Connect with us

ದಿನದ ಸುದ್ದಿ

ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್ ಸ್ಥಿತಿ-ಗತಿಗಳ ವಿವರವುಳ್ಳ ಬುಲೆಟಿನ್ ಬಿಡುಗಡೆಗೆ ಸೂಚನೆ : ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗಾಗಿ ಹೆಲ್ಪ್‍ಡೆಸ್ಕ್ ಪ್ರಾರಂಭಿಸಿ : ಸಚಿವ ಭೈರತಿ ಬಸವರಾಜ್

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿರುವ ಬೆಡ್‍ಗಳು, ವೆಂಟಿಲೇಟರ್, ಐಸಿಯು ಹಾಗೂ ಖಾಲಿ ಇರುವ ಬೆಡ್‍ಗಳ ಸಂಖ್ಯೆ ಸೇರಿದಂತೆ ಎಲ್ಲ ವಿವರಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಲು ಎಲ್ಲ ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗಾಗಿ ಹೆಲ್ಪ್‍ಡೆಸ್ಕ್ ಪ್ರಾರಂಭಿಸುವಂತೆ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣ ಕುರಿತು ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್ ಸೋಂಕಿತರು ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಎಡತಾಕುತ್ತಿದ್ದು, ಅಲ್ಲಿ ಲಭ್ಯವಿರುವ ಬೆಡ್‍ಗಳ ವಿವರದ ಮಾಹಿತಿ ಸಮರ್ಪಕವಾಗಿ ದೊರೆಯದೆ, ಅಥವಾ ಜವಾಬ್ದಾರಿಯುತ ಅಧಿಕಾರಿಗಳಿಂದ ಮಾಹಿತಿ ಪಡೆಯದೆ ಆಸ್ಪತ್ರೆಯಿಂದ ಆಸ್ಪತ್ರೆಗಳಿಗೆ ರೋಗಿಗಳು ಅಲೆದಾಡುತ್ತಿದ್ದಾರೆ, ಆಸ್ಪತ್ರೆಗಳ ಪರಿಚಾರಕರು, ಗ್ರೂಪ್-ಡಿ ಸಿಬ್ಬಂದಿಗಳು, ಕಾವಲುಗಾರರೇ ಸಾರ್ವಜನಿಕರಿಗೆ ಇಲ್ಲಿ ಬೆಡ್ ಖಾಲಿ ಇಲ್ಲ ಎಂದು ರೋಗಿಗಳನ್ನು ಸಾಗಹಾಕುತ್ತಿದ್ದಾರೆ, ಆಂಬುಲೆನ್ಸ್ ವ್ಯವಸ್ಥೆ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂಬ ದೂರು, ಆರೋಪಗಳು ವ್ಯಾಪಕವಾಗಿ ಕೇಳಿಬರುತ್ತಿವೆ.

ಹೀಗಾಗಿ ಆಸ್ಪತ್ರೆಗಳಲ್ಲಿ ಭರ್ತಿಯಾಗಿರುವ ಹಾಗೂ ಖಾಲಿ ಇರುವ ಬೆಡ್‍ಗಳ ವಿವರ ನಿಖರವಾಗಿ ಸಮಪರ್ಕವಾಗಿ ಸಾರ್ವಜನಿಕರಿಗೆ ದೊರೆಯುವಂತಾಗಲು, ಸರ್ಕಾರಿ ಹಾಗೂ ಎಲ್ಲ ಖಾಸಗಿ ಆಸ್ಪತ್ರೆಗಳ ಪ್ರವೇಶ ದ್ವಾರದಲ್ಲಿ ಸಾರ್ವಜನಿಕರಿಗಾಗಿ ಹೆಲ್ಪ್ ಡೆಸ್ಕ್ ಪ್ರಾರಂಭಿಸಬೇಕು. ಆಸ್ಪತ್ರೆವಾರು ಬೆಡ್‍ಗಳ ಭರ್ತಿ ಹಾಗೂ ಲಭ್ಯತೆ ಕುರಿತ ವಿವರವುಳ್ಳ ಬುಲೆಟಿನ್ ಅನ್ನು ನಿತ್ಯ ಜಿಲ್ಲಾಧಿಕಾರಿಗಳು ಪ್ರಕಟಿಸಬೇಕು.

ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಆಮ್ಲಜನಕ ಹಾಗೂ ರೆಮ್‍ಡೆಸಿವರ್ ಔಷಧ ಸಮರ್ಪಕ ಪೂರೈಕೆ ಹಾಗೂ ಲಭ್ಯವಾಗುವಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜವಾಬ್ದಾರಿಯಾಗಿರುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.

ಇದನ್ನೂ ಓದಿ | ದಾವಣಗೆರೆ |ಆಮ್ಲಜನಕ ಪೂರೈಕೆ ಕಾರ್ಖಾನೆಗೆ ಉಸ್ತುವಾರಿ ಸಚಿವರ ಭೇಟಿ 

13 ಕೆ.ಎಲ್. ಸಾಮಥ್ರ್ಯದ ಆಮ್ಲಜನಕ ಘಟಕ : ಸದ್ಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 06 ಕೆ.ಎಲ್. ಸಾಮಥ್ರ್ಯದ ಆಕ್ಸಿಜನ್ ಘಟಕ ಸ್ಥಾಪಿಸಲಾಗಿದ್ದು, ಇದರಿಂದ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ. 13 ಕೆ.ಎಲ್. ಸಾಮಥ್ರ್ಯದ ಇನ್ನೊಂದು ಆಮ್ಲಜನಕ ಘಟಕ ಸ್ಥಾಪನೆಗೆ ಮಂಜೂರಾತಿ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಮಂಜೂರಾತಿ ಪತ್ರಕ್ಕಾಗಿ ಕಾಯದೆ, 13 ಕೆ.ಎಲ್ ಸಾಮಥ್ರ್ಯದ ಆಮ್ಲಜನಕ ಘಟಕ ಸ್ಥಾಪನೆಗೆ ಬೇಕಾದ ಎಲ್ಲ ಪ್ರಕ್ರಿಯೆಗಳನ್ನು ನೀವು ಪ್ರಾರಂಭಿಸಿ. ಇದಕ್ಕೆ ಸಂಪೂರ್ಣ ಅಧಿಕಾರವನ್ನು ನಿಮಗೇ ಕೊಡುತ್ತಿದ್ದೇನೆ ಎಂದರು. ಜಿಲ್ಲಾಧಿಕಾರಿಗಳು ಉತ್ತರಿಸಿ, 13 ಕೆ.ಎಲ್. ಸಾಮಥ್ರ್ಯದ ಘಟಕ ತಕ್ಷಣದಲ್ಲಿ ದೊರೆಯುವುದು ಕಷ್ಟ.

ಇವು ಗುಜರಾತ್‍ನಲ್ಲಿ ಮಾತ್ರ ಉತ್ಪಾದನೆಯಾಗುತ್ತವೆ, ಆದರೂ ಸಂಬಂಧಪಟ್ಟವರಿಂದ ಮಾಹಿತಿ ಪಡೆದು, ಆದಷ್ಟು ಶೀಘ್ರ ಘಟಕ ಸ್ಥಾಪನೆಗೆ ಪ್ರಾಮಾಣಿಕ ಯತ್ನ ಮಾಡಲಾಗುವುದು ಎಂದರು. ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ಪ್ರತಿಕ್ರಿಯಿಸಿ, 13 ಕೆ.ಎಲ್. ಸಾಮಥ್ರ್ಯದ ಘಟಕ ದೊರೆಯುವುದು ಕಷ್ಟವಿದ್ದಲ್ಲಿ, 06 ಕೆ.ಎಲ್. ಸಾಮಥ್ರ್ಯದ ಎರಡು ಘಟಕ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಿದರು.

ಲಾಕ್‍ಡೌನ್ ಜಾರಿಗೆ ಒಕ್ಕೊರಲ ಮನವಿ : ಜಿಲ್ಲೆಯಲ್ಲಿ ಈವರೆಗೆ ಒಟ್ಟು 27222 ಕೋವಿಡ್ ಸೋಂಕು ಪತ್ತೆಯಾಗಿದ್ದು, ಈವರೆಗೆ ಒಟ್ಟಾರೆ 290 ಜನ ಮೃತಪಟ್ಟಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2534 ಸಕ್ರಿಯ ಪ್ರಕರಣಗಳಿವೆ. ಈ ವರ್ಷ ಏಪ್ರಿಲ್‍ನಿಂದ ಈವರೆಗೆ ಕೋವಿಡ್‍ನ 3485 ಪ್ರಕರಣ ಪತ್ತೆಯಾಗಿದ್ದು, 26 ಮರಣ ದಾಖಲಾಗಿದೆ.

ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿವೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿದ್ದ ಜನತಾ ಕಫ್ರ್ಯೂ ಪರಿಣಾಮಕಾರಿಯಾಗಿಲ್ಲ. ಅಧಿಕಾರಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉತ್ತಮವಾಗಿ ಕೆಲಸ ಮಾಡುತ್ತಿದ್ದರೂ, ಜನತಾ ಕಫ್ರ್ಯೂಗೆ ಸಾರ್ವಜನಿಕರ ಸಹಕಾರ ದೊರೆಯುತ್ತಿಲ್ಲ. ಹಳ್ಳಿಗಳಲ್ಲಿ ಇಸ್ಪೀಟ್ ಆಡಲು ಜೂಜು ಅಡ್ಡೆಗಳು ಪ್ರಾರಂಭವಾಗಿವೆ.

ಜನರು ತಮ್ಮ ಸ್ವಭಾವ ಬದಲಿಸಿಕೊಳ್ಳದಿದ್ದರೆ ಸರ್ಕಾರ ಮತ್ತು ಅಧಿಕಾರಿಗಳು ಏನೂ ಮಾಡಲು ಆಗಲ್ಲ. ಜನರ ಪ್ರಾಣದ ಹಿತದೃಷ್ಟಿಯಿಂದ ಕೋವಿಡ್ ಸರಪಳಿಯನ್ನು ತುಂಡರಿಸುವುದು ತೀವ್ರ ಅಗತ್ಯವಾಗಿದ್ದು, ಲಾಕ್‍ಡೌನ್ ಜಾರಿಗೊಳಿಸುವುದು ಅನಿವಾರ್ಯವಾಗಿದೆ.

ಹೀಗಾಗಿ ಮೇ. 31 ರವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಜಾರಿಗೊಳಿಸುವಂತೆ ಸಂಸದ ಜಿ.ಎಂ. ಸಿದ್ದೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ರೇಣುಕಾಚಾರ್ಯ, ಶಾಸಕರುಗಳಾದ ಮಾಡಾಳ್ ವಿರೂಪಾಕ್ಷಪ್ಪ, ಎಸ್.ಎ. ರವೀಂದ್ರ, ಪ್ರೊ. ಲಿಂಗಣ್ಣ ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಒಕ್ಕೊರಲ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ತಮ್ಮ ಮನವಿಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸೋಂಕು ಮುಚ್ಚಿಡಬೇಡಿ

ಜನರು ತಮ್ಮಲ್ಲಿ ಜ್ವರ, ಕೆಮ್ಮು, ನೆಗಡಿ ಸೇರಿದಂತೆ ಕೋವಿಡ್‍ನ ಯಾವುದೇ ರೋಗಲಕ್ಷಣಗಳು ಇದ್ದರೂ, ಪರೀಕ್ಷೆಗೆ ಒಳಗಾಗಲು ಮುಂದಾಗುತ್ತಿಲ್ಲ. ಜ್ವರ, ಕೆಮ್ಮಿಗೆ ಗುಳಿಗೆಗಳನ್ನು ನುಂಗಿ ಸುಮ್ಮನಾಗುವ ಪ್ರವೃತ್ತಿ ತೋರಿಸುತ್ತಿದ್ದಾರೆ. ಗ್ರಾಮಗಳಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಉತ್ತಮ ಸೇವೆ ಸಲ್ಲಿಸುತ್ತಿದ್ದು, ಇವರಿಗೂ ಸಹಕಾರ ನೀಡುತ್ತಿಲ್ಲ. ತೀವ್ರ ಉಸಿರಾಟ ತೊಂದರೆ ಪ್ರಾರಂಭವಾದಾಗ ಆಸ್ಪತ್ರೆಗೆ ಬರುತ್ತಾರೆ.

