Connect with us

ದಿನದ ಸುದ್ದಿ

ದೇಶ ಸುತ್ತೋರಿಗೆ ರೈಲ್ವೆ ಇಲಾಖೆಯ ಭರ್ಜರಿ ಆಫರ್..!

Published

on

ಸುದ್ದಿದಿನ ಡೆಸ್ಕ್ : ದೇಶ ಸುತ್ತು ಕೋಶ ಓದು ಎಂಬುದು ಜನಪದರ ನುಡಿಯಂತೆ ಕೋಶ ಓದಿಯಾದರೂ ಸರಿ, ದೇಶ ಸುತ್ತಿಯಾದರೂ ಜ್ಞಾನ ಗಳಿಸಬೇಕು. ಓದೋರಿಗಿಂತ ದೇಶ ಸುತ್ತೋರೇ ಹೆಚ್ಚು ಜನ. ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗಾಗಿಯೇ ರೈಲ್ವೆ ಇಲಾಖೆಯು ಕೈಗೆಟುಕುವ ದರದಲ್ಲಿ ಆಕರ್ಷಕ ಪ್ರವಾಸದ ಪ್ಯಾಕೇಜ್ ನೀಡಿದೆ.

ರೈಲು ದೇಶದ ಪ್ರಮುಖ ಪ್ರವಾಸಿ, ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ. ಪ್ರವಾಸಿಗರ ಬಜೆಟ್ ಗೆ ತಕ್ಕಂತೆ ತಮಗಿಷ್ಟದ ಸ್ಥಳಗಳುಳ್ಳ ಪ್ಯಾಕೇಜ್ ಆಯ್ಕೆ ಮಾಡಿಕೊಂಡು ಪ್ರಕಾರ ವಾಸ ಕೈಗೊಳ್ಳಬಹುದು. ಐಆರ್ಟಿಸಿಟಿಸಿ ಟೂರಿಸಂ ವೆಬ್‌ಸೈಟ್ ಗೆ ಹೋಗಿ ಪ್ಯಾಕೇಜ್ ಆಯ್ಕೆ ಮಾಡಿಕೊಳ್ಳಬಹುದು. ಈ ಪ್ಯಾಕೇಜ್ ನ ಟಿಕೆಟ್ ಗಳನ್ನು ಆನ್‌ಲೈನ್ ಇಲ್ಲವೇ ರೈಲ್ವೆ ಇಲಾಖೆಯ ಕಚೇರಿಯಲ್ಲಿ ಟಿಕೆಟ್ ಬುಕ್ ಮಾಡಬಹುದು.

ಈ ಪ್ರವಾಸ ಕೈಗೊಳ್ಳುವ ರೈಲಿನಲ್ಲಿ ಬೋರ್ಡಿಂಗ್ ವ್ಯವಸ್ಥೆಯೂ ಲಭ್ಯವಿದೆ. ವಿವಿಧ ನಗರಗಳಲ್ಲಿ ರಾತ್ರಿ ಉಳಿದುಕೊಳ್ಳುವ ಪ್ರವಾಸಿಗರಿಗೆ ಅಕಾಮಡೆಷನ್ ಲಭ್ಯವಿದೆ. ಪ್ರವಾಸಿಗರ ಸುರಕ್ಷತೆಗಾಗಿ ಸ್ಥಳದಲ್ಲಿ ಭದ್ರತಾ ಪಡೆ ನಿಯೋಜಿಸಲಾಗಿರುತ್ತದೆ. ರೈಲಿನಲ್ಲಿ ಬಹುತೇಕ ಸ್ವೀಪರ್ ಕೋಚ್ ಇದೆ. ಪ್ರವಾಸಿಗರು ಬೇಡಿಕೆಯಿಟ್ಟರೆ ಎಸಿ ಕೋಚ್ ವ್ಯವಸ್ಥಯನ್ನು ಮಾಡಲಾಗುತ್ತದೆ.

ಭಾರತ್ ದರ್ಶನ್ ರೈಲಿನ ಪ್ಯಾಕೇಜ್ ಇಲ್ಲಿದೆ

01. ಶ್ರಾವಣ ಸ್ಪೆಷಲ್ ಜ್ಯೋತಿರ್ಲಿಂಗ ಯಾತ್ರೆ ಪ್ಲಸ್ ನೇಪಾಲ್ (WZBD235)

ಇದು 20 ಹಗಲು/ 19 ರಾತ್ರಿಯ ಟ್ರಿಪ್ ಆಗಿದ್ದು, ಇದು ಧಾರ್ಮಿಕ ಸ್ಥಳಗಳ ಪ್ರವಾಸವಾಗಿದೆ. ಆಸ್ತಿಕರಿಗೆ ಇಷ್ಟವಾಗುವಂಥ ಟ್ರಿಪ್ ಆಗಲಿದೆ. *ಎಲ್ಲೆಲ್ಲಿ:* ಪುಣೆ, ನಾಸಿಕ್, ದ್ವಾರಕ, ಸೋಮನಾಥ, ಉಜ್ಜಯಿನಿ, ಅಲಹಾಬಾದ್, ವಾರಾಣಸಿ, ಪಶುಪತಿನಾಥ ( ನೇಪಾಳ), ಪೋಕರ್, ಔರಂಗಾಬಾದ್, ಪರ್ಭಾನಿ, ಪರ್ಲಿ, ಕರ್ನೂಲ್ ಟೌನ್ ಪ್ಯಾಕೇಜ್ ನ ಸ್ಥಳಗಳಾಗಿವೆ.

ನೀವು ಆಯ್ದುಕೊಳ್ಳುವ ಸ್ಥಳಗಳಲ್ಲಿ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ ವ್ಯವಸ್ಥೆ ಇದೆ. ಸ್ವೀಪರ್ ಮತ್ತು tier-3 AC ಕ್ಲಾಸ್ ಕೋಚ್ ವ್ಯವಸ್ಥೆ ಇದೆ. ಬೆಳಗ್ಗೆ ಟಿಫಿನ್, ಮಧ್ಯಾಹ್ನ, ರಾತ್ರಿ ಊಟ ಒದಗಿಸಲಾಗುತ್ತದೆ. ಸ್ಟ್ಯಾಂಡರ್ಡ್ ಪ್ಯಾಕೇಜ್ ಗೆ ₹ 18,900 ಹಾಗೂ ಕಂಫರ್ಟ್ (tier-3 AC) ಪ್ಯಾಕೇಜ್ ಗೆ ₹ 23,100 ದರ ನಿಗದಿ ಮಾಡಲಾಗಿದೆ. ಉಳಿದ ಸೌಲಭ್ಯಗಳು ಎರಡಕ್ಕೂ ಅನ್ವಯವಾಗಲಿವೆ.

O2. ಭಾರತ್ ದರ್ಶನ್ (WZBD234R)

ಇದು 10ಹಗಲು/ 9ರಾತ್ರಿಯ ರಾಜ್ ಕೋಟ್ ನಿಂದ ರತ್ಲಂ ವರೆಗಿನ ಪ್ರವಾಸವಾಗಿದೆ. ಪುರಿ, ಆನಂದ, ವಡೋದರ, ಗೋಧ್ರಾ, ರತ್ಲಂ ಪ್ರವಾಸಿ ಸ್ಥಳಗಳನ್ನೊಳಗೊಂಡಿದೆ. ಇದು ಕಡಿಮೆ ದರದ ಪ್ರವಾಸವಾಗಿದ್ದು, ಯಾತ್ರಾರ್ಥಿಗಳಿಗೆ ಹೇಳಿ ಮಾಡಿಸಿದ ಪ್ರವಾಸವಾಗಿದೆ. ಈ ರೈಲು ಸ್ವೀಪರ್ ಕೋಚ್ ಮಾತ್ರ ಸೌಲಭ್ಯ ಹೊಂದಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಉಪಹಾರ ಮತ್ತು ಊಟದ ವ್ಯವಸ್ಥೆ ಇದೆ. ಒಬ್ಬರಿಗೆ ₹ 9,450 ದರ ನಿಗದಿ ಮಾಡಲಾಗಿದೆ.

03. ದಕ್ಷಿಣ್ ಭಾರತ್ ಯಾತ್ರಾ (NZBD225)

ದಕ್ಷಿಣ ಭಾರತದ ಪ್ರಸಿದ್ಧ ಪ್ರವಾಸ ಸ್ಥಳಗಳ ಟ್ರಿಪ್ ಮಾಡೋರಿಗೆ ಇದು ಬೆಸ್ಟ್ ಪ್ಯಾಕೇಜ್. ಚಂಡೀಗಡ, ಅಂಬಾಲ, ಕುರುಕ್ಷೇತ್ರ, ಕರ್ನಲ್, ಪಾಣಿಪತ್, ದೆಹಲಿ ಕಾಂಟಿನೆಂಟಲ್, ರೆವರಿ, ಅಲ್ವರ್, ಜೈಪುರದೊಂದಿಗೆ ರಾಮೇಶ್ವರ, ಮಧುರೈ, ಕೋವಲಂ, ತಿರುಪತಿ ಸ್ಥಳಗಳನ್ನು ದರ್ಶನ ಮಾಡಬಹುದಾಗಿದೆ. ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ ವ್ಯವಸ್ಥೆ ಇದೆ. ಹರ್ಯಾಣ, ಪಂಜಾಬ್, ದೆಹಲಿ, ರಾಜಸ್ಥಾನ ರಾಜ್ಯಗಳ ಜನರಿಗೆ ದಕ್ಷಿಣ ಭಾರತದ ಪ್ರವಾಸದ ಪ್ಯಾಕೇಜ್ ಇಷ್ಟವಾಗಬಹುದು. 12ಹಗಲು, 11 ರಾತ್ರಿಯ ಪ್ರವಾಸದ ಪ್ಯಾಕೇಜ್ ಆಗಿದೆ. ಒಬ್ಬರಿಗೆ ₹ 11,340 ದರ ನಿಗದಿ ಮಾಡಲಾಗಿದೆ.

04. ಆಸ್ತ ಸ್ಪೆಷನ್ (SZBD332)

ಇದು 7 ಹಗಲು, 6 ರಾತ್ರಿಗಳುಳ್ಳ ಯಾತ್ರೆಯ ಪ್ಯಾಕೇಜ್ ಆಗಿದ್ದು, ಕೃಷ್ಣನ ಜನ್ಮಸ್ಥಳ ಹಾಗೂ ಉತ್ತರ ಪ್ರದೇಶ, ಬಿಹಾರ ರಾಜ್ಯದಲ್ಲಿರುವ ಧಾರ್ಮಿಕ ಸ್ಥಳಗಳನ್ನು ದರ್ಶನ ಮಾಡುವ ಆಸಕ್ತಿಯುಳ್ಳವರಿಗೆ ಬೆಸ್ಟ್ ಪ್ಯಾಕೇಜ್ ಆಗಿದೆ. ದೆಹಲಿ, ಅಮೃತಸರ, ಹರಿದ್ವಾರ, ಮತುರಾ, ಅಲಹಾಬಾದ್, ವಾರಾಣಸಿ, ಗಯಾ ಸ್ಥಳಗಳನ್ನು ದರ್ಶನ ಮಾಡಬಹುದು. ಒಬ್ಬರಿಗೆ ₹ 12,325 ದರ ನಿಗದಿ ಮಾಡಲಾಗಿದೆ. ಮದುರೈನಿಂದ ಪ್ರವಾಸ ಆರಂಭವಾಗಲಿದೆ.

05. ಶಿರಡಿ ಸ್ಪೆಷಲ್ (SZBD321)

ಈ ಪ್ಯಾಕೇಜ್ ನ ಹೆಸರೇ ಸೂಚಿಸುವಂತೆ ಇದು ಶಿರಡಿ ಸಾಯಿಬಾಬಾ ದರ್ಶನ ಮಾಡುವ ಆಸಕ್ತರಿಗಾಗಿಯೇ ರೆಡಿ ಮಾಡಿದ ಪ್ಯಾಕೇಜ್ ಆಗಿದೆ. 7ಹಗಲು, 6ರಾತ್ರಿಗಳುಳ್ಳ ಪ್ಯಾಕೇಜ್. ಮದುರೈನಿಂದ ಆರಂಭವಾಗುವ ಪ್ರವಾಸವು, ದಿಂಡಿಗಲ್, ಕರೂರ್, ಎರೋಡ್, ಸೇಲಂ, ಜೋಲರ್ಪೆಟ್ಟಯ್, ಕಾಟಪಡಿ, ಚೆನ್ನೈ ಸ್ಥಳಗಳನ್ನೊಳಗೊಂಡಿದೆ. ಒಬ್ಬರಿಗೆ ₹ 6,615 ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading
Advertisement

Title

ದಿನದ ಸುದ್ದಿ7 days ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ7 days ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

ದಿನದ ಸುದ್ದಿ7 days ago

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು...

ದಿನದ ಸುದ್ದಿ7 days ago

ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ...

ದಿನದ ಸುದ್ದಿ2 weeks ago

ಕನಗೊಂಡನಹಳ್ಳಿಯಲ್ಲಿ ಸ್ವಚ್ಛ ಸಂಕೀರ್ಣ, ಕೂಸಿನ ಮನೆ ಉದ್ಘಾಟನೆ: ಸುಸ್ಥಿರ ಗ್ರಾಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಸಲಹೆ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಕಸ ವಿಲೇವಾರಿ ಘಟಕಗಳನ್ನು ಗ್ರಾಮಸ್ಥರೇ ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಗ್ರಾಮಗಳನ್ನು ಆರ್ಥಿಕವಾಗಿ ಸ್ವಾವಲಂಬಿಯನ್ನಾಗಿಸಬೇಕು ಎಂದು ದಾವಣಗೆರೆ ಲೋಕಸಭಾ ಸದಸ್ಯೆ ಡಾ....

ದಿನದ ಸುದ್ದಿ2 weeks ago

ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ

ಸುದ್ದಿದಿನ,ದಾವಣಗೆರೆ:ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು...

ದಿನದ ಸುದ್ದಿ3 weeks ago

ದಾವಣಗೆರೆ ಪಂಚಾಯತ್ ರಾಜ್ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಶಿವಮೂರ್ತಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2022-23ನೇ ಸಾಲಿನ 5054 ವಿಶೇಷ ಗ್ರಾಮೀಣ ಅಭಿವೃದ್ಧಿ ಯೋಜನೆ ಅಡಿಯಲ್ಲಿ ದಾವಣಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ದಾವಣಗೆರೆ ತಾಲ್ಲೂಕು ಶಾಮನೂರು-ದೇವರಬೆಳಕೆರೆ ರಸ್ತೆಯಿಂದ ದುರ್ಗಾಂಬಿಕ ಕ್ಯಾಂಪ್, ನಾಗಮ್ಮ...

ದಿನದ ಸುದ್ದಿ3 weeks ago

ದಾವಣಗೆರೆ ದಕ್ಷಿಣ ಉಪ ಚುನಾವಣೆಗೆ ಸಿದ್ದತೆ: ಮತದಾರರ ಪಟ್ಟಿ ವೀಕ್ಷಕರಿಂದ ರಾಜಕೀಯ ಪಕ್ಷಗಳೊಂದಿಗೆ ಸಭೆ, ಹಕ್ಕು, ಆಕ್ಷೇಪಣೆಗಳನ್ನು ನಿಗಧಿತ ಅವಧಿಯಲ್ಲಿ ಸಲ್ಲಿಸಲು ಮುಖಂಡರಿಗೆ ಸಲಹೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕರ‍್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮತದಾರರ...

ದಿನದ ಸುದ್ದಿ3 weeks ago

ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ

ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ...

ದಿನದ ಸುದ್ದಿ3 weeks ago

ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ...

Trending