ಕ್ರೀಡೆ
ನೊವಾಕ್ ಜೊಕೊವಿಕ್ ಚಾಂಪಿಯನ್
ಸುದ್ದಿದಿನ ಡೆಸ್ಕ್ | ಬಲ ಮೊಣಕೈ ನೋವಿನಿಂದಾಗಿ ಕಳೆದ ವರ್ಷ ವಿಂಬಲ್ಡನ್ ಚಾಂಪಿಯನ್ ಶಿಪ್ ವಂಚಿತರಾಗಿದ್ದ ನೊವಾಕ್ ಜೊಕೊವಿಕ್ ಭಾನುವಾರ ನಡೆದ ಟೆನ್ನಿಸ್ ಪಂದ್ಯದಲ್ಲಿ ಕೆವಿನ್ ಅಂಡರ್ ಸನ್ ವಿರುದ್ಧ ಮುನ್ನಡೆ ಸಾಧಿಸಿ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡಿದ್ದಾರೆ.
ಕಳೆದ ತಿಂಗಳು ನಡೆದ ಫ್ರೆಂಚ್ ಒಪನ್ ಪಂದ್ಯದಿಂದ ಹೊರ ನಡೆದಿದ್ದ ಜೊಕೊವಿಕ್, ಲಂಡನ್ನಲ್ಲಿ ನಡೆದ ಗ್ರ್ಯಾಂಡ್ ಸ್ಲ್ಯಾಮ್ ಪಂದ್ಯದಲ್ಲಿ ಕೆವಿನ್ ಅಂಡರ್ಸನ್ ವಿರುದ್ಧ 6-2, 6-2, 7-6 (3) ಅಂಕಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಜೊಕೊವಿಕ್ ಗೆ ಇದು 13ನೇ ಮುಖ್ಯ ಟ್ರೋಫಿ, ಪುರುಷರ ಟೆನ್ನಿಸ್ ಇತಿಹಾಸದಲ್ಲಿ ನಾಲ್ಕನೇ ಅತ್ಯಧಿಕ ಮೊತ್ತ ಗಳಿಸಿದ ಪಂದ್ಯವಾಗಿದೆ. ರೋಜರ್ ಫೆಡರರ್ 20, ರಾಫೆಲ್ಸ್ ನಾಡಲ್ 17 ಮತ್ತು ಪೀಟ್ ಸಾಂಪ್ರಾಸ್ 14 ಪಾಯಿಂಟ್ಸ್ ಪಡೆದಿದ್ದರು. ಇದನ್ನು ಹಿಂದಿಕ್ಕಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ಕ್ರೀಡೆ
ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡುವ ಹೊಸ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ತಾಲ್ಲೂಕಿನಲ್ಲಿ 02 ಪರಿಶಿಷ್ಟ ಜಾತಿ ಮತ್ತು 01 ಪರಿಶಿಷ್ಟ ಪಂಗಡದ ಯುವಜನ ಸಂಘವನ್ನು ನೋಂದಾಯಿಸಲು ಸಹಾಯಧನ ಹಾಗೂ ಕ್ರೀಡಾಗಂಟನ್ನು ನೀಡಲಾಗುವುದು. ಜಿಲ್ಲೆಯ 15 ರಿಂದ 35 ವರ್ಷ ವಯೋಮಾನದೊಳಗಿನ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ಯುವಕ/ಯುವತಿಯರು ಯುವಜನ ಸಂಘವನ್ನು ರಚಿಸಿಕೊಳ್ಳಲು ಸದವಕಾಶವಿರುವದರಿಂದ ಕರ್ನಾಟಕ ರಾಜ್ಯ ಸಂಘ ಸಂಸ್ಥೆಗಳ ನೋಂದಾವಣೆ ಕಾಯಿದೆ 1960 ರ ಅಡಿಯಲ್ಲಿ ಯುವಜನ ಸಂಘಗಳ ನೋಂದಣಿ ಮಾಡಿಸಿ, ಜ.28 ರೊಳಗಾಗಿ ಮಾನ್ಯತೆಗಾಗಿ ಈ ಕಚೇರಿಗೆ ಸಲ್ಲಿಸಲು ಕೋರಿದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿ ವೇಳೆಯಲ್ಲಿ ಮೊ.ಸಂ: 9620796970 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಕ್ರಿಕೆಟಿಗ ಸುರೇಶ್ ರೈನಾ ಬಂಧನ ; ಬಿಡುಗಡೆ : ಕಾರಣ..!?

ಸುದ್ದಿದಿನ,ಮುಂಬೈ: ಮುಂಬೈನ ವಿಮಾನ ನಿಲ್ದಾಣದ ಹತ್ತಿರ ಡ್ರಾಗನ್ ಫ್ಲೈ ಕ್ಲಬ್ ಗೆ ದಿಢೀರ್ ದಾಳಿ ನಡೆಸಿದ ಪೊಲೀಸರು ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಹಾಗೂ ಗಾಯಕ ಗುರು ರಾಂಧವ ಅವರನ್ನು ಬಂಧಿಸಿದರು.
ಕೋವಿಡ್ -19 ನಿಯಾಮಾವಳಿಗಳ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗುರು ರಾಂಧವ ಸೇರಿದಂತೆ 34 ಜನರನ್ನು ಪೊಲೀಸರು ಬಂಧಿಸಿದ್ದು, ಇವರಲ್ಲಿ ಏಳು ಮಂದಿ ಕ್ಲಬ್ ನ ಉದ್ಯೋಗಿಗಳಿದ್ದಾರೆ.
ಬಂಧಿತರ ಮೇಲೆ ಮೇಲೆ ಐಪಿಸಿ ಸೆಕ್ಷನ್ 188, 269, 34 ಅಡಿಯಲ್ಲಿ ಕೇಸು ದಾಖಲು ಮಾಡಿದ್ದು, ಸದ್ಯ ಬಂಧಿತ ಆರೋಪಿಗಳನ್ನು ಜಾಮೀನಿ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಗೆ ಹೃದಯಾಘಾತ..!

ಸುದ್ದಿದಿನ, ದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಅವರಿಗೆ ಹೃದಯಾಘಾತವಾಗಿದ್ದು, ಅವರು ದೆಹಲಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಪಿಲ್ ದೇವ್ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆ ಒಳಗಾಗಿರು ಮಾಹಿತಿ ದೊರೆತಿದೆ. ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ವಿವರಗಳು ಇನ್ನು ಲಭ್ಯವಾಗಬೇಕಾಗಿದೆ. ಮಾಜಿ ನಾಯಕ ಕಪಿಲ್ ದೇವ್ ಅವರು 1983ರಲ್ಲಿ ಭಾರತಕ್ಕೆ ಮೊದಲ ವಿಶ್ವಕಪ್ ತಂದು ಕೊಟ್ಟಿದ್ದರು. ಕಪಿಲ್ ದೇವ್ 131 ಟೆಸ್ಟ್ ಪಂದ್ಯದಲ್ಲಿ 434 ವಿಕೆಟ್ ಪಡೆದ ಭಾರತದ ಕ್ರಿಕೆಟ್ ತಂಡದ ಮುಖ್ಯ ವೇಗಿಯಾಗಿದ್ದರು.
Legendary cricketer Kapil Dev @therealkapildev suffers heart attack, undergoes angioplasty at a hospital in Delhi. Wishing him a speedy recovery.
— Teena Thacker (@Teensthack) October 23, 2020
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು, ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ್ರು ನಾಗೇಶ್..!
-
ಲೈಫ್ ಸ್ಟೈಲ್6 days ago
ಪಕ್ಷಿ ಪರಿಚಯ | ಬೆಳ್ಗಣ್ಣ
-
ದಿನದ ಸುದ್ದಿ6 days ago
ಕೋವಿದ್ ಪ್ರಭಾವಳಿಯಲ್ಲಿ ಪ್ರಭುತ್ವದ ಕ್ರೌರ್ಯ
-
ದಿನದ ಸುದ್ದಿ7 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ಲೈಫ್ ಸ್ಟೈಲ್6 days ago
ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಪರಿಹಾರ ; ಮಿಸ್ ಮಾಡ್ದೆ ಓದಿ..!
-
ದಿನದ ಸುದ್ದಿ6 days ago
ದಲಿತರಿಗೆ ಪರ್ಯಾಯ ಸಂಸ್ಕೃತಿ ಇಲ್ಲವೆ..?
-
ದಿನದ ಸುದ್ದಿ3 days ago
ಕಿಸಾನ್ ಸಮ್ಮಾನ್ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ : ಅಮಿತ್ ಶಾ
-
ದಿನದ ಸುದ್ದಿ7 days ago
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!