ರೋಗ ತೀವ್ರ ಉಲ್ಬಣವಾದಾಗ ಆಸ್ಪತ್ರೆಗೆ ಬಂದರೆ ಅವರಿಗೆ ಚಿಕಿತ್ಸೆ ದೊರಕುವುದು ಕಷ್ಟಸಾಧ್ಯ. ಹೀಗಾಗಿ ಸಾರ್ವಜನಿಕರು ರೋಗ ಮುಚ್ಚಿಡುವುದರಿಂದ ಆ ರೋಗಿಗೆ ಮಾತ್ರವಲ್ಲ ತಮ್ಮ ಕುಟುಂಬ, ಅಕ್ಕಪಕ್ಕದವರು, ಇಡೀ ಗ್ರಾಮವೇ ತೊಂದರೆಗೆ ಸಿಲುಕುತ್ತದೆ ಎಂಬ ಅಂಶವನ್ನು ಅರಿತು ಜವಾಬ್ದಾರಿಯಿಂದ ವರ್ತಿಸಬೇಕು. ಕಡ್ಡಾಯವಾಗಿ ಮಾಸ್ಕ್ ಅನ್ನು ಧರಿಸಬೇಕು.

ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಅನಗತ್ಯವಾಗಿ ಮನೆಯಿಂದ ಹೊರಗೆ ಅಡ್ಡಾಡುವುದನ್ನು ಬಿಡಬೇಕು ಎಂದು ಸಚಿವರು, ಸಂಸದರು ಒಳಗೊಂಡಂತೆ ಎಲ್ಲ ಶಾಸಕರುಗಳು, ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಂಡರು.

ವಾರದೊಳಗೆ ಕೋವಿಡ್ ಇಳಿಮುಖವಾಗಬೇಕು

ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿದ್ದ ಜನತಾ ಕಫ್ರ್ಯೂ ಪರಿಣಾಮಕಾರಿಯಾಗಿ ಜಾರಿಗೊಂಡಿಲ್ಲ. ಜನರು ಹಾಗೂ ವಾಹನಗಳು ನಿಗದಿತ ಅವಧಿಯ ಬಳಿಕವೂ ಅನಗತ್ಯವಾಗಿ ರಸ್ತೆಯಲ್ಲಿ ಸಂಚರಿಸುತ್ತಿರುವುದು ಕಂಡುಬರುತ್ತಿದೆ. ತರಕಾರಿ ಮತ್ತಿತರ ಸಾಮಗ್ರಿ ಖರೀದಿ ಸ್ಥಳದಲ್ಲಿ ಈಗಲೂ ಜನಸಂದಣಿ ಕಂಡುಬರುತ್ತಿದೆ.

ಹೀಗಾದಲ್ಲಿ ಕೋವಿಡ್ ಇನ್ನಷ್ಟು ವ್ಯಾಪಕವಾಗಿ ಹರಡಲು ಕಾರಣವಾಗುತ್ತದೆ. ಸದ್ಯ ಜಿಲ್ಲೆಯಲ್ಲಿ 2534 ಸಕ್ರಿಯ ಪ್ರಕರಣಗಳಿವೆ. ಬರುವ ಒಂದು ವಾರದ ಒಳಗಾಗಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖಗೊಳಿಸಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇನ್ನಷ್ಟು ನಿರ್ದಾಕ್ಷಿಣ್ಯ ಹಾಗೂ ಕಠಿಣ ಕ್ರಮ ಜರುಗಿಸಲು ಮುಂದಾಗಬೇಕು. ತಹಸಿಲ್ದಾರರು, ಪೊಲೀಸ್ ಅಧಿಕಾರಿಗಳು ತಾಲ್ಲೂಕು ಮಟ್ಟದಲ್ಲಿ ಕಠಿಣಾತಿ ಕಠಿಣ ಕ್ರಮಗಳನ್ನು ಕೈಗೊಳ್ಳಲಿ.

ಯಾವುದೇ ಕಠಿಣ ಕ್ರಮಗಳಿಗೆ ನಾವು ಬೆಂಬಲ ನೀಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕೆ ಸಂಸದರು, ಶಾಸಕರುಗಳೂ ಕೂಡ ಬೆಂಬಲಿಸುವುದಾಗಿ ಭರವಸೆ ನೀಡಿದರು.

ಸಮರ್ಪಕ ಲಸಿಕೆ ದೊರಕಿಸಲು ಕ್ರಮ

ಜಿಲ್ಲೆಯಲ್ಲಿ ಈವರೆಗೆ 14697 ಆರೋಗ್ಯ ಕಾರ್ಯಕರ್ತರು, 5916 ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ. 45 ವರ್ಷ ಮೇಲ್ಪಟ್ಟ 153130 ಜನರಿಗೆ ಮೊದಲ ಡೋಸ್, 25571 ಜನರಿಗೆ ಎರಡನೆ ಡೋಸ್ ಕೋವಿಡ್ ನಿರೋಧಕ ಲಸಿಕೆ ನೀಡಲಾಗಿದೆ.

ಈವರೆಗೆ ಚನ್ನಗಿರಿ ತಾಲ್ಲೂಕಿಗೆ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಸೇರಿದಂತೆ ಒಟ್ಟು 39700 ಡೋಸ್, ಹೊನ್ನಾಳಿ-32610, ಹರಿಹರ-29250, ಜಗಳೂರು-16270, ಹಾಗೂ ದಾವಣಗೆರೆ ತಾಲ್ಲೂಕಿಗೆ 67520 ಡೋಸ್ ಲಸಿಕೆ ಪೂರೈಸಲಾಗಿದೆ. ಈವರೆಗೆ ಒಟ್ಟು 1.84 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ 22620 ಡೋಸ್ ಕೋವ್ಯಾಕ್ಸಿನ್ ಲಸಿಕೆ ಪೂರೈಕೆ ಮಾಡಲಾಗಿದೆ.

ಕೋವಿಶೀಲ್ಡ್ ಲಸಿಕೆ ಪೂರೈಕೆಯಾಗುತ್ತಿದ್ದು, ಕೋವ್ಯಾಕ್ಸಿನ್ ಲಸಿಕೆ ಪೂರೈಕೆಯಾಗುತ್ತಿಲ್ಲ. ಕೋವ್ಯಾಕ್ಸಿನ್‍ನ 850 ಜನ ಎರಡನೆ ಡೋಸ್ ಪಡೆಯುವುದು ಬಾಕಿ ಉಳಿದಿದ್ದು, ಕೋವ್ಯಾಕ್ಸಿನ್ ಲಸಿಕೆ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಸದ್ಯ ಜಿಲ್ಲೆಯಲ್ಲಿ ಕೋವಿಶೀಲ್ಡ್‍ನ 2ನೇ ಡೋಸ್ ಬಾಕಿ ಇರುವವರಿಗೆ ಮಾತ್ರ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರ್.ಸಿಹೆಚ್ ಅಧಿಕಾರಿ ಡಾ. ಮೀನಾಕ್ಷಿ ತಿಳಿಸಿದರು.

ಸಂಸದರು ಪ್ರತಿಕ್ರಿಯಿಸಿ ಜಿಲ್ಲೆಗೆ ನಿತ್ಯ 40 ರಿಂದ 50 ಸಾವಿರ ಡೋಸ್ ಲಸಿಕೆ ಪೂರೈಕೆಯಾಗಬೇಕು. ಅಂದಾಗ ಮಾತ್ರ ಲಸಿಕಾಕರಣ ಪರಿಣಾಮಕಾರಿಯಾಗಿಸಲು ಸಾದ್ಯ. ಈ ನಿಟ್ಟಿನಲ್ಲಿ ಸಚಿವರು ಸರ್ಕಾರದ ಮಟ್ಟದಲ್ಲಿ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿದರು. ಉತ್ತರಿಸಿದ ಸಚಿವರು ಸರ್ಕಾರ 3 ಕೋಟಿ ಲಸಿಕೆ ಖರೀದಿಗೆ ಕ್ರಮ ಕೈಗೊಂಡಿದೆ ಅಲ್ಲದೆ, 1.20 ಕೋಟಿ ರೆಮ್‍ಡೆಸಿವರ್ ಔಷಧಿ ಖರೀದಿಗೂ ಮುಂದಾಗಿದೆ. ಬರುವ ಒಂದು ವಾರದೊಳಗೆ ಲಸಿಕೆ ಪೂರೈಕೆ ಸಮರ್ಪಕವಾಗಲಿದೆ ಎಂದು ಭರವಸೆ ನೀಡಿದರು.

