ಕ್ರೀಡೆ
Olympic Games Paris 2024 | ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮೊದಲ ಪದಕ ; ಇಲ್ಲಿದೆ ಇಂದಿನ ಆಟಗಳ ಸಂಪೂರ್ಣ ಮಾಹಿತಿ

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನವಾದ ಇಂದು ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ಸ್ ಪಂದ್ಯದಲ್ಲಿ ಮನು ಭಾಕರ್ ಕಂಚು ಪದಕ ಗೆಲ್ಲುವ ಮೂಲಕ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ.
ಈ ಮೂಲಕ ಅವರು, ಒಲಿಂಪಿಕ್ಸ್ನ ಮಹಿಳೆಯರ ಶೂಟಿಂಗ್ ವಿಭಾಗದಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಫೈನಲ್ ಪಂದ್ಯದಲ್ಲಿ ಹೆಚ್ಚಿನ ಕಾಲ 2ನೇ ಸ್ಥಾನದಲ್ಲಿದ್ದು, ಬೆಳ್ಳಿ ಗೆಲ್ಲುವ ಸನಿಹದಲ್ಲಿದ್ದ ಅವರನ್ನು ಕೊನೆ ಕ್ಷಣದಲ್ಲಿ ಕೊರಿಯಾದ ಕಿಮ್ಯೆಜಿ ಹಿಂದಿಕ್ಕಿದರು. ಫೈನಲ್ಸ್ನಲ್ಲಿ ಮನುಬಾಕರ್ 221.7 ಅಂಕಗಳ ಮೂಲಕ ಕಂಚು ಪದಕ ಗೆದ್ದರೆ ದಕ್ಷಿಣ ಕೊರಿಯಾದ ಕಿಮ್ಯೆಜಿ 241.3 ಅಂಕಗಳ ಮೂಲಕ ಬೆಳ್ಳಿ ಹಾಗೂ ಅದೇ ರಾಷ್ಟ್ರದ ಒಹ್ ಯೆ ಜಿನ್, ದಾಖಲೆಯ 243.2 ಅಂಕಗಳ ಮೂಲಕ ಸ್ವರ್ಣ ಪದಕ ತಮ್ಮದಾಗಿಸಿಕೊಂಡರು. ಮನು ಭಾಕರ್ ಅವರ ಈ ಸಾಧನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಮನು ಭಾಕರ್ ಪಾತ್ರರಾಗಿದ್ದಾರೆ. ಅವರ ಈ ಸಾಧನೆಯ ಕುರಿತು ಭಾರತಕ್ಕೆ ಹೆಮ್ಮೆಯಿದ್ದು, ಅವರು ಅನೇಕ ಕ್ರೀಡಾಪಟುಗಳು ಹಾಗೂ ವಿಶೇಷವಾಗಿ ಮಹಿಳೆಯರಿಗೆ ಸ್ಫೂರ್ತಿದಾಯಕರಾಗಿದ್ದಾರೆ ಎಂದು ರಾಷ್ಟ್ರಪತಿಯವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮನು ಭಾಕರ್ ಸಾಧನೆಗೆ ಹರ್ಷ ವ್ಯಕ್ತಪಡಿಸಿದ್ದು, ಭಾರತಕ್ಕೆ ಇದು ಐತಿಹಾಸಿಕ ಪದಕವಾಗಿದೆ. ಮಹಿಳಾ ಶೂಟಿಂಗ್ನಲ್ಲಿ ಭಾರತಕ್ಕೆ ಮೊದಲ ಪದಕ ತಂಡುಕೊಟ್ಟಿರುವುದರಿAದ ಇದೊಂದು ಅಸಾಮಾನ್ಯ ಹಾಗೂ ವಿಶೇಷ ಸಾಧನೆಯಾಗಿದೆ ಎಂದು ತಿಳಿಸಿದ್ದಾರೆ.
ಇಂದು ನಡೆದ ಪುರುಷರ 10 ಮೀಟರ್ ಏರ್ ರೈಫಲ್ನಲ್ಲಿ ಭಾರತದ ಅರ್ಜುನ್ ಬಬೂಟ 630.1 ಅಂಕಗಳೊAದಿಗೆ 7ನೇ ಸ್ಥಾನಗಳಿಸಿ ಫೈನಲ್ ಪ್ರವೇಶಿಸಿದ್ದಾರೆ. ಹಾಗೆಯೇ ಮಹಿಳೆಯರ 10 ಮೀಟರ್ ಏರ್ ರೈಫಲ್ನಲ್ಲಿ ರಮಿತಾ ಜಿಂದಾಲ್ ಫೈನಲ್ ಪ್ರವೇಶಿಸಿದ್ದಾರೆ. ರಮಿತಾ ಜಿಂದಾಲ್, 631.5 ಅಂಕಗಳೊAದಿಗೆ 5ನೇ ಸ್ಥಾನ ಪಡೆದು ಫೈನಲ್ಗೆ ಅರ್ಹತೆ ಪಡೆದರು. ಮತ್ತೊರ್ವ ಮಹಿಳಾ ಶೂಟರ್ ಎಲವೆನಿಲ್ ವಲರಿವನ್ 630.7 ಅಂಕಗಳೊAದಿಗೆ 10ನೇ ಸ್ಥಾನ ಪಡೆದು ಫೈನಲ್ ಪ್ರವೇಶಿಸಲು ವಿಫಲರಾದರು.
ಇಂದು ನಡೆದ ಮಹಿಳೆಯರ ಬ್ಯಾಡ್ಮಿಂಟನ್ನ ಸಿಂಗಲ್ಸ್ ವಿಭಾಗದ ತಮ್ಮ ಮೊದಲ ಪಂದ್ಯದಲ್ಲಿ 2 ಒಲಿಂಪಿಕ್ ಪದಕ ವಿಜೇತೆ ಭಾರತದ ಪಿ.ವಿ. ಸಿಂಧೂ, ಮಾಲ್ಡೀವ್ಸ್ನ ಫಾತಿಮತ್ ನಬಾಹ ಅಬ್ದುಲ್ ರಜಾಕ್ ಅವರನ್ನು 21-9, 21-6 ಅಂಕಗಳ ಅಂತರದಲ್ಲಿ ಮಣಿಸಿ ಶುಭಾರಂಭ ಕಂಡಿದ್ದಾರೆ. ಟೆಬಲ್ ಟೆನಿಸ್ನ 64ರ ಸುತ್ತಿನಲ್ಲಿ ಭಾರತದ ಶ್ರೀಜಾ ಅಕುಲಾ, ಸ್ವೀಡನ್ನ ಕ್ರಿಸ್ಟಿನಾ ಕಾಲ್ಬರ್ಗ್ ವಿರುದ್ಧ ಗೆಲುವು ಸಾಧಿಸಿ ಮುಂದಿನ ಹಂತಕ್ಕೆ ಅರ್ಹತೆ ಪಡೆದರು.
ಮಹಿಳಾ ಬಿಲ್ಲುಗಾರಿಕೆಯಲ್ಲಿ ದೀಪಿಕಾ ಕುಮಾರಿ, ಅಂಕಿತಾ ಭಕತ್ ಹಾಗೂ ಭಜನ್ ಕೌರ್ ಈ ಮೂವರನ್ನೊಳಗೊಂಡ ಭಾರತೀಯ ತಂಡ ಕ್ವಾಟರ್ ಫೈನಲ್ನಲ್ಲಿ ನೆದರ್ಲ್ಯಾಂಡ್ ತಂಡದ ವಿರುದ್ಧ 0-6 ಅಂಕಗಳಿಂದ ಪರಾಭವಗೊಂಡಿದೆ. ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಎಚ್.ಎಸ್. ಪ್ರಣೋಯ್, ಜರ್ಮನಿಯ ಫೇಬಿಯನ್ ರೋತ್ ವಿರುದ್ಧ ಹೋರಾಟ ನಡೆಸಲಿದ್ದಾರೆ.
ಪುರುಷರ ಡಬಲ್ಸ್ ವಿಭಾಗದ ಮೊದಲ ಸುತ್ತಿನಲ್ಲಿ ಭಾರತದ ಅನುಭವಿ ಆಟಗಾರರಾದ ರೋಹನ್ ಬೋಪಣ್ಣ ಹಾಗೂ ಶ್ರೀರಾಂ ಬಾಲಾಜಿ ಜೋಡಿ ಫ್ರಾನ್ಸ್ನ ಗೇಲ್ ಮೋನ್ಫಿಲ್ಸ್ ಮತ್ತು ಎಡ್ವರ್ಡ್ ರೋಜರ್ ವ್ಯಾಸೆಲಿನ್ ಜೋಡಿ ವಿರುದ್ಧ ಸೆಣಸಲಿದೆ. ಪ್ಯಾರಿಸ್ ಒಲಿಂಪಿಕ್ಸ್ನ ಟೇಬಲ್ ಟಿನ್ನಿಸ್ ಪಂದ್ಯದ ಮಹಿಳಾ ಸಿಂಗಲ್ಸ್ನಲ್ಲಿ ಭಾರತದ ಶ್ರೀಜಾ ಅಕುಲಾ ಹಾಗೂ ಮಹಿಳಾ ಬಾಕ್ಸಿಂಗ್ನ 50 ಕೆಜಿ ವಿಭಾಗದಲ್ಲಿ ನಿಕತ್ ಝರೀನ್ ಮುಂದಿನ ಸುತ್ತಿಗೆ ಪ್ರವೇಶ ಪಡೆದಿದ್ದಾರೆ.
https://x.com/siddaramaiah/status/1817536595970650154?t=otcDD00kQUBeN84H7DvrEA&s=19
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ

ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.
ನಿನ್ನೆ ರಾತ್ರಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.
ಅಸಾಧಾರಣ ಬೌಲಿಂಗ್ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.
ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ
17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.
ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ

ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.
ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಶಿಪ್ ಅವಕಾಶ : ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರೆಣೆ
-
ದಿನದ ಸುದ್ದಿ16 hours ago
500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ
-
ದಿನದ ಸುದ್ದಿ2 days ago
ಪಿಹೆಚ್ಡಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರಿಗೆ ವಿದ್ಯಾರ್ಥಿವೇತನ : ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್
-
ದಿನದ ಸುದ್ದಿ17 hours ago
ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ
-
ದಿನದ ಸುದ್ದಿ1 day ago
ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ1 day ago
ಉದ್ಯೋಗ | ಜುಲೈ 15 ರಂದದು ನೇರ ಸಂದರ್ಶನ