Connect with us

ದಿನದ ಸುದ್ದಿ

ಕವಿತೆ | ಒಂದು ಕಪ್ ಕಾಫಿ

Published

on

  • ಲಕ್ಕೂರು ಆನಂದ್

ಕೊನೆಯ ಸಾರಿ
ನನ್ನ ಜೊತೆ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ನಾನು ತಪ್ಪು ಮಾಡಿದೆನೊ,
ನೀನು ತಪ್ಪು ಮಾಡಿದೆಯೊ,
ಬಿಟ್ಟು ಬಿಡೋಣ:

ಕೊನೆಯ ಸಾರಿ
ನನ್ನ ಜೊತೆ ಒಂದೇ ಒಂದು ಕಪ್ ಕಾಫಿ ಕುಡಿಯುತ್ತೀಯಾ?
ಈ ಗಳಿಗೆಯನ್ನು ಚಿರಸ್ಮರಣೀಯ ಮಾಡುತ್ತೇನೆ

ಯಾರಿಗೆ ಗೊತ್ತು?
ಅದು ಇಲ್ಲೇ ತಿರುವು ಪಡೆಯಬಹುದು !
ಇಲ್ಲ ನಾವಿಬ್ಬರು ಬೇರೆಯಾಗಬಹುದು!
ಯಾರು ಊಹಿಸಿರುತ್ತಾರೆ?
ನಾನೊಂದು ಹೇಳುವುದು
ನೀನೊಂದು ಹೇಳುವುದು
ಮಾತುಗಳೆಂಬ ಟಗರುಗಳು ಗುದ್ದಾಡುತ್ತಿವೆ
ನಮಗಿರುವ ಎಲ್ಲಾ ಮಾತಿನ ದಾರಿಗಳಲ್ಲೂ
ದುಃಖ ಹೆಪ್ಪುಗಟ್ಟಿ ಕುಳಿತುಬಿಟ್ಟಿದೆ
ಯಾರಿಗೆ ಗೊತ್ತು
ನಮ್ಮೆದುರಿಗೆ ವಿಶಾಲ ವನಗಳಿರಬಹುದು,
ದ್ರಾಕ್ಷಿ ಹಣ್ಣುಗಳು ಭಾರ ತಡೆಯಲಾರದೆ,
ನೆಲಕ್ಕೆ ಬಾಗಿದ ಮೋಡಗಳಾಗಬಹುದು.
ಅಪರೂಪದ ನದಿಗಳೂ ಕೂಡ ನಮ್ಮ ಸುತ್ತ ಪರಿಭ್ರಮಿಸಬಹುದು,
ಆದರೆ ಏನು ಲಾಭ?
ನಮ್ಮಿಬ್ಬರಿಗೂ ದಾಹವಾಗುತ್ತಿಲ್ಲಾ…

ಇಬ್ಬರ ಗುಂಡಿಗೆಯ ಮೂಲೆಯಲ್ಲೂ
ಸಣ್ಣ ಕೊಂಬೆಯೊಂದು ಮುರಿದು ಬೀಳುವ ಶಬ್ದ
ದುಃಖದ ಹನಿಗಳು ಸುರಿಯುತ್ತಿರುವ ಶಬ್ದ
ಅವರವರದು ಅವರವರಿಗೆ ಹೊರಲಾರದ ಭಾರವಾಗುತ್ತಿದೆ
ದ್ವೇಷವಿಲ್ಲ,
ಅಸೂಯೆಯಿಲ್ಲ, ಕೋಪವಿಲ್ಲ;
ಅಲ್ಲಿರುವುದು ಬರೀ ಪ್ರೀತಿಯೇ
ಆದರೂ ಕರುಣೆಯೆಂಬುದು ಇಷ್ಟೊಂದು ಕ್ರೂರವಾಗಿರುತ್ತಾ?
ಈಗಲೂ ಕೂಡಾ
ನಿನ್ನ ಕಣ್ಣಲ್ಲೊಂದು ದಯೆ ಕದಲಾಡುತ್ತಿದೆ
ಅದು ನಿನಗೂ ನನಗೂ ಕೂಡಾ ಅರ್ಥವಾಗುತ್ತಿಲ್ಲ
ಹತಾಶೆಯ ಪೊರೆ ಕಣ್ಣಿಂದ ಕಳಚುವವರೆಗೆ
ನಾವಿಬ್ಬರೂ ಕಾಯಬೇಕಷ್ಟೆ!

ನನ್ನ ಕಣ್ಣಿಗೀಗ ನೀನು ಎಟುಕುತ್ತಿಲ್ಲ
ನಿನ್ನ ಕಣ್ಣಿಗೀಗ ನಾನೂ ಎಟುಕುತ್ತಿಲ್ಲ.
ಈ ಹಿಂದಿನ ಕನಸುಗಳೆಲ್ಲಾ ಇಬ್ಬರಲ್ಲೂ
ಕರಗಿಹೋಗಿವೆ
ರೆಕ್ಕೆಮುರಿದ ಹಕ್ಕಿಗಳೆರೆಡು
ತಲಾ ಒಬೊಬ್ಬರ ತಲೆಯ ಮೇಲೆ ಬಂದು ಕೂತು ಬಿಟ್ಟಿವೆ.
ಬಹುಶಃ ಇದು ಕೊನೆಯ ಸಾರಿಯ ಭೇಟಿಯಾಗಬಹುದು!
ನಾವಿಬ್ಬರು ಇಷ್ಟು ಹತ್ತಿರದಲ್ಲಿ ಕಾಫಿ ಕುಡಿಯುವುದು?
ನೆನ್ನೆಗಳೆಲ್ಲಾ ಇಂದು ದೀರ್ಘ ನಿಟ್ಟುಸಿರುಗಳಾಗುತ್ತಿವೆ
ನಿನ್ನೊಳಗೆ ಕದಲಾಡುತ್ತಿರುವ ಗೊಂದಲವೊಂದು
ಮೆತ್ತಗೆ ನನ್ನನ್ನು ತಾಕುತ್ತಿದೆ
ನಾವಿಬ್ಬರು ಇಷ್ಟು ನಿಶಬ್ದವಾಗಿ ಕಾಫಿ ಕುಡಿಯಬೇಕಾ?

ಶವಯಾತ್ರೆಯೂ ಕೂಡಾ
ಇಷ್ಟು ನಿಶಬ್ದವಾಗಿರುವುದಿಲ್ಲ!
ಇದು ನಮ್ಮಿಬ್ಬರ ಕೊನೆಯ ಭೇಟಿ
ಕೊನೆಯ ಸಾರಿಯ ನೆನಪಿಗೆ ತಲಾ ಒಂದೊಂದು ಕಾಫಿ ಕಫ್,
ಈ ಹಿಂದೆ ಇವೇ ಒನ್ ಬೈ ಟೂಗಳು,
ಅವೇ ಈಗ ಎರಡು ಅನಾಮಿಕ ಕಾಫೀ ಕಪ್‌ಗಳು
ಈ ಕಾಫಿ ಕಪ್‌ನೊಳಗೆ ಇಣುಕಿ ನೋಡಿದರೆ
ನೆನ್ನೆಯೆಂಬ ಚೂರು,
ನಮ್ಮಿಬ್ಬರ ಪರಿಚಯಗಳು
ಎರಡು ಬೇರೆ ಬೇರೆ ಬೊಂಬೆಗಳಂತೆ ಕಚ್ಚಾಡುತ್ತಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಇಬ್ಬರು ಶಿಕ್ಷಕರ ಬಂಧನ

Published

on

ಸುದ್ದಿದಿನಡೆಸ್ಕ್:ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆಯ ಮೇರೆಗೆ ಸಂಜಯ್ ತುಕಾರಾಂ ಜಾಧವ್ ಮತ್ತು ಜಲೀಲ್ ಉಮರ್ ಖಾನ್ ಪಠಾಣ್ ಅವರನ್ನು ಮಹಾರಾಷ್ಟ್ರದ ನಾಂದೇಡ್ ಭಯೋತ್ಪಾದನಾ ನಿಗ್ರಹ ದಳ-ಎಟಿಎಸ್ ಬಂಧಿಸಿದೆ.

ಬಂಧಿತರಿಬ್ಬರೂ ಜಿಲ್ಲಾ ಪರಿಷತ್ ಶಾಲೆಗಳಲ್ಲಿ ಶಿಕ್ಷಕರಾಗಿದ್ದು, ಲಾತೂರ್‌ನಲ್ಲಿ ಖಾಸಗಿ ಕೋಚಿಂಗ್ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ ಎಂದು ತನಿಖಾ ಸಂಸ್ಥೆ ಮೂಲಗಳು ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಯುವ ನಿಧಿ ಯೋಜನೆ ; ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

Published

on

ಸುದ್ದಿದಿನಡೆಸ್ಕ್:ಯುವ ನಿಧಿ ಯೋಜನೆ ಅಡಿ, ನಿರುದ್ಯೋಗ ಭತ್ಯೆ ಪಡೆಯುತ್ತಿರುವ, ಉದ್ಯೋಗಾಕಾಂಕ್ಷಿ ಯುವಜನತೆ, ಪ್ರತಿ ತಿಂಗಳು 25 ನೇ ತಾರೀಖಿನೊಳಗೆ, ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಿತ ಪ್ರಮಾಣ ಪತ್ರ ಸಲ್ಲಿಸಲು, ಆಯಾ ಜಿಲ್ಲೆಗಳ ಉದ್ಯೋಗಾಧಿಕಾರಿಗಳು ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಮಹಿಳಾ ಏಕದಿನ ಕ್ರಿಕೆಟ್ : ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಸರಣಿ ಗೆಲುವು

Published

on

ಸುದ್ದಿದಿನಡೆಸ್ಕ್:ದಕ್ಷಿಣ ಆಫ್ರಿಕಾ ಮಹಿಳೆಯರ ವಿರುದ್ಧ ನಡೆದ ಮೂರನೇ ಹಾಗೂ ಕೊನೆಯ ಏಕದಿನ ಕ್ರಿಕೆಟ್ ಪಂದ್ಯವನ್ನು 6 ವಿಕೆಟ್‌ಗಳಿಂದ ಗೆಲ್ಲುವ ಮೂಲಕ ಭಾರತದ ಮಹಿಳೆಯರು ಸರಣಿಯನ್ನು 3-0 ಅಂತರದಿಂದ ತಮ್ಮದಾಗಿಸಿಕೊಂಡಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಗೆ ಆತಿಥ್ಯ ವಹಿಸಿದ್ದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತದ ಮಹಿಳೆಯರು ತಮ್ಮ ಶಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದರು. ಸತತ ಮೂರು ಪಂದ್ಯಗಳಲ್ಲಿ ಪಾರಮ್ಯ ಮೆರೆಯುವ ಮೂಲಕ ತಾಯ್ನಾಡಿನಲ್ಲಿ ತಾವು ಎಷ್ಟು ಬಲವಂತರು ಎಂಬುದನ್ನು ಸಾಬೀತು ಮಾಡಿದರು.

ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವನಿತೆಯರಿಗೆ ಇನ್ನಿಲ್ಲದಂತೆ ಕಾಡಿದ್ದು, ಭಾರತ ತಂಡದ ಹಿರಿಯ ಬ್ಯಾಟರ್ ಸ್ಮೃತಿ ಮಂಧಾನ. ಮೊದಲೆರಡು ಪಂದ್ಯಗಳಲ್ಲಿ ಸತತ ಶತಕ ಬಾರಿಸಿದರು. ಮೂರನೇ ಪಂದ್ಯದಲ್ಲಿ ಶತಕದ ಅಂಚಿಗೆ ಬಂದು ಮೂರನೇ ಶತಕದಿಂದ ತಪ್ಪಿಸಿಕೊಂಡರು. ಮೊದಲ ಪಂದ್ಯದಲ್ಲಿ 117, ಎರಡನೇ ಪಂದ್ಯದಲ್ಲಿ 136 ರನ್ ಗಳಿಸಿದ್ದರು. ಮೂರನೇ ಪಂದ್ಯದಲ್ಲಿ ಭಾರತ ವನಿತೆಯರು ಪ್ರಯಾಸವಿಲ್ಲದೇ ಗೆಲುವು ಸಾಧಿಸಿದರು.

ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ವನಿತೆಯರು 50 ಓವರ್‌ಗಳಲ್ಲಿ 8 ವಿಕೆಟ್‌ಗೆ 215 ರನ್ ಗುರಿ ನೀಡಿದರು. ಭಾರತ 40.4 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ಗಳಿಗೆ 220 ರನ್ ಗಳಿಸಿತು. ಕೊನೆಯ ಪಂದ್ಯದಲ್ಲಿ ಸ್ಮೃತಿ ಮಂಧಾನ 83 ಎಸೆತಗಳಲ್ಲಿ 11 ಬೌಂಡರಿಗಳ ಸಮೇತ 90 ರನ್ ಗಳಿಸಿದರು. ಶೆಫಾಲಿ ವರ್ಮಾ 25, ಪ್ರಿಯಾ ಪೂನಿಯಾ 28, ನಾಯಕಿ ಹರ್ಮನ್‌ಪ್ರೀತ್ ಕೌರ್ 42 ಗಳಿಸಿದರು. ಕೊನೆಯಲ್ಲಿ ಜೆಮಿಮಾ ರೋಡ್ರಿಗಸ್ 19, ರಿಚಾ ಘೋಷ್ 6 ರನ್ ಗಳಿಸಿ ಗೆಲುವಿನ ಶಾಸ್ತ್ರ ಮುಗಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending