ದಿನದ ಸುದ್ದಿ
‘ಸೋಷಿಯಲ್ ಮೀಡಿಯಾ ಹಬ್’ ಯೋಜನೆಗೆ ನೋ ರೆಸ್ಪಾನ್ಸ್..?
ಪ್ರಮುಖಾಂಶಗಳು
• ಸೋಷಿಯಲ್ ಮೀಡಿಯಾ ಹಬ್ ಐಡಿಯಾ ಟೆಂಡರ್ ನಾಲ್ಕು ಬಾರಿ ಮುಂದೂಡಿಕೆ
• ಯೋಜನೆಯನ್ನು ಮರುಪರಿಶೀಲಿಸಲು ನಿರ್ಧಾರ
ಸುದ್ದಿದಿನ ಡೆಸ್ಕ್ : ಕೇಂದ್ರ ಸರ್ಕಾರದ ಬಹುನಿರೀಕ್ಷೆ ಮಹತ್ವಾಕಾಂಕ್ಷೆಯ ಯೋಜನೆಯಾದ “ಸೋಷಿಯಲ್ ಮೀಡಿಯಾ ಹಬ್” ಯೋಜನೆಯ ಟೆಂಡರ್ ಪಡೆದುಕೊಳ್ಳಲು ನಿರೀಕ್ಷಿತ ಬಿಡ್.ದಾರರು ನಿರಾಸಕ್ತಿ ವ್ಯಕ್ತವಾಗುತ್ತಿದೆ.
ಈ ಪ್ರಾಜೆಕ್ಟ್ನ ಹೊಣೆ ಹೊತ್ತಿರುವ ಬ್ರಾಡ್ ಕಾಸ್ಟ್ ಇಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ ಟೆಂಡರ್ ಕೊನೆಯ ದಿನಾಂಕವನ್ನು ಮುಂದೂಡಿದ್ದು, ಇದು ನಾಲ್ಕನೇ ಬಾರಿ ಟೆಂಡರ್ ಪ್ರಕ್ರಿಯೆಯನ್ನು ಮುಂದಕ್ಕೆ ಹಾಕಿದೆ. ಯೋಜನೆ ಆರಂಭಕ್ಕೂ ಮೊದಲು ಟೆಂಡರ್ ದಾರರಿಂದ ನಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಮಿಡಿಯಾ ಹಬ್.ಗೆ ಸಾಫ್ಟ್ವೇರ್ ಒದಗಿಸಲು ಬಿಇಸಿಐಎಲ್ (BECIL) ಮೇ 17ರಂದು ಟೆಂಡರ್ ಕರೆದಿತ್ತು. ಆದರೆ, ಯಾವುದೇ ಬಿಡ್.ದಾರರು ಮುಂದೆಬಾರದ ಕಾರಣ ಟೆಂಡರ್ ದಿನಾಂಕ ಮೇ 24ಕ್ಕೆ ವಿಸ್ತರಣೆಗೊಂಡಿತು. ಆಗಲೂ ಯಾರೂ ಬರದಿದ್ದರಿಂದ ಅದು ಮೇ 31ಕ್ಕೆ ಮುಂದಕ್ಕೆ ಹೋಯಿತು. ಆನಂತರ ಜೂನ್ 18ರಿಂದ ಆಗಸ್ಟ್ 20ಕ್ಕೆ ದಿನಾಂಕ ಮುಂದೂಡಲಾಗಿದೆ.
ಟೆಂಡರನ್ನು ನಾಲ್ಕು ಬಾರಿ ಮುಂದೂಡಿದಾಗಲೂ ನಿರೀಕ್ಷಿತ ಟೆಂಡರ್ ದಾರರು ಅರ್ಜಿ ಹಾಕಿರಲಿಲ್ಲ. ಹೀಗಾಗಿ, ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಯೋಜನೆಯನ್ನು ಪುನರ್ವಿಮರ್ಶಿಸಲು ನಿರ್ಧರಿಸಿದೆ
ಎಂದು ಇಲಾಖೆ ಮೂಲಗಳು ತಿಳಿಸಿವೆ.
ಯೋಜನೆ ಅಧ್ಯಯನಕ್ಕೆ ಸೂಚನೆ
ಇನ್ಫಾರ್ಮೇಶನ್ ಮತ್ತು ಬ್ರಾಡ್ಕಾಸ್ಟಿಂಗ್ ಇಲಾಖೆಯ ಹೊಸ ಕಾರ್ಯದರ್ಶಿ ಅಮಿತ್ ಖರೆ ಅಧಿಕಾರ ವಹಿಸಿಕೊಂಡ ನಂತರ ಯೋಜನೆಯನ್ನು ಕೆಲದಿನಗಳ ವರೆಗೆ (ಹೋಲ್ಡ್) ತಡೆಹಿಡಿದು, ಅದನ್ನು ಅಧ್ಯಯನ ಮಾಡಲು ಕೋರಿದ್ದು, ಹಬ್ ಬಳಸಿಕೊಳ್ಳಲು ಇರುವ ನೀತಿ, ನಿಯಮಗಳ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಸೂಚಿಸಿದ್ದಾರೆ.
ಸೋಷಿಯಲ್ ಮಿಡಿಯಾ ಹಬ್ ಯೋಜನೆಗೆ ವಿವಾದ ಸುತ್ತಿಕೊಂಡಿದ್ದು, ಈ ಬಗ್ಗೆ ಅನೇಕರು, ಪರೋಕ್ಷ ತನಿಖೆ ಹಾಗೂ ಮತದಾರರ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುವ ಉದ್ದೇಶ ಹೊಂದಿದ್ದು, ಸೋಷಿಯಲ್ ಮಿಡಿಯಾ (ಫೇಸ್ ಬುಕ್, ಟ್ವಿಟರ್, ಇನ್ಸ್ಟಾಗ್ರಾಮ್ ಹಾಗೂ ಇಮೇಲ್) ಮೇಲೆ ನಿಗಾ ಇಡುವ ಹಿಡನ್ ಅಜೆಂಡಾ ಇದೆ. ಈ ಉದ್ದೇಶದಿಂದಾಗಿ ಯೋಜನೆಯ ನಿರ್ವಹಣೆ ಸ್ಥಳೀಯ ಮಟ್ಟದಲ್ಲೇ ಬಹು ಭಾಷೆಯಲ್ಲಿ ನಡೆಯಲಿದೆ.
ವ್ಯಕ್ತಿಯ ಪ್ರೈವಸಿ ಧಕ್ಕೆ; ಬಳಕೆದಾರರ ವರ್ಗೀಕರಣ
ಸೋಷಿಯಲ್ ಮಿಡಿಯಾದಲ್ಲಿ ನಡೆಯುವ ಸಂಭಾಷಣೆ, ಚರ್ಚೆ, ಮಾತುಕತೆ, ವ್ಯಕ್ತಿಯ ಪ್ರೈವಸಿ ಮೇಲೆ ನಿಗಾ ಇಡಲಿದೆ. ಸೋಷಿಯಲ್ ಮಿಡಿಯಾದಲ್ಲಿ ನಡೆಯುವ ಚರ್ಚೆ ಆಧರಿಸಿ ಬಳಕೆದಾರರನ್ನು ವರ್ಗೀಕರಣ ಮಾಡಲಿದೆ. ಸಂಭಾಷಣೆ ಆಧರಿಸಿ ಪಾಸಿಟಿವ್, ನೆಗೆಟಿವ್, ನ್ಯೂಟ್ರಲ್ ಎಂದು ಮೂರು ಗುಂಪುಗಳನ್ನಾಗಿ ವರ್ಗೀಕರಿಸಲಿದೆ ಎಂದು ಹೇಳಲಾಗುತ್ತಿದೆ.
ಕಣ್ಗಾವಲಿಗೆ ಪತ್ರಕರ್ತರ ನೇಮಕ
ಬಳಕೆದಾರರಿಗೆ ಸರ್ಕಾರದ ಯೋಜನೆಗಳ ಮಾಹಿತಿ ಹಾಗೂ ರಾಜಕೀಯ ಸುದ್ದಿಗಳು ತಲುಪುವ “ರಿಯಲ್ ಟೈಮ್” ಅನ್ನು ಟ್ರ್ಯಾಕ್ ಮಾಡುವ ಉದ್ದೇಶ ಹೊಂದಿದೆ ಎಂಬ ಆರೋಪವಿದೆ. ಸೋಷಿಯಲ್ ಮಿಡಿಯಾದ ನಿಗಾ ಇಡುವುದ್ದಾಕ್ಕಾಗಿ ಪ್ರತಿ ಜಿಲ್ಲೆಯಲ್ಲಿ ಪತ್ರಕರ್ತರನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಇರಾದೆ ಸರ್ಕಾರಕ್ಕಿದೆ.
ನೆಗೆಟಿವ್ ಒಪಿನಿಯನ್ ಪಾಸಿಟಿವ್ ಮಾಡುವ ಉದ್ದೇಶ
ಸರ್ಕಾರದ ಯೋಜನೆಗಳ ಬಗ್ಗೆ ನಕಾರಾತ್ಮಕ ಅಭಿಪ್ರಾಯಗಳನ್ನು ಸಕಾರಾತ್ಮಕವಾಗಿ ಪರಿವರ್ತಿಸಿ, ಸರ್ಕಾರದ ಯೋಜನೆಗಳನ್ನು ಪ್ರಮೋಟ್ ಮಾಡಲು ಸಲಹೆ, ಸೂಚನೆ ಪಡೆದುಕೊಳ್ಳುವ ಉದ್ದೇಶ ಹೊಂದಿದೆ.
ಸುದ್ದಿದಿನ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!