Connect with us

ದಿನದ ಸುದ್ದಿ

ವೆರಿಕೋಸ್ ವೇನ್ಸ್ ಗೆ ಆಪರೇಷನ್ ರಹಿತ ಆಯುರ್ವೇದ ಚಿಕಿತ್ಸೆ

Published

on

ವೆರಿಕೋಸ್ ವೇನ್ಸ್ ಈಗ ಮನೆ ಮನೆ ಸಮಸ್ಯೆ ಅನ್ನುವಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಆಧುನಿಕ ಜೀವನ ಶೈಲಿ ಸೃಷ್ಟಿಸಿರುವ ಅತಿ ದೊಡ್ಡ ಆರೋಗ್ಯ ಸವಾಲು ಇದಾಗಿದೆ. ಸುದೈವವಶಾತ್, ನಮ್ಮ ಹಿರಿಯರು ನಮಗೆ ಕಾಣಿಕೆಯಾಗಿ ನೀಡಿರುವ ಆಯುರ್ವೇದ ವೈದ್ಯಶಾಸ್ತ್ರ, ಈ ಸಮಸ್ಯೆಗೆ ಶಸ್ತ್ರಚಿಕಿತ್ಸೆ ರಹಿತ, ಶಾಶ್ವತ ಪರಿಹಾರವನ್ನು ಕೊಟ್ಟಿದೆ.

ರಕ್ತನಾಳಗಳ ಉಬ್ಬುವಿಕೆಯ ಸಮಸ್ಯೆ ಸುಮಾರು 30ರಿಂದ 40 ಶೇಕಡಾ ಜನರನ್ನು ಈಗ ಬಾಧಿಸುತ್ತಿದೆ. ಈ ಸಮಸ್ಯೆ ಉಲ್ಬಣಗೊಂಡರೆ, ಶಸ್ತ್ರಚಿಕಿತ್ಸೆ ಮೂಲಕ ಕಾಲು ಅಥವಾ ಬೆರಳನ್ನು ಕತ್ತರಿಸಬೇಕಾದ ಅನಿವಾರ್ಯತೆ ಕೂಡ ಎದುರಾಗಬಹುದು. ಆದರೆ ಈಗ ಈ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಡಾ.ಎಂ ವಿ ಉರಾಳ್ ಅವರು ತಮ್ಮ ಅಪಾರ ಆಯುರ್ವೇದ ಜ್ಞಾನ- ಸಂಶೋಧನೆಗಳಿಂದ ಅಭಿವೃದ್ಧಿಪಡಿಸಿರುವ ಔಷಧ ,ಈ ಸಮಸ್ಯೆಯಿಂದ ಶಾಶ್ವತ ಪರಿಹಾರ ಕೊಡುತ್ತಿದೆ.

ಅವೈಜಾನಿಕ ಜೀವನ ಶೈಲಿಯೇ ಈ ಸಮಸ್ಯೆಯ ಮೂಲ ಕಾರಣ

ಮನೆ ಇರಲಿ, ಕಚೇರಿ ಇರಲಿ, ಇಂದು ನಾವು ಮಾಡುವ ಕೆಲಸಗಳೆಲ್ಲವೂ ಸತತ ನಿಲ್ಲುವಿಕೆಯನ್ನು ಅಪೇಕ್ಷಿಸುತ್ತವೆ. ಪರಿಣಾಮ ನಮ್ಮ ಕಾಲಿನ ರಕ್ತನಾಳಗಳ ಉಬ್ಬುವಿಕೆ ಸಮಸ್ಯೆ ಸಾಮಾನ್ಯ ಎಂಬುವಂತಾಗಿದೆ. ಇದನ್ನು ವೈದ್ಯಕೀಯ ಪರಿಭಾಷೆಯಲ್ಲಿ “ವೆರಿಕೋಸ್ ವೇನ್ಸ್” ಎನ್ನುತ್ತಾರೆ. ಈ ಸಮಸ್ಯೆಗೆ ಆರಂಭದಲ್ಲೇ ಪರಿಹಾರ ಕಂಡುಕೊಳ್ಳದಿದ್ದಲ್ಲಿ, ನೋವು ಕ್ರಮೇಣ ಹೆಚ್ಚಾಗುತ್ತದೆ, ಚರ್ಮ ಕಪ್ಪಾಗುತ್ತದೆ. ತುರಿಕೆ ಗಾಯವಾಗಿ, ಶಸ್ತ್ರಚಿಕಿತ್ಸೆಯ ಮೂಲಕ ಬೆರಳು ಅಥವಾ ಕಾಲು ಕತ್ತರಿಸುವ ಹಂತಕ್ಕೂ ಇದು ಮುಟ್ಟಬಹುದು. ನಮ್ಮ ದೈಹಿಕ ಚಟುವಟಿಕೆಗಳಲ್ಲಿನ ಅಸ್ಥಿರತೆ, ಅವೈಜ್ಞಾನಿಕತೆ, ಆಹಾರ ವ್ಯತ್ಯಾಸಗಳು, ಹೀಗೆ ನಮ್ಮ ಅವೈಜಾನಿಕ ಜೀವನ ಶೈಲಿಯೇ ಈ ಸಮಸ್ಯೆಯ ಮೂಲ ಕಾರಣ.

ಈ ಸಮಸ್ಯೆಗೆ ಕಾರಣವಾಗುವ ಅಂಶಗಳನ್ನು ಮೂರೂ ವಿಧವಾಗಿ ವಿಂಗಡಿಸಬಹುದು. ನೈಸರ್ಗಿಕ ಕಾರಣಗಳು, ಜೀವನ ಶೈಲಿ ಕಾರಣಗಳು, ಹಾಗು ಅನುವಂಶಿಕ ಕಾರಣಗಳು. ಹೃದಯವು ರಕ್ತವನ್ನು ದೇಹದೆಲ್ಲೆಡೆ ಪ್ರಸರರಿಸುವ ಕಾರ್ಯಮಾಡುತ್ತದೆ, ರಕ್ತವನ್ನು ಮತ್ತೆ ಹೃದಯಕ್ಕೆ ಸೇರುವ ಕಾರ್ಯ ಮಾಡಲು ಕಾಲಿನ ಮೀನಖಂಡಗಳು, ನಮ್ಮ ಉಸಿರಾಟ ಪ್ರಕ್ರಿಯೆ ಮತ್ತು ವೈನ್ಸ್ ಗಳಲ್ಲಿ ಮೇಲ್ಮುಖವಾಗಿ, ಏಕಮುಖ ರಕ್ತ ಸಂಚಾರಕ್ಕೆ ಸಹಕಾರಿಯಾಗುವ ವಾಲ್ವ್ ಗಳು ಪ್ರಮುಖ ಕಾರ್ಯವಹಿಸುತ್ತವೆ. ಮೀನಖಂಡಗಳು ಮತ್ತು ಉಸಿರಾಟ ಪ್ರಕ್ರಿಯೆಗಳು ನಮ್ಮ ಎರಡನೇ ಹೃದಯ ದಂತೆ ಕಾರ್ಯ ನಿರ್ವಹಿಸುತ್ತವೆ. ಇವುಗಳ ಕಾರ್ಯದಲ್ಲಿ ಉಂಟಾಗುವ ಪೂರ್ಣತೆ ಅಥವಾ ಅಶಕ್ತತೆ ಇಂದ ವೆರಿಕೋಸ್ ವೇನ್ಸ್ ಸಂಭವಿಸುತ್ತದೆ

ಸ್ವಾಭಾವಿಕವಾಗಿ ವೇನ್ಸ್ ಗಳಲ್ಲಿ ಕಡಿಮೆ ಇರುವ ರಕ್ತದೊತ್ತಡ, ರಕ್ತ ಪರಿಚಲನೆಯಲ್ಲಾಗುವ ಏರಿಳಿತ, ಹೆಚ್ಚು ರಕ್ತವನ್ನು ಹಿಡಿದಿಟ್ಟುಕೊಳ್ಳಲು ಹಿಗ್ಗುವ ರಕ್ತನಾಳಗಳು, ಮುಪ್ಪಿನ ಕಾರಣ ವೇನ್ಸ್ ಹಿಗ್ಗುವಿಕೆಯು ಕಡಿಮೆಯಾಗುತ್ತದೆ , ಹಾಗೂ ವೈನ್ಸ್ ವಾಲ್ವ್ ಗಳಿ ಗೆ ಗುರುತ್ವಾಕರ್ಷಣೆಯ ಒತ್ತಡ ನೈಸರ್ಗಿಕ ಕಾರಣಗಳು. ಅನಿಯಮಿತ ತೂಕ ಹೆಚ್ಚಳ, ಅನಿಯಮಿತ ವ್ಯಾಯಾಮ, ಅವೈಜ್ಞಾನಿಕ ಆಹಾರ ಪದ್ಧತಿ, ಮಲ ಬದ್ಧತೆ, ಹೆಚ್ಚು ಸಮಯ ನಿಂತು ಅಥವಾ ಕುಳಿತು ಕೆಲಸ ಮಾಡುವುದು, ಧೂಮಪಾನ ಮತ್ತು ಮದ್ಯಪಾನ ಜೀವನ ಶೈಲಿ ಕಾರಣಗಳು. ಕೆಲವರಿಗೆ, ಕೌಟುಂಬಿಕ ಕಾರಣಕ್ಕೂ ಈ ಸಮಸ್ಯೆ ಎದುರಾಗಬಹುದು. ಹೆಚ್ಚು ಹೊತ್ತು ನಿಂತೇ ಕೆಲಸ ಮಾಡುವ ಶಿಕ್ಷಕರು,ಕಾರ್ಮಿಕರು, ಪೊಲೀಸರು, ಭದ್ರತಾ ಸಿಬ್ಬಂದಿ, ಇತ್ಯಾದಿ ದುಡಿಯುವ ವರ್ಗದ ಜನರಲ್ಲಿ ಈ ಸಮಸ್ಯೆ ಹೆಚ್ಚು ಕಂಡು ಬರುತ್ತದೆ.

ವೆರಿಕೋಸ್ ವೇನ್ಸ್ : ಪ್ರಮುಖ ಲಕ್ಷಣಗಳು

* ಕಾಲುಗಳಲ್ಲಿ ಅಥವಾ ಮೀನಖಂಡ ಗಳಲ್ಲಿ ಸೆಳೆತ
* ಕಾಲುಗಳ ಜೋಮು ಹಿಡಿಯುವಿಕೆ
* ಕಾಲುಗಳು ಅಥವ ಪಾದ ಊದಿ ಕೊಳ್ಳುವುದು
* ಕಾಲಿನ ವೇನ್ಸ್ ಉಬ್ಬಿರಿವುದು, ಕೆಂಪು ನೀಲಿ ಬಣ್ಣ ಅಥವಾ ಸ್ವಲ್ಪ ಹಸಿರು ಬಣ್ಣಕ್ಕೆ ತಿರುಗುವು
* ಕಾಲಿನ ಚರ್ಮ ಕಪ್ಪಾಗುವಿಕೆ ಮತ್ತು ತುರಿಕೆ
* ಕಾಲುಗಳಲ್ಲಿ ಗುಣವಾಗದ ಗಾಯ ಮತ್ತು ನೋವು

ಚಿಕಿತ್ಸೆ : ಈ ಸಮಸ್ಯೆಗೆ ಶಾಶ್ವತ ಸರ್ಜರಿ ರಹಿತ ಚಿಕಿತ್ಸೆಯನ್ನು ಖ್ಯಾತ ಆಯುರ್ವೇದಿಕ್ ತಜ್ಞ ವೈದ್ಯ ಡಾ. ಎಂ ವಿ ಉರಾಳ್ ಅಭಿವೃದ್ಧಿ ಪಡಿಸಿದ್ದಾರೆ. ಡಾ ಉರಾಳ್ ವೆರಿಕೋಸ್ ವೇನ್ಸ್ ಆಯುರ್ವೇದಿಕ್ ಕೇರ್’ 15 ವರ್ಷಗಳ ಸತತ ಪರಿಶ್ರಮದ ಫಲವಾಗಿದೆ. ಯೋಗ, ಪ್ರಾಣಾಯಾಮ ಮತ್ತು ಆಯುರ್ವೇದಗಳ ಸಂಗಮ ಈ ಚಿಕಿತ್ಸೆ. ಈ ವಿಧಾನದ ಸದುಪಯೋಗವನ್ನು ಈಗಾಗಲೇ ದೇಶ -ವಿದೇಶಗಳ ಸಾವಿರಾರು ಜನರು ಪಡೆದು, ನೋವಿನಿಂದ ಶಾಶ್ವತ ಮುಕ್ತಿ ಪಡೆದಿದ್ದಾರೆ.

ಈವರೆಗೆ ಕೇವಲ ರೋಗದ ಲಕ್ಷಣಗಳಿಗೆ ಮಾತ್ರ ಚಿಕಿತ್ಸೆ ದೊರೆಯುತ್ತಿತ್ತು. ಆದರೆ ಈಗ ಈ ರೋಗಕ್ಕೆ ಆಯುರ್ವೇದ ಚಿಕಿತ್ಸೆ ಲಭ್ಯವಿದೆ. ಆಯುರ್ವೇದ ಔಷಧಿ ಜೊತೆಗೆ ಯೋಗಾಸನಗಳಾದ ತಾಡಾಸನ, ಪ್ರಸಾರಿತ ಪಾದೋತ್ತಾನಾಸನ, ತ್ರಿಕೋನಾಸನ, ಸರ್ವಾಂಗಾಸನ, ಪಶ್ಚಿಮೋತ್ತಾಸನ, ಹಲಾಸನ, ಮತ್ಸ್ಯಾಸನ, ಭುಜಂಗಾಸನ, ಶಲಭಾಸನ, ಧನುರಾಸನ ಮತ್ತು ಅನುಲೋಮ ವಿಲೋಮ ಪ್ರಾಣಾಯಾಮ, ಕಪಾಲಭಾತಿಗಳು ಮೀನಖಂಡಗಳ ಮತ್ತು ಉಸಿರಾಟ ಪ್ರಕ್ರಿಯೆಗಳಲ್ಲಿ ಉಂಟಾಗುವ ಅಪರಿಪೂರ್ಣತೆ ಅಥವಾ ಅಶಕ್ತತೆಯನ್ನು ಸರಿಪಡಿಸುವಲ್ಲಿ ಸಹಕಾರಿಯಾಗಿವೆ.
ವೆರಿಕೋಸ್ ವೇನ್ಸ್: ಮುನ್ನೆಚ್ಚರಿಕೆ ಕ್ರಮಗಳು -ಕುಳಿತಾಗ, ಮಲಗಿದಾಗ ಕಾಲನ್ನು ಸ್ವಲ್ಪ ಎತ್ತರದಲ್ಲಿಡುವುದು.

*ದಿನಕೊಮ್ಮ 30 ನಿಮಿಷ ಎಣ್ಣೆ ಹಚ್ಚಿ ಮೇಲ್ಮುಖವಾಗಿ ಮಸಾಜ್ ಮಾಡುವುದು.
* ಕಾಲುಗಳಿಗೆ ನಿಯಮಿತವಾಗಿ ವಿಶ್ರಾಂತಿ ನೀಡುವುದು.
-ವೈಜ್ಞಾನಿಕವಾಗಿ ಕುಳಿತುಕೊಳ್ಳುವುದು, ನಡೆಯುವುದು ಹಾಗೂ ನಿಂತು ಕೊಳ್ಳುವುದು.
* ಪ್ರಯಾಣದ ಸಂದರ್ಭದಲ್ಲಿ ಬಿಗಿಯಾದ ಕಾಲುಚೀಲ ಧರಿಸುವುದು.
* ನಿತ್ಯದ ದಿನಚರಿಯಲ್ಲಿ ವ್ಯಾಯಾಮ ಮತ್ತು ಪ್ರಾಣಾಯಾಮಕ್ಕೆ ಆದ್ಯತೆ
* ದೇಹದ ತೂಕ ಹೆಚ್ಚಾಗದಂತೆ ಮುನ್ನೆಚ್ಚರಿಕೆ
* ಧೂಮಪಾನ, ಮದ್ಯಪಾನಗಳಿಂದ ದೂರ ಇರುವುದು.
* ಶಿಸ್ತಿನ ಜೀವನ ಶೈಲಿ.(DrVasudev Ural,ಡಾ ಎಂ. ವಿ. ಉರಾಳ್, ಶೃಂಗೇರಿ.8105371042 ಗೆ ಕರೆ ಮಾಡಿ.www.uralsayurveda.in)ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending