ದಿನದ ಸುದ್ದಿ
ಈ ಆನ್ ಲೈನ್ ಶಿಕ್ಷಣ ಇನ್ನೆಷ್ಟು ಮಕ್ಕಳನ್ನು ಬಲಿ ತೆಗೆದುಕೊಳ್ಳಬೇಕೋ..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2020/11/online-education_student-death_suddidina.jpg&description=ಈ ಆನ್ ಲೈನ್ ಶಿಕ್ಷಣ ಇನ್ನೆಷ್ಟು ಮಕ್ಕಳನ್ನು ಬಲಿ ತೆಗೆದುಕೊಳ್ಳಬೇಕೋ..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2020/11/online-education_student-death_suddidina.jpg&description=ಈ ಆನ್ ಲೈನ್ ಶಿಕ್ಷಣ ಇನ್ನೆಷ್ಟು ಮಕ್ಕಳನ್ನು ಬಲಿ ತೆಗೆದುಕೊಳ್ಳಬೇಕೋ..!', 'pinterestShare', 'width=750,height=350'); return false;" title="Pin This Post">
- ಪಂಜು ಗಂಗೊಳ್ಳಿ
ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾದ್ ನಗರ್ ದ ಮೋಟಾರ್ ಸೈಕಲ್ ಮೆಕಾನಿಕ್ ಶ್ರೀನಿವಾಸ್ ರೆಡ್ಡಿ ಮಾರ್ಚ್ ತಿಂಗಳಲ್ಲಿ ತನ್ನ ಸ್ವಂತದ ರಿಪೇರಿ ಅಂಗಡಿಯನ್ನು ತೆರೆದಿದ್ದರು. ಕೆಲವೇ ದಿನಗಳಲ್ಲಿ ಲಾಕ್ ಡೌನ್ ಹೇರಲ್ಪಟ್ಟು ಅಂಗಡಿಯನ್ನು ಮುಚ್ಚಿ ಮನೆಯಲ್ಲಿರಬೇಕಾಯಿತು.
ಕಲಿಕೆಯಲ್ಲಿ ಬಹಳ ಜಾಣೆಯಾಗಿರುವ ಅವರ ಹಿರಿ ಮಗಳು ಐಶ್ವರ್ಯಾ ರೆಡ್ಡಿ 12 ನೇ ತರಗತಿಯಲ್ಲಿ97% ಮಾರ್ಕ್ ಪಡೆದು ದೆಹಲಿಯ ಪ್ರತಿಷ್ಠಿತ ಲೇಡಿ ಶ್ರೀರಾಮ್ ಮಹಿಳಾ ಕಾಲೇಜಿನಲ್ಲಿ ಪ್ರವೇಶ ಸಿಕ್ಕಾಗ ಶ್ರೀನಿವಾಸ್ ತಮ್ಮ ಮನೆಯ ಮೇಲೆ 2 ಲಕ್ಷ ರುಪಾಯಿ ಸಾಲ ಎತ್ತಿ ಅವಳನ್ನು ಅಲ್ಲಿ ಸೇರಿಸಿದ್ದರು. ಅದು ಸಾಲದೆ ಒಡವೆಗಳನ್ನು ಅಡವಿಟ್ಟು 7 ನೇ ತರಗತಿಯಲ್ಲಿ ಕಲಿಯುತ್ತಿದ್ದ ಎರಡನೇ ಮಗಳು ವೈಷ್ಣವಿಯ ಶಿಕ್ಷಣವನ್ನು ನಿಲ್ಲಿಸಿದ್ದರು.
ದೆಹಲಿಯಲ್ಲಿ ಕಾಲೇಜಿನ ಹಾಸ್ಟೇಲಿನಲ್ಲಿದ್ದು ಎರಡನೇ ವರ್ಷದ ಬಿಎಸ್ಸಿ ಮ್ಯಾಥಮ್ಯಾಟಿಕ್ಸ್ ಮಾಡುತ್ತಿದ್ದ ಐಶ್ವರ್ಯಾ ಫೆಭ್ರವರಿಯಲ್ಲಿ ತೆಲಂಗಾಣಕ್ಕೆ ಬಂದ ಕೆಲವು ವಾರಗಳಲ್ಲಿ ಹೇರಲ್ಪಟ್ಟ ಲಾಕ್ ಡೌನ್ ಕಾರಣ ಮೊಬೈಲ್ ಫೋನ್ ಮೂಲಕ ಆನ್ ಲೈನ್ ಕಲಿಕೆ ಮಾಡುತ್ತಿದ್ದಳು.
ಲಾಕ್ ಡೌನ್ ಸಡಿಲಿಸಲ್ಪಟ್ಟು ಶ್ರೀನಿವಾಸ್ ರಿಪೇರಿ ಅಂಗಡಿಯನ್ನು ಪುನಃ ತೆರೆದರೂ ಸಂಪಾದನೆ ಚೆನ್ನಾಗಿರಲಿಲ್ಲ. ಅಕ್ಟೋಬರ್ ತಿಂಗಳಲ್ಲಿ ಐಶ್ವರ್ಯಾ ತನಗೆ ಮೊಬೈಲ್ ಫೋನಲ್ಲಿ ಆನ್ ಲೈನ್ ಕ್ಲಾಸ್ ಕಷ್ಟವಾಗುತ್ತಿದೆ ಒಂದು ಸೆಕೆಂಡ್ ಹ್ಯಾಂಡ್ ಲ್ಯಾಪ್ ಟಾಪ್ ಆದರೂ ಖರೀದಿಸಬಹುದೇ ಎಂದು ಕೇಳಿದಳು. ಇತ್ತ ಸಂಪಾದನೆಯೂ ಇಲ್ಲದೆ ಅತ್ತ ಮನೆ ಮೇಲಿನ ಸಾಲದ ಕಂತು ಕಟ್ಟುತ್ತಿರುವ ಶ್ರೀನಿವಾಸ್ ಕೆಲವು ದಿನ ತಡೆ ಎಂದು ಮಗಳಿಗೆ ಹೇಳಿದ್ದರು.
ಐಶ್ವರ್ಯಾ ಕೇಂದ್ರ ಸರ್ಕಾರದ ಸಯನ್ಸ್ ಆಂಡ್ ಟೆಕ್ನಾಲಜಿ ಮಿನಿಸ್ಟ್ರಿಯ INSPIRE ಸ್ಕಾಲರ್ ಶಿಪ್ ಗೆ ಆಯ್ಕೆಯಾಗಿದ್ದಳಾದರೂ ಅದರ ಹಣ ಇನ್ನೂ ಬಂದಿರಲಿಲ್ಲ. ಕಾಲೇಜಿನ ಹಾಸ್ಟೇಲ್ ಸೌಲಭ್ಯ ಮೊದಲ ವರ್ಷದ ವಿದ್ಯಾರ್ಥಿನಿಯರಿಗೆ ಮಾತ್ರವೇ ಎಂಬ ನಿಯಮ ಇದ್ದುದರಿಂದ ಐಶ್ವರ್ಯ ತಾನಿದ್ದ ಹಾಸ್ಟೇಲ್ ಕೋಣೆಯನ್ನು ಬಿಟ್ಟುಕೊಡಬೇಕಾಯಿತು. ಮುಂದೆ ದೆಹಲಿಗೆ ಹೋದಾಗ ತಿಂಗಳಿಗೆ 15 ಸಾವಿರ ರುಪಾಯಿಗೂ ಹೆಚ್ಚು ಕೊಟ್ಟು ಬಾಡಿಗೆ ರೂಮು ಮಾಡಬೇಕಿತ್ತು.
ನವೆಂಬರ್ 2 ರಂದು ಐಶ್ವರ್ಯ ತನ್ನ ಕೈಯಾರೆ ಅಪ್ಪನಿಗೆ ಉಣ್ಣಿಸಿ ಕೊಣೆಗೆ ಹೋಗಿ ‘ನನ್ನಿಂದಾಗಿ ನನ್ನ ಕುಟುಂಬ ಆನೇಕ ಆರ್ಥಿಕ ಕಷ್ಟಗಳನ್ನು ಅನುಭವಿಸುತ್ತಿದೆ. ನಾನು ನನ್ನ ಕುಟುಂಬಕ್ಕೊಂದು ಹೊರೆಯಾಗಿದ್ದೇನೆ. ನನ್ನ ಶಿಕ್ಷಣವೂ ಹೊರೆಯಾಗಿದೆ. ನನಗೆ ಕಲಿಯಲು ಸಾಧ್ಯವಿಲ್ಲದಿದ್ದರೆ, ಬದುಕಲು ಸಾಧ್ಯವಿಲ್ಲ’ ಎಂದು ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಳು!
ಒಬ್ಬಳು ಐಏಎಸ್ ಅಧಿಕಾರಿಯಾಗುವುದು ಐಶ್ವರ್ಯಾಳ ಕನಸಾಗಿತ್ತು. ಏನೆನೋ ಕನಸುಗಳನ್ನು ಕಟ್ಟಿಕೊಳ್ಳುವ ಮಕ್ಕಳು ಕೇವಲ ಶಾಲಾ ಕಲಿಕೆಯಲ್ಲಷ್ಟೇ ಗಟ್ಟಿಗರಾಗಿದ್ದರೆ ಸಾಲದು, ಬದುಕಿನ ಕಲಿಕೆಯಲ್ಲೂ ಗಟ್ಟಿಗರಾದರೆ ಮಾತ್ರವೇ ಅವರೂ ಅವರ ತಂದೆತಾಯಂದಿರು ಇಂತಹ ದುರಂತಗಳಿಂದ ಪಾರಾಗಬಹುದೋ ಏನೋ…ಸ್ಸಾರಿ, ಮಗುವೇ!
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.
ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.
ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.
ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ
-
ದಿನದ ಸುದ್ದಿ7 days agoಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ
-
ಅಂತರಂಗ3 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ6 days agoಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ1 day agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ3 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ2 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

