Connect with us

ದಿನದ ಸುದ್ದಿ

ಪಾಕಿಸ್ತಾನದ ಜೊತೆ ಯಾವುದೇ ಮಾತುಕತೆ ಇಲ್ಲ ; ಜಮ್ಮು-ಕಾಶ್ಮೀರದ ಜನತೆ ಹಾಗೂ ಅಭಿವೃದ್ಧಿ ವಿಚಾರಗಳಿಗೆ ಮಾತ್ರ ಸರ್ಕಾರ ಬದ್ಧ : ಅಮಿತ್ ಶಾ

Published

on

ಸುದ್ದಿದಿನ ಡೆಸ್ಕ್ : ಪಾಕಿಸ್ತಾನದ ( Pakistan ) ಜೊತೆಗೆ ಸರಕಾರದ ಯಾವುದೇ ಮಾತುಕತೆ ಇಲ್ಲ. ಜಮ್ಮು ಮತ್ತು ಕಾಶ್ಮೀರದ ( Jammu and Kashmir ) ಜನತೆಯೊಂದಿಗೆ ಮಾತ್ರ ಮೋದಿ ಸರಕಾರ ಮಾತನಾಡಲಿದ್ದು, ಯಾವುದೇ ಬೆಲೆ ತೆತ್ತಾದರೂ ಕಾಶ್ಮೀರ ಕಣಿವೆಯಿಂದ ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಉತ್ತರ ಕಾಶ್ಮೀರದ ಬಾರಾಮುಲ್ಲಾ ಪಟ್ಟಣದಲ್ಲಿ ನಿನ್ನೆ ಬೃಹತ್ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಸಚಿವರು, ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ ಆಡಳಿತದ ವೈಖರಿಯನ್ನು ಟೀಕಿಸಿದರು. ಕಳೆದ 75ವರ್ಷಗಳಲ್ಲಿ ಮೂರು ಕುಟುಂಬಗಳು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಹಾಳು ಮಾಡಿವೆ.

ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಮತ್ತು ಮೆಹಬೂಬಾ ಮುಫ್ತಿ ಅವರನ್ನು ಹೆಸರಿಸಿದ ಅಮಿತ್ ಶಾ, ಜನರ ಇಂದಿನ ಸಂಕಷ್ಟದ ಪರಿಸ್ಥಿತಿಗೆ ಅವರೇ ಕಾರಣ ಎಂದು ಹೇಳಿ, ಮೋದಿ ಸರ್ಕಾರ ಮಾತ್ರ ಜಮ್ಮು-ಕಾಶ್ಮೀರದಲ್ಲಿ ಅಭಿವೃದ್ಧಿ ಹಾಗೂ ಕೈಗಾರಿಕಾ ಕ್ರಾಂತಿಯನ್ನು ತಂದಿದೆ ಎಂದು ತಿಳಿಸಿದರು.

ಆ ಮೂರು ಪಕ್ಷಗಳು ಕಳೆದ 75 ವರ್ಷಗಳಲ್ಲಿ ರಾಜ್ಯಕ್ಕೆ ಕೇವಲ 15ಸಾವಿರ ಕೋಟಿ ರೂಪಾಯಿ ತಂದಿದ್ದು, ಇದೀಗ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೆಲವೇ ವರ್ಷಗಳಲ್ಲಿ ಜಮ್ಮು-ಕಾಶ್ಮೀರಕ್ಕೆ 56 ಸಾವಿರ ಕೋಟಿ ರೂಪಾಯಿ ಬಂಡವಾಳ ತಂದಿದೆ ಎಂದು ಅಮಿತ್ ಶಾ ಹೇಳಿದರು.

ಭಯೋತ್ಪಾದನೆ ಮತ್ತು ಉಗ್ರಗಾಮಿ ಘಟನೆಗಳಲ್ಲಿ ಇದುವರೆಗೆ ಜಮ್ಮು-ಕಾಶ್ಮೀರದಲ್ಲಿ 42 ಸಾವಿರ ಜನರು ಮೃತಪಟ್ಟಿದ್ದಾರೆ. ಕಾಂಗ್ರೆಸ್, ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಜನರ ಕೈಗೆ ಕಲ್ಲುಗಳು ಮತ್ತು ಬಂದೂಕುಗಳು ನೀಡಿ ದಾರಿ ತಪ್ಪಿಸಿದವು. ಆದರೆ ಪ್ರಸಕ್ತ ಸರ್ಕಾರ ಇಲ್ಲಿನ ಯುವಜನರ ಕೈಗಳಿಗೆ ಲ್ಯಾಪ್‌ಟ್ಯಾಪ್ ಮತ್ತು ಫೋನ್‌ಗಳನ್ನು ನೀಡಿದೆ ಎಂದು ಅವರು ಹೇಳಿದರು.

ಕಾಶ್ಮೀರವನ್ನು ಪ್ರವಾಸಿಗರ ಆಕರ್ಷಕ ತಾಣವಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ಬಾರಿ ಅಕ್ಟೋಬರ್‌ವರೆಗೆ 22 ಲಕ್ಷ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡಿದ್ದಾರೆ. ಗುಲ್‌ಮಾರ್ಗ್ ಪ್ರದೇಶವೊಂದಕ್ಕೆ 13 ಲಕ್ಷ ಯಾತ್ರಿಕರು ಭೇಟಿ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ವಿದ್ಯುತ್, ರಸ್ತೆ ಸೇರಿದಂತೆ ಯಾವುದೇ ನಾಗರಿಕ ಸೌಲಭ್ಯಗಳು ಇಲ್ಲ. ಆದರೆ, ಇಂದು ಜಮ್ಮು-ಕಾಶ್ಮೀರದ ಪ್ರತಿ ಗ್ರಾಮದಲ್ಲಿ ಎಲ್ಲ ಸೌಲಭ್ಯ ಒದಗಿಸಲಾಗಿದ್ದು, 56 ಸಾವಿರ ಕೋಟಿ ರೂಪಾಯಿ ಕೈಗಾರಿಕಾ ಪ್ಯಾಕೇಜ್‌ನಿಂದ ಸುಮಾರು 15 ಸಾವಿರ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending