ್ ಮತ್ತು ಬ್ರಾಡ್ಕಾಸ್ಟಿಂಗ್ ಇಲಾಖೆಯ ಹೊಸ ಕಾರ್ಯದರ್ಶಿ ಅಮಿತ್ ಖರೆ ಅಧಿಕಾರ ವಹಿಸಿಕೊಂಡ ನಂತರ ಯೋಜನೆಯನ್ನು ಕೆಲದಿನಗಳ ವರೆಗೆ (ಹೋಲ್ಡ್) ತಡೆಹಿಡಿದು, ಅದನ್ನು ಅಧ್ಯಯನ ಮಾಡಲು ಕೋರಿದ್ದು, ಹಬ್ ಬಳಸಿಕೊಳ್ಳಲು ಇರುವ ನೀತಿ, ನಿಯಮಗಳ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಸೂಚಿಸಿದ್ದಾರೆ.
ಸೋಷಿಯಲ್ ಮಿಡಿಯಾ ಹಬ್ ಯೋಜನೆಗೆ ವಿವಾದ ಸುತ್ತಿಕೊಂಡಿದ್ದು, ಈ ಬಗ್ಗೆ ಅನೇಕರು, ಪರೋಕ್ಷ ತನಿಖೆ ಹಾಗೂ ಮತದಾರರ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುವ ಉದ್ದೇಶ ಹೊಂದಿದ್ದು, ಸೋಷಿಯಲ್ ಮಿಡಿಯಾ (ಫೇಸ್ ಬುಕ್, ಟ್ವಿಟರ್, ಇನ್ಸ್ಟಾಗ್ರಾಮ್ ಹಾಗೂ ಇಮೇಲ್) ಮೇಲೆ ನಿಗಾ ಇಡುವ ಹಿಡನ್ ಅಜೆಂಡಾ ಇದೆ. ಈ ಉದ್ದೇಶದಿಂದಾಗಿ ಯೋಜನೆಯ ನಿರ್ವಹಣೆ ಸ್ಥಳೀಯ ಮಟ್ಟದಲ್ಲೇ ಬಹು ಭಾಷೆಯಲ್ಲಿ ನಡೆಯಲಿದೆ.
ವ್ಯಕ್ತಿಯ ಪ್ರೈವಸಿ ಧಕ್ಕೆ; ಬಳಕೆದಾರರ ವರ್ಗೀಕರಣ
ಸೋಷಿಯಲ್ ಮಿಡಿಯಾದಲ್ಲಿ ನಡೆಯುವ ಸಂಭಾಷಣೆ, ಚರ್ಚೆ, ಮಾತುಕತೆ, ವ್ಯಕ್ತಿಯ ಪ್ರೈವಸಿ ಮೇಲೆ ನಿಗಾ ಇಡಲಿದೆ. ಸೋಷಿಯಲ್ ಮಿಡಿಯಾದಲ್ಲಿ ನಡೆಯುವ ಚರ್ಚೆ ಆಧರಿಸಿ ಬಳಕೆದಾರರನ್ನು ವರ್ಗೀಕರಣ ಮಾಡಲಿದೆ. ಸಂಭಾಷಣೆ ಆಧರಿಸಿ ಪಾಸಿಟಿವ್, ನೆಗೆಟಿವ್, ನ್ಯೂಟ್ರಲ್ ಎಂದು ಮೂರು ಗುಂಪುಗಳನ್ನಾಗಿ ವರ್ಗೀಕರಿಸಲಿದೆ ಎಂದು ಹೇಳಲಾಗುತ್ತಿದೆ.
ಕಣ್ಗಾವಲಿಗೆ ಪತ್ರಕರ್ತರ ನೇಮಕ
ಬಳಕೆದಾರರಿಗೆ ಸರ್ಕಾರದ ಯೋಜನೆಗಳ ಮಾಹಿತಿ ಹಾಗೂ ರಾಜಕೀಯ ಸುದ್ದಿಗಳು ತಲುಪುವ “ರಿಯಲ್ ಟೈಮ್” ಅನ್ನು ಟ್ರ್ಯಾಕ್ ಮಾಡುವ ಉದ್ದೇಶ ಹೊಂದಿದೆ ಎಂಬ ಆರೋಪವಿದೆ. ಸೋಷಿಯಲ್ ಮಿಡಿಯಾದ ನಿಗಾ ಇಡುವುದ್ದಾಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ಪತ್ರಕರ್ತರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಇರಾದೆ ಸರ್ಕಾರಕ್ಕಿದೆ.
ನೆಗೆಟಿವ್ ಒಪಿನಿಯನ್ ಪಾಸಿಟಿವ್ ಮಾಡುವ ಉದ್ದೇಶ
ಸರ್ಕಾರದ ಯೋಜನೆಗಳ ಬಗ್ಗೆ ನಕಾರಾತ್ಮಕ ಅಭಿಪ್ರಾಯಗಳನ್ನು ಸಕಾರಾತ್ಮಕವಾಗಿ ಪರಿವರ್ತಿಸಿ, ಸರ್ಕಾರದ ಯೋಜನೆಗಳನ್ನು ಪ್ರಮೋಟ್ ಮಾಡಲು ಸಲಹೆ, ಸೂಚನೆ ಪಡೆದುಕೊಳ್ಳುವ ಉದ್ದೇಶ ಹೊಂದಿದೆ.
ಸುದ್ದಿದಿನ|ವಾಟ್ಸಾಪ್|9986715401
ದಿನದ ಸುದ್ದಿ
ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ
ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.
ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್ಸೆಟ್ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ
ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.
ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ
ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.
ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.
ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.
ದೂರುಗಳನ್ನು ಆನ್ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.
ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.
ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ದಾವಣಗೆರೆ | ವಿನೋಬನಗರದ ಶ್ರೀ ಚೌಡೇಶ್ವರಿ ಜಾತ್ರೆ ಸಂಭ್ರಮ
-
ದಿನದ ಸುದ್ದಿ6 days ago
ನಾಯಕನ ಹಟ್ಟಿ | ಶ್ರೀಗುರು ತಿಪ್ಪೇರುದ್ರಸ್ವಾಮಿ ರಥೋತ್ಸವಕ್ಕೆ ವಿಶೇಷ ಬಸ್ ಸೌಲಭ್ಯ
-
ದಿನದ ಸುದ್ದಿ6 days ago
ಭಾನುವಾರದಂದು ಕಾರ್ಯನಿರ್ವಹಿಸುವಂತೆ ಬ್ಯಾಂಕ್ಗಳಿಗೆ ಆರ್ ಬಿ ಐ ಸೂಚನೆ
-
ದಿನದ ಸುದ್ದಿ6 days ago
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳು ಸ್ಥಗಿತ ; ಬಿಜೆಪಿ ಅಧಿಕಾರ ದುರುಪಯೋಗ : ಖರ್ಗೆ ಕಿಡಿ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ : ಚುನಾವಣಾ ಚಟುವಟಿಕೆಗಳ ಕುರಿತ ಜಿಲ್ಲಾವಾರು ಮಾಹಿತಿ
-
ದಿನದ ಸುದ್ದಿ5 days ago
ವಿಜಯಪುರ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಮೈಬೂಬಸಾಹೇಬ.ವೈ.ಜೆ ಆಯ್ಕೆ
-
ದಿನದ ಸುದ್ದಿ5 days ago
ಬೆಂಗಳೂರಿನಲ್ಲಿ ಬಿಜೆಪಿ ನೂತನ ಮಾಧ್ಯಮಕೇಂದ್ರ ಆರಂಭ
-
ದಿನದ ಸುದ್ದಿ5 days ago
ಲೋಕಸಭಾ ಚುನಾವಣೆ | ಹೊಸ ಮತದಾರರೆಷ್ಟು ಗೊತ್ತಾ..?