ದಿನದ ಸುದ್ದಿ
ದೇಶ ಸುತ್ತೋರಿಗೆ ರೈಲ್ವೆ ಇಲಾಖೆಯ ಭರ್ಜರಿ ಆಫರ್..!

ಸುದ್ದಿದಿನ ಡೆಸ್ಕ್ : ದೇಶ ಸುತ್ತು ಕೋಶ ಓದು ಎಂಬುದು ಜನಪದರ ನುಡಿಯಂತೆ ಕೋಶ ಓದಿಯಾದರೂ ಸರಿ, ದೇಶ ಸುತ್ತಿಯಾದರೂ ಜ್ಞಾನ ಗಳಿಸಬೇಕು. ಓದೋರಿಗಿಂತ ದೇಶ ಸುತ್ತೋರೇ ಹೆಚ್ಚು ಜನ. ಪ್ರವಾಸ ಕೈಗೊಳ್ಳುವ ಪ್ರವಾಸಿಗರಿಗಾಗಿಯೇ ರೈಲ್ವೆ ಇಲಾಖೆಯು ಕೈಗೆಟುಕುವ ದರದಲ್ಲಿ ಆಕರ್ಷಕ ಪ್ರವಾಸದ ಪ್ಯಾಕೇಜ್ ನೀಡಿದೆ.
ರೈಲು ದೇಶದ ಪ್ರಮುಖ ಪ್ರವಾಸಿ, ಧಾರ್ಮಿಕ ಸ್ಥಳಗಳನ್ನು ಒಳಗೊಂಡಿದೆ. ಪ್ರವಾಸಿಗರ ಬಜೆಟ್ ಗೆ ತಕ್ಕಂತೆ ತಮಗಿಷ್ಟದ ಸ್ಥಳಗಳುಳ್ಳ ಪ್ಯಾಕೇಜ್ ಆಯ್ಕೆ ಮಾಡಿಕೊಂಡು ಪ್ರಕಾರ ವಾಸ ಕೈಗೊಳ್ಳಬಹುದು. ಐಆರ್ಟಿಸಿಟಿಸಿ ಟೂರಿಸಂ ವೆಬ್ಸೈಟ್ ಗೆ ಹೋಗಿ ಪ್ಯಾಕೇಜ್ ಆಯ್ಕೆ ಮಾಡಿಕೊಳ್ಳಬಹುದು. ಈ ಪ್ಯಾಕೇಜ್ ನ ಟಿಕೆಟ್ ಗಳನ್ನು ಆನ್ಲೈನ್ ಇಲ್ಲವೇ ರೈಲ್ವೆ ಇಲಾಖೆಯ ಕಚೇರಿಯಲ್ಲಿ ಟಿಕೆಟ್ ಬುಕ್ ಮಾಡಬಹುದು.
ಈ ಪ್ರವಾಸ ಕೈಗೊಳ್ಳುವ ರೈಲಿನಲ್ಲಿ ಬೋರ್ಡಿಂಗ್ ವ್ಯವಸ್ಥೆಯೂ ಲಭ್ಯವಿದೆ. ವಿವಿಧ ನಗರಗಳಲ್ಲಿ ರಾತ್ರಿ ಉಳಿದುಕೊಳ್ಳುವ ಪ್ರವಾಸಿಗರಿಗೆ ಅಕಾಮಡೆಷನ್ ಲಭ್ಯವಿದೆ. ಪ್ರವಾಸಿಗರ ಸುರಕ್ಷತೆಗಾಗಿ ಸ್ಥಳದಲ್ಲಿ ಭದ್ರತಾ ಪಡೆ ನಿಯೋಜಿಸಲಾಗಿರುತ್ತದೆ. ರೈಲಿನಲ್ಲಿ ಬಹುತೇಕ ಸ್ವೀಪರ್ ಕೋಚ್ ಇದೆ. ಪ್ರವಾಸಿಗರು ಬೇಡಿಕೆಯಿಟ್ಟರೆ ಎಸಿ ಕೋಚ್ ವ್ಯವಸ್ಥಯನ್ನು ಮಾಡಲಾಗುತ್ತದೆ.