ಕೋವಿಡ್ ಕೇರ್ ಸೆಂಟರ್‍ಗೆ ಕರೆತನ್ನಿ

ಜಿಲ್ಲಾ ಕೇಂದ್ರ ಹಾಗೂ ಎಲ್ಲ ತಾಲ್ಲೂಕುಗಳಲ್ಲಿಯೂ ಹಾಸ್ಟೆಲ್ ಮುಂತಾದೆಡೆ ಕೋವಿಡ್ ಕೇರ್ ಸೆಂಟರ್‍ಗಳನ್ನು ಪ್ರಾರಂಭಿಸಿ ಉತ್ತಮ ಊಟೋಪಹಾರ, ವೈದ್ಯಕೀಯ ನೆರವು ಕಲ್ಪಿಸಲಾಗುತ್ತಿದೆ. ರೋಗಲಕ್ಷಣ ರಹಿತ ಹಾಗೂ ಕಡಿಮೆ ತೀವ್ರತೆಯ ಕೋವಿಡ್ ಸೋಂಕಿತರಿಗೆ ಮನೆಗಳಲ್ಲಿ ಪ್ರತ್ಯೇಕವಾದ ಮೂಲಭೂತ ಸೌಕರ್ಯ ಇಲ್ಲದಿದ್ದಲ್ಲಿ, ಹೋಂ ಐಸೋಲೇಷನ್‍ಗೆ ಯಾವುದೇ ಕಾರಣಕ್ಕೂ ಅವಕಾಶ ನೀಡದೆ ಅವರನ್ನು ಆದಷ್ಟು ಕೋವಿಡ್ ಕೇರ್ ಸೆಂಟರ್‍ಗೆ ಕರೆತರುವ ಪ್ರಯತ್ನವನ್ನು ಅಧಿಕಾರಿಗಳು ಮಾಡಬೇಕು.

ಸದ್ಯ ಜಿಲ್ಲೆಯಲ್ಲಿ 1095 ಜನ ಹೋಂ ಐಸೋಲೇಷನ್‍ನಲ್ಲಿದ್ದಾರೆ. ಕೋವಿಡ್ ಕೇರ್ ಸೆಂಟರ್‍ನಲ್ಲಿ ಉತ್ತಮ ಊಟೋಪಹಾರ, ವೈದ್ಯಕೀಯ ನೆರವು ಸೇರಿದಂತೆ ಸಮರ್ಪಕ ವ್ಯವಸ್ಥೆ ದೊರಕಿಸುವ ವಿಶ್ವಾಸವನ್ನು ಅಧಿಕಾರಿಗಳು ರೋಗಿಗಳಿಗೆ ನೀಡಬೇಕು. ಸಮರ್ಪಕ ವ್ಯವಸ್ಥೆ ಇಲ್ಲದೆ ಹೋಂ ಐಸೋಲೇಷನ್‍ಗೆ ಒಳಗಾಗುವವರು, ಸೋಂಕನ್ನು ವ್ಯಾಪಕವಾಗಿ ಹರಡಲು ಕಾರಣಕರ್ತರಾಗುತ್ತಾರೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಹೇಳಿದರು.

ಸಭೆಯಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕರುಗಳಾದ ಮಾಡಾಳ್ ವಿರೂಪಾಕ್ಷಪ್ಪ, ಎಸ್.ಎ. ರವೀಂದ್ರನಾಥ್, ಪ್ರೊ. ಲಿಂಗಣ್ಣ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಜಯಮಹಾಂತೇಶ್ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಮಹಾನಗರಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್, ಆಯುಕ್ತ ವಿಶ್ವನಾಥ ಮುದಜ್ಜಿ, ಡಿಹೆಚ್‍ಒ ಡಾ. ನಾಗರಾಜ್, ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕುಗಳ ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

Published

on

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಣಮಿಸಿದೆ. ಹಲವು ವರ್ಷಗಳಿಂದ ಪಕ್ಷದ ಸಂಘಟನೆಗೆ ಸಲ್ಲಿಸಿರುವ ಸೇವೆ, ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಆದ್ಯತೆ ಹಾಗೂ ಜನಸಾಮಾನ್ಯರೊಂದಿಗೆ ಹೊಂದಿರುವ ನಿಕಟ ಸಂಪರ್ಕವನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಚಿವರಾಗಿ ಆಯ್ಕೆಯಾದ ಸುದ್ದಿ ಪ್ರಕಟವಾಗುತ್ತಿದ್ದಂತೆಯೇ ಮಾಯಕೊಂಡ ಕ್ಷೇತ್ರ ಸೇರಿದಂತೆ ದಾವಣಗೆರೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಭ್ರಮ ಮನೆಮಾಡಿತು. ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತಸ ವ್ಯಕ್ತಪಡಿಸಿದರು. ಬಸವಂತಪ್ಪ ಅವರ ನಿವಾಸದ ಎದುರು ಬೆಳಗ್ಗಿನಿಂದಲೇ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಜಮಾಯಿಸಿ ಅಭಿನಂದನೆ ಸಲ್ಲಿಸಿದರು. ಮಹಿಳೆಯರು ಆರತಿ ಬೆಳಗಿ ಸ್ವಾಗತ ಕೋರಿದರೆ, ಯುವಕರು ಘೋಷಣೆಗಳನ್ನು ಕೂಗಿ ಸಂಭ್ರಮಾಚರಣೆ ನಡೆಸಿದರು.

ಕೆ.ಎಸ್. ಬಸವಂತಪ್ಪ ಅವರು ಹಲವು ವರ್ಷಗಳಿಂದ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ರೈತರ ಸಮಸ್ಯೆಗಳು, ಕುಡಿಯುವ ನೀರಿನ ಯೋಜನೆಗಳು, ಗ್ರಾಮೀಣ ರಸ್ತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ವಿಶೇಷ ಆದ್ಯತೆ ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಕಾರಣದಿಂದಲೇ ಅವರಿಗೆ ಸಚಿವ ಸ್ಥಾನ ದೊರೆತಿದೆ ಎಂಬ ಅಭಿಪ್ರಾಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಮಾಯಕೊಂಡ ಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಇಲ್ಲಿ ನೀರಾವರಿ, ರಸ್ತೆ, ಶಿಕ್ಷಣ, ಕೈಗಾರಿಕಾ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯಂತಹ ಹಲವು ಸವಾಲುಗಳಿವೆ. ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಈ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ವೇಗ ಸಿಗಲಿದೆ ಎಂಬ ನಿರೀಕ್ಷೆ ಜನರಲ್ಲಿ ಮೂಡಿದೆ. ವಿಶೇಷವಾಗಿ ರೈತರು, ಯುವಕರು ಹಾಗೂ ಮಹಿಳಾ ಸಂಘಟನೆಗಳು ಹೊಸ ಸಚಿವರಿಂದ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ನಿರೀಕ್ಷಿಸುತ್ತಿವೆ.

ಸಚಿವ ಸ್ಥಾನ ಘೋಷಣೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೆ.ಎಸ್. ಬಸವಂತಪ್ಪ ಅವರು, “ಈ ಜವಾಬ್ದಾರಿ ನನಗೆ ದೊರೆತಿರುವುದು ವೈಯಕ್ತಿಕ ಗೌರವ ಮಾತ್ರವಲ್ಲ, ಮಾಯಕೊಂಡ ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಸಂದ ಗೌರವವಾಗಿದೆ. ಮುಖ್ಯಮಂತ್ರಿ ಹಾಗೂ ಪಕ್ಷದ ಹಿರಿಯ ನಾಯಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಳ್ಳಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ಜನರ ನಿರೀಕ್ಷೆಗಳನ್ನು ಈಡೇರಿಸುವುದು ನನ್ನ ಮೊದಲ ಆದ್ಯತೆಯಾಗಿರುತ್ತದೆ” ಎಂದು ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರ ಜೊತೆಗೆ, ದಾವಣಗೆರೆ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು ಎಂದು ಅವರು ಭರವಸೆ ನೀಡಿದರು. ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ, ಶಾಲೆಗಳು ಮತ್ತು ಆಸ್ಪತ್ರೆಗಳ ಸೌಲಭ್ಯಗಳ ಸುಧಾರಣೆ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ ಹಾಗೂ ಮಹಿಳಾ ಸಬಲೀಕರಣ ಕಾರ್ಯಕ್ರಮಗಳಿಗೆ ವಿಶೇಷ ಗಮನ ಹರಿಸಲಾಗುವುದು ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಮುಖಂಡರು ಮಾತನಾಡಿ, ಬಸವಂತಪ್ಪ ಅವರ ಸಚಿವ ಸ್ಥಾನದಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಮತ್ತು ಅಭಿವೃದ್ಧಿ ಯೋಜನೆಗಳು ಹರಿದು ಬರಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಆಡಳಿತಾತ್ಮಕ ಮಟ್ಟದಲ್ಲಿ ಜಿಲ್ಲೆಯ ವಿವಿಧ ಯೋಜನೆಗಳಿಗೆ ವೇಗ ಸಿಗಲಿದ್ದು, ಬಾಕಿ ಉಳಿದಿರುವ ಹಲವು ಕಾಮಗಾರಿಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಿದರು.

ವಿವಿಧ ಸಂಘಟನೆಗಳ ಪ್ರತಿನಿಧಿಗಳು ಸಹ ಸಚಿವರಿಗೆ ಅಭಿನಂದನೆ ಸಲ್ಲಿಸಿ, ಜಿಲ್ಲೆಯ ಬಹುಕಾಲದ ಬೇಡಿಕೆಗಳಾದ ನೀರಾವರಿ ಯೋಜನೆಗಳ ವಿಸ್ತರಣೆ, ಕೈಗಾರಿಕಾ ಹೂಡಿಕೆ, ಸರ್ಕಾರಿ ಆಸ್ಪತ್ರೆಗಳ ಉನ್ನತೀಕರಣ, ಸರ್ಕಾರಿ ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಗ್ರಾಮೀಣ ರಸ್ತೆ ಸುಧಾರಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಸಾಮಾಜಿಕ ಜಾಲತಾಣಗಳಲ್ಲಿಯೂ ಬಸವಂತಪ್ಪ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿತು. ಸಾರ್ವಜನಿಕರು, ರಾಜಕೀಯ ಮುಖಂಡರು, ವಿವಿಧ ಸಂಘಟನೆಗಳು ಹಾಗೂ ಅಭಿಮಾನಿಗಳು ಶುಭಾಶಯಗಳನ್ನು ತಿಳಿಸಿ, ಸಚಿವರ ಹೊಸ ಜವಾಬ್ದಾರಿ ಯಶಸ್ವಿಯಾಗಲಿ ಎಂದು ಹಾರೈಸಿದರು.

ರಾಜಕೀಯ ವಿಶ್ಲೇಷಕರ ಅಭಿಪ್ರಾಯದಂತೆ, ರಾಜ್ಯ ಸಚಿವ ಸಂಪುಟದಲ್ಲಿ ಮಾಯಕೊಂಡ ಕ್ಷೇತ್ರಕ್ಕೆ ದೊರೆತಿರುವ ಈ ಪ್ರತಿನಿಧಿತ್ವವು ದಾವಣಗೆರೆ ಜಿಲ್ಲೆಯ ರಾಜಕೀಯ ಮಹತ್ವವನ್ನು ಮತ್ತಷ್ಟು ಹೆಚ್ಚಿಸಿದೆ. ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುವ ಜೊತೆಗೆ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಸಚಿವರ ಪಾತ್ರ ಮಹತ್ವದ್ದಾಗಿರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಮಾಯಕೊಂಡ ಕ್ಷೇತ್ರದ ಜನರು ಸಚಿವ ಸ್ಥಾನವನ್ನು ಕೇವಲ ರಾಜಕೀಯ ಸಾಧನೆಯಾಗಿ ನೋಡದೇ, ಅಭಿವೃದ್ಧಿಯ ಹೊಸ ಅಧ್ಯಾಯದ ಆರಂಭವಾಗಿ ಪರಿಗಣಿಸುತ್ತಿದ್ದಾರೆ. ಕುಡಿಯುವ ನೀರು, ರಸ್ತೆ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಕೈಗಾರಿಕಾ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಆಗಲಿವೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.

ಕೆ.ಎಸ್. ಬಸವಂತಪ್ಪ ಅವರ ಸಚಿವ ಸ್ಥಾನವು ಮಾಯಕೊಂಡ ಕ್ಷೇತ್ರ ಹಾಗೂ ದಾವಣಗೆರೆ ಜಿಲ್ಲೆಗೆ ಹೊಸ ಅವಕಾಶಗಳನ್ನು ತೆರೆದಿದೆ. ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಸರ್ಕಾರ ಮತ್ತು ಜನರ ನಡುವೆ ಪರಿಣಾಮಕಾರಿ ಸೇತುವೆಯಾಗಿ ಕಾರ್ಯನಿರ್ವಹಿಸುವ ನಿರೀಕ್ಷೆ ಎಲ್ಲ ವಲಯಗಳಲ್ಲೂ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಆಡಳಿತಾತ್ಮಕ ನಿರ್ಧಾರಗಳು ಹಾಗೂ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಜಿಲ್ಲೆಯ ಭವಿಷ್ಯದ ದಿಕ್ಕನ್ನು ನಿರ್ಧರಿಸಲಿವೆ ಎಂಬ ಅಭಿಪ್ರಾಯ ರಾಜಕೀಯ ಹಾಗೂ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.

ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.

ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending