ದಿನದ ಸುದ್ದಿ
ನ್ಯಾಮತಿ – ಚನ್ನಗಿರಿ ತಾಲ್ಲೂಕು | ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲಾತಿ ನಿಗದಿ ಪಟ್ಟಿ
ಸುದ್ದಿದಿನ,ದಾವಣಗೆರೆ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಬುಧವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯ್ತಿಯ ಮೊದಲನೇ 30 ತಿಂಗಳ ಅವಧಿಗೆ ನ್ಯಾಮತಿ ಹಾಗೂ ಚನ್ನಗಿರಿ ತಾಲ್ಲೂಕಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ತಂತ್ರಾಂಶದ ಮೂಲಕ ಕೆಳಕಂಡ ಪಟ್ಟಿಯನ್ವಯ ವರ್ಗವಾರು ಮೀಸಲಾತಿ ನಿಗದಿಪಡಿಸಲಾಗಯಿತು.
ನ್ಯಾಮತಿ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ17(9) 3(2) 1(1) 3(2) 1(0) 9(4)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ | ಉಪಾಧ್ಯಕ್ಷ
- ಚೀಲೂರು ಕಡದಕಟ್ಟೆ : ಹಿಂದುಳಿದ ‘ಅ’ ವರ್ಗ, ಸಾಮಾನ್ಯ(ಮಹಿಳೆ)
- ಗುಡ್ಡೇಹಳ್ಳಿ: ಹಿಂದುಳಿದ ‘ಅ’ ವರ್ಗ(ಮಹಿಳೆ), ಸಾಮಾನ್ಯ
- ಗೋವಿನಕೋವಿ : ಹಿಂದುಳಿದ ‘ಅ’ ವರ್ಗ(ಮಹಿಳೆ), ಹಿಂದುಳಿದ ‘ಬ’ ವರ್ಗ
- ಸುರಹೊನ್ನೆ : ಹಿಂದುಳಿದ ‘ಬ’ ವರ್ಗ, ಅನುಸೂಚಿತ ಜಾತಿ(ಮಹಿಳೆ)
- ಯರಗನಾಳು : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕೆಂಚಿಕೊಪ್ಪ : ಸಾಮಾನ್ಯ, ಅನುಸೂಚಿತ ಪಂಗಡ(ಮಹಿಳೆ)
- ವಡೇರಹತ್ತೂರು : ಸಾಮಾನ್ಯ, ಅನುಸೂಚಿತ ಜಾತಿ
- ಗಂಗನಕೋಟೆ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಚೀಲೂರು: ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಚಿನ್ನಿಕಟ್ಟೆ : ಸಾಮಾನ್ಯ(ಮಹಿಳೆ), ಹಿಂದುಳಿದ ‘ಅ’ವರ್ಗ
- ಸವಳಂಗ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಕುಂಕೊವ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಫಲವನಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಟಿ.ಗೋಪಗೊಂಡನಹಳ್ಳಿ: ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಬಸವನಹಳ್ಳಿ : ಅನುಸೂಚಿತ ಜಾತಿ(ಮಹಿಳೆ) ಹಿಂದುಳಿದ ‘ಅ’ವರ್ಗ(ಮಹಿಳೆ)
- ಚಟ್ನಿಹಳ್ಳಿ : ಅನುಸೂಚಿತ ಜಾತಿ(ಮಹಿಳೆ), ಹಿಂದುಳಿದ ‘ಅ’ವರ್ಗ(ಮಹಿಳೆ)
- ಬೆಳಗುತ್ತಿ : ಅನುಸೂಚಿತ ಪಂಗಡ(ಮಹಿಳೆ), ಸಾಮಾನ್ಯ
ಚನ್ನಗಿರಿ ತಾಲ್ಲೂಕು
ಒಟ್ಟು ಸ್ಥಾನಗಳು ಅನುಸೂಚಿತ ಜಾತಿ ಅನುಸೂಚಿತ ಪಂಗಡ ಹಿಂದುಳಿದ ವರ್ಗ ‘ಅ’ ಹಿಂದುಳಿದ ವರ್ಗ ‘ಬ’ ಸಾಮಾನ್ಯ ವರ್ಗ61(31) 12(6) 6(3) 10(5) 2(1) 31(16)
ಸಂಖ್ಯೆ | ಗ್ರಾಮ ಪಂಚಾಯಿತಿ ಹೆಸರು | ಅಧ್ಯಕ್ಷ | ಉಪಾಧ್ಯಕ್ಷ
- ಚಿರಡೋಣಿ : ಹಿಂದುಳಿದ ‘ಅ’ ವರ್ಗ, ಅನುಸೂಚಿತ ಪಂಗಡ(ಮಹಿಳೆ)
- ಹೊಸಕೆರೆ (ಬಸವಾಪಟ್ಟಣ): ಹಿಂದುಳಿದ ‘ಅ’ ವರ್ಗ, ಅನುಸೂಚಿತ ಜಾತಿ(ಮಹಿಳೆ)
- ಬುಳಸಾಗರ : ಹಿಂದುಳಿದ ‘ಅ’ ವರ್ಗ, ಸಾಮಾನ್ಯ(ಮಹಿಳೆ)
- ತಿಪ್ಪಾಗೊಂಡನಹಳ್ಳಿ : ಹಿಂದುಳಿದ ‘ಅ’ ವರ್ಗ, ಅನುಸೂಚಿತ ಜಾತಿ(ಮಹಿಳೆ)
- ವಡ್ನಾಳು : ಹಿಂದುಳಿದ ‘ಅ’ ವರ್ಗ, ಸಾಮಾನ್ಯ(ಮಹಿಳೆ)
- ಕಾರಿಗನೂರು : ಹಿಂದುಳಿದ ‘ಅ’ ವರ್ಗ(ಮಹಿಳೆ), ಸಾಮಾನ್ಯ
- ನವಿಲೇಹಾಳು : ಹಿಂದುಳಿದ ‘ಅ’ ವರ್ಗ(ಮಹಿಳೆ), ಅನುಸೂಚಿತ ಜಾತಿ
- ಕೊರಟಿಕೆರೆ : ಹಿಂದುಳಿದ ‘ಅ’ ವರ್ಗ(ಮಹಿಳೆ), ಸಾಮಾನ್ಯ
- ಕೊಂಡದಹಳ್ಳಿ : ಹಿಂದುಳಿದ ‘ಅ’ ವರ್ಗ(ಮಹಿಳೆ), ಸಾಮಾನ್ಯ
- ಹೊನ್ನೇಬಾಗಿ : ಹಿಂದುಳಿದ ‘ಅ’ ವರ್ಗ(ಮಹಿಳೆ), ಅನುಸೂಚಿತ ಪಂಗಡ
- ದೇವರಹಳ್ಳಿ : ಹಿಂದುಳಿದ ‘ಬ’ ವರ್ಗ, ಅನುಸೂಚಿತ ಜಾತಿ(ಮಹಿಳೆ)
- ಕೆರೆಬೆಳಚಿ : ಹಿಂದುಳಿದ ‘ಬ’ ವರ್ಗ , ಅನುಸೂಚಿತ ಜಾತಿ
- ಕತ್ತಲಗೆರೆ : ಸಾಮಾನ್ಯ , ಅನುಸೂಚಿತ ಪಂಗಡ(ಮಹಿಳೆ)
- ಬೆಳಲಗೆರೆ : ಸಾಮಾನ್ಯ , ಅನುಸೂಚಿತ ‘ಅ’ ವರ್ಗ(ಮಹಿಳೆ)
- ದಾಗಿನಕಟ್ಟೆ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಗುಡ್ಡದ ಕೋಮಾರನಹಳ್ಳಿ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕೊಗಲೂರು : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕಬ್ಬಳ : ಸಾಮಾನ್ಯ, ಅನುಸೂಚತ ಪಂಗಡ(ಮಹಿಳೆ)
- ಕಗತೂರು : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಸಿದ್ದನಮಠ : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಸಂತೇಬೆನ್ನೂರು : ಸಾಮಾನ್ಯ, ಅನುಸೂಚಿತ ಜಾತಿ(ಮಹಿಳೆ)
- ಚನ್ನೇಶಪುರ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಹರೋನಹಳ್ಳಿ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಮಲಹಾಳು : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಪಾಂಡೋಮಟ್ಟಿ : ಸಾಮಾನ್ಯ, ಅನುಸೂಚಿತ ‘ಬ’ ವರ್ಗ(ಮಹಿಳೆ)
- ಇಟ್ಟಗಿ : ಸಾಮಾನ್ಯ, ಸಾಮಾನ್ಯ(ಮಹಿಳೆ)
- ಕಂಸಾಗರ : ಸಾಮಾನ್ಯ, ಸಾಮಾನ್ಯ
- ಕೋಟೆಹಾಳ್ : ಸಾಮಾನ್ಯ(ಮಹಿಳೆ), ಅನುಸೂಚಿತ ‘ಅ’ವರ್ಗ(ಮಹಿಳೆ)
- ನಿಲೊಗಲ್ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ತ್ಯಾವಣಗಿ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಮೆದಿಕೆರೆ : ಸಾಮಾನ್ಯ(ಮಹಿಳೆ), ಸಾಮಾನ್ಯ
- ತಣಿಗೆರೆ : ಸಾಮಾನ್ಯ(ಮಹಿಳೆ), ಅನುಸೂಚಿತ ‘ಅ’ ವರ್ಗ
- ಕೆಂಪನಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ದೊಡ್ಡಬ್ಬಿಗೆರೆ : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
- ಅಗರಬನ್ನಿಹಟ್ಟಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಅಜ್ಜಿಹಳ್ಳಿ: ಸಾಮಾನ್ಯ(ಮಹಿಳೆ), ಅನುಸೂಚಿತ ‘ಬ’ ವರ್ಗ
- ಹೆಬ್ಬಳಗೆರೆ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಹಿರೆಮಳಲಿ : ಸಾಮಾನ್ಯ(ಮಹಿಳೆ), ಅನುಸೂಚಿತ ಜಾತಿ
- ಗರಗ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಲಿಂಗದಹಳ್ಳಿ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಹೊದಿಗೆರೆ : ಸಾಮಾನ್ಯ(ಮಹಿಳೆ), ಸಾಮಾನ್ಯ
- ಗೊಪ್ಪೇನಹಳ್ಳಿ : ಸಾಮಾನ್ಯ(ಮಹಿಳೆ), ಅನುಸೂಚಿತ ‘ಅ’ ವರ್ಗ
- ನೆಲ್ಲಿಹಂಕಲು : ಸಾಮಾನ್ಯ(ಮಹಿಳೆ), ಅನುಸೂಚಿತ ಪಂಗಡ
- ಕಣಿವೆಬಿಳಚಿ : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಸೋಮಲಾಪುರ : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಬೆಳ್ಳಿಗನೂಡು : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಕರೆಕಟ್ಟೆ : ಅನುಸೂಚಿತ ಜಾತಿ, ಅನುಸೂಚಿತ ‘ಅ’ ವರ್ಗ(ಮಹಿಳೆ)
- ಮುದಿಗೆರೆ : ಅನುಸೂಚಿತ ಜಾತಿ, ಅನುಸೂಚಿತ ‘ಅ’ ವರ್ಗ(ಮಹಿಳೆ)
- ದುರ್ವಿಗೆರೆ : ಅನುಸೂಚಿತ ಜಾತಿ, ಸಾಮಾನ್ಯ(ಮಹಿಳೆ)
- ಚಿಕ್ಕಗಂಗೂರು : ಅನುಸೂಚಿತ ಜಾತಿ(ಮಹಿಳೆ), ಅನುಸೂಚಿತ ‘ಅ’ ವರ್ಗ
- ನುಗ್ಗಿಹಳ್ಳಿ : ಅನುಸೂಚಿತ ಜಾತಿ(ಮಹಿಳೆ), ಅನುಸೂಚಿತ ‘ಅ’ ವರ್ಗ
- ಕಾಕನೂರು : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ಜೋಳದಾಳು : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ನಲ್ಲೂರು : ಅನುಸೂಚಿತ ಜಾತಿ(ಮಹಿಳೆ), ಅನುಸೂಚಿತ ‘ಅ’ ವರ್ಗ(ಮಹಿಳೆ)
- ಕಂಚಿಗನಾಳು : ಅನುಸೂಚಿತ ಜಾತಿ(ಮಹಿಳೆ), ಸಾಮಾನ್ಯ
- ನಲ್ಕುದುರೆ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ಮಲ್ಲಾಪುರ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ರುದ್ರಾಪುರ : ಅನುಸೂಚಿತ ಪಂಗಡ, ಸಾಮಾನ್ಯ(ಮಹಿಳೆ)
- ರಾಜಗೊಂಡನಹಳ್ಳಿ : ಅನುಸೂಚಿತ ಪಂಗಡ(ಮಹಿಳೆ), ಸಾಮಾನ್ಯ
- ಮರವಂಜಿ : ಅನುಸೂಚಿತ ಪಂಗಡ(ಮಹಿಳೆ), ಸಾಮಾನ್ಯ
- ತಾವರೆಕೆರೆ : ಅನುಸೂಚಿತ ಪಂಗಡ(ಮಹಿಳೆ), ಅನುಸೂಚಿತ ‘ಅ’ ವರ್ಗ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!
ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.
ನಡೆದಿದ್ದೇನು?
ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.
ಡೆತ್ ನೋಟ್ನಲ್ಲಿತ್ತು ಕೊನೆಯ ಆಸೆ
ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.
ತಮಿಳುನಾಡಿನಲ್ಲಿ ಅಂತ್ಯಕ್ರಿಯೆ
ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.
ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್; ಪ್ರವೇಶಾತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.
ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್ಗೆ ನೇರ ಪ್ರವೇಶಕ್ಕೆ https://khtigadag.ac.in/
ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿನದ ಸುದ್ದಿ
ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.
ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.
ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ. ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ5 days agoದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ
-
ದಿನದ ಸುದ್ದಿ6 days agoಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ
-
ದಿನದ ಸುದ್ದಿ2 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ದಿನದ ಸುದ್ದಿ6 days agoಸಂಶೋಧಕರಿಂದ ಪಶ್ಚಿಮ ಘಟ್ಟಗಳಲ್ಲಿ ಮೂರು ಅಣಬೆಯ ಹೊಸ ಶಿಲೀಂಧ್ರ ಜಾತಿಗಳ ಪತ್ತೆ
-
ಕ್ರೀಡೆ6 days agoಹಿರಿಯ ಕ್ರಿಕೆಟ್ ಪಟು ಎನ್ಆರ್ಎಚ್ ರಮೇಶ್ ನಿಧನ
-
ಅಂಕಣ1 day agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ1 day agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

