Connect with us

ದಿನದ ಸುದ್ದಿ

ಆನೆಯನ್ನು ಕುಣಿಯಲು ಆಹ್ವಾನಿಸಿದ ಡ್ರ್ಯಾಗನ್ : ಪಿ ಚಿದಂಬರಂ ಅವರ ವಿಶೇಷ ಬರಹ

Published

on

ಳೆದ ವಾರವಷ್ಟೇ ನಾವು ಭಾರತದ ಭೌಗೋಳಿಕ ಪ್ರದೇಶಗಳ ಬಗ್ಗೆ ಇನ್ನಷ್ಟು ತಿಳಿದುಕೊಂಡೆವು. ನಮಗೇ ಗೊತ್ತಿಲ್ಲದೆ ದೇಶದ ಭೂಪಟದಲ್ಲಿರುವ ಊರುಗಳ ಹೆಸರನ್ನು ಕೇಳಿದ್ದೆವು. ಗಲ್ವಾನ್ ಕಣಿವೆ, ಪ್ಯಾಂಗೋಂಗ್, ಗೊರ್ಗಾ ಇವೇ ಮೊದಲಾದ ಸ್ಥಳಗಳ ಬಗ್ಗೆ ನಾವು ಯಾವತ್ತಾದರೂ ಹುಡುಕಿದ್ದೆವಾ? ಈ ಪ್ರದೇಶಗಳ ಹೆಸರು ಇನ್ಮುಂದೆ ನಮಗೆ ಬಾಯಿ ಪಾಠವಾಗಲಿದೆ.

ಒಳನುಸುಳುವಿಕೆ

ಭಾರತ-ಚೀನಾ ನಡುವಿನ ಸಂಬಂಧ ಹಳಸಿರುವುದನ್ನು ಮೇ 5ರಂದು ಪ್ಯಾಂಗಾಂಗ್ ಟಿಎಸ್ಒನಲ್ಲಿ ನಡೆದ ಘರ್ಷಣೆಯಿಂದ ಅರಿಯಬಹುದು. ಈದಿನದವರೆಗೂ ಉಭಯ ದೇಶಗಳ ನಡುವಿನ ಸಂಘರ್ಷ ಮುಂದುವರಿಯುತ್ತಲೇ ಬಂದಿದೆ. ಆದರೆ, ಚೀನಾ ಸೇನೆ ಭಾರತದ ಭೂಪ್ರದೇಶದೊಳಗೆ ಬಂದಿದೆ ಎಂಬುದನ್ನು ಸರ್ಕಾರ ಒಪ್ಪಿಕೊಳ್ಳಲು ಸಿದ್ಧವಿಲ್ಲ.

ಚೀನಾ ಸೇನಯು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಗುಲ್ವಾನ್, ಪ್ಯಾಂಗಾಂಗ್ ಟಿಎಸ್ಒ ಹಾಗೂ ಲಡಾಖ್ನ ಗೊರ್ಗಾ ಪ್ರದೇಶಕ್ಕೆ ನುಗ್ಗಿದೆ. ಲಡಾಖ್ನಲ್ಲಿರುವ ಗಲ್ವಾನ್, ಸಿಕ್ಕಿಂನ ನಕು ಲಾ ಪ್ರದಶಗಳನ್ನು ಈವರೆಗೆ ಚೀನಾ ವಿವಾದಿತ ಪ್ರದೇಶ ಎಂದು ಘೋಷಿಸಿಲ್ಲ. ಈ ಹಿಂದೆ ಈ ಪ್ರದೇಶಗಳಿಗಾಗಿ ಯಾವಾಗಲೂ ಭಾರತ- ಚೀನಾ ನಡುವೆ ಬಿಕ್ಕಟ್ಟು ಉದ್ಭವಿಸಿಲ್ಲ. ಇದರಿಂದ ತಿಳಿದುಬರುವ ಒಂದೇ ವಿಷಯವೆಂದರೆ ಚೀನಾ ತನ್ನ ವಿವಾದಿತ ಪ್ರದೇಶಗಳನ್ನು ವಿಸ್ತರಿಸುತ್ತಾ ಬರುತ್ತಿದೆ.

ಉಭಯ ದೇಶಗಳ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಈ ಬೃಹತ್ ಪ್ರದೇಶವನ್ನು ತನ್ನದೆಂದು ಚೀನಾ ತನ್ನದೆಂದು ಹೇಳಿಕೊಂಡರೆ, ಭಾರತ ತನ್ನದೆಂದು ಹೇಳಿಕೊಳ್ಳುತ್ತಿದೆ. ಇದೇ ಮೊದಲಬಾರಿಗೆ ಉಭಯ ದೇಶಗಳ ಸೇನಾ ಮುಖ್ಯಸ್ಥರ ನಡುವೆ ನಡೆಯುತ್ತಿದ್ದ ಶಾಂತಿ ಮಾತುಕತೆ ವಿಶೇಷ ರಾಜತಾಂತ್ರಿಕ ಪ್ರತಿನಿಧಿಗಳ ನಡುವೆ ನಡೆದಿದೆ.

ಪೂರ್ಣ ಪ್ರಮಾಣದ ಯುದ್ಧವಲ್ಲ

ಭಾರತ ಹಾಗೂ ಚೀನಾ ಪೂರ್ಣ ಪ್ರಮಾಣದ ಯುದ್ಧ ಮಾಡಲು ಈಗ ಸಿದ್ಧವಾಗಿವೆ ಎಂದು ನಂಬುವುದು ಕಷ್ಟ. ಈ ಸಮಯದಲ್ಲಿ ಗಡಿ ಸಮಸ್ಯೆ ಒಂದು ತಲೆನೋವೇ ಹೊರತು ಇನ್ನೇನೂ ಅಲ್ಲ. ಉಭಯ ದೇಶಗಳ ನಡುವಿನ ಗಡಿ ಬಿಕ್ಕಟ್ಟನ್ನು ನೋಡುವುದಾದರೆ 1962ರಲ್ಲಿ ನಡೆದ ಪೂರ್ಣ ಪ್ರಮಾಣದ ಯುದ್ಧ ನೆನಪಾಗುತ್ತದೆ. ಆ ಸಮಯದಿಂದ ಆಗಾಗ್ಗೆ ಗಡಿ ಸಮಸ್ಯೆ ಸೃಷ್ಟಿಯಾಗುತ್ತಲೇ ಇದೆ.

ಆದರೆ, ಮಾತುಕತೆಯಲ್ಲೇ ಅದು ಮುಗಿದುಹೋಗುತ್ತಿದೆ. ಈಗ ಕೊರೊನಾ ವಿರುದ್ಧ ಹೋರಾಡುತ್ತಿರುವ ಎರಡು ದೇಶಗಳು 2020-21ರ ವಿತ್ತೀಯ ವರ್ಷದಲ್ಲಿ ಆರ್ಥಿಕ ಸಮಸ್ಯೆ ಎದುರಿಸುವ ಭೀತಿಯಲ್ಲಿವೆ. ಹಾಗಾಗಿ ಎರಡೂ ದೇಶಗಳೂ ವಿಶ್ವದ ಯಾವುದೇ ದೇಶವನ್ನು ಎದುರುಹಾಕಿಕೊಳ್ಳದೇ ಶಾಂತ ರೀತಿಯಲ್ಲಿ ಇತ್ಯರ್ಥಮಾಡಿಕೊಳ್ಳಲು ನಿರ್ಧರಿಸುತ್ತವೆ.

ಚೀನಾಗೆ ತನ್ನ ಮಿಲಿಟರಿ ಸಾಮರ್ಥ್ಯದ ಬಗ್ಗೆ ಅಗಾಧವಾದ ವಿಶ್ವಾಸವಿದೆ. ಹಾಗೆಯೇ ಭಾರತಕ್ಕೂ ಕೂಡ. ಭಾರತ 1962ರಲ್ಲಿ ಶಸ್ತ್ರಾಸ್ತ್ರಗಳು, ಸೈನಿಕರ ಕೊರತೆ ಎದುರಿಸುತ್ತಿತ್ತು. ಆಗ ಚೀನಾ ಯುದ್ಧದಲ್ಲಿ ಗೆದ್ದಿದೆ ಎಂದು ಸ್ಪಷ್ಟವಾಗಿ ಹೇಳಿಕೊಂಡಿತ್ತು.
ಆದರೆ, ಇದೀಗ ಆ ಪರಿಸ್ಥಿತಿ ಇಲ್ಲ. ಚೀನಾದ ಸೇನಾ ತಜ್ಞರ ಪ್ರಕಾರ ಈಗಿರುವ ಪರಿಸ್ಥಿತಿಯಲ್ಲಿ ಚೀನಾ ಪೂರ್ಣ ಪ್ರಮಾಣದ ಯುದ್ಧ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಭಿನ್ನಾಭಿಪ್ರಾಯಗಳು-ಬಿಕ್ಕಟ್ಟು

ಭಾರತ ಚೀನಾ ನಡುವೆ ಜೂನ್ 6ರಂದು ಮಾತುಕತೆ ನಡೆದಿದೆ. ಆದರೆ, ಎರಡೂ ದೇಶಗಳ ರಾಜತಾಂತ್ರಿಕ ಪ್ರತಿನಿಧಿಗಳ ನಡುವೆ ಭಿನ್ನಾಭಿಪ್ರಾಯಗಳಿರುವುದು ಸ್ಪಷ್ಟವಾಗಿದೆ. ಈ ಭಿನ್ನಾಭಿಪ್ರಾಯಗಳೇ ಬಿಕ್ಕಟ್ಟಾಗಿ ಪರಿಣಮಿಸಿವೆ. ಮೇ.5ರಂದು ಲಡಾಖ್ನಲ್ಲಿ ಬಿಕ್ಕಟ್ಟು ಉದ್ಭವಿಸುವ ಮುನ್ನವೂ ಇದೇ ರೀತಿ ಭಿನ್ನಾಭಿಪ್ರಾಯಗಳಿದ್ದವು. ಆದರೆ ಆ ಪೈಕಿ ಗಲ್ವಾನ್ ಹಾಗೂ ನಕು ಲಾ ಪಾಸ್ ಸೇರ್ಪಡೆಗೊಂಡಿರಲಿಲ್ಲ.

ಗಡಿ ಬಿಕ್ಕಟ್ಟಿಗಿಂತ ವ್ಯಾಪಾರವೇ ಹೆಚ್ಚಾಯಿತಾ?
2018ರಲ್ಲಿ ವುಹಾನ್ ಹಾಗೂ 2019ರಲ್ಲಿ ಮಹಾಬಲಿಪುರಂನಲ್ಲಿ ಬಿಟ್ಟರೆ ಮೋದಿ ಹಾಗೂ ಕ್ಸಿ ಜಿನ್ಪಿಂಗ್ ಅವರು ಇನ್ಯಾವುದೇ ಮಾತುಕತೆಯಲ್ಲಿ ಪಾಲ್ಗೊಳ್ಳಲಿಲ್ಲ. ಭಾರತ, ಚೀನಾ ಎರಡೂ ದೇಶಗಳು ಮಾತುಕತೆ ವ್ಯಾಪಾರಕ್ಕಷ್ಟೇ ಸೀಮಿತವಾಗಿತ್ತೇ ಹೊರತು ಅದರ ಹೊರತಾದ ಇನ್ಯಾವುದೇ ಪ್ರಗತಿ ಸಾಧಿಸಲಿಲ್ಲ.

ಚೀನಾಗೆ ತನ್ನ ಉತ್ಪನ್ನಗಳ ಮಾರಾಟಕ್ಕೆ ಭಾರತದಂತಹ ದೇಶ ಬೇಕಾಗಿತ್ತು. ಭಾರತಕ್ಕೂ ಕಡಿಮೆ ಬೆಲೆಯಲ್ಲಿ ಅಗತ್ಯ ಉತ್ಪನ್ನಗಳನ್ನು ಪೂರೈಸಲು ಚೀನಾ ನೆರವು ಬೇಕಾಗಿತ್ತು. ಎರಡು ದೇಶಗಳ ನಡುವಿನ ಮಾತುಕತೆ ವ್ಯಾಪಾರಕ್ಕಷ್ಟೇ ಸೀಮಿತವಾಗಿ ಅದು ಗಡಿ ಬಿಕ್ಕಟ್ಟನ್ನು ತಲುಪಲಿಲ್ಲ. ಈ ಮಧ್ಯೆ ಚೀನಾ ತನ್ನ ರಾಜಕೀಯ ಪ್ರಭಾವ ಬೀರಲು ನೇಪಾಳವನ್ನು ಬಳಸಿಕೊಂಡರೆ, ಆರ್ಥಿಕತೆ ಬಿಗಿಗೊಳಿಸಲು ಶ್ರೀಲಂಕಾವನ್ನು ನೆಲೆಯಾಗಿಸಿಕೊಂಡಿತು.

ಈ ಪ್ರಕ್ರಿಯೆಯಲ್ಲಿ ಭಾರತವನ್ನು ಚೀನಾ ಕಡೆಗಣಿಸಿತು. ಭಾರತ ಈ ಮಧ್ಯೆ ಮಾಲ್ಡೀವ್ಸ್ ಜೊತೆಗಿನ ತನ್ನ ಸಂಬಂಧವನ್ನು ಗಟ್ಟಿಗೊಳಿಸಿಕೊಂಡಿತು. ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ತನ್ನ ಪ್ರದೇಶದಲ್ಲಿ ಅಕ್ರಮವಾಗಿ ಸಂಚರಿಸುತ್ತಿರುವುದನ್ನು ಭಾರತ ಆಕ್ಷೇಪಿಸುತ್ತಲೇ ಇದೆ ಆದರೆ, ಚೀನಾ ಅದಕ್ಕೆ ಕ್ಯಾರೆ ಎನ್ನುತ್ತಿಲ್ಲ.

ಡಿಸ್ಪಾಂಗ್ ಅಥವಾ ದೋಕ್ಲಾಮ್?

ಭಾರತ ಹಾಗೂ ಚೀನಾ ಶಾಂತಿಯುತವಾಗಿ ಮಾತುಕತೆ ನಡೆಸಬೇಕೆಂದರೆ ಚೀನಾ ಮೇ 5ರಂದು ಅತಿಕ್ರಮಿಸಿಕೊಂಡಿರುವ ಭಾರತದ ಭೂಪ್ರದೇಶದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಬೇಕು. (ಸ್ಟೇಟಸ್ ಕ್ಯೂ ಆಂಟೆ- ಅಂತಿಮ ನಿರ್ಧಾರಬರುವವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳುವುದು) ಹಾಗೇನಾದರೂ ಆದರೆ ಚೀನಾಗಿಂತ ಪರಮಸುಖಿ ಇನ್ನೊಬ್ಬರಿಲ್ಲ. 2013ರಲ್ಲಿ ಡಿಸ್ಪಾಂಗ್ ಹಾಗೂ 2017ರಲ್ಲಿ ದೊಕ್ಲಾಮ್ನಲ್ಲಿ ಆಗಿದ್ದು ಅದೇ. ನಾನು ಹೇಳುವುದನ್ನು ಬರೆದಿಟ್ಟುಕೊಳ್ಳಿ, ಡ್ರ್ಯಾಗನ್ ಮತ್ತು ಆನೆ ಎರಡೂ ಗಲ್ವಾನ್, ಹಾಟ್ ಸ್ಪ್ರಿಂಗ್ಸ್ ಮತ್ತು ಪ್ಯಾಂಗಾಂಗ್ ಟಿಎಸ್ಓನಲ್ಲಿ ಪರಸ್ಪರ ಗುರಾಯಿಸುತ್ತಿವೆ.

ಹಾಗೆ ನೋಡಿದರೆ ಮೋದಿ ಹಾಗೂ ಕ್ಸಿ ಜಿನ್ಪಿಂಗ್ ಅವರು ಕೆಲವು ಸಾಮ್ಯತೆಗಳನ್ನು ಹೊಂದಿದ್ದಾರೆ. ಇಬ್ಬರೂ ನಾಯಕರನ್ನು ಬದಲಾಯಿಸುವುದು ಅಸಾಧ್ಯ. ಮೋದಿ ಅವರು ಮುಂದಿನ ನಾಲ್ಕು ವರ್ಷಗಳ ಕಾಲ ಆಡಳಿತ ನಡೆಸುವುದು ಸ್ಪಷ್ಟ. ಆದರೆ, ಕ್ಸಿ ಅವರು ಪಿಎಲ್ಎ ಪಕ್ಷದ ಪಾಲಿಟ್ ಬ್ಯೂರೊ ಬೆಂಬಲಿಸುವವರೆಗೆ ಮಾತ್ರ ಅಧ್ಯಕ್ಷರಾಗಿ ಮುಂದುವರಿಯುತ್ತಾರೆ. ಎರಡೂ ದೇಶಗಳಲ್ಲಿ ನಾಯಕರ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿದ್ದರೂ ಅವರು ಅದನ್ನು ಕಡೆಗಣಿಸುತ್ತಿದ್ದಾರೆ.

ಭಾರತ ಹಾಗೂ ಚೀನಾದಲ್ಲಿ ಪ್ರತ್ಯೇಕ ಕಾನೂನುಗಳಡಿ ಆಳಲ್ಪಟ್ಟಿವೆ. ಯಾವುದೇ ಸಂದರ್ಭದಲ್ಲಿ ಸರ್ಕಾರವನ್ನು ಬೆಂಬಲಿಸುವ ಸಂಪ್ರದಾಯವನ್ನು ಮೊದಲಿನಿಂದಲೂ ಪಾಲಿಸಿಕೊಂಡು ಬಂದಿದೆ. ಅದೇ ಬೆಂಬಲದಿಂದ ಮೋದಿ ಅವರು ಭಾರತ-ಚೀನಾ ನಡುವಿನ ಬಿಕ್ಕಟ್ಟನ್ನು ಇತ್ಯರ್ಥ ಮಾಡಿಕೊಳ್ಳುತ್ತಾರೆ. ಆದರೆ, ಗಡಿಯಲ್ಲಿ ಏನಾಗುತ್ತಿದೆ ಎಂಬ ಪಾರದರ್ಶಕತೆಯನ್ನು ಮೋದಿ ಅವರು ಕಾಪಾಡಿಕೊಳ್ಳಬೇಕು. ವಾಸ್ತವ ಸ್ಥಿತಿ ಏನಿದೆಯೋ ಅದನ್ನು ದೇಶದ ಜನರಿಗೆ ತಿಳಿಸಬೇಕು.

ಈ ಚದುರಂಗದ ಆಟದಲ್ಲಿ ಚೀನಾ ರಹಸ್ಯವನ್ನು ಕಾಯ್ದುಕೊಂಡಿದೆ. ಅದರ ಫಲ ಇನ್ನಷ್ಟು ರಹಸ್ಯವಾಗಿಯೇ ಉಳಿಯಲಿದೆ.

ಕೃಪೆ: pchidambaram.in, Indian express
Twitter @Pchidambaram_IN

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

Published

on

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ ಕಾಯಿಲೆಗಳ ಚಿಕಿತ್ಸಾ ಸೌಲಭ್ಯವನ್ನು ವಿಸ್ತರಿಸಿದೆ.

ಈ ಉಪಕ್ರಮದ ಮೂಲಕ, ಪಾಲಿಸಿದಾರರಿಗೆ ‘ಟಾಕ್ ಟು ಸ್ಟಾರ್’ ಸೇವೆ ಹಾಗೂ ಮನೆ ಬಾಗಿಲಿನ ಆರೋಗ್ಯ ಸೇವೆ ಕಲ್ಪಿಸಿಕೊಡಲಾಗುತ್ತಿದೆ. ಇದರ ನೆರವಿನಿಂದ ಆರಂಭಿಕ ಹಂತದಲ್ಲೇ ಅಗತ್ಯ ವೈದ್ಯಕೀಯ ಸಲಹೆ ಮತ್ತು ಪರೀಕ್ಷೆಗಳ ನೆರವು ಒದಗಿಸಲಾಗುತ್ತಿದೆ. ಜೊತೆಗೆ, ಸಾರ್ವಜನಿಕರು ಸ್ಟಾರ್ ಹೆಲ್ತ್ ಕಸ್ಟಮರ್ ಆ್ಯಪ್ ಮೂಲಕ 24*7 ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಸ್ಟಾರ್ ಹೆಲ್ತ್ ಇನ್ಶುರನ್ಸ್ ಕರ್ನಾಟಕ ವಹಿವಾಟು ವಿಭಾಗದ ಮುಖ್ಯಸ್ಥ ಆದಿತ್ಯ ಓಂಪ್ರಕಾಶ್ ಬಿಯಾನಿ ಹೇಳಿದ್ದಾರೆ.

ಪಾಲಿಸಿದಾರರಿಗೆ ಅನಿಯಮಿತ ಟೆಲಿ ಸಮಾಲೋಚನೆಯಡಿ ಪಾಲಿಸಿ ಅವಧಿಯಲ್ಲಿ ಎಷ್ಟೇ ಬಾರಿ ಬೇಕಾದರೂ ದೂರವಾಣಿ ಅಥವಾ ಆನ್‍ಲೈನ್ ಮೂಲಕ ವೈದ್ಯರ ಸಲಹೆ ಪಡೆಯಬಹುದು. ಜ್ವರ ಅಥವಾ ಸೋಂಕಿನ ಆರಂಭಿಕ ಲಕ್ಷಣಗಳು ಕಂಡುಬಂದ ಕೂಡಲೇ ವೈದ್ಯಕೀಯ ಸಲಹೆ ಪಡೆಯಲು ಇದು ನೆರವಾಗುತ್ತದೆ. ಸಾರ್ವಜನಿಕರಿಗೆ ಉಚಿತ ವರ್ಚುವಲ್ ವೈದ್ಯರ ಸಮಾಲೋಚನೆಯೂ ಇರುತ್ತದೆ.

ಅಂತೆಯೇ ಪಾಲಿಸಿದಾರರು ‘ಟಾಕ್ ಟು ಸ್ಟಾರ್’ ಸೇವೆಯಡಿ 7200 222 333 ಸಂಖ್ಯೆಗೆ ಕರೆ ಮಾಡಿ ಮಾರ್ಗದರ್ಶನ ಪಡೆಯಬಹುದು. ನಗದುರಹಿತ ಮನೆ ಬಾಗಿಲಿನ ಆರೋಗ್ಯ ಸೇವೆಯಡಿ ಅರ್ಹ ಪಾಲಿಸಿದಾರರಿಗೆ ಸ್ಟಾರ್ ಹೆಲ್ತ್ ಕ್ಯಾಷ್‍ಲೆಸ್- ಸೌಲಭ್ಯದ ಮೂಲಕ ಮನೆ ಬಾಗಿಲಿಗೇ ಆರೋಗ್ಯ ಸೇವೆ ಒದಗಿಸಲಾಗುತ್ತದೆ. ವೈದ್ಯರ ಸಲಹೆಯಂತೆ ನಸಿರ್ಂಗ್ ಸೇವೆ, ರಕ್ತ ಪರೀಕ್ಷೆ, ಆರೋಗ್ಯ ಮೇಲ್ವಿಚಾರಣೆ, ಐವಿ ಫ್ಲೂಯಿಡ್ಸ್ ಹಾಗೂ ಚುಚ್ಚುಮದ್ದು ಸೇರಿದಂತೆ ಅಗತ್ಯ ಚಿಕಿತ್ಸೆಗಳನ್ನು ಮನೆಯಲ್ಲೇ ನೀಡಲಾಗುತ್ತದೆ ಎಂದು ಪ್ರಕಟಣೆ ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending