ದಿನದ ಸುದ್ದಿ
ವೆರಿಕೋಸ್ ವೇನ್ಸ್ ಗೆ ಆಪರೇಷನ್ ರಹಿತ ಆಯುರ್ವೇದ ಚಿಕಿತ್ಸೆ
ವೆರಿಕೋಸ್ ವೇನ್ಸ್ ಈಗ ಮನೆ ಮನೆ ಸಮಸ್ಯೆ ಅನ್ನುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಆಧುನಿಕ ಜೀವನ ಶೈಲಿ ಸೃಷ್ಟಿಸಿರುವ ಅತಿ ದೊಡ್ಡ ಆರೋಗ್ಯ ಸವಾಲು ಇದಾಗಿದೆ. ಸುದೈವವಶಾತ್, ನಮ್ಮ ಹಿರಿಯರು ನಮಗೆ ಕಾಣಿಕೆಯಾಗಿ ನೀಡಿರುವ ಆಯುರ್ವೇದ ವೈದ್ಯಶಾಸ್ತ್ರ, ಈ ಸಮಸ್ಯೆಗೆ ಶಸ್ತ್ರಚಿಕಿತ್ಸೆ ರಹಿತ, ಶಾಶ್ವತ ಪರಿಹಾರವನ್ನು ಕೊಟ್ಟಿದೆ.
ರಕ್ತನಾಳಗಳ ಉಬ್ಬುವಿಕೆಯ ಸಮಸ್ಯೆ ಸುಮಾರು 30ರಿಂದ 40 ಶೇಕಡಾ ಜನರನ್ನು ಈಗ ಬಾಧಿಸುತ್ತಿದೆ. ಈ ಸಮಸ್ಯೆ ಉಲ್ಬಣಗೊಂಡರೆ, ಶಸ್ತ್ರಚಿಕಿತ್ಸೆ ಮೂಲಕ ಕಾಲು ಅಥವಾ ಬೆರಳನ್ನು ಕತ್ತರಿಸಬೇಕಾದ ಅನಿವಾರ್ಯತೆ ಕೂಡ ಎದುರಾಗಬಹುದು. ಆದರೆ ಈಗ ಈ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಡಾ.ಎಂ ವಿ ಉರಾಳ್ ಅವರು ತಮ್ಮ ಅಪಾರ ಆಯುರ್ವೇದ ಜ್ಞಾನ- ಸಂಶೋಧನೆಗಳಿಂದ ಅಭಿವೃದ್ಧಿಪಡಿಸಿರುವ ಔಷಧ ,ಈ ಸಮಸ್ಯೆಯಿಂದ ಶಾಶ್ವತ ಪರಿಹಾರ ಕೊಡುತ್ತಿದೆ.
ಅವೈಜಾನಿಕ ಜೀವನ ಶೈಲಿಯೇ ಈ ಸಮಸ್ಯೆಯ ಮೂಲ ಕಾರಣ
ಮನೆ ಇರಲಿ, ಕಚೇರಿ ಇರಲಿ, ಇಂದು ನಾವು ಮಾಡುವ ಕೆಲಸಗಳೆಲ್ಲವೂ ಸತತ ನಿಲ್ಲುವಿಕೆಯನ್ನು ಅಪೇಕ್ಷಿಸುತ್ತವೆ. ಪರಿಣಾಮ ನಮ್ಮ ಕಾಲಿನ ರಕ್ತನಾಳಗಳ ಉಬ್ಬುವಿಕೆ ಸಮಸ್ಯೆ ಸಾಮಾನ್ಯ ಎಂಬುವಂತಾಗಿದೆ. ಇದನ್ನು ವೈದ್ಯಕೀಯ ಪರಿಭಾಷೆಯಲ್ಲಿ “ವೆರಿಕೋಸ್ ವೇನ್ಸ್” ಎನ್ನುತ್ತಾರೆ. ಈ ಸಮಸ್ಯೆಗೆ ಆರಂಭದಲ್ಲೇ ಪರಿಹಾರ ಕಂಡುಕೊಳ್ಳದಿದ್ದಲ್ಲಿ, ನೋವು ಕ್ರಮೇಣ ಹೆಚ್ಚಾಗುತ್ತದೆ, ಚರ್ಮ ಕಪ್ಪಾಗುತ್ತದೆ. ತುರಿಕೆ ಗಾಯವಾಗಿ, ಶಸ್ತ್ರಚಿಕಿತ್ಸೆಯ ಮೂಲಕ ಬೆರಳು ಅಥವಾ ಕಾಲು ಕತ್ತರಿಸುವ ಹಂತಕ್ಕೂ ಇದು ಮುಟ್ಟಬಹುದು. ನಮ್ಮ ದೈಹಿಕ ಚಟುವಟಿಕೆಗಳಲ್ಲಿನ ಅಸ್ಥಿರತೆ, ಅವೈಜ್ಞಾನಿಕತೆ, ಆಹಾರ ವ್ಯತ್ಯಾಸಗಳು, ಹೀಗೆ ನಮ್ಮ ಅವೈಜಾನಿಕ ಜೀವನ ಶೈಲಿಯೇ ಈ ಸಮಸ್ಯೆಯ ಮೂಲ ಕಾರಣ.
ಈ ಸಮಸ್ಯೆಗೆ ಕಾರಣವಾಗುವ ಅಂಶಗಳನ್ನು ಮೂರೂ ವಿಧವಾಗಿ ವಿಂಗಡಿಸಬಹುದು. ನೈಸರ್ಗಿಕ ಕಾರಣಗಳು, ಜೀವನ ಶೈಲಿ ಕಾರಣಗಳು, ಹಾಗು ಅನುವಂಶಿಕ ಕಾರಣಗಳು. ಹೃದಯವು ರಕ್ತವನ್ನು ದೇಹದೆಲ್ಲೆಡೆ ಪ್ರಸರರಿಸುವ ಕಾರ್ಯಮಾಡುತ್ತದೆ, ರಕ್ತವನ್ನು ಮತ್ತೆ ಹೃದಯಕ್ಕೆ ಸೇರುವ ಕಾರ್ಯ ಮಾಡಲು ಕಾಲಿನ ಮೀನಖಂಡಗಳು, ನಮ್ಮ ಉಸಿರಾಟ ಪ್ರಕ್ರಿಯೆ ಮತ್ತು ವೈನ್ಸ್ ಗಳಲ್ಲಿ ಮೇಲ್ಮುಖವಾಗಿ, ಏಕಮುಖ ರಕ್ತ ಸಂಚಾರಕ್ಕೆ ಸಹಕಾರಿಯಾಗುವ ವಾಲ್ವ್ ಗಳು ಪ್ರಮುಖ ಕಾರ್ಯವಹಿಸುತ್ತವೆ. ಮೀನಖಂಡಗಳು ಮತ್ತು ಉಸಿರಾಟ ಪ್ರಕ್ರಿಯೆಗಳು ನಮ್ಮ ಎರಡನೇ ಹೃದಯ ದಂತೆ ಕಾರ್ಯ ನಿರ್ವಹಿಸುತ್ತವೆ. ಇವುಗಳ ಕಾರ್ಯದಲ್ಲಿ ಉಂಟಾಗುವ ಪೂರ್ಣತೆ ಅಥವಾ ಅಶಕ್ತತೆ ಇಂದ ವೆರಿಕೋಸ್ ವೇನ್ಸ್ ಸಂಭವಿಸುತ್ತದೆ
ಸ್ವಾಭಾವಿಕವಾಗಿ ವೇನ್ಸ್ ಗಳಲ್ಲಿ ಕಡಿಮೆ ಇರುವ ರಕ್ತದೊತ್ತಡ, ರಕ್ತ ಪರಿಚಲನೆಯಲ್ಲಾಗುವ ಏರಿಳಿತ, ಹೆಚ್ಚು ರಕ್ತವನ್ನು ಹಿಡಿದಿಟ್ಟುಕೊಳ್ಳಲು ಹಿಗ್ಗುವ ರಕ್ತನಾಳಗಳು, ಮುಪ್ಪಿನ ಕಾರಣ ವೇನ್ಸ್ ಹಿಗ್ಗುವಿಕೆಯು ಕಡಿಮೆಯಾಗುತ್ತದೆ , ಹಾಗೂ ವೈನ್ಸ್ ವಾಲ್ವ್ ಗಳಿ ಗೆ ಗುರುತ್ವಾಕರ್ಷಣೆಯ ಒತ್ತಡ ನೈಸರ್ಗಿಕ ಕಾರಣಗಳು. ಅನಿಯಮಿತ ತೂಕ ಹೆಚ್ಚಳ, ಅನಿಯಮಿತ ವ್ಯಾಯಾಮ, ಅವೈಜ್ಞಾನಿಕ ಆಹಾರ ಪದ್ಧತಿ, ಮಲ ಬದ್ಧತೆ, ಹೆಚ್ಚು ಸಮಯ ನಿಂತು ಅಥವಾ ಕುಳಿತು ಕೆಲಸ ಮಾಡುವುದು, ಧೂಮಪಾನ ಮತ್ತು ಮದ್ಯಪಾನ ಜೀವನ ಶೈಲಿ ಕಾರಣಗಳು. ಕೆಲವರಿಗೆ, ಕೌಟುಂಬಿಕ ಕಾರಣಕ್ಕೂ ಈ ಸಮಸ್ಯೆ ಎದುರಾಗಬಹುದು. ಹೆಚ್ಚು ಹೊತ್ತು ನಿಂತೇ ಕೆಲಸ ಮಾಡುವ ಶಿಕ್ಷಕರು,ಕಾರ್ಮಿಕರು, ಪೊಲೀಸರು, ಭದ್ರತಾ ಸಿಬ್ಬಂದಿ, ಇತ್ಯಾದಿ ದುಡಿಯುವ ವರ್ಗದ ಜನರಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತದೆ.
ವೆರಿಕೋಸ್ ವೇನ್ಸ್ : ಪ್ರಮುಖ ಲಕ್ಷಣಗಳು
* ಕಾಲುಗಳಲ್ಲಿ ಅಥವಾ ಮೀನಖಂಡ ಗಳಲ್ಲಿ ಸೆಳೆತ
* ಕಾಲುಗಳ ಜೋಮು ಹಿಡಿಯುವಿಕೆ
* ಕಾಲುಗಳು ಅಥವ ಪಾದ ಊದಿ ಕೊಳ್ಳುವುದು
* ಕಾಲಿನ ವೇನ್ಸ್ ಉಬ್ಬಿರಿವುದು, ಕೆಂಪು ನೀಲಿ ಬಣ್ಣ ಅಥವಾ ಸ್ವಲ್ಪ ಹಸಿರು ಬಣ್ಣಕ್ಕೆ ತಿರುಗುವು
* ಕಾಲಿನ ಚರ್ಮ ಕಪ್ಪಾಗುವಿಕೆ ಮತ್ತು ತುರಿಕೆ
* ಕಾಲುಗಳಲ್ಲಿ ಗುಣವಾಗದ ಗಾಯ ಮತ್ತು ನೋವು
ಚಿಕಿತ್ಸೆ : ಈ ಸಮಸ್ಯೆಗೆ ಶಾಶ್ವತ ಸರ್ಜರಿ ರಹಿತ ಚಿಕಿತ್ಸೆಯನ್ನು ಖ್ಯಾತ ಆಯುರ್ವೇದಿಕ್ ತಜ್ಞ ವೈದ್ಯ ಡಾ. ಎಂ ವಿ ಉರಾಳ್ ಅಭಿವೃದ್ಧಿ ಪಡಿಸಿದ್ದಾರೆ. ಡಾ ಉರಾಳ್ ವೆರಿಕೋಸ್ ವೇನ್ಸ್ ಆಯುರ್ವೇದಿಕ್ ಕೇರ್’ 15 ವರ್ಷಗಳ ಸತತ ಪರಿಶ್ರಮದ ಫಲವಾಗಿದೆ. ಯೋಗ, ಪ್ರಾಣಾಯಾಮ ಮತ್ತು ಆಯುರ್ವೇದಗಳ ಸಂಗಮ ಈ ಚಿಕಿತ್ಸೆ. ಈ ವಿಧಾನದ ಸದುಪಯೋಗವನ್ನು ಈಗಾಗಲೇ ದೇಶ -ವಿದೇಶಗಳ ಸಾವಿರಾರು ಜನರು ಪಡೆದು, ನೋವಿನಿಂದ ಶಾಶ್ವತ ಮುಕ್ತಿ ಪಡೆದಿದ್ದಾರೆ.
ಈವರೆಗೆ ಕೇವಲ ರೋಗದ ಲಕ್ಷಣಗಳಿಗೆ ಮಾತ್ರ ಚಿಕಿತ್ಸೆ ದೊರೆಯುತ್ತಿತ್ತು. ಆದರೆ ಈಗ ಈ ರೋಗಕ್ಕೆ ಆಯುರ್ವೇದ ಚಿಕಿತ್ಸೆ ಲಭ್ಯವಿದೆ. ಆಯುರ್ವೇದ ಔಷಧಿ ಜೊತೆಗೆ ಯೋಗಾಸನಗಳಾದ ತಾಡಾಸನ, ಪ್ರಸಾರಿತ ಪಾದೋತ್ತಾನಾಸನ, ತ್ರಿಕೋನಾಸನ, ಸರ್ವಾಂಗಾಸನ, ಪಶ್ಚಿಮೋತ್ತಾಸನ, ಹಲಾಸನ, ಮತ್ಸ್ಯಾಸನ, ಭುಜಂಗಾಸನ, ಶಲಭಾಸನ, ಧನುರಾಸನ ಮತ್ತು ಅನುಲೋಮ ವಿಲೋಮ ಪ್ರಾಣಾಯಾಮ, ಕಪಾಲಭಾತಿಗಳು ಮೀನಖಂಡಗಳ ಮತ್ತು ಉಸಿರಾಟ ಪ್ರಕ್ರಿಯೆಗಳಲ್ಲಿ ಉಂಟಾಗುವ ಅಪರಿಪೂರ್ಣತೆ ಅಥವಾ ಅಶಕ್ತತೆಯನ್ನು ಸರಿಪಡಿಸುವಲ್ಲಿ ಸಹಕಾರಿಯಾಗಿವೆ.
ವೆರಿಕೋಸ್ ವೇನ್ಸ್: ಮುನ್ನೆಚ್ಚರಿಕೆ ಕ್ರಮಗಳು -ಕುಳಿತಾಗ, ಮಲಗಿದಾಗ ಕಾಲನ್ನು ಸ್ವಲ್ಪ ಎತ್ತರದಲ್ಲಿಡುವುದು.
*ದಿನಕೊಮ್ಮ 30 ನಿಮಿಷ ಎಣ್ಣೆ ಹಚ್ಚಿ ಮೇಲ್ಮುಖವಾಗಿ ಮಸಾಜ್ ಮಾಡುವುದು.
* ಕಾಲುಗಳಿಗೆ ನಿಯಮಿತವಾಗಿ ವಿಶ್ರಾಂತಿ ನೀಡುವುದು.
-ವೈಜ್ಞಾನಿಕವಾಗಿ ಕುಳಿತುಕೊಳ್ಳುವುದು, ನಡೆಯುವುದು ಹಾಗೂ ನಿಂತು ಕೊಳ್ಳುವುದು.
* ಪ್ರಯಾಣದ ಸಂದರ್ಭದಲ್ಲಿ ಬಿಗಿಯಾದ ಕಾಲುಚೀಲ ಧರಿಸುವುದು.
* ನಿತ್ಯದ ದಿನಚರಿಯಲ್ಲಿ ವ್ಯಾಯಾಮ ಮತ್ತು ಪ್ರಾಣಾಯಾಮಕ್ಕೆ ಆದ್ಯತೆ
* ದೇಹದ ತೂಕ ಹೆಚ್ಚಾಗದಂತೆ ಮುನ್ನೆಚ್ಚರಿಕೆ
* ಧೂಮಪಾನ, ಮದ್ಯಪಾನಗಳಿಂದ ದೂರ ಇರುವುದು.
* ಶಿಸ್ತಿನ ಜೀವನ ಶೈಲಿ.(DrVasudev Ural,ಡಾ ಎಂ. ವಿ. ಉರಾಳ್, ಶೃಂಗೇರಿ.8105371042 ಗೆ ಕರೆ ಮಾಡಿ.www.uralsayurveda.in)ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ6 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ6 days agoಕವಿತೆ | ದೇವರ ಹೂವು
-
ದಿನದ ಸುದ್ದಿ4 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ4 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

