ದಿನದ ಸುದ್ದಿ

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮುಂದಿನ ಮೂರು ತಿಂಗಳಲ್ಲಿ 10 ಸಾವಿರ ನಿವೇಶನ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 2 ಸಾವಿರದ 500 ಮನೆಗಳು ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಕೂಡ ಅರ್ಹ ಫಲಾನುಭವಿಗಳಿಗೆ ಹಂಚಲಾಗುತ್ತದೆ ಎಂದು ಮಾಹಿತಿ ನೀಡಿದರು.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version