Connect with us

ದಿನದ ಸುದ್ದಿ

ಭಾರತದ ಏಕತಾ ಮೂರ್ತಿ; ಒಂದು ಲಕ್ಷ ಮಂದಿ ವೀಕ್ಷಣೆ, 2.1 ಕೋಟಿ ರೂ. ಸಂಗ್ರಹ

Published

on

ಸುದ್ದಿದಿನ ದೆಹಲಿ: ಒಡೆದು ಹೋಗುತ್ತಿದ್ದ ಅಖಂಡ ಭಾರತವನ್ನು ಏಕೀಕರಣಗೊಳಿಸಿದ ಮಹಾನ್ ಚೇತನ ಸರ್ದಾರ್ ವಲ್ಲಭಭಾಯ್ ಪಟೇಲ್ ಕಾರ್ಯ ಸ್ಮರಣಾರ್ಥ ನಿರ್ಮಿಸಿದ ಅವರ ಏಕತಾ ಮೂರ್ತಿ ವಾರದಲ್ಲಿ ಎಷ್ಟು ಜನರು ನೋಡಿದ್ದಾರೆಂದರೆ ನೀವು ಅಚ್ಚರಿ ಪಡುತ್ತೀರಿ. ಏಕತಾ ಮೂರ್ತಿಯಿಂದ ಭಾರತದ ಹಿರಿಮೆ ವಿಶ್ವದಲ್ಲಿ ಮತ್ತಷ್ಟು ಹೆಚ್ಚಾಗುತ್ತಿದ್ದು, ಏಕತಾ ಮೂರ್ತಿ ನೋಡಲು ದೇಶ, ವಿದೇಶದಿಂದ ಸಾಗರೋಪಾದಿಯಲ್ಲಿ ಜನರು ಆಗಮಿಸುತ್ತಿದ್ದಾರೆ.

ಗುಜರಾತಿನ ನರ್ಮದಾ ಜಿಲ್ಲೆಯ ಸರ್ದಾರ್ ಸರೋವರ ಅಣೆಕಟ್ಟಿನ ಬಳಿ ನಿರ್ಮಿಸಿರುವ ಜಗತ್ತಿನ ಅತಿ ಎತ್ತರ 182 ಮೀಟರ್ ಎತ್ತರದ ಸರ್ದಾರ್ ವಲ್ಲಭಭಾಯ್ ಪಟೇಲರ ಏಕತಾ ಮೂರ್ತಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲೋಕಾರ್ಪಣೆ ಮಾಡಿದ್ದರು. ಅಕ್ಟೋಬರ್ 31ರಂದು ಲೋಕಾರ್ಪಣೆ ಗೊಂಡಿದ್ದ ಏಕತಾ ಮೂರ್ತಿ ಸಾರ್ವಜನಿಕವ ವೀಕ್ಷಣೆಗೆ ನವೆಂಬರ್ ಒಂದರಂದು ತೆರೆಯಲಾಯಿತು. ಶನಿವಾರದಂದು ಅಂದಾಜು 27,000ಕ್ಕೂ ಅಧಿಕ ಜನರು ವೀಕ್ಷಣೆ ಮಾಡಿದ್ದಾರೆ. ಕಳೆದ ಹತ್ತು ದಿನದಲ್ಲಿ ಅಂದಾಜು ಒಂದು ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡಿದ್ದು, 2.1 ಕೋಟಿ ರೂ. ಸಂಗ್ರಹಗೊಂಡಿದೆ.

ಪ್ರಧಾನಿ  ನರೇಂದ್ರ ಮೋದಿ ನಿರ್ಮಿಸಿರುವ ಏಕತಾ ಮೂರ್ತಿ ಹಲವು ವಿಶೇಷಗಳಿಂದ ಕೂಡಿದೆ.

  • 182 ಮೀಟರ್ ಎತ್ತರ
  • ಸ್ಟ್ಯಾಚ್ಯು ಒಳಗೆ ಹೈಸ್ಪೀಡ್ ಲಿಫ್ಟ್
  • ಸರ್ದಾರ್ ವಲ್ಲಭಭಾಯ್ ಪಟೇಲ್ ಜೀವನ ಚರಿತ್ರೆ ಮ್ಯೂಸಿಯಂ
  • ಗ್ಯಾಲರಿ ಒಳಗೆ ಒಂದೇ ದಿನಕ್ಕೆ 5,000 ಪ್ರವೇಶ ಅವಕಾಶ
  • ಸ್ಟ್ಯಾಚ್ಯು ಒಳಗೆ 135 ಮೀಟರ್ ಎತ್ತರದಲ್ಲಿ ವ್ಯೂವರ್ಸ್ ಗ್ಯಾಲರಿ
  • ವ್ಯೂವರ್ಸ್ ಗ್ಯಾಲರಿಗೆ ಪ್ರತಿ ಸಲ 200 ಜನರಿಗೆ ಪ್ರವೇಶ
  • ಪ್ರತಿ ಸೋಮವಾರ ರಜೆ ಇರುತ್ತದೆ
  • ವಯಸ್ಕರರಿಗೆ 350, ಮಕ್ಕಳಿಗೆ (3-15 ವರ್ಷದೊಳಗಿನ) 200 ಶುಲ್ಕ

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending