Connect with us

ಭಾವ ಭೈರಾಗಿ

ಯುದ್ಧ ಬೇಕಾ ಯುದ್ದ ?

Published

on

Photo courtesy : cartoon movement

ಈಗ ಎಲ್ಲೆಲ್ಲೂ ಯುದ್ಧದ ಕುರಿತೇ ಮಾತು. ನಮ್ಮ ಸಾಮಾಜಿಕ ಜಾಲತಾಣಗಳಂತೂ ಈಗ ಶುದ್ಧ ಕಸದ ತೊಟ್ಟಿಗಳಾಗಿವೆ. ಫೇಸ್‍ಬುಕ್ಕು ವಾಟ್ಸಾಪ್‍ಗಳು ನಮಗೆ ಬೇಕಿರುವುದು, ಬೇಡದಿರುವುದು, ನಮ್ಮ ಕೋಪ, ಅಸಹನೆ, ತಂತ್ರ, ಕುತಂತ್ರಗಳನ್ನು ಭಿತ್ತುವ ಮಹಾ ವೇಧಿಕೆಗಳಾಗಿವೆ. ಇನ್ನೂ ದುರಂತವೆಂದರೆ ಯುದ್ಧವನ್ನು ಬಯಸುತ್ತೇವೋ ಇಲ್ಲವೊ ಎಂಬುದು ನಮ್ಮ ದೇಶ ಭಕ್ತಿಯನ್ನಳೆಯುವ ಅಳತೆಗೋಲಾಗಿಬಿಟ್ಟಿದೆ. ಯುದ್ಧ ಬೇಕು ಪಾಕಿಸ್ತಾನದ ರಕ್ತ ಕುಡಿಯಬೇಕು ಎನ್ನುವವರನ್ನು ದೇಶಭಕ್ತರೆಂದೂ, ಯುದ್ಧ ಬೇಡ ಎಂದವರನ್ನು ದೇಶ ದ್ರೋಹಿಗಳೆಂದೂ ಪರಿಗಣಿಸುವ ಅಪಾಯಕಾರಿ ಬೆಳವಣಿಗೆಗಳಾಗುತ್ತಿವೆ, ಶಾಂತಿಯಿಂದ ಸಮಸ್ಯೆ ಬಗೆಹರಿಸಿಕೊಳ್ಳುವ ಮಾತನಾಡಿದವರನ್ನು ಪಾಕಿಸ್ತಾನಕ್ಕೆ ಕಳಿಸಬೇಕೆಂದೂ ಕೆಲವರು ಬೊಬ್ಬೆಹೊಡೆಯುತ್ತಿದ್ದಾರೆ.

ಹಿಂದುಸ್ಥಾನ್ ಜಿಂದಾಬಾದ್ ಎನ್ನುವುದಕ್ಕಿಂತಲೂ ಮುರ್ದಾಬಾದ್ ಎನ್ನುವುದೇ ನಮ್ಮ ದೇಶಭಕ್ತಿಯ ಸರ್ಟಿಫಿಕೇಟ್ ಆದಂತಿದೆ. ಖಂಡಿತವಾಗಿಯೂ ಇದೊಂದು ಸಮೂಹ ಸನ್ನಿಯಲ್ಲದೇ ಮತ್ತೇನು? ದೇಶಭಕ್ತಿ, ದೇಶಾಭಿಮಾನ ಎಂಬ ಪ್ಲೇ ಕಾರ್ಡ್ ಹಿಡಿದವರಿಗಂತೂ ತಾವು ಹೇಳಿದ್ದೇ ಸತ್ಯ ಎಂಬ ಅದಾವುದೋ ಭಾವ ನೆತ್ತಿಗೇರಿದೆ. ಅವರಿಗೆ ಸಂಯಮ ತಂದುಕೊಳ್ಳುವಂತೆ ಹೇಳಹೊರಟರೆ ಅಂಥವರಿಗೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತದೆ. ಮೊದಲೇಹೇಳಿಬಿಡುತ್ತೇನೆ ನಾನಿದನ್ನು ಬಿಜೆಪಿ, ಕಾಂಗ್ರೆಸ್ ಎಂಬ ಪಕ್ಷಗಳನ್ನಾಗಲೀ ಅಥವಾ ಎಡ,ಬಲ ಪಂಥಗಳನ್ನಾಗಲೀ ಮನಸಿನಲ್ಲಿಟ್ಟುಕೊಂಡು ಬರೆದಿಲ್ಲ. ಕೇವಲ ಯುದ್ಧದ ಕುರಿತು ಮಾತ್ರ ಮಾತನಾಡುತ್ತಿದ್ದೇನೆ.

ಸ್ವಲ್ಪ ಯೋಚಿಸಿ ನೋಡಿ. ಯುದ್ಧ ಯಾರಿಗೆ ಬೇಕು? ಯುದ್ಧದಿಂದ ನಾವು ಪಡೆದುಕೊಳ್ಳುವುದೇನಿದೆ? ಖಂಡಿತ ಏನೂ ಇಲ್ಲ ಆದರೆ ನಾವು ಕಳೆದುಕೊಳ್ಳುತ್ತೇವೆ, ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಾವಿರಾರು ಸೈನಿಕರನ್ನು ನಾವು ಕಳೆದುಕೊಳ್ಳುತ್ತೇವೆ. ನಮ್ಮ ನಮ್ಮ ಮಾನಸಿಕ ಗೀಳುಗಳಿಗಾಗಿ ನಮ್ಮ ಹೆಮ್ಮೆಯ ಸೈನಿಕರನ್ನು ಬಲಿಕೊಡಲು ಯಾಕೋ ಮನಸ್ಸು ಒಪ್ಪುತ್ತಿಲ್ಲ‌ . ಹಿಂದಿನ ಯುದ್ಧಗಳ ಇತಿಹಾಸವನ್ನೊಮ್ಮೆ ನೆನಪಿಸಿಕೊಳ್ಳಿ ಯಾವ ಯುದ್ಧಗಳೂ ಸೈನಿಕರ ಸಾವಿಲ್ಲದೇ ಮುಕ್ತಾಯವಾಗಿಲ್ಲ. ಯಾವ ಯುದ್ಧದಿಂದಲೂ ಕಾಶ್ಮೀರ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಲ್ಲ. ಅದು 1962 ಭಾರತ ಆಗತಾನೆ ಗಟ್ಟಿಗೊಳ್ಳುತ್ತಿದ್ದ ಸಮಯ, ನೆರೆಯ ಚೀನಾದಂತ ಚೀನಾ ಮೇಲೆ ಯುದ್ಧ ಮಾಡಬೇಕಾಯ್ತು ಆ ಇಂಡೋ ಚೀನಾ ಯುದ್ಧದಲ್ಲಿ ನಾವು ಹಸಿಹಸಿ ಕನಸೊತ್ತ 1385 ಸೈನಿಕರನ್ನು ಕಳೆದುಕೊಳ್ಳಬೇಕಾಯ್ತು. ಮತ್ತೆ 1965ರಲ್ಲಿ ಪಾಕಿಸ್ತಾನ ನಮ್ಮ ವಿರುದ್ಧ ಕಾಲ್ಕೆರೆಯಿತು, ಆಗ ನಡೆದ ಯುದ್ಧದಲ್ಲಿ 3000 ಕುಟುಂಬಗಳು ತಮ್ಮ ಆಧಾರ ಸ್ಥಂಬಗಳನ್ನು ಕಳೆದುಕೊಂಡು ಕಂಗಾಲಾಗಬೇಕಾಯ್ತು. ಪಾಕಿಸ್ತಾನದ ಸೊಂಟ ಮುರಿದು ಇಬ್ಬಾಗ ಮಾಡಿದ ಸಮಯ 1971.

ಅದು ಸುಲಭಕ್ಕೆ ನಡೆದ ಕೆಲಸವಲ್ಲ, ನಾನು ಮತ್ತೆ ಯುಗಾದಿಗೆ ಬರ್ತೇನೆ, ಮುಂದಿನಬಾರಿ ಅಮ್ಮನಿಗೆ ಸೀರೆ ತರ್ತೇನೆ, ಇನ್ನೇನು ಎರಡೇ ತಿಂಗಳ ಡ್ಯೂಟಿ ಮುಗಿಸಿ ಊರಿಗೆ ಬಂದು ಅಮ್ಮನ ಸೇವೆ ಮಾಡಿಕೊಂಡಿರ್ತೇನೆ, ಹೀಗೆ ಎದೆಷ್ಟೋ ಭರವಸೆಯ ಮಾತುಗಳನ್ನು ಕುಟುಂಭದವರಿಗೆ ನೀಡಿ ಬಂದಿದ್ದ 3843ಜನ ಸೈನಿಕರು ನೋಡನೋಡುತ್ತಿದ್ದಂತೆಯೇ ಶತೃಗಳ ಗುಂಡಿಗೆ ಎದೆಕೊಡಬೇಕಾಯ್ತು. ಇನ್ನು 1999ರ ಕಾರ್ಗಿಲ್ ಕದನ. ಹಿಂದಿನ ದಿನವಷ್ಟೇ ಅಮ್ಮನಿಗೆ ಪತ್ರಬರೆದವರು, ಎರಡು ತಿಂಗಳ ಹಿಂದಷ್ಟೇ ಮದುವೆಯಾದವರ, ಇನ್ನೂ ನೋಡಿರದ ತನ್ನ ಕಂದಮ್ಮನ ಸುತ್ತ ಕನಸು ಹೆಣೆದವರೂ ಸೇರಿ ಸತ್ತ ಸೈನಿಕರ ಸಂಖ್ಯೆ 528. ಇಂದೋ ನಾಳೆಯೋ ಯುದ್ಧವಾದರೆ ಮತ್ತೆ ನಾವು ಕಳೆದುಕೊಳ್ಳುವ ಸಂಖ್ಯೆ ದೊಡ್ಡದಾಗುತ್ತದೆಯೇ ಹೊರತು ಚಿಕ್ಕದಾಗುವುದಿಲ್ಲ.

ನೆನಪಿರಲಿ ಗೆಳೆಯರೇ ಈಗ ಯುದ್ಧವಾದರೆ ಸಾಯುವವರು ದೇಶ ಕಾಯುವ ಸೈನಿಕರೇ ಹೊರತು, ಫೇಸ್ ಬುಕ್ಕಿನಲ್ಲಿ ಪೋಸ್ಟ್ ಹಾಕುವ ನಾವು ನೀವಲ್ಲ, ಒಂದು ಹನಿರಕ್ತಕ್ಕೆ ಹತ್ತು ಹೆಣ ಕೆಡವುತ್ತೇನೆಂದು ಪ್ರತಿಜ್ಞೆ ಮಾಡುವ ರಾಜಕಾರಣಿಗಳೂ ಅಲ್ಲ. ಗೊತ್ತಿರಲಿ ಯುದ್ಧದ ನಂತರ ನಾವು ಮತ್ತೆ ಫೇಸ್ ಬುಕ್ಕಿನಲ್ಲಿ ಸತ್ತವರ ಲೆಕ್ಕ ಹೇಳುತ್ತೇವೆ, ಅವರಿಗೆ ಶ್ರದ್ಧಾಂಜಲಿ ಕೋರಿ ಪೋಸ್ಟ್ ಹಾಕುತ್ತೇವೆ ಮತ್ತು ನಮ್ಮ ಜನನಾಯಕರು ಅವರ ಸಾವಿನ ಸೇಡುತೀರಿಸಿಕೊಳ್ಲಲು ಮತ್ತೊಂದು ಅವಕಾಶ ಕೊಡಿ ಎಂದು ಓಟು ಕೇಳಲು ಬರುತ್ತಾರೆ. ಯುದ್ಧದ ಕುರಿತಂತೆ ರೂಸ್ ವೆಲ್ಟ್ ಹೇಳಿದ ಮಾತೊಂದು ಈಗ ನೆನಪಾಗುತ್ತಿದೆ . “ಯುದ್ದವೆಂದರೆ ಯುವಕರು ಸಾಯುವುದು ಮತ್ತು ಹಿರಿಯರು ಭಾಷಣಮಾಡುವುದೆ ಹೊರತು ಮತ್ತೇನು ಅಲ್ಲ.”

ನಾನೊಬ್ಬ ಪತ್ರಕರ್ತನಾಗಿ ಸಾಕಷ್ಟುಜನ ಸೈನಿಕರನ್ನೂ, ಮತ್ತು ಸೈನಿಕರ ಕುಟುಂಬಗಳನ್ನೂ ಹತ್ತಿರದಿಂದ ಬಲ್ಲೆ, ಅವರಲ್ಲಿ ರಕ್ತದಾಹಿಗಳಿಲ್ಲ, ಸಾವಿಗಾಗಿ ಹಪಹಪಿಸಿದವರಿಲ್ಲ, ಕೊಂದು ಸೇಡುತೀರಿಸಿಕೊಳ್ಳಿ ಎಂದು ಯಾರೂ ಕೇಳಲಿಲ್ಲ. ಹಾಗಾದರೆ ಪಾಕಿಸ್ತಾನವನ್ನು ಸುಮ್ಮನೇ ಬಿಡಬೇಕಾ? ಖಂಡಿತಾ ಇಲ್ಲ. ಪಾಕಿಸ್ತಾನವಷ್ಟೇ ಅಲ್ಲ ಜಗತ್ತಿನ ಯಾವುದೇ ರಾಷ್ಟ್ರವಾಗಿರಲಿ ಭಾರತದ ಆತ್ಮಗೌರವವನ್ನು ಕೆಣಕಿದರೆ ಸುಮ್ಮನೇ ಬಿಡಬೇಕಿಲ್ಲ, ಮತ್ತು ನಾವು ಹಾಗೆ ಕೆಣಕಿದವರನ್ನು ಸುಮ್ಮನೇ ಬಿಟ್ಟ ಉದಾಹರಣೆಗಳೂ ಇಲ್ಲ. ಆದರೆ ನೆನಪಿರಲಿ ಈಗ ನಾವು ಕಾದಾಡಬೇಕಿರುವುದು ಪಾಕಿಸ್ತಾನದ ವಿರುದ್ಧವಲ್ಲ ಬದಲಾಗಿ ಭಯೋತ್ಪಾದನೆಯ ವಿರುದ್ಧ. ಪುಲ್ವಾಮಾದಲ್ಲಿ ಸೈನಿಕರ ರಕ್ತಹರಿಸಿದವರು ಭಯೋತ್ಪಾದಕರೇ ಹೊರತು ಪಾಕಿಸ್ತಾನದ ಸೈನಿಕರಲ್ಲ, ನಿಮಗೆ ಗೊತ್ತಿರಲಿ, ಪುಲ್ವಾಮಾ ಘಟನೆಯನ್ನು ಭಾರತದಂತೆಯೇ ಪಾಕಿಸ್ತಾನವೂ ಕೂಡ ಸಂಸತ್ ನಲ್ಲಿ ಖಂಡಿಸಿದೆ.

ಹಾಗಂತ ನಾವು ಪಾಕಿಸ್ತಾನವನ್ನು ಅಪ್ಪಿ ಮುದ್ದಾಡಬೇಕಿಲ್ಲ. ನಮ್ಮ ತಂಟೆಗೆ ಬಂದಾಗ ಕೈಕಟ್ಟಿ ಕೂರಬೇಕಿಲ್ಲ. ಬದಲಿಗೆಅದರ ರಕ್ತಕುಡಿಯಲು ಹಾತೊರೆಯುವುದರಲ್ಲೂ ಅರ್ಥವಿಲ್ಲ. ಹಾಗಾದರೆ ಮಾಡಬೇಕಿರುವುದೇನು? ದೇಶದ ಮೂಲೆ ಮೂಲೆಯಲ್ಲಡಗಿರುವ ಭಯೋತ್ಪಾದಕರನ್ನು ಮಟ್ಟಹಾಕವುದು ನಮ್ಮ ಗುರಿಯಾಗಬೇಕು. ಆನಿಟ್ಟಿನಲ್ಲಿ ನಾವು ನಮ್ಮ ಸರ್ಕಾರಗಳಿಗೆ ಒತ್ತಡಹೇರಬೇಕೇ ವಿನಃ ಯುದ್ಧ ಮಾಡಲಲ್ಲ. ಭಾರತ ಶಾಂತಿಪ್ರಿಯ ರಾಷ್ಟ್ರ. ಈ ದೇಶಕ್ಕೆ ತನ್ನದೇ ಆದ ಇತಿಹಾಸವಿದೆ, ಭಾರತ ಯಾರ ಮೇಲೂ ಕಾಲ್ಕೆರೆದು ಯುದ್ಧ ಮಾಡಿದ ಉದಾಹರಣೆಗಳಿಲ್ಲ, ಯಾವುದೋ ಉನ್ಮಾದದಲ್ಲಿ ಭಾರತ ಯುದ್ಧ ಘೋಷಣೆ ಮಾಡುವುದಿಲ್ಲ. ನಾವು ಗಾಂಧಿಯನ್ನು ನೆನಪಿಟ್ಟುಕೊಂಡಿದ್ದೇವೋ ಇಲ್ಲವೋ ಗೊತ್ತಿಲ್ಲ ಆದರೆ ಅಂತ ಗಾಂಧಿಯಂತ ಗಾಂಧಿ ಹುಟ್ಟಿದ ನೆಲದವರು ನಾವು. ನಮ್ಮ ರಾಷ್ಟ್ರಧ್ವಜದ ಬಿಳಿಯ ಬಣ್ಣ ಶಾಂತಿ ಸಂಕೇತ ಎಂದು ನಾವು ಹೇಳಿಕೊಳ್ಳುತ್ತೇವೆ ಆದರೆ ಈಗ ನಾವು ನಡೆದುಕೊಳ್ಳುತ್ತಿರುವ ರೀತಿ ಯಾವುದು? ತಾನಾಗೆ ಬಂದ ಯಾರನ್ನೂ ಸುಮ್ಮನೇ ಉಳಿಸಿದ ಉದಾಹರಣೆಗಳೂ ಇತಿಹಾಸದ ಯಾವ ಮೂಲೆಯಲ್ಲೂ ಸಿಗುವುದಿಲ್ಲ. ನಮ್ಮ ಸೈನಿಕರಿರುವುದು ಕಾಯುವುದಕ್ಕೇ ಹೊರತು ಯಾರನ್ನೋ ಕೊಲ್ಲುವುದಕ್ಕಲ್ಲ. ರಕ್ಷಿಸುವ ಕೈಗಳನ್ನು ರಕ್ತ ಕುಡಿಯುವಂತೆ ಒತ್ತಾಯಿಸಬೇಕಿಲ್ಲ. ಕೊನೆಯದಾಗಿ ಯುದ್ಧದ ಕುರಿತು ಧೀರ ಯೋಧ ಸಂದೀಪ್ ಉನ್ನಿಕೃಷ್ಣನ್ ಅವರ ತಂದೆ ಕೆ. ಉನ್ನಿಕೃಷ್ಣನ್ ಹೇಳಿರುವ ಮಾತುಗಳನ್ನು ಯಥಾವತ್ತಾಗಿ ಹೇಳುತ್ತೇನೆ ಕೇಳಿ,

ನಾವೀಗ ಒಂದು ಸುಧೀರ್ಘದಾರಿಯ ದೊಡ್ಡ ತಿರುವಿನಲ್ಲಿದ್ದೇವೆ. ನಾವು ಪಾಕಿಸ್ತಾನದೊಂದಿಗೆ ಗುದ್ದಾಟದಲ್ಲಿಲ್ಲ, ಭಯೋತ್ಪಾದಕರೊಂದಿಗಿನ ಗುದ್ದಾಟದಲ್ಲಿದ್ದೇವೆ ಎಂದು ಹಲವರು ಹೇಳುತ್ತಾರೆ ಅದೇನೇ ಇರಲಿ, ದೇಶದಲ್ಲಿ ಏನಾಗುತ್ತಿದೆ ಎಂದು ನಾನು ಸುಮ್ಮನೇ ಗಮನಿಸುತ್ತಿದ್ದೇನೆ. ಈಗಾಗುತ್ತಿರುವ ಬೆಳವಣಿಗೆಗಳಿಂದ ಪಾಕಿಸ್ತಾನ ಏನನ್ನೂ ಕಳೆದುಕೊಳ್ಲುತ್ತಿಲ್ಲ, ಅವರು ಕಳೆದುಕೊಳ್ಳುತ್ತಿರುವುದು ಸಾಯಲು ಸಿದ್ದವಾಗಿರುವ ಭಯೋತ್ಪಾದಕರನ್ನು ಮಾತ್ರ. ಆದರೆ ನಾವು? ನಾವು ನಮ್ಮ ಭಾರತದ ಹೆಮ್ಮೆಯ ಸೈನಿಕರನ್ನು ಕಳೆದುಕೊಳ್ಲುತ್ತಿದ್ದೇವೆ. ಆ ಭಯೋತ್ಪಾದಕರಿಗೂ ನಮ್ಮ ಸೈನಿಕರಿಗೂ ಎಲ್ಲಿಂದೆಲ್ಲಿಯ ಹೋಲಿಕೆ? ನಾವು ನಮ್ಮ ಶತೃಗಳ ಸಾವನ್ನೂ ಸಂಭ್ರಮಿಸಲಾಗುವುದಿಲ್ಲ, ಅದು ನಮ್ಮ ಭಾರತದ ಸಂಸ್ಕತಿಯೂ ಅಲ್ಲ. ನಾವೀಗ ಬಹಲ ಜಾಗೃತವಾಗಿರಬೇಕು, ನಾವು ಯಾರ ಸಾವನ್ನೂ ಸಂಭ್ರಮಿಸಬಾರದು, ಅದು ನಮ್ಮ ಶತೃವಿನ ಸಾವಾಗಿದ್ದರೂ ಕೂಡ. ಯಾಕೆಂದರೆ ಯಾರ ಮನೆಯಲ್ಲಾದರೂ ಸಾವು ಸಾವೇ.

ಇದು ನನ್ನ ವೈಯಕ್ತಿಕ ಅನಿಸಿಕೆ. ಅನಿವಾರ್ಯತೆ ಬಂದಾಗ ಮಾತ್ರವೇ ನಾವು ಕೊಲ್ಲಬೇಕಾಗುತ್ತದೆ. ನಾವು ತಿಳಿದುಕೊಂಡಿರುವಂತೆ ನಮ್ಮ ಸೈನ್ಯ ಇರುವುದು ಯಾರನ್ನೋ ಕೊಲ್ಲುವುದಕ್ಕಲ್ಲ, ಅವರ ಕರ್ತವ್ಯವೇ ನಮ್ಮನ್ನು ಕಾಯುವುದು. “ನಮ್ಮನ್ನು ಕೊಲ್ಲುವವರಂತೆ ನೋಡಬೇಡಿ, ನಾವು ದೇಶಕ್ಕಾಗಿ ಕೆಲವೊಮ್ಮೆ ಕೊಲ್ಲಬಹುದು ಆದರೆ ನಮ್ಮ ಕೆಲಸ ಕೊಲ್ಲುವುದಲ್ಲ ಬದಲಾಗಿ ದೇಶ ಕಾಯುವುದು, ನಾವು ಅಲ್ಲಿರುವುದು ಯಾರನ್ನಾದರೂ ಕೊಲ್ಲುವುದಕ್ಕಲ್ಲ. ಕೊಲ್ಲುವವರನ್ನು ತಡೆಯುವುದಕ್ಕೆ ಎಂದು ಸಂದೀಪ್ ಉನ್ನಿಕೃಷ್ಣನ್ ಸದಾ ಹೇಳುತ್ತಿದ್ದರು.” ನೆನಪಿರಲಿ ಭಾರತ ತಾನಾಗಿಯೇ ಹೋಗಿ ಯಾರನ್ನೂ ಕೊಂದ ಇತಿಹಾಸವಿಲ್ಲ. ಇದು ಕೆ. ಉನ್ನಿಕೃಷ್ಣನ್ ಅವರ ಮಾತು, ದಯಮಾಡಿ ಸ್ವಲ್ಪ ಯೋಚಿಸಿ.

ಭಾರತ ಬೌದ್ಧಿಕವಾಗಿ ಹಿಂದೆಂದೂ ಕಾಣದಷ್ಟು ಇಬ್ಬಾಗವಾಗುತ್ತಿದೆ. ಅದಕ್ಕೆ ಕಾರಣ ನಮ್ಮ ಸಿದ್ಧಾಂತಗಳು, ಧರ್ಮ, ರಾಜಕೀಯ ಮತ್ತೇನೇನೋ,,, ಈದೇಶದಲ್ಲಿದ್ದುಕೊಂಡು ದೇಶದ್ರೋಹದ ಕೆಲಸ ಮಾಡುವವರಾರನ್ನೂ ಸುಮ್ಮನೆ ಬಿಡಬೇಕಿಲ್ಲ, ಹಾಗೆಂದು ಯಾರದೋ ತಪ್ಪಿಗೆ ಮತ್ತಾರನ್ನೋ ಶಿಕ್ಷಿಸುವುದೂ ತರವಲ್ಲ. ದೇಶದ ಭದ್ರತೆ, ಸೇನೆ, ಸೈನಿಕರ ತ್ಯಾಗ, ದೇಶಭಕ್ತಿಯ ವಿಚಾರಬಂದಾಗ ಎಲ್ಲರೂ ಒಗ್ಗಟ್ಟಾಗಿ ನಿಲ್ಲುತ್ತಾರೆ ಅದು ನಮ್ಮ ದೇಶಧ ಸೌಂದರ್ಯ. ಹಿಂದೆ ಪಾಕಿಸ್ತಾನದ ವಿರುದ್ದ ನಡೆದ ಮೂರೂ ಯುದ್ಧಗಳಲ್ಲೂ ನಾವು ಗೆದ್ದಿದ್ದೇವೆ. ಮತ್ತು ನಾಳೆ ಯುದ್ಧ ನಡೆದರೂ ನಾವು ಗೆಲ್ಲುತ್ತೇವೆ ಅದು ಭಾರತದ ತಾಕತ್ತು. ಮುಂದೆಯು ಅಷ್ಟೆ ಅಧಿಕಾರದಲ್ಲಿ ಕಾಂಗ್ರೆಸ್ ಇರಲಿ ಅಥವಾ ಬಿಜೆಪಿಯಿರಲಿ ನಾವು ದೇಶದ ಪರವಾಗಿರೋಣ. ನೆನಪಿರಲಿ ದೇಶ ಎಂದರೆ ದೇಶದ ಜನರೇ ಹೊರತು ಆಳುವವರು ಮತ್ತು ಪಕ್ಷಗಳಲ್ಲ.

ದರ್ಶನ್ ಆರಾಧ್ಯ
ಪತ್ರಕರ್ತ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಕವಿತೆ | ನೆನಪು

Published

on

ಕವಿ | ರುದ್ರಪ್ಪ ಹನಗವಾಡಿ
  • ರುದ್ರಪ್ಪ ಹನಗವಾಡಿ

ಅಪ್ಪನನ್ನು ಒಪ್ಪ ಮಾಡಿ
ವರ್ಷಗಳೇ ಕಳೆದವು ಮುವ್ವತ್ತೇಳು
ಇಂದಿರಾಗಾಂಧಿಯ ತುರ್ತು ಪರಿಸ್ಥಿತಿ
ಅರಸರ ಮೀಸಲಾತಿ
ಬಸವಲಿಂಗಪ್ಪನವರ ಬೂಸಾ ಖ್ಯಾತಿ
ಮಲ ಹೊತ್ತು
ಮಲಗಿದ್ದ ಕಾಲಕ್ಕೆ
ಚುರುಕು ಮುಟ್ಟಿಸಿದ ಕಾಲ

ಹರೆಯದ ನನಗೆ
ಕಾಲೇಜ ಮೇಷ್ಟರ ಕೆಲಸ
ಸೂಟು ಬೂಟಿನ ವೇಷ
ಆ ಮೇಲೆ ಅಮಲದಾರಿಕೆ
ಎಲ್ಲ ನಡೆದಾಗಲೇ ಅವ್ವನನ್ನು
ಆಸ್ಪತ್ರೆಗೆ ಸೇರಿಸಿದ್ದು
ಕಾಲ ಕಳೆದು ಕೊಂಡು
ಕೋಲ ಹಿಡಿದದ್ದು
ನಿನ್ನೆ ಮೊನ್ನೆಯಂತೆ
ಬಾಲ್ಯವಿನ್ನು ಉಂಟೆಂಬಂತೆ
ಭಾವಿಸುವಾಗಲೇ ಅವ್ವನ ಸಾವು

ಅದರೊಟ್ಟಿಗೆ ಕಾಯದಾಯಾಸ ತೀರಿಸಲು
ಬಂದರೆ ಬೆಂಗಳೂರಿಗೆ
ರೌಡಿಗಳ ಕಾಟ
ಅಂಬೇಡ್ಕರ್ ಪಟದ ಕೆಳಗೆ
ದೌರ್ಜನ್ಯದ ದಂಡು

ಅಮಾಯಕರಿಗೆ ಗುಂಡು
ಕಂಡುಂಡ ಹಾದಿಯ ಗುಡಿಸಲುಗಳಲ್ಲೀಗ
ಮುಗಿಲು ಮುಟ್ಟೋ ಮಹಲುಗಳು
ಅಂತಲ್ಲಿ
ದೇಶ ವಿದೇಶಗಳ
ಅಹವಾಲುಗಳು
ಅವಿವೇಕಗಳು
ನೋಡ ನೋಡುತ್ತಿದ್ದಂತೆ
ಉಸಿರು ಬಿಗಿಹಿಡಿದ ಜನರ ಒಳಗೆ
ಒಳಪದರಗಳೊಳಗೆ ಕನಸ ಬಿತ್ತಿ
ಹಸಿರ ಹೊನ್ನು ಬಾಚಲು ಹವಣಿಸಿದ
ಬಿಳಿ ಜನರ ಆಟ
ಅರ್ಥವಾಗುವುದೇ ಎಲ್ಲ
ಗೋಣ ನೀಡುವರೆ
ಹೂತಿಟ್ಟ ಗೂಟಕ್ಕೆ ?

( ಚಿಂತಕ ರುದ್ರಪ್ಪ ಹನಗವಾಡಿ ಅವರ ‘ಊರು – ಬಳಗ’ ಕವನ ಸಂಕಲನದಿಂದ ‘ ನೆನಪು ‘ ಕವಿತೆಯನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕೃತಿಯನ್ನು ಫ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ 2013 ರಲ್ಲಿ ಪ್ರಕಿಸಿದೆ.)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಮಣ್ಣ ಮಕ್ಕಳು

Published

on

ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ
  • ಸಿ.ಕೃಷ್ಣನಾಯಕ್, ಆಡಳಿತಾಧಿಕಾರಿ, ಐಟಿಐ ಕಾಲೇಜು ದಾವಣಗೆರೆ

ಮಣ್ಣ ಮಕ್ಕಳು ನಾವು
ಹಗಳಿರುಳೆನ್ನದೆ ಬೆವರು ಬಸಿದು
ಹಸಿದ ಹೊಟ್ಟೆಯಲಿ ಉಸಿರು ಹಿಡಿದವರು
ಕಸದಲಿ ರಸ ತೆಗದು ಬದುಕಿನುದ್ದಕ್ಕೂ ಉಳ್ಳವರ
ಕಸುಬಿಗೆ ಆಳಾದವರು ಸವಳು ನೀರಲಿ ಮೈತೊಳೆದು
ಚಿಂದಿ ಅಂಗಿಯಲಿ ಶಾಲೆಗೆ ದಾಖಲಾದವರು.

ಬರಿಗಾಲಲಿ ಕಾಡು ದಾರಿಯಲಿ ಮೈಲು ದೂರ ನಡೆದು
ನೆಗ್ಗಿಲ ಮುಳ್ಳು ತುಳಿದವರು ; ನಿಬ್ಬು ನೆಗ್ಗಿದ ಪೆನ್ನಿನಲಿ
ಹೆಸರು ಬರೆಯಲು ಕಲಿತವರು ಹರಿದ ಪಠ್ಯದಲಿ ಅಕ್ಷರ ಹುಡುಕಿ ಒಡೆದ ಪ್ಲೇಟಿನಲಿ ಬರೆದವರು.

ತೂತು ಬಿದ್ದ ಸೂರಿನಲಿ ಇಣುಕಿದ ಚುಕ್ಕಿ ಚಂದ್ರಮರ ನೋಡಿ
ವಿದ್ಯುತ್ ದೀಪದ ಕನಸು ಕಂಡವರು
ಮೋಸ ವಂಚನೆಗೆ ಬಗ್ಗದೆ ಶೋಷಣೆಗೆ ಸಿಡಿದವರು
ಮಣ್ಣ ಮಕ್ಕಳು ನಾವು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಬಿ.ಶ್ರೀನಿವಾಸ ಅವರ ‘ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು’ ಕೃತಿಯ ಕುರಿತು

Published

on


ಸಂಡೂರಿನ ಜನರ ಮುದುಡಿದ ಅಂಗಿಯ ಮೇಲೆ,ಹೆಂಗಸರು ಮಾಸಿದ ಸೀರೆಯ ಸೆರಗಿನ ಮೇಲೆ ಬಿ.ಶ್ರೀನಿವಾಸ ಅಕ್ಷರ ಬಿಡಿಸುತ್ತಾರೆ.

ಅನ್ನದ ಅಗುಳು,ಧೂಳು,ಕಾಗದದ ಚೂರು,ಆಟಿಕೆ ಸಾಮಾನು,ಕಿಡ್ನಿ,ಈ ಸಣ್ಣವು ಗಳಲ್ಲಿ ಜೀವಸಾಕ್ಷಿ ಹುಡುಕುವ ಕಥೆಗಳಿವು.ವೃತ್ತಿ ಮತ್ತು ಪ್ರವೃತ್ತಿಯಲ್ಲಿ ಅನ್ನದ ಅಗಳು,ಕಾಗದದ ಚೂರನ್ನು ಎತ್ತಿಹಿಡಿಯುವ ಗೆಳೆಯ ಶ್ರೀನಿವಾಸ *ಧೂಳನ್ನೇ ಅಕ್ಷರಗಳನ್ನಾಗಿಸಿದ ಲೇಖಕ.

  • ಬಸವರಾಜ ಹೂಗಾರ

ಇಲ್ಲಿನ ಹುಚ್ಚರ ಕತೆಗಳನ್ನು ಓದುವಾಗ ಕುಂ.ವೀ.ಯವರ ಹಾಗೂ ಸಾದತ್ ಹಸನ್ ಮಾಂಟೋ ಅವರ ಹುಚ್ಚರ ಕತೆಗಳು ನೆನಪಾಗುತ್ತವೆ.ಇಲ್ಲಿನ ನತದೃಷ್ಟರ ಬದುಕನ್ನು ಹಿಡಿದಿಡಲು ಲೇಖಕರು ಕಂಡುಕೊಂಡಿರುವ ಅಭಿವ್ಯಕ್ತಿ ವಿನ್ಯಾಸ ವಿಶಿಷ್ಟವಾಗಿದೆ. ಬರಹಗಳು ದೀರ್ಘವಾಗಿಲ್ಲ. ಚುಟುಕಾಗಿವೆ. ಕವನಗಳೊ, ಗದ್ಯಗಳೊ ಎಂದು ಹೇಳಲಾಗದ ರೂಪದಲ್ಲಿವೆ.

ಗಾಢವಾದ ಅರ್ಥವನ್ನು ಕೆಲವೇ ಸಾಲುಗಳಲ್ಲಿ ವ್ಯಂಗ್ಯ ಮತ್ತು ವಿಡಂಬನೆಗಳಲ್ಲಿ ಹಿಡಿಯಲು ಯತ್ನಿಸುತ್ತವೆ.
ಇಲ್ಲಿರುವ ಲೋಕದ ನೋವಿಗೆ ಮಿಡಿವ ಸಂವೇದನೆ,ಓದುವ ಓದುಗರನ್ನೂ ಆವರಿಸಿಕೊಂಡು,ಚಿಂತನೆಗೆ ಹಚ್ಚುತ್ತದೆ.ಓದುತ್ತ,ಓದುತ್ತಾ ನಿಟ್ಟುಸಿರು ಹೊಮ್ಮುತ್ತದೆ.ಮನಸ್ಸು ಮಂಕಾಗುತ್ತದೆ.ಇಂತಹ ಬರಹಗಳನ್ನು ಕೊಟ್ಟಿರುವ ಶ್ರೀನಿವಾಸ ತಮ್ಮ ಅಂತಃಕರಣ ,ಚೂಪಾದ ಗ್ರಹಿಕೆ,ಆಳವಾದ ಸಂವೇದನೆಗಳನ್ನು ಇತರೆ ಪ್ರಕಾರಗಳಲ್ಲಿಯೂ ಪ್ರಕಟಿಸುವ ಜರೂರಿಯಿದೆ.

