Connect with us

ದಿನದ ಸುದ್ದಿ

ವಿದ್ಯಾರ್ಥಿಗಳಿಗೆ ಆನ್ಲೈನ್ ಪಾಠ ಸೂಕ್ತವಲ್ಲ

Published

on

ಕೊರೊನಾದಿಂದ ಎಲ್ಲವುದಕ್ಕೂ ತೊಂದರೆ ಯಾಗಿರುವುದು ನಮಗೆಲ್ಲ ತಿಳಿದಿರುವ ವಿಷಯ ಹಾಗೆಯೇ ಶಿಕ್ಷಣ ವಲಯಕ್ಕೆ ಇದರಿಂದ ತೊಂದರೆ ಉಂಟಾಗಿದೆ. ಇದಕ್ಕೆ ಶಿಕ್ಷಣ ಸಂಸ್ಥೆಯು ಆನ್ಲೈನ್ ಮೂಲಕ ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡಲು ಆರಂಭಿಸಿದ್ದಾರೆ ಆದರೆ ಇದು ಸರಿಯಾದ ನಿರ್ಧಾರ ಅಲ್ಲ ಏಕೆಂದರೆ ಅನೇಕ ಮಕ್ಕಳಿಗೆ ಆನ್ಲೈನ್ ಪಾಠವು ಅರ್ಥವಾಗುತ್ತಿಲ್ಲ.

ಇನ್ನೂ ಕೆಲವರಿಗೆ ತಂತ್ರಜ್ಞಾನದ ಕೊರತೆಯಿಂದ ಮತ್ತು ಇಂಟರ್ನೆಟ್ ಕೊರತೆಯಿಂದ ಪಾಠವು ಅರ್ಥವಾಗದೇ ವಿದ್ಯಾರ್ಥಿಗಳು ಕಷ್ಟಪಡುತ್ತಿದ್ದಾರೆ. ಇನ್ನು ಆನ್ಲೈನ್ ಮೂಲಕ ಪಾಠವು ನಿರಂತರವಾಗಿ ಕೇಳಿದರೆ ವಿದ್ಯಾರ್ಥಿಗಳ ಆರೋಗ್ಯಕ್ಕೆ ಪರಿಣಾಮ ಇರುವುದು ಎನ್ನುತ್ತಾರೆ ಕೆಲವು ವೈದ್ಯರು.

ಸರ್ಕಾರವು ಮೊದಲು ಮಕ್ಕಳಿಗೆ ಪಾಠ ಅರ್ಥವಾಗಿದೆ ಅಥವಾ ಇಲ್ಲವಾ ಎಂದು ಪರಿಗಣಿಸಿ ನಂತರ ಪರೀಕ್ಷೆಯನ್ನು ಯಾವಾಗ ಮಾಡಬೇಕು ಎನ್ನುವ ನಿರ್ಧಾರವನ್ನು ಕೈಗೆತ್ತಿಕೊಳ್ಳಬೇಕು. ಇದರಲ್ಲಿ ಲಕ್ಷಾಂತರ ಮಕ್ಕಳ ಭವಿಷ್ಯ ವಿರುವುದರಿಂದ ಎಲ್ಲಾ ರೀತಿಯ ಪರಿಣಾಮವನ್ನು ಯೋಚಿಸಿ ನಂತರ ಕ್ರಮ ಕೈಗೊಳ್ಳಬೇಕು.

ಆನ್ಲೈನಲ್ಲಿ ಪಾಠ ಮಾಡಿರುವುದರಿಂದ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಪರೀಕ್ಷೆಯನ್ನು ಸಹ ಮಾಡಿ ಎಂದು ಹೇಳುತ್ತಿದ್ದಾರೆ ಇದರ ಬಗ್ಗೆಯೂ ಕೂಡ ಸರ್ಕಾರ ಯೋಚಿಸಬೇಕು. ಕೆಲವು ವಿದ್ಯಾರ್ಥಿಗಳು ಕಾಲೇಜಿಗೆ ಫೀಸ್ ಅನ್ನು ಕಟ್ಟಿ ಮತ್ತು ಆನ್ಲೈನ್ ಅಲ್ಲಿ ನಡೆಯುವ ಪಾಠಕ್ಕೆ ತಮ್ಮ ಕೈಯಿಂದಲೇ ಇಂಟರ್ನೆಟ್ನ ವ್ಯವಸ್ಥೆಯನ್ನು ಮಾಡಿಕೊಂಡು ಕಷ್ಟಪಡುತ್ತಿದ್ದಾರೆ ಆದ್ದರಿಂದ ಅವರು ತಮ್ಮ ಕಾಲೇಜು ಫೀಸ್ ಅನ್ನು ನಮಗೆ ವಾಪಸ್ ಕೊಡಿ ಎಂದು ಹೇಳುತ್ತಿದ್ದಾರೆ.

ಆದುದರಿಂದ ಸರ್ಕಾರ ವಿದ್ಯಾರ್ಥಿಗಳಿಗೆ ಇಂಟರ್ನೆಟ್ ವ್ಯವಸ್ಥೆಯ ನ್ನಾದರೂ ಉಚಿತವಾಗಿ ಮಾಡಿಕೊಡಬೇಕಾಗಿದೆ. ಶಿಕ್ಷಣ ಇಲಾಖೆಯು ಇದನ್ನು ಗಮನಿಸಿ ಒಂದು ಸೂಕ್ತವಾದ ವ್ಯವಸ್ಥೆಯನ್ನು ಮಾಡಬೇಕಾಗಿದೆ. ಇದರ ಜೊತೆ ಬಹುಮುಖ್ಯವಾಗಿ ಆನ್ಲೈನ್ ಪಾಠವು ಎಲ್ಲರಿಗೂ ಸಿಗುತ್ತಿಲ್ಲ. ಹಳ್ಳಿಯಲ್ಲಿರುವ ಅನೇಕ ಬಡ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಸಮಸ್ಯೆಯಿಂದ ಅಥವಾ ಇಂಟರ್ನೆಟ್ ವ್ಯವಸ್ಥೆ ಇಲ್ಲದ ಕಾರಣದಿಂದ ಅವರಿಗೆ ಆನ್ಲೈನ್ ಪಾಠವು ಸಿಗುತ್ತಿಲ್ಲ. ಇನ್ನು ಪುಟಾಣಿ ವಿದ್ಯಾರ್ಥಿಗಳಿಗೆ ಆನ್ಲೈನ್ ಪಾಠವು ಸೂಕ್ತವಲ್ಲ ಇದರ ಬಗ್ಗೆಯೂ ಸಹ ಶಿಕ್ಷಣ ಇಲಾಖೆಯು ಸ್ವಲ್ಪ ಯೋಚಿಸಬೇಕು ಮತ್ತು ಆದಷ್ಟು ಬೇಗ ಎಲ್ಲವುದಕ್ಕೂ ಕ್ರಮ ಕೈಗೊಳ್ಳಬೇಕು ಎಂದು ನನ್ನ ಅಭಿಪ್ರಾಯ.

-ದಿವ್ಯಶ್ರೀ. ವಿ
ಬೆಂಗಳೂರು

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending