Connect with us

ದಿನದ ಸುದ್ದಿ

ಈ ಮತಗಟ್ಟೇಲಿ ನಾಲ್ವರೇ ಮತದಾರರು..!

Published

on

ಸುದ್ದಿದಿನ ದೆಹಲಿ: ಒಂದು ಗ್ರಾಮವೆಂದರೆ ಕನಿಷ್ಠ ನೂರು ಜನರಾದರೂ ವಾಸಿಸುತ್ತಾರೆ, ಕನಿಷ್ಠ ೫೦ ಜನರಿಗೆ ಮತದಾನದ ಹಕ್ಕು ಇರುತ್ತದೆ. ಆದರಿಲ್ಲೊಂದು ಹಳ್ಳಿಯಲ್ಲಿ ಕೇವಲ ನಾಲ್ಕೇ ಮತದಾರರಿದ್ದಾರೆ. ಅದು ಒಂದೇ ಕುಟುಂಬಕ್ಕೆ ಸೇರಿ ಮೂವರಿದ್ದು, ಒಬ್ಬರು ಮಾತ್ರ ಬೇರೆಯವರು.

ಚತ್ತೀಸಗಡ ರಾಜ್ಯದ ಭರತ್ಪುರ್-ಸೋನ್ಹಾಟ್ ವಿಧಾನಸಭಾ ಕ್ಷೇತ್ರದ ಚಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೆರಂಧಂದ ಹಳ್ಳಿಯಲ್ಲಿ ಎರಡು ಕುಟುಂಬಗಳು ವಾಸಿಸುತ್ತಿದ್ದು, ಇದರ ಒಂದು ಕುಟುಂಬದ ನಾಲ್ವರು, ಮತ್ತೊಂದು ಕುಟುಂಬದಲ್ಲಿ ಒಬ್ಬರು ವಾಸಿಸುತ್ತಿದ್ದಾರೆ.

ಕೇವಲ ನಾಲ್ವರೇ ಮತದಾರರಿರುವ ಈ ಹಳ್ಳಿ ಇರುವುದು ಚತ್ತೀಸಗಡ ರಾಜ್ಯದ ಅರಣ್ಯ ಪ್ರದೇಶದಲ್ಲಿ. ಗ್ರಾಮ ಪಂಚಾಯಿತಿ ಕೇಂದ್ರದಿಂದ ಬಹುದೂರಲ್ಲಿದೆ. ಗುಡ್ಡದ ಕಾಲುದಾರಿಯಲ್ಲಿ 15 ಕಿಮೀ ಸಾಗಿದ ಬಳಿಕ ಹಳ್ಳಿ ಸಿಗುತ್ತದೆ. ಇಲ್ಲಿ ಕೇವಲ ಎರಡೇ ಕುಟುಂಬಗಳು ವಾಸಿಸುತ್ತಿವೆ. ಆದರೆ, ಚುನಾವಣೆ ಆಯೋಗ ಮತದಾರರ ಮತದಾನ ಹಕ್ಕು ಕಸಿದುಕೊಳ್ಳದೇ ಸೂಕ್ತ ವ್ಯವಸ್ಥೆ ಮಾಡಿದೆ. ಅಲ್ಲದೇ ಈ ಹಳ್ಳಿಯ ಮತಗಟ್ಟೆಯ ಸಂಖ್ಯೆ 143 ಇರುವುದು ಮತ್ತೊಂದು ವಿಶೇಷ.

ಚುನಾವಣೆಗೆ ನಿಯೋಜನೆಗೊಂಡ ಅಧಿಕಾರಿಗಳು ಈ ಮತಗಟ್ಟೆಗೆ ಒಂದು ದಿನ ಮೊದಲೇ ತಲುಪಲಿದ್ದಾರೆ. ಅಲ್ಲದೇ ಈ ಹಳ್ಳಿ ತಲುಪಲು ಐದರಿಂದ ಆರು ಕಿಮೀ ನದಿ ದಾಟಬೇಕು. ಮುಖ್ಯರಸ್ತೆಯಿಂದ 15 ಕಿಮೀ ದೂರದಲ್ಲಿದೆ. ಇಂತಹ ದುರ್ಗಮ ರಸ್ತೆ, ಅತಿ ಕಡಿಮೆ ಸಂಪರ್ಕ ಸಾಧನಗಳ ಇರುವ ಹಳ್ಳಿಯಲ್ಲೂ ಜನರಿಗೆ ಮತದಾನ ವ್ಯವಸ್ಥೆ ಮಾಡಲು ಅಗತ್ಯ ಕ್ರಮವನ್ನು ಚುನಾವಣಾ ಆಯೋಗ ಕೈಗೊಂಡಿದೆ.

ಚತ್ತೀಸಗಡದಲ್ಲಿ ಮತದಾನ ಎರಡು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ನವೆಂಬರ್ 12ರಂದು ರಾಜ್ಯದ ದಕ್ಷಿಣ ಭಾಗದ 18 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ ಮತ್ತು ಎರಡನೇ ಹಂತದ ಚುನಾವಣೆ ನವೆಂಬರ್ 20ರಂದು ನಡೆಯಲಿದೆ. ಎರಡೂ ಹಂತಗಳಲ್ಲಿ ಮತಗಳ ಎಣಿಕೆ ಕಾರ್ಯ ಡಿಸೆಂಬರ್ 11ರಂದು ನಡೆಯಲಿದೆ.

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending