ದಿನದ ಸುದ್ದಿ

ಒಡಿಶಾದ ಸಿಎಂ ಆಗಿ ಬಿಜೆಪಿ ಹಿರಿಯ ನಾಯಕ ಮೋಹನ್ ಚರಣ್ ಮಾಂಝಿ ಪ್ರಮಾಣ ವಚನ

Published

on

ಸುದ್ದಿದಿನಡೆಸ್ಕ್: ಬಿಜೆಪಿ ಹಿರಿಯ ನಾಯಕ ಮೋಹನ್ ಚರಣ್ ಮಾಂಝಿ, ಒಡಿಶಾದ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಭೂಪೇಂದರ್ ಯಾದವ್ ಅವರ ಉಪಸ್ಥಿತಿಯಲ್ಲಿ ಭುವನೇಶ್ವರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ನಾಯಕನನ್ನು ಆಯ್ಕೆ ಮಾಡಲಾಯಿತು.

ಭುವನೇಶ್ವರದ ಜನತಾ ಮೈದಾನದಲ್ಲಿ ಇಂದು ನಡೆಯುವ ಸಮಾರಂಭದಲ್ಲಿ ರಾಜ್ಯದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಂಝಿ, ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಒಡಿಶಾ ರಾಜ್ಯಪಾಲರಾದ ರಘುಬರ್ ದಾಸ್ ಅವರು, ನೂತನ ಮುಖ್ಯಮಂತ್ರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. 147 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 78 ಸ್ಥಾನಗಳನ್ನು ಗೆದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ಬಹುಮತ ಗಳಿಸಿದೆ. ಮುಖ್ಯಮಂತ್ರಿ ನವೀನ್ ಪಟ್ನಾಯಕ್ ನೇತೃತ್ವದಲ್ಲಿ ಬಿಜು ಜನತಾ ದಳದ 24 ವರ್ಷಗಳ ಆಡಳಿತ ಈ ಮೂಲಕ ಕೊನೆಗೊಂಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version