Connect with us

ದಿನದ ಸುದ್ದಿ

ದಾವಣಗೆರೆ | ಪಡಿತರ ಚೀಟಿದಾರರು ಇ-ಕೆವೈಸಿ ನೋಂದಣಿ ಮಾಡಿಸುವಂತೆ ಸೂಚನೆ ; ಇಲ್ಲದಿದ್ದರೆ ಪಡಿತರ ವಿತರಣೆ ರದ್ದು

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜಿಲ್ಲೆಯ ಪಡಿತರ ಚೀಟಿದಾರರು ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪೋರ್ಟೆಬಿಲಿಟಿ ಮುಖಾಂತರ ಇ-ಕೆವೈಸಿ ಮಾಡಿಸಲು ಈ ತಿಂಗಳ ಅಂತ್ಯದವರೆಗೆ ಅವಕಾಶ ಕಲ್ಪಿಸಲಾಗಿದ್ದು, ತಪ್ಪದೆ ಇ-ಕೆವೈಸಿ ಮಾಡಿಸುವಂತೆ ಸಾರ್ವಜನಿಕರಲ್ಲಿ ಕೋರಿದೆ.

ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ವಿವರಗಳೊಂದಿಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಕೊಳ್ಳಬೇಕಿದೆ. ಇದುವರೆಗೆ ಮೂಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಇ-ಕೆವೈಸಿ ಮಾಡಲು ಅವಕಾಶವಿತ್ತು. ಪ್ರಸ್ತುತ ರಾಜ್ಯದ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪೋರ್ಟೆಬಿಲಿಟಿ ಮುಖಾಂತರ ಇ-ಕೆವೈಸಿ ಮಾಡಬಹುದಾಗಿರುತ್ತದೆ.

ವಲಸೆ ಹೋಗಿ ಅಥವಾ ಬೇರೆ ಜಿಲ್ಲೆಗೆ ಕೆಲಸ ನಿಮಿತ್ತ ತೆರಳಿರುವ ವ್ಯಕ್ತಿಗಳು ಮೂಲ ನ್ಯಾಯಬೆಲೆ ಅಂಗಡಿಗಳಿಗೆ ಬಂದು ಇ-ಕೆವೈಸಿ ಮಾಡಿಸಿರುವುದಿಲ್ಲ. ಆದ್ದರಿಂದ ಅಂತವರಿಗೆ ಅನುಕೂಲವಾಗಲು ಪೋರ್ಟೆಬಿಲಿಟಿಯಲ್ಲಿ ಇ-ಕೆವೈಸಿಯನ್ನು ಮಾಡಲು ಈಗ ಅವಕಾಶ ಕಲ್ಪಿಸಲಾಗಿದೆ.

ಇದುವರೆಗೆ ಇ-ಕೆವೈಸಿ ಮಾಡಿಸದ ಪಡಿತರ ಚೀಟಿದಾರರು ತಾವು ವಾಸಿಸುವ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಕೂಡಲೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಬೆಳಿಗ್ಗೆ 8.00 ರಿಂದ ರಾತ್ರಿ 8.00 ಗಂಟೆಯವರೆಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಅವಕಾಶವಿರುತ್ತದೆ. ಪಡಿತರ ಚೀಟಿದಾರರ ಎಲ್ಲಾ ಸದಸ್ಯರ ಬಯೋ ದೃಢೀಕರಣ ಮಾಡಿಸಬೇಕು.

ಆಧಾರ್ ಸಂಖ್ಯೆ, ಫೋನ್ ನಂಬರ್, ಗ್ಯಾಸ್ ಹೊಂದಿರುವ ಮಾಹಿತಿ ಹಾಗೂ ಕುಟುಂಬದ ಸದಸ್ಯರ ಸಹ ಸಂಬಂಧವನ್ನು ಇ-ಕೆವೈಸಿಯಲ್ಲಿ ನಮೂದಿಸಬೇಕು. ಇದು ಪಡಿತರ ಚೀಟಿದಾರರಿಗೆ ಅಂತಿಮ ಅವಕಾಶವಾಗಿದ್ದು, ಇ-ಕೆವೈಸಿ ಮಾಡಿಸಿಕೊಳ್ಳದ ಪಡಿತರ ಚೀಟಿದಾರರಿಗೆ ಮುಂದಿನ ತಿಂಗಳಿಂದ ಪಡಿತರ ವಿತರಣೆ ರದ್ದು ಮಾಡಲಾಗುತ್ತದೆ.

ಆದ್ದರಿಂದ ಜಿಲ್ಲೆಯಲ್ಲಿ ಹಾಲಿ 4,21,577 ಪಡಿತರ ಚೀಟಿಗಳಿದ್ದು, ಅದರಲ್ಲಿ 14,60,150 ಸದಸ್ಯರು ಇರುತ್ತಾರೆ. ಇವರಲ್ಲಿ 12,89,863 ಸದಸ್ಯರು ಈಗಾಗಲೇ ಇ-ಕೆವೈಸಿ ಮಾಡಿಸಿದ್ದು, ಉಳಿದ 1,70,287 ಸದಸ್ಯರು ಇ-ಕೆವೈಸಿ ಮಾಡಿಸಲು ಬಾಕಿ ಇರುವುದರಿಂದ ಬಾಕಿ ಇರುವ ಎಲ್ಲಾ ಪಡಿತರ ಚೀಟಿದಾರರು ಈ ತಿಂಗಳ ಒಳಗಾಗಿ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಇಂದೇ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending