ಅಂತರಂಗ

ನುಡಿ ನಮನ | ಡಾ. ವಿಠಲ ಭಂಡಾರಿ, ಕ್ಷಮಿಸಿ ಸರ್

Published

on

ಡಾ. ವಿಠಲ ಭಂಡಾರಿ
  • ಡಾ. ಗಿರೀಶ್ ಮೂಗ್ತಿಹಳ್ಳಿ, ಚಿಕ್ಕಮಗಳೂರು

ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಸಂಶೋಧನೆ ಮಾಡುವಾಗ ಡಾ. ಆನಂದ ಪಾಟೀಲ ಅವರ ಸಲಹೆಯಂತೆ ‘ಪ್ರೀತಿಯ ಕಾಳು’ ಪುಸ್ತಕ ಬೇಕಿತ್ತು. ಈ ಪುಸ್ತಕ ವಿಠಲ ಭಂಡಾರಿ ಅವರ ತಂದೆ ಆರ್. ವಿ. ಭಂಡಾರಿ ಅವರ 13 ಮಕ್ಕಳ ನಾಟಕಗಳ ಸಂಕಲನ. ಈ ಕೃತಿಯನ್ನು ಡಾ. ವಿಠಲ ಭಂಡಾರಿ ಅವರು ಸಂಪಾದಿಸಿದ್ದರು. ಮಾನ್ಯ ಭಂಡಾರಿಯವರನ್ನು ಕೇಳಿಕೊಂಡಾಗ ನನಗೆ ಅಂಚೆ ಮೂಲಕ ಕಳುಹಿಸಿಕೊಟ್ಟಿದ್ದರು.

ಬೇಕಾದ ಪೂರಕ ಮಾಹಿತಿಯನ್ನು ಫೋನಿನಲ್ಲಿಯೇ ಚರ್ಚಿಸಿದ್ದರು. ನನ್ನ ಸಂಶೋಧನೆಯಲ್ಲಿ ಜತೆ ಇದ್ದರು. ಆದರೆ ಒಮ್ಮೆ ಎಂದೂ ಭೇಟಿಯಾದವರಲ್ಲ. ಕಾರಣ ದೂರದೂರು ಎಂದು! ಕರೆ ಮಾಡಿದರೆ, ಅವರು ಎಷ್ಟೇ ಕಾರ್ಯನಿರತರಾಗಿದ್ದರೂ ಕರೆ ಸ್ವೀಕರಿಸಿ ವರ್ತಮಾನವನ್ನು ತಿಳಿಸುತ್ತಿದ್ದರು. ಸಂಶೋಧನಾ ಪ್ರಬಂಧವು ಕೃತಿಯಾದಾಗ ಅವರಿಗೆ ಒಂದು ಪ್ರತಿ ಕಳುಹಿಸಿ ಕೊಟ್ಟೆ.. ತುಂಬಾ ಸಂಭ್ರಮಿಸಿದ್ದರು. ಮೆಚ್ಚುಗೆ ಮಾತುಗಳನ್ನಾಡಿದ್ದರು.

ಕಳೆದ ಲಾಕ್ ಡೌನ್ ಸಮಯದಲ್ಲಿ ನನ್ನ ಪುಸ್ತಕವನ್ನು ಆನ್ ಲೈನ್ ಬಿಡುಗಡೆ ಮಾಡೋಣ ಎಂದು ಕಾರ್ಯಕ್ರಮದ ಕ್ರಿಯಾಯೋಜನೆಯನ್ನು ತಯಾರಿಸಿದ್ದರು… ಇಷ್ಟೆಲ್ಲ ಕಾರ್ಯಗಳು ಪರಸ್ಪರ ಭೇಟಿಯಾಗದೆ ಆದ ವಿಶೇಷ ಅನುಭವಗಳು. ಈ ಮಧ್ಯೆ ಅವರಿಗೆ ಕರೆ ಮಾಡುವುದಕ್ಕೆ ಆಗಿರಲಿಲ್ಲ.

ಆದರೆ ಇಂದಿನ ಅವರ ಅಗಲಿಕೆಯ ಸುದ್ದಿ ನನ್ನನ್ನ ನಿಶ್ಚಲವಾಗಿಸಿದೆ…! ಸಾಮಾನ್ಯ ರೀತಿಯಲ್ಲಿ ಮಾನ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಬಹುದು.. ಆದರೆ ಅವರನ್ನು ಭೇಟಿ ಮಾಡಬೇಕೆಂಬ ಆಸೆಯ ಚಿಗುರಿಗೆ ಕೆಟ್ಟ ಸುದ್ದಿಯ ಸಿಡಿಲೊಡೆದಿದೆ… ಕ್ಷಮಿಸಿ ಸರ್… ನನ್ನ ಸರದಿಯೂ ಬಂದಾಗ ಮೇಲೆ ಬರುವೆ.. ಸಿಕ್ಕೋಣ.. ಈ ಅಮಾನವೀಯ ವ್ಯವಸ್ಥೆಯ ಬಗ್ಗೆ ಚರ್ಚೆ ಮಾಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version