  • ಡಾ.ರಹಮತ್ ತರೀಕೆರೆ

ಒಬ್ಬ ಮನುಷ್ಯ ಮತ್ತೊಬ್ಬನನ್ನು ಕಿತ್ತು ತಿನ್ನಬಾರದು.ಹೊಟ್ಟೆಪಾಡಿಗಾಗಿ ನಿರ್ವಹಿಸುವ ಪ್ರತಿ ಕೆಲಸವೂ ಸೃಜನಶೀಲವಾಗಿರಬೇಕು-ಎಂಬ ಧಾವಂತದಲ್ಲಿ ಹುಟ್ಟಿದ ಮನದ ಪ್ರಕ್ರಿಯೆಗಳಿಗೆಲ್ಲ ಇಲ್ಲಿ ಹರಡಿಕೊಂಡಿವೆ.

  • ಬಿ.ಶ್ರೀನಿವಾಸ,ಕೃತಿ ಲೇಖಕ

ಖಾಲಿ ಗೋಡೆಯ ಗುರುತಿಲ್ಲದ ಚಿತ್ರಗಳು ನೊಂದವರ ಮನದಲ್ಲಿ ಅಲ್ಪಾವಧಿ ಗುರುತು ಮೂಡಿಸಬಹುದು ನಿಮ್ಮ ಈ ಪುಸ್ತಕ ಮತ್ತು ಅದರಲ್ಲಿರುವ ಎಷ್ಟೋ ವಿಚಾರಗಳು ನನ್ನನ್ನು ಡಿಸ್ಟರ್ಬ್ ಮಾಡಿವೆ. ಕೇವಲ ವಾಟ್ಸಾಪ್ ಲೈನ್ ಸಾಕಾಗಲ್ಲ ಎದುರುಗಡೆ ಕುಳಿತು ಇನ್ನು ಹೆಚ್ಚು ತಿಳಿದುಕೊಳ್ಳಬೇಕೇನಿಸುತ್ತದೆ. ಸಂಡೂರಿನ ದಾರುಣ ಚಿತ್ರಗಳನ್ನು,ಕೋರ್ಟಿನ ಚಿತ್ರಗಳನ್ನು,ಬದುಕಿನ ಚಿತ್ರಗಳನ್ನು ಕಣ್ಣಿಗೆ ರಾಚುವಂತೆ ಮೂಡಿಸಿದ್ದೀರಿ.

ಸಾವಿಗಿಂತ ಹಸಿವು ಬಹಳ ಕ್ರೂರಿ ಎನ್ನುವುದು: ನೋವಿನ ಬದಲು ಹಸಿವಿನ ಏಟುಗಳು ಬೀಳಬೇಕಿತ್ತು ಎನ್ನುವ ಸಾಲುಗಳಂತೂ Geographical Hungrey ಪುಸ್ತಕ ನೆನಪಿಸುತ್ತವೆ. ಸೊಂಡೂರಿನ ಚಿತ್ರಗಳ ಮೂಡಿಸಿದೆ ಗಾಢ ವಿಷಾದತೆ, ನನ್ನನ್ನು ಹೊರಬರಲು ಬಿಡುತ್ತಿಲ್ಲ.

“ಉಳ್ಳವರು ಹೊತ್ತ ಮೂಟೆಗಳಲ್ಲಿ ಬಡವರ ಹಸಿವಿನದ್ದೇ ಭಾರ”ಇವೆಲ್ಲ ಹಸಿವನ್ನು ಅನುಭವಿಸಿದವರಿಗೆ ಮಾತ್ರ ಸರಿಯಾಗಿ ಅರ್ಥವಾಗುವ ಸಾಲುಗಳು.

ಇನ್ನು ,ಕೋರ್ಟಿನ ಚಿತ್ರಗಳು, ಎಷ್ಟು ಜನ ಇರ್ತಾರೆ ಇವನ್ನೆಲ್ಲ ಸೂಕ್ಷ್ಮ ವಾಗಿ ತಿಳಿದುಕೊಳ್ಳುವವರು ?
ಶಾಲೆ ಹಿಂದೆ ತಿರುಗಬಾರದು ಕೋರ್ಟ್ ಕಚೇರಿ ಮುಂದೆ ತಿರುಗಬಾರದು ಎಂದು ನಮ್ಮ ಜನಪದರು ಹೇಳ್ವ ಮಾತು ಎಷ್ಟೋ ಸಲ ಸತ್ಯ ಎನಿಸುತ್ತದೆ.

ನೀವು ಹಿಡಿದಿಟ್ಟ ಬದುಕಿನ ಚಿತ್ರಗಳಲ್ಲಿನ “ಶವಪೆಟ್ಟಿಗೆ ಸಣ್ಣದಿದ್ದಷ್ಟು ಹೊರುವುದು ಬಹಳ ಕಷ್ಟ “ಎಂಬ ಮಾತಂತೂ ಚಿಕ್ಕಮಕ್ಕಳ ತಂದೆತಾಯಿಯರ ಕಣ್ಣಲ್ಲಿ ನೀರು ತರಿಸುವುದು.

ತಲೆ ಮ್ಯಾಲೆ ಮಲ ಸುರುವಿಕೊಂಡೆವಲ್ಲ ಸರ್ ಅವತ್ತೇ… ನಾವ್ ಹುಟ್ಟಿದ್ದು ಎನ್ನುವ ಸವಣೂರಿನ ಭಂಗಿಯ ಮಾತನ್ನು ಎಷ್ಟು ಅರ್ಥಗರ್ಭಿತವಾಗಿ ಸೋ ಕಾಲ್ಡ್ ಸೊಸೈಟಿಗೆ ಮುಟ್ಟಿ ನೋಡಿಕೊಳ್ಳುವಂತೆ ಬರೆದಿದ್ದೀರಿ. ಆಕೆ ಏನನ್ನೋ ಆಯ್ಕೆ ಮಾಡಿಕೊಂಡಿದ್ದಾಳೆ ಎಂಬ ವಿಚಾರಗಳು ಕೇವಲ ವಿಚಾರಗಳಲ್ಲ ,ಬದುಕಿನ ಸತ್ಯ ಚಿತ್ರಣಗಳು ದಿನ ನಿತ್ಯ ನಮ್ಮ ನಡುವೆ ನಡೆಯುವಂತವು.ಅವನ್ನು ಕಾಣುವಂತ ದೃಷ್ಟಿ ಇದ್ದವರಿಗೆ ಮಾತ್ರ ಇವು ಕಾಣುತ್ತವೆ ಸರ್ .
ನಿಮ್ಮ ನೈಜ ದೃಷ್ಟಿಗೆ ದನ್ಯವಾದಗಳು ಸರ್, ಉಳಿದದ್ದು ಎದುರು ಬದುರು ಕುಳಿತು ಮಾತಾಡೋಣ

  • ಡಾ.ರಾಮಚಂದ್ರ ಹಂಸನೂರು, ಬೆಟಗೇರಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ1 day ago

ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಡಿಕೇರಿಯಲ್ಲಿ...

ದಿನದ ಸುದ್ದಿ5 days ago

ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ

ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್‍ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ...

ದಿನದ ಸುದ್ದಿ1 week ago

ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್‍ಗೆ ರೂ.10 ಪಡೆದ ಶಾಪಿಂಗ್ ಮಾಲ್‍ಗೆ ದಂಡ

ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499...

ದಿನದ ಸುದ್ದಿ1 week ago

ವಿವಿಧ ಜಿಲ್ಲೆಗಳಲ್ಲಿ ಡಾ. ಬಾಬು ಜಗಜೀವನ್ ರಾಮ್ 117ನೇ ಜನ್ಮ ದಿನಾಚರಣೆ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ. ಬಾಬು ಜಗಜೀವನ್ ರಾಮ್ ಅವರ 117ನೇ ಜನ್ಮ ದಿನಾಚರಣೆ ಪ್ರಯುಕ್ತ ವಿಧಾನ ಸೌದದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ...

ದಿನದ ಸುದ್ದಿ1 week ago

ಇಂದು ಚುನಾವಣಾ ಆಯೋಗ ಸಮಾವೇಶ

ಸುದ್ದಿದಿನ ಡೆಸ್ಕ್ : ಕಳೆದ ಲೋಕಸಭಾ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವ 11 ರಾಜ್ಯಗಳ ನಗರ ಪಾಲಿಕೆ ಆಯುಕ್ತರು ಮತ್ತು ಆಯ್ದ ಜಿಲ್ಲಾ ಚುನಾವಣಾ ಅಧಿಕಾರಿಗಳೊಂದಿಗೆ ಕೇಂದ್ರ ಚುನಾವಣಾ...

ದಿನದ ಸುದ್ದಿ2 weeks ago

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ 90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು....

ದಿನದ ಸುದ್ದಿ2 weeks ago

ಔಷಧಗಳ ದರ ಗಣನೀಯ ಏರಿಕೆ ಕುರಿತ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ; ಕೇಂದ್ರ ಸರ್ಕಾರ ಸ್ಪಷ್ಟನೆ

ಸುದ್ದಿದಿನ ಡೆಸ್ಕ್ : ಮಾರುಕಟ್ಟೆಗಳಲ್ಲಿ ಮಾರಾಟ ಮಾಡುವ ವಿವಿಧ ಔಷಧಿಗಳ ದರ ಗಣನೀಯವಾಗಿ ಏರಿಕೆ ಮಾಡಲಾಗಿದೆ ಎಂಬ ಮಾಧ್ಯಮಗಳ ವರದಿ ಸತ್ಯಕ್ಕೆ ದೂರವಾದ ಸಂಗತಿ ಮತ್ತು ಜನರನ್ನು...

ದಿನದ ಸುದ್ದಿ2 weeks ago

ರಾಜ್ಯದಲ್ಲಿ ಬಿಸಿಲ ತಾಪ ಇನ್ನೂ ಹೆಚ್ಚಾಗಲಿದೆ ; ಹವಾಮಾನ ಇಲಾಖೆ ಮುನ್ಸೂಚನೆ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಮುಂದಿನ 7 ದಿನಗಳಲ್ಲಿ ಬಿಸಿಲ ತಾಪ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಅವಧಿಯಲ್ಲಿ ಜನರುಕೆಲವು ಮುನ್ನೆಚ್ಚರಿಕೆ...

ದಿನದ ಸುದ್ದಿ2 weeks ago

ಜಿಲ್ಲೆಯ ರಾಜಕಾರಣದಲ್ಲಿ ನನಗೆ ಅನ್ಯಾಯ; ರಾಜಕೀಯ ಕುತಂತ್ರ ವ್ಯವಸ್ಥೆ ವಿರುದ್ಧ ನನ್ನ ಹೋರಾಟ : ವಿನಯ್ ಕುಮಾರ್

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ರಾಜಕಾರಣದಲ್ಲಿ ಚೆನ್ನಯ್ಯ ಒಡಿಯರ್ ಅವರಿಗೆ ಆದ ಅನ್ಯಾಯ ನನಗೂ ಆಗಿದೆ. ನನ್ನ ಹೋರಾಟ ನನ್ನ ಸ್ವಾಭಿಮಾನದ ಹೋರಾಟ ಒಬ್ಬ ವ್ಯಕ್ತಿ ಪಕ್ಷದ ವಿರುದ್ಧ...

ದಿನದ ಸುದ್ದಿ2 weeks ago

ಲೋಕಸಭೆ ಚುನಾವಣೆ; ರಾಜ್ಯದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆ ದಿನ

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆ ಸಾರ್ವತ್ರಿಕ ಚುನಾವಣೆಗೆ, ದೇಶಾದ್ಯಂತ ಎರಡನೇ ಹಂತದ 89 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ರಾಜ್ಯದಲ್ಲಿ ನಡೆಯುತ್ತಿರುವ ಮೊದಲ...

Trending