ಭಾರತ್ ದರ್ಶನ್ ರೈಲಿನ ಪ್ಯಾಕೇಜ್ ಇಲ್ಲಿದೆ
01. ಶ್ರಾವಣ ಸ್ಪೆಷಲ್ ಜ್ಯೋತಿರ್ಲಿಂಗ ಯಾತ್ರೆ ಪ್ಲಸ್ ನೇಪಾಲ್ (WZBD235)
ಇದು 20 ಹಗಲು/ 19 ರಾತ್ರಿಯ ಟ್ರಿಪ್ ಆಗಿದ್ದು, ಇದು ಧಾರ್ಮಿಕ ಸ್ಥಳಗಳ ಪ್ರವಾಸವಾಗಿದೆ. ಆಸ್ತಿಕರಿಗೆ ಇಷ್ಟವಾಗುವಂಥ ಟ್ರಿಪ್ ಆಗಲಿದೆ. *ಎಲ್ಲೆಲ್ಲಿ:* ಪುಣೆ, ನಾಸಿಕ್, ದ್ವಾರಕ, ಸೋಮನಾಥ, ಉಜ್ಜಯಿನಿ, ಅಲಹಾಬಾದ್, ವಾರಾಣಸಿ, ಪಶುಪತಿನಾಥ ( ನೇಪಾಳ), ಪೋಕರ್, ಔರಂಗಾಬಾದ್, ಪರ್ಭಾನಿ, ಪರ್ಲಿ, ಕರ್ನೂಲ್ ಟೌನ್ ಪ್ಯಾಕೇಜ್ ನ ಸ್ಥಳಗಳಾಗಿವೆ.
ನೀವು ಆಯ್ದುಕೊಳ್ಳುವ ಸ್ಥಳಗಳಲ್ಲಿ ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ ವ್ಯವಸ್ಥೆ ಇದೆ. ಸ್ವೀಪರ್ ಮತ್ತು tier-3 AC ಕ್ಲಾಸ್ ಕೋಚ್ ವ್ಯವಸ್ಥೆ ಇದೆ. ಬೆಳಗ್ಗೆ ಟಿಫಿನ್, ಮಧ್ಯಾಹ್ನ, ರಾತ್ರಿ ಊಟ ಒದಗಿಸಲಾಗುತ್ತದೆ. ಸ್ಟ್ಯಾಂಡರ್ಡ್ ಪ್ಯಾಕೇಜ್ ಗೆ ₹ 18,900 ಹಾಗೂ ಕಂಫರ್ಟ್ (tier-3 AC) ಪ್ಯಾಕೇಜ್ ಗೆ ₹ 23,100 ದರ ನಿಗದಿ ಮಾಡಲಾಗಿದೆ. ಉಳಿದ ಸೌಲಭ್ಯಗಳು ಎರಡಕ್ಕೂ ಅನ್ವಯವಾಗಲಿವೆ.
O2. ಭಾರತ್ ದರ್ಶನ್ (WZBD234R)
ಇದು 10ಹಗಲು/ 9ರಾತ್ರಿಯ ರಾಜ್ ಕೋಟ್ ನಿಂದ ರತ್ಲಂ ವರೆಗಿನ ಪ್ರವಾಸವಾಗಿದೆ. ಪುರಿ, ಆನಂದ, ವಡೋದರ, ಗೋಧ್ರಾ, ರತ್ಲಂ ಪ್ರವಾಸಿ ಸ್ಥಳಗಳನ್ನೊಳಗೊಂಡಿದೆ. ಇದು ಕಡಿಮೆ ದರದ ಪ್ರವಾಸವಾಗಿದ್ದು, ಯಾತ್ರಾರ್ಥಿಗಳಿಗೆ ಹೇಳಿ ಮಾಡಿಸಿದ ಪ್ರವಾಸವಾಗಿದೆ. ಈ ರೈಲು ಸ್ವೀಪರ್ ಕೋಚ್ ಮಾತ್ರ ಸೌಲಭ್ಯ ಹೊಂದಿದೆ. ಬೆಳಗ್ಗೆ, ಮಧ್ಯಾಹ್ನ, ರಾತ್ರಿ ಉಪಹಾರ ಮತ್ತು ಊಟದ ವ್ಯವಸ್ಥೆ ಇದೆ. ಒಬ್ಬರಿಗೆ ₹ 9,450 ದರ ನಿಗದಿ ಮಾಡಲಾಗಿದೆ.
03. ದಕ್ಷಿಣ್ ಭಾರತ್ ಯಾತ್ರಾ (NZBD225)
ದಕ್ಷಿಣ ಭಾರತದ ಪ್ರಸಿದ್ಧ ಪ್ರವಾಸ ಸ್ಥಳಗಳ ಟ್ರಿಪ್ ಮಾಡೋರಿಗೆ ಇದು ಬೆಸ್ಟ್ ಪ್ಯಾಕೇಜ್. ಚಂಡೀಗಡ, ಅಂಬಾಲ, ಕುರುಕ್ಷೇತ್ರ, ಕರ್ನಲ್, ಪಾಣಿಪತ್, ದೆಹಲಿ ಕಾಂಟಿನೆಂಟಲ್, ರೆವರಿ, ಅಲ್ವರ್, ಜೈಪುರದೊಂದಿಗೆ ರಾಮೇಶ್ವರ, ಮಧುರೈ, ಕೋವಲಂ, ತಿರುಪತಿ ಸ್ಥಳಗಳನ್ನು ದರ್ಶನ ಮಾಡಬಹುದಾಗಿದೆ. ಬೋರ್ಡಿಂಗ್ ಮತ್ತು ಡಿಬೋರ್ಡಿಂಗ್ ವ್ಯವಸ್ಥೆ ಇದೆ. ಹರ್ಯಾಣ, ಪಂಜಾಬ್, ದೆಹಲಿ, ರಾಜಸ್ಥಾನ ರಾಜ್ಯಗಳ ಜನರಿಗೆ ದಕ್ಷಿಣ ಭಾರತದ ಪ್ರವಾಸದ ಪ್ಯಾಕೇಜ್ ಇಷ್ಟವಾಗಬಹುದು. 12ಹಗಲು, 11 ರಾತ್ರಿಯ ಪ್ರವಾಸದ ಪ್ಯಾಕೇಜ್ ಆಗಿದೆ. ಒಬ್ಬರಿಗೆ ₹ 11,340 ದರ ನಿಗದಿ ಮಾಡಲಾಗಿದೆ.
04. ಆಸ್ತ ಸ್ಪೆಷನ್ (SZBD332)
ಇದು 7 ಹಗಲು, 6 ರಾತ್ರಿಗಳುಳ್ಳ ಯಾತ್ರೆಯ ಪ್ಯಾಕೇಜ್ ಆಗಿದ್ದು, ಕೃಷ್ಣನ ಜನ್ಮಸ್ಥಳ ಹಾಗೂ ಉತ್ತರ ಪ್ರದೇಶ, ಬಿಹಾರ ರಾಜ್ಯದಲ್ಲಿರುವ ಧಾರ್ಮಿಕ ಸ್ಥಳಗಳನ್ನು ದರ್ಶನ ಮಾಡುವ ಆಸಕ್ತಿಯುಳ್ಳವರಿಗೆ ಬೆಸ್ಟ್ ಪ್ಯಾಕೇಜ್ ಆಗಿದೆ. ದೆಹಲಿ, ಅಮೃತಸರ, ಹರಿದ್ವಾರ, ಮತುರಾ, ಅಲಹಾಬಾದ್, ವಾರಾಣಸಿ, ಗಯಾ ಸ್ಥಳಗಳನ್ನು ದರ್ಶನ ಮಾಡಬಹುದು. ಒಬ್ಬರಿಗೆ ₹ 12,325 ದರ ನಿಗದಿ ಮಾಡಲಾಗಿದೆ. ಮದುರೈನಿಂದ ಪ್ರವಾಸ ಆರಂಭವಾಗಲಿದೆ.
05. ಶಿರಡಿ ಸ್ಪೆಷಲ್ (SZBD321)
ಈ ಪ್ಯಾಕೇಜ್ ನ ಹೆಸರೇ ಸೂಚಿಸುವಂತೆ ಇದು ಶಿರಡಿ ಸಾಯಿಬಾಬಾ ದರ್ಶನ ಮಾಡುವ ಆಸಕ್ತರಿಗಾಗಿಯೇ ರೆಡಿ ಮಾಡಿದ ಪ್ಯಾಕೇಜ್ ಆಗಿದೆ. 7ಹಗಲು, 6ರಾತ್ರಿಗಳುಳ್ಳ ಪ್ಯಾಕೇಜ್. ಮದುರೈನಿಂದ ಆರಂಭವಾಗುವ ಪ್ರವಾಸವು, ದಿಂಡಿಗಲ್, ಕರೂರ್, ಎರೋಡ್, ಸೇಲಂ, ಜೋಲರ್ಪೆಟ್ಟಯ್, ಕಾಟಪಡಿ, ಚೆನ್ನೈ ಸ್ಥಳಗಳನ್ನೊಳಗೊಂಡಿದೆ. ಒಬ್ಬರಿಗೆ ₹ 6,615 ಇದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ

ಸುದ್ದಿದಿನ, ಚನ್ನಗಿರಿ (ಬಸವಾಪಟ್ಟಣ) : ಭಾರತೀಯ ಸಮಾಜದಲ್ಲಿ ಮೀಸಲಾತಿಯಿಂದ ಮಾತ್ರ ಮಹಿಳಾ ಪ್ರಗತಿ ಸಾಧ್ಯವಿಲ್ಲ. ಅವಳಿಗೆ ಪುರುಷನಂತೆ ಸಮಾನವಾದ ಪ್ರಾತಿನಿಧ್ಯ ನೀಡಿದಲ್ಲಿ ಮಾತ್ರವೇ ಮಹಿಳಾ ಪ್ರಗತಿ ಸಾಧ್ಯ. ಆಗ ಮಾತ್ರವೇ ಸದೃಢವಾದ ಭಾರತ ನಿರ್ಮಾಣವಾಗಲು ಸಾಧ್ಯ ಎಂದು ಸಂತೆಬೆನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ಜ್ಯೋತಿಯವರು ಅಭಿಪ್ರಾಯ ವ್ಯಕ್ತಪಡಿಸಿದರು.
ಜನತಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತ ಸಪ್ತಾಹದ ಅಡಿಯಲ್ಲಿ ‘ಭಾರತೀಯ ಸಮಾಜ ಹಾಗೂ ರಾಷ್ಟ್ರದ ಪ್ರಗತಿಯಲ್ಲಿ ಮಹಿಳೆಯರ ಪ್ರಾಮುಖ್ಯತೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮಹಿಳೆಗೆ ಎಲ್ಲಿಯವರೆಗೆ ಮುಕ್ತವಾದ ಪ್ರಾತಿನಿಧ್ಯ ಲಭಿಸುವುದಿಲ್ಲವೋ ಅಲ್ಲಿಯವರೆಗೆ ಎಷ್ಟೇ ಕಾಯ್ದೆ, ಕಾನೂನುಗಳು ಜಾರಿಯಾದರೂ ಮಹಿಳೆಯರ ಬದುಕಿನಲ್ಲಿ ಸಮಗ್ರ ಬದಲಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಂಶುಪಾಲರಾದ ಡಾ.ಎಂ.ಆರ್. ಲೋಕೇಶ್ ಅವರು ಮಾತನಾಡಿ ಭಾರತೀಯ ಸಮಾಜದಲ್ಲಿ ಹೆಣ್ಣು ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳುವುದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ ಎಂದರು.
ನೈತಿಕತೆ, ಸಂಸ್ಕಾರವು ಕೂಡ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಹೀಗಾಗಿಯೇ ಶರಣರು ಗಂಡು-ಹೆಣ್ಣು ಎಂಬ ಬೇಧವನ್ನು ಮೆಟ್ಟಿ ನಿಂತು ‘ಒಳಗೆ ಸುಳಿವ ಆತ್ಮ ಹೆಣ್ಣು ಅಲ್ಲ, ಗಂಡು ಅಲ್ಲ’ ಎಂಬ ತಾತ್ವಿಕತೆಯ ಮೂಲಕ ಸರ್ವರನ್ನು ಸಮಾನವಾಗಿ ಕಾಣುವಂತಹ ಸಮಾಜಕ್ಕಾಗಿ ಶ್ರಮಿಸಿದರು. ಭಾರತದ ನೆಲದಲ್ಲಿ ಶರಣರು, ದಾರ್ಶನಿಕರು ರೂಪಿಸಿಕೊಟ್ಟ ಮಾರ್ಗದಲ್ಲಿ ನಡೆದು ಇಂದಿನ ಮಹಿಳೆಯರು ಸಬಲರಾಗಬೇಕು ಎಂಬುದಾಗಿ ತಿಳಿಸಿದರು.
ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಎ.ಡಿ.ಬಸವರಾಜ್ ಅವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಬೋಧಕರಾದ ಹನುಮಂತಪ್ಪ, ಪ್ರಕಾಶ್, ಮಧುಸೂಧನ್, ರೆಹಮತ್ಬಿ, ಸಂದೀಪ್ ಮುಂತಾದವರು ಹಾಜರಿದ್ದರು. ಕಾರ್ಯಕ್ರಮವನ್ನು ಗೋವಿಂದರೆಡ್ಡಿ ಅವರು ನಿರೂಪಿಸಿದರು. ವಿದ್ಯಾರ್ಥಿನಿ ಸೌಂದರ್ಯ ಸ್ವಾಗತಿಸಿದರು, ಯಶೋಧ, ಸಹನಾ ಪ್ರಾರ್ಥಿಸಿದರು, ರಕ್ಷಿತ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್

ಸುದ್ದಿದಿನ,ದಾವಣಗೆರೆ : ಸಂವಿಧಾನ ಪೂರ್ವದ ಭಾರತದ ಸ್ಥಿತಿಗತಿ ಹಾಗೂ ಸಂವಿಧಾನದ ನಂತರ ಭಾರತದಲ್ಲಾದ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಬದಲಾವಣೆಗ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಹಾಗೆಯೇ ಸಂವಿಧಾನ ರಚನೆ ಮಾಡುವ ಸಮಯದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಮುಂದಿದ್ದ ಬಿಕ್ಕಟ್ಟುಗಳನ್ನು ಏಕಾಂತಗಿರಿ ಟ್ರಸ್ಟ್ ನ ಕಾರ್ಯದರ್ಶಿ ಡಾ.ಕೆ.ಎ.ಓಬಳೇಶ್ ಅವರು ತಿಳಿಸಿಕೊಟ್ಟರು.
ನಗರದ ಪ್ರೇರಣ ಮಕ್ಕಳ ಆರೈಕೆ ಕೇಂದ್ರದಲ್ಲಿ ವಿ.ಬಿ.ಪಿ ಫೌಂಡೇಷನ್ ಹಾಗೂ ಏಕಾಂತಗಿರಿ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಸಂವಿಧಾನ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ದೇವನಗರಿ ಸುದ್ಧಿದಿನ ಪತ್ರಿಕೆಯ ಸಂಪಾದಕರಾದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದು, ವಿದ್ಯಾರ್ಥಿಗಳಿಗೆ ಭಾರತದ ಸಂವಿಧಾನದ ಕಳಶದಂತಿರುವ ಸಂವಿಧಾನ ಪೀಠಿಕೆಯ ಮಹತ್ವವನ್ನು ಪರಿಚಯಿಸುವ ಮೂಲಕ ಸಂವಿಧಾನ ಪೀಠಿಕೆಯನ್ನು ಬೋಧಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸ್ಕೈ ಲೈನ್ ಸಂಸ್ಥೆಯ ಸಂಸ್ಥಾಪಕರಾದ ಬಾಲಚಂದ್ರ ಅವರು ಸಂವಿಧಾನ ಇರುವ ಕಾಲದಲ್ಲಿಯೇ ದಲಿತರು, ದಮನಿತರು ಹಾಗೂ ಮಹಿಳೆಯರ ಸ್ಥಿತಿಯು ಅತ್ಯಂತ ಶೋಚನೀಯವಾಗಿದೆ. ಆದರೆ ಸಂವಿಧಾನವಿಲ್ಲದ ಭಾರತವನ್ನು ನಾವು ಊಹಿಸಿಕೊಳ್ಳುವುದು ಕಷ್ಟ ಸಾಧ್ಯ ಎಂಬುದಾಗಿ ತಿಳಿಸಿದರು.
ಪ್ರೇರಣ ಆರೈಕೆ ಕೇಂದ್ರದ ಶಿಕ್ಷಕರಾದ ಕುಮಾರ್ ಅವರು ಮಾತನಾಡಿ, ಸರ್ವರನ್ನು ಸಮಾನವಾಗಿ ಕಾಣುವ ಸಂವಿಧಾನವು ನಮ್ಮೆಲ್ಲರ ಪವಿತ್ರ ಗ್ರಂಥ ಎಂಬುದಾಗಿ ತಿಳಿಸಿದರು. ಕುಮಾರಿ ಪೂಜಾ ಅವರು ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಪ್ರೇರಣ ಸಂಸ್ಥೆಯ ಮಕ್ಕಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು

- ಪುರಂದರ್ ಲೋಕಿಕೆರೆ
ಸುದ್ದಿದಿನ, ದಾವಣಗೆರೆ : ಸರ್ಕಾರದ ಭದ್ರಾ ಅಚ್ಚುಕಟ್ಟು ಪ್ರದೇಶದ ನೀರಾವರಿ ಇಲಾಖೆಯ ಚಿತಾವಣೆಗೆ ಸೆಡ್ಡು ಹೊಡೆದು ಕೇವಲ 110-120 ದಿನಗಳ ಒಳಗಾಗಿಅಲ್ಪಾವಧಿ ತಳಿ ನಾಟಿ ಮಾಡಿ ಯಶಸ್ವಿಯಾಗಿ ಕಾಲುವೆ ನೀರು ಬಳಸಿಕೊಂಡು ಭತ್ತ ಬೆಳೆಯುವ ಮೂಲಕ ಮಾದರಿಯಾಗಿದ್ದಾರೆ ದಾವಣಗೆರೆ ಭಾಗದ ರೈತರು.
ಬೇಸಿಗೆ ಕಾಲದಲ್ಲಿ ನಮಗೆ ತೋಟಗಳಿಗೆ ನೀರು ಹರಿಸಲು ಆನ್ ಆಪ್ ಪದ್ದತಿ ಮಾಡಿ ಎಂದು ಒತ್ತಡ ಹಾಕಿದ ಶಿವಮೊಗ್ಗ ಜಿಲ್ಲೆಯ ಅಡಿಕೆ ದಣಿಗಳಿಗೇ ಮುಖಕ್ಕೆ ಹೊಡೆದಂತೆ ಭತ್ತ ಬೆಳೆದು ತೋರಿಸಿರುವುದು ಶ್ಲಾಘನೀಯ.
100 ದಿನಗಳು ನೀರು ಹರಿಸಲು ಆದೇಶ ಹೊರಡಿಸಿ ರೈತರೆಲ್ಲ ನಾಟಿ ಮಾಡಿದ ಮೇಲೆ ಎಂದೂ ಗದ್ದೆ ನೀರು ಕಟ್ಟದ ಐಷಾರಾಮೀ ರಾಜಕಾರಣಿ ಪುತ್ರ ರತ್ನ ಸಚಿವ ಮಧು ಬಂಗಾರಪ್ಪ ಅಡಿಕೆ ತೋಟದ ರೈತರಿಗೆ ಮನ ಸೋತವರು.
ಕಲ್ಲು ಬಂಡೆ ಹೊಡೆದು ಭರ್ಜರಿ ಜೀವನ ಸಾಗಿಸುವ ಸಂಪನ್ಮೂಲ ಸಚಿವ, ಉಸ್ತುವಾರಿ ಸಚಿವರ ನಿರ್ಲಕ್ಷ್ಯ ಬೇಸತ್ತ ರೈತ ರಸ್ತೆ ತಡೆದು ನೀರು ಕೊಡಿ ಎಂದು ಹೋರಾಟ ಮಾಡಿದರೂ ಕಿವಿ ಕೇಳೋಲ್ಲ ಎಂಬಂತೆ ವರ್ತಿಸಿದೆ ಆಡಳಿತ ಯಂತ್ರ.
ಆದರೆ ಈ ನಡುವೆ ಎರಡು ಭಾರಿ ಪ್ರಕೃತಿ ವರದಾನ ದಿಂದ ಭತ್ತ ಬೆಳೆಯುವ ಮೂಲಕ ಅನ್ನನೀಡುವ ರೈತ ಭತ್ತ ಬೆಳೆದು ಬಿಟ್ಟ. ಈ ಮೂರು ತಿಂಗಳ ಭತ್ತಕ್ಕೆ ನೀರು ಬಿಡುವುದು ಎಷ್ಟು ತ್ರಾಸದಾಯಕ. ಸರ್ಕಾರಗಳು ಯಾರು ಪರ ಎಂದು ಬೆತ್ತಲೆ ತೋರಿಸಿಕೊಂಡಿವೆ.
ಈಗಲಾದರೂ ಕಾಲ ಮಿಂಚಿಲ್ಲ ಕಟಾವು ಮಾಡಿದ ಭತ್ತ ಒಳ್ಳೆಯ ಗುಣಮಟ್ಟದ್ದು ಆಗಿದೆ.3000-3500 ರೂಂ ದರ ನಿಗದಿ ಮಾಡಿದರೆ ರೈತ ಸಾಲಶೂಲದಿಂದಮುಕ್ತಿ ಆಗಬಹುದು. ಭದ್ರಾ ನೀರು ಬೇಸಿಗೆ ಕಾಲದಲ್ಲಿ ಕೊಡುವುದೇ ಇಲ್ಲ ಎಂದು ಹೇಳಿರುವುದು ರೈತ ವಿರೋಧಿ ನೀತಿ.
ಗುಂಡುರಾವ್ ಕಾಲಾವಧಿಯಲ್ಲಿ 158ಅಡಿ ನೀರಿದ್ದರೂ ಭದ್ರಾ ನೀರು ಹರಿಸಲಾಗಿರುವ ದಾಖಲೆ ಇದೆ. ಕಡೆ ಪಕ್ಷ ಈ ಭಾರಿಯ ಭತ್ಖಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಿ, ಇಲ್ಲವೇ ಯಾವ ರೈತರ ಬಳಿ ಭತ್ತ ಖರೀದಿ ನಿಲ್ಲಿಸಿ. ರೈತರೇ ಸ್ವಂತ ಮಾರುಕಟ್ಟೆ ಹುಡುಕಿಕೊಳ್ಳುವ ಪ್ರಯತ್ನ ಮಾಡಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ4 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ3 days ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ
-
ದಿನದ ಸುದ್ದಿ6 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು