ದಿನದ ಸುದ್ದಿ
ಅಸ್ಸಾಮ್ನಲ್ಲಿ ಎನ್ಆರ್ಸಿ ಪ್ರಕ್ರಿಯೆ ಎತ್ತ ಸಾಗಿದೆ..? ಪೌರತ್ವ ನಿರ್ಧಾರದಲ್ಲಿ ಕೋಮುವಾದಿ ಹುನ್ನಾರ..!
- ಸವಿದೇಶಿಯರನ್ನು ಹೊರತುಪಡಿಸಿ ಎಲ್ಲಾ ಭಾರತೀಯರನ್ನು ಸೇರಿಸಿಕೊಳ್ಳುವ ಉದ್ದೇಶ ಹೊಂದಿದ್ದ ಅಸ್ಸಾಮ್ನ ಎನ್ಆರ್ಸಿ ಪ್ರಕ್ರಿಯೆಯನ್ನು ಈಗ ಬಿಜೆಪಿಯ ಕೋಮುವಾದಿ ಹಾಗೂ ಸಂಕುಚಿತ ಉದ್ದೇಶಕ್ಕೆ ಅಪಹರಿಸುವ ಅಪಾಯವಿದೆ. ಕೋಮುವಾದದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವ ಕ್ರಮ ಅಸಂವಿಧಾನಿಕವಾದುದು ಹಾಗೂ ವಿಭಜನಕಾರಿಯಾದುದು. ಅಲ್ಲದೆ ಎನ್ಆರ್ಸಿಯ ದೋಷಪೂರಿತ ಅನುಷ್ಠಾನದಿಂದ ಉದ್ಭವಿಸುವ ಅವಾಂತರಗಳನ್ನು ಪರಿಹರಿಸಲು ವಿಫಲವಾದರೆ ಅದು ಪೌರರ ಹಕ್ಕುಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಸಮನಾಗುತ್ತದೆ. ಇದರಿಂದ ಭಾರತ ಒಂದು ಪ್ರಜಾಪ್ರಭುತ್ವ ಮತ್ತು ಕಾನೂನು ಪಾಲಿಸುವ ಸಮಾಜ ಎಂಬ ಘನತೆಗೆ ಅಂತಾರ್ರಾಷ್ಟ್ರೀಯ ಮಟ್ಟದಲ್ಲಿ ಗಂಭೀರ ಕಳಂಕ ಬರುತ್ತದೆ.
ಅಸ್ಸಾಮ್ನಲ್ಲಿ ನಾಗರಿಕ ಗಣತಿ ನಡೆಸುವ ರಾಷ್ಟ್ರೀಯ ಪೌರತ್ವ ದಾಖಲೆ (ಎನ್ಆರ್ಸಿ)ಯ ಪ್ರಕ್ರಿಯೆ ಸುಪ್ರೀಂ ಕೋರ್ಟ್ನ ಆದೇಶದ ಅನ್ವಯ ಜುಲೈ 31ರಂದು ಅಂತಿಮ ಪಟ್ಟಿಯ ಪ್ರಕಟಣೆಯೊಂದಿಗೆ ಪೂರ್ಣಗೊಳ್ಳುವ ಹಂತ ತಲುಪಬೇಕಾಗಿದೆ. ಈ ಪ್ರಕ್ರಿಯೆಯನ್ನು ನಡೆಸಿದ ರೀತಿ ಅನೇಕ ಅನುಮಾನಗಳಿಗೆ ಎಡೆಮಾಡಿದೆ; ದಾಖಲೆಯಲ್ಲಿ ನೈಜ ಭಾರತೀಯ ನಾಗರಿಕರನ್ನು ಸೇರಿಸುವ ವಿಚಾರದಲ್ಲಿ ಭಾರೀ ಪ್ರಮಾಣದ ಲೋಪದೊಷಗಳು ಕಂಡುಬಂದಿವೆ.
2018ರ ಜುಲೈ 30ರಂದು ಪ್ರಕಟವಾದ ಎನ್ಆರ್ಸಿ ಕರಡು ಪಟ್ಟಿಯಲ್ಲಿ 3.29 ಕೋಟಿ ಅರ್ಜಿದಾರರ ಪೈಕಿ 40.7 ಲಕ್ಷ ಜನರನ್ನು ಕೈಬಿಡಲಾಗಿತ್ತು. ನಿಯಮದ ಪ್ರಕಾರ, ಪಟ್ಟಿಯಿಂದ ಬಿಡಲಾದವರು ತಮ್ಮ ಸೇರ್ಪಡೆಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅದೇ ರೀತಿ ಸೇರ್ಪಡೆಯಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಲೂ ಅವಕಾಶವಿದೆ.
ಈ ಪ್ರಕ್ರಿಯೆಯ ನಂತರ, ಪಟ್ಟಿಯನ್ನು ಅಂತಿಮಗೊಳಿಸಿ 2019ರ ಜುಲೈ 31ರಂದು ಪ್ರಕಟಿಸಲು ಕ್ರಮಕೈಗೊಳ್ಳಲಾಗಿತ್ತು. ಆದರೆ, ಈ ವರ್ಷ ಜೂನ್ ೨೬ರಂದು ಅನರ್ಹರು ಎಂದು ಹೇಳಿ ಅಧಿಕಾರಿಗಳು ಮತ್ತೆ 1,02,462 ಹೆಸರುಗಳನ್ನು ಕರಡು ಎನ್ಆರ್ಸಿ ಪಟ್ಟಿಯಿಂದ ಕೈಬಿಟ್ಟಿದ್ದರು. ಪ್ರಸ್ತುತ ಹೊರತುಪಡಿಸುವಿಕೆಯು ಡಿ, ಅಂದರೆ ಮತದಾರರ ಪಟ್ಟಿಯ ಅನುಮಾನಾಸ್ಪದ (ಡೌಟ್ಫುಲ್) ವಿಭಾಗದಲ್ಲಿ ಸೇರಿದವರನ್ನೂ ಒಳಗೊಂಡಿದೆ ಅಥವಾ ವಿದೇಶಿಯರೆಂದು ಅನುಮಾನಕ್ಕೊಳಗಾಗಿದ್ದು ವಿದೇಶಿಯರ ನ್ಯಾಯಮಂಡಳಿಯ ಮುಂದೆ ವಿಚಾರಣೆ ಎದುರಿಸುತ್ತಿರುವವರನ್ನೂ ಒಳಗೊಂಡಿದೆ ಎಂದು ತಿಳಿಸಲಾಗಿದೆ. ಈ ಹೆಚ್ಚುವರಿ ಹೊರತುಪಡಿಸುವಿಕೆಯೇ ಇನ್ನಷ್ಟು ಪ್ರಶ್ನೆಗಳಿಗೆ ಕಾರಣವಾಗಿದೆ. ಯಾಕೆಂದರೆ ಡಿ ವಿಭಾಗದಲ್ಲಿರುವ ಎಲ್ಲ ವ್ಯಕ್ತಿಗಳನ್ನು ಹೊರತು ಪಡಿಸಲಾಗಿದೆ ಎಂದು ಕರಡು ಎನ್ಆರ್ಸಿ ವೇಳೆಯೇ ಘೋಷಿಸಲಾಗಿತ್ತು.
ಪ್ರಕ್ರಿಯೆಯು ದೋಷಪೂರಿತವಾಗಿದೆ ಹಾಗೂ ಅನೇಕ ತಪ್ಪುಗಳೂ ನಡೆದಿವೆ ಎಂಬುದನ್ನು ಮಾಧ್ಯಮಗಳಲ್ಲಿ ಪ್ರಕಟವಾದ ಅನೇಕ ವರದಿಗಳು ಎತ್ತಿತೋರಿಸಿವೆ. ಸೇನೆಯಲ್ಲಿ 30 ವರ್ಷ ಸೇವೆ ಸಲ್ಲಿಸಿ ಆನಂತರ ಗಡಿ ಪೊಲೀಸ್ ಪಡೆಯನ್ನು ಸಹಾಯಕ ಸಬ್ ಇನ್ಸ್ಪೆಕ್ಟರ್ ಆಗಿ ಸೇರಿದ ನಾನ್-ಕಮಿಷನ್ಡ್ ಆಫೀಸರ್ ಮಹಮದ್ ಸನಾವುಲ್ಲಾ ಪ್ರಕರಣ ಒಂದು ಉದಾಹರಣೆಯಾಗಿದೆ. ಅವರ ಹೆಸರು ಡಿ ಪಟ್ಟಿಯಲ್ಲಿತ್ತು ಹಾಗೂ ಅವರನ್ನು ವಿದೇಶೀಯ ಎಂದು ವಿದೇಶಿಗರ ನ್ಯಾಯಮಂಡಳಿ (ಫಾರಿನರ್ಸ್ ಟ್ರಿಬ್ಯುನಲ್) ಘೋಷಿಸಿತು. ಸನಾವುಲ್ಲಾ ಅಸ್ಸಾಮ್ನಲ್ಲಿ ಹುಟ್ಟಿದವರಾದರೂ ಮತ್ತು ಹುಟ್ಟಿದ ಊರಿನಲ್ಲಿ ಕುಟುಂಬದ ಬೇರುಗಳು ಆಳವಾಗಿದ್ದರೂ ಈ ರೀತಿ ಮಾಡಲಾಯಿತು. ಅವರನ್ನು ಪ್ರತಿಬಂಧನ ಶಿಬಿರಕ್ಕೆ ಕಳಿಸಲಾಯಿತು. ಹೈಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿದ ನಂತರವಷ್ಟೇ ಹತ್ತು ದಿನಗಳ ನಂತರ ಅವರು ಹೊರಬರುವುದು ಸಾಧ್ಯವಾಯಿತು.
ಸುನಿರ್ಮಲ್ ಬಾಗ್ಚಿ ಅವರದ್ದು ಇನ್ನೊಂದು ಪ್ರಕರಣ. 2018ರ ಜುಲೈನಲ್ಲಿ ಪ್ರಕಟಿಸಲಾದ ಕರಡು ಪಟ್ಟಿಯಲ್ಲಿ ಅವರ ಹೆಸರಿತ್ತು. ಆದರೆ ಈ ವರ್ಷ ಜೂನ್ನಲ್ಲಿ ಪ್ರಕಟಿಸಲಾದ ಹೆಚ್ಚುವರಿ ಹೊರತುಪಡಿಸುವಿಕೆ ಪಟ್ಟಿಯಲ್ಲಿ ಅವರ ಹೆಸರನ್ನು ಕರಡು ಪಟ್ಟಿಯಿಂದ ಹೊಡೆದುಹಾಕಲಾಗಿದೆ. ಆತ ಒಬ್ಬ ವಿದೇಶಿ ಎಂದು ಘೋಷಿಸಲಾಗಿದೆ ಎನ್ನುವುದು ಇದಕ್ಕೆ ನೀಡಲಾದ ಕಾರಣವಾಗಿದೆ. ಬಾಗ್ಚಿ ಅವರು ಸಿಲ್ಚಾರ್ ಪಟ್ಟಣದಲ್ಲಿ 1943 ಸೆಪ್ಟೆಂಬರ್ 23ರಂದು ಜನಿಸಿದವರು. ಹಾಗಿರುವಾಗ ಅವರು ಒಬ್ಬ ವಿದೇಶೀಯ ಆಗಲು ಹೇಗೆ ಸಾಧ್ಯ ಎನ್ನುವುದಕ್ಕೆ ಅಧಿಕಾರಿಗಳಲ್ಲಿ ಉತ್ತರವಿಲ್ಲ. ಆದರೆ ಇದೊಂದು ಕ್ಲರಿಕಲ್ ದೋಷದ ಪರಿಣಾಮ ಎಂದು ಎನ್ಆರ್ಸಿ ಅಧಿಕಾರಿಗಳು ಈಗ ಹೇಳುತ್ತಿದ್ದಾರೆ.
ಚಿರಾಂಗ್ ಜಿಲ್ಲೆಯ ಒಬ್ಬ ಬಡ ವಿಧವೆ ಮಧುಬಾಲಾ ಅವರನ್ನು ಬಂಧಿಸಿರುವುದು ಒಂದು ಕಳವಳಕಾರಿ ಸಂಗತಿಯಾಗಿದೆ. ಫಾರಿನರ್ಸ್ ಟ್ರಿಬ್ಯುನಲ್ ಅವರನ್ನು ವಿದೇಶಿ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಮಧುಬಾಲಾರನ್ನು ಮೂರು ವರ್ಷಗಳಿಂದ ಪ್ರತಿಬಂಧನದಲ್ಲಿಡಲಾಗಿತ್ತು. ಮಧುಬಾಲಾ ಎಂಬ ಹೆಸರಿನ ಮತ್ತೊಬ್ಬ ಮಹಿಳೆಯ ವಿಚಾರದಲ್ಲಿ ತಪ್ಪಾಗಿ ತಿಳಿದು ಈ ಮಧುಬಾಲಾರನ್ನು ಹಿಡಿದಿಡಲಾಗಿತ್ತು ಎನ್ನುವುದು ಇತ್ತೀಚೆಗೆ ತಿಳಿದು ಅವರ್ನು ಬಿಡುಗಡೆ ಮಾಡಲಾಯಿತು. ಆದರೆ, ಅಕ್ರಮವಾಗಿ ಅವರನ್ನು ಬಂಧಿಸಿಟ್ಟಿದ್ದಕ್ಕೆ ಪರಿಹಾರ ನೀಡಲಾಗುವುದೇ ಎಂಬ ಬಗ್ಗೆ ಎಂದು ಚಕಾರವನ್ನೇ ಎತ್ತಿಲ್ಲ.
ಮಗನನ್ನು ಪಟ್ಟಿಯಲ್ಲಿ ಸೇರಿಸಿ ತಂದೆಯನ್ನು ಕೈಬಿಟ್ಟ ಅಥವಾ ಒಡಹುಟ್ಟಿದವರಲ್ಲಿ ಒಬ್ಬರನ್ನು ಸೇರಿಸಿ ಇನ್ನೊಬ್ಬರನ್ನು ಬಿಟ್ಟ ಈ ರೀತಿಯ ಅನೇಕಾನೇಕ ಪ್ರಕರಣಗಳು ಇಲ್ಲಿವೆ.
ಬಾಂಗ್ಲಾದೇಶದಿಂದ ಬಂದ ಅಕ್ರಮ ವಲಸಿಗರಿಂದ ಮುಕ್ತಿ ಪಡೆಯಬೇಕು ಎಂದು ಕೇಂದ್ರದ ಬಿಜೆಪಿ ಸರಕಾರ ಸದಾ ಜಪಿಸುತ್ತಲೇ ಇದೆ. ಈಗ ಕೇಂದ್ರ ಗೃಹ ಸಚಿವರಾಗಿರುವ ಅಮಿತ್ ಷಾ ಚುನಾವಣೆ ಪ್ರಚಾರದ ವೇಳೆ ಇವರನ್ನು ಗೆದ್ದಲು ಎಂದು ಕರೆದಿದ್ದರು. ಪಶ್ಚಿಮ ಬಂಗಾಳ ಮತ್ತು ಬಾಂಗ್ಲಾದೇಶದ ಗಡಿಗೆ ಹೊಂದಿರುವ ರಾಜ್ಯಗಳಿಗೆ ಎನ್ಆರ್ಸಿ ವಿಸ್ತರಿಸಲು ಮೋದಿ ಸರಕಾರ ಕಟಿಬದ್ಧವಾಗಿದೆ. ಮುಸ್ಲಿಂ ಮೂಲದ ನಾಗರಿಕರನ್ನು ಗುರಿಯಾಗಿಸಲಾಗುವುದು ಎಂಬ ಭೀತಿ ಕಾಡತೊಡಗಿದೆ.
ಇದೇ ಹೊತ್ತಿಗೆ ಬಾಂಗ್ಲಾದೇಶದಿಂದ ಬಂದ ಹಿಂದೂ ವಲಸಿಗರಿಗೆ ಪೌರತ್ವ ಕಾನೂನನ್ನು ತಿದ್ದುಪಡಿ ಮಾಡುವ ಮೂಲಕ ಪೌರತ್ವ ನೀಡಲಾಗುವುದು ಎಂದು ಬಿಜೆಪಿ ಆಶ್ವಾಸನೆ ನೀಡುತ್ತಿದೆ. ಎನ್ಆರ್ಸಿಯಿಂದ ಕೈಬಿಟ್ಟ ಹಿಂದೂ ನಿರಾಶ್ರಿತರಿಗೆ ಪೌರತ್ವ ನೀಡಲಿಕ್ಕಾಗಿ ಸರಕಾರ ಒಂದು ಮಸೂದೆ ತರಲಿದೆ ಎಂದು ಗೃಹ ಸಚಿವ ಅಮಿತ್ ಷಾ ಜುಲೈ ಒಂದರಂದು ರಾಜ್ಯಸಭೆಯಲ್ಲಿ ಹೇಳಿದ್ದಾರೆ.
ವಿದೇಶಿಯರನ್ನು ಹೊರತು ಪಡಿಸಿ ಎಲ್ಲಾ ಭಾರತೀಯರನ್ನು ಸೇರಿಸಿ ಕೊಳ್ಳುವ ಉದ್ದೇಶ ಹೊಂದಿದ್ದ ಎನ್ಆರ್ಸಿ ಪ್ರಕ್ರಿಯೆಯನ್ನು ಈಗ ಬಿಜೆಪಿಯ ಕೋಮುವಾದಿ ಹಾಗೂ ಸಂಕುಚಿತ ಉದ್ದೇಶಕ್ಕೆ ಅಪಹರಿಸುವ ಅಪಾಯವಿದೆ.
ಅಸ್ಸಾಮ್ನಲ್ಲಿ ಎನ್ಆರ್ಸಿ ಪ್ರಕ್ರಿಯೆ ಅನೇಕ ಪ್ರಶ್ನೆಗಳನ್ನು ಎತ್ತಿದ್ದು ಅವುಗಳಿಗೆ ಪರಿಹಾರ ಸಿಗಬೇಕಾಗಿದೆ. ಎನ್ಆರ್ಸಿಯ ಅಂತಿಮ ಪಟ್ಟಿಯ ಪ್ರಕಟಣೆಯ ನಂತರ, ಅನ್ಯಾಯವಾಗಿ ಅಥವಾ ತಪ್ಪಾಗಿ ಕೈಬಿಡಲಾದವರಿಗೆ-ಅದು ಅಧಿಕಾರಿಗಳ ತಪ್ಪಿನಿಂದಲೇ ಆಗಿರಲಿ, ಕೋಮುವಾದಿ ಪಕ್ಷಪಾತದಿಂದಲೇ ಆಗಿರಲಿ- ನ್ಯಾಯ ಒದಗಿಸಲು ಒಂದು ಶೀಘ್ರ ಕಾನೂನು ಪ್ರಕ್ರಿಯೆ ಆರಂಭವಾಗಬೇಕು. ಪೌರತ್ವ ದಾಖಲೆಯಿಂದ ಕೈಬಿಡಲಾದ ಮಿಲಿಯಗಟ್ಟಲೆ ಜನರಿಗೆ ಏನು ಆಗಬಹುದು?. ಪೌರರಲ್ಲದ ಅವರ ಸ್ಥಾನಮಾನ ಹಾಗೂ ಹಕ್ಕುಗಳು ಏನು?. ವಿದೇಶಿಗರ ನ್ಯಾಯಮಂಡಳಿಯಿಂದ ವಿದೇಶಿಯರು ಎಂದು ಘೋಷಿತರಾದವರನ್ನು ಬಾಂಗ್ಲಾದೇಶಕ್ಕೆ ಕಳಿಸಲು ಸಾಧ್ಯವಿಲ್ಲ ಎನ್ನುವುದು ಆಗಲೇ ಸ್ಪಷ್ಟವಾಗಿರುವಾಗ- ಅವರನ್ನು ಸ್ವೀಕರಿಸಲು ಬಾಂಗ್ಲಾದೇಶ ನಿರಾಕರಿಸಿದೆ- ಅವರನ್ನು ಬಂಧನ ಕೇಂದ್ರಗಳಲ್ಲಿ ಅನಿರ್ದಿಷ್ಟ ಕಾಲ ಕೊಳೆ ಹಾಕಲಾಗುವುದೇ?.
ಎನ್ಆರ್ಸಿ ಪ್ರಕ್ರಿಯೆಯನ್ನು ಆರಂಭಿಸಿ ಅದರ ಮೇಲುಸ್ತುವಾರಿ ನೋಡಿಕೊಂಡ ಸುಪ್ರೀಂ ಕೋರ್ಟ್ ಈ ವಿಷಯಗಳಿಗೆ ಪ್ರತಿಕ್ರಿಯಿಸದೆ ನುಣುಚಿಕೊಳ್ಳಲಾಗದು. ಭಾರತೀಯ ನಾಗರಿಕತ್ವ ಮತ್ತು ನಾಗರಿಕರ ಹಕ್ಕುಗಳ ಮೂಲಭೂತ ವಿಚಾರಗಳು ಇಲ್ಲಿ ಅಡಕವಾಗಿವೆ. ಎನ್ಆರ್ಸಿಯ ದೋಷಪೂರಿತ ಅನುಷ್ಠಾನದಿಂದ ಉದ್ಭವಿಸುವ ಅವಾಂತರಗಳನ್ನು ಪರಿಹರಿಸಲು ವಿಫಲವಾದರೆ ಅದು ಪೌರರ ಹಕ್ಕುಗಳು ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಸಮನಾಗುತ್ತದೆ. ಇದರಿಂದ ಭಾರತ ಒಂದು ಪ್ರಜಾಪ್ರಭುತ್ವ ಮತ್ತು ಕಾನೂನು ಪಾಲಿಸುವ ಸಮಾಜ ಎಂಬ ಘನತೆಗೆ ಅಂತಾರ್ರಾಷ್ಟ್ರೀಯ ಮಟ್ಟದಲ್ಲಿ ಗಂಭೀರ ಕಳಂಕ ಬರುತ್ತದೆ.
ಅಂತಿಮ ಪಟ್ಟಿ ಪ್ರಕಟಣೆಯ ಜುಲೈ 31ರ ಗಡುವು ಸಮೀಪಿಸುತ್ತಿರುವಾಗ ಇಂಥ ಸನ್ನಿವೇಶ ಇರುವ ಹೊತ್ತಿನಲ್ಲೇ ಕೇಂದ್ರ ಸರಕಾರ ಮತ್ತು ಅಸ್ಸಾಂ ರಾಜ್ಯ ಸರಕಾರ ಹಠಾತ್ತನೆ ಒಂದು ಹೊಸ ಬೇಡಿಕೆಯೊಂದಿಗೆ ಸುಪ್ರೀಂ ಕೋರ್ಟ್ನ ಮೊರೆ ಹೋಗಿದೆ. ಅಂತಿಮ ಪಟ್ಟಿ ಪ್ರಕಟಣೆಯ ಗಡುವನ್ನು ಜುಲೈ 31ರಿಂದ ಬೇರೊಂದು ದಿನಾಂಕ್ಕೆ ಮುಂದೂಡಬೇಕೆನ್ನುವುದೇ ಆ ಬೇಡಿಕೆಯಾಗಿದೆ. ಈ ನಡುವೆ, 2018ರ ಜುಲೈ 30ರಂದು ಪ್ರಕಟಿಸಲಾದ ಎನ್ಆರ್ಸಿ ಕರಡಿನಲ್ಲಿರುವ ಹೆಸರುಗಳ ಸ್ಯಾಂಪಲ್ ಪುನರ್-ದೃಢೀಕರಣ ಆಗಬೇಕೆಂಬುದು ಅವುಗಳ ಬೇಡಿಕೆ. ಬಾಂಗ್ಲಾದೇಶದ ಗಡಿಗೆ ಹೊಂದಿರುವ ಜಿಲ್ಲೆಗಳ ಶೇಕಡಾ ೨೦ರಷ್ಟು ಹಸರುಗಳ ಮರು-ದೃಢೀಕರಣ ಮತ್ತು ರಾಜ್ಯದ ಉಳಿದ ಭಾಗಗಳಲ್ಲಿ ಶೇಕಡಾ ೧೦ ಮರು-ದೃಢೀಕರಣ ಆಗಬೇಕು ಎಂದು ಅವು ಹೇಳಿವೆ.
ದುರುದ್ದೇಶಪೂರಿತವಾದ ಈ ಮನವಿಯು ಈಗಾಗಲೇ ಪದೇ ಪದೇ ವಿಚಾರಣೆಗಳು ಮತ್ತು ದಾಖಲೆಪತ್ರಗಳ ಸಲ್ಲಿಕೆಗಳಿಂದ ಹೈರಾಣವಾಗಿರುವ ಲಕ್ಷಾಂತರ ನಾಗರಿಕರಿಗೆ ಮತ್ತಷ್ಟು ಕಿರುಕುಳ ಮುಂದುವರಿಸಲು ಕಾರಣವಾಗುತ್ತದೆ.
ಈ ಕ್ರಮವನ್ನು ದೃಢವಾಗಿ ವಿರೋಧಿಸಬೇಕು. ಪೌರತ್ವ ಕಾನೂನಿಗೆ ತಿದ್ದುಪಡಿ ತರು ವರೆಗೆ ಅಥವಾ ಬಾಂಗ್ಲಾದೇಶದ ಹಿಂದೂ ವಲಸಿಗರಿಗೆ ನಾಗರಿಕತ್ವ ನೀಡುವವರೆಗೆ ಎನ್ಆರ್ಸಿಯನ್ನು ಅಂತಿಮಗೊಳಿಸುವುದನ್ನು ವಿಳಂಬ ಮಾಡುವುದು ಮೋದಿ ಸರಕಾರ ಉದ್ದೇಶ ಎಂದು ನಂಬಲು ಬೇಕಷ್ಟು ಕಾರಣಗಳಿವೆ. ಕೋಮುವಾದದ ಆಧಾರದಲ್ಲಿ ಪೌರತ್ವವನ್ನು ನಿರ್ಧರಿಸುವ ಕ್ರಮ ಅಸಂವಿಧಾನಿಕವಾದುದು ಹಾಗೂ ವಿಭಜನಕಾರಿ ಯಾದುದು.
–ಪ್ರಕಾಶ್ ಕಾರಟ್
ಅನು: ವಿಶ್ವ
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.
ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.
ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
ಸುದ್ದಿದಿನಡೆಸ್ಕ್:ಜಪಾನ್ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.
ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!
ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಡಾಲಿಯ ಕನಸು ಒಂದೇ ಹೀರೋ ಆಗೋದು
ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!
ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!
ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.
ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!
ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ3 days agoಡಾ. ಆತ್ಮಾರಾಮನ ಆತ್ಮನಿವೇದನೆ | ಮೆಟ್ಟಿಲಿನವನು
-
ದಿನದ ಸುದ್ದಿ5 days agoವಿಶ್ವ ವೆಂಕಟೇಶ್ವರ ಸಂಸ್ಥೆಯ ಹೆಸರು ಹಾಳು ಮಾಡುವ ಹುನ್ನಾರ: ವಿಠಲ ರುಕ್ಮಿಣಿ ಮಠದ ವಿರುದ್ಧ ಗಂಭೀರ ಆರೋಪ
-
ದಿನದ ಸುದ್ದಿ1 day agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ1 day agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ15 hours agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ1 day agoಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
-
ದಿನದ ಸುದ್ದಿ2